Homeಕರ್ನಾಟಕಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

ಕುವೆಂಪು ವಿವಿ ಪಠ್ಯದಲ್ಲಿ ಚಕ್ರತೀರ್ಥ ಪಾಠ: ಲೇಖಕರ ನಿಜ ನಾಮವೇ ನಾಪತ್ತೆ; ಆಕ್ಷೇಪ

- Advertisement -
- Advertisement -

ಅವೈಜ್ಞಾನಿಕ ಪಠ್ಯಪುಸ್ತಕ ಪರಿಷ್ಕರಣೆ ಹಾಗೂ ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪಕ್ಕೆ ಗುರಿಯಾಗಿ ವಿವಾದದ ಕೇಂದ್ರವಾಗಿರುವ ರೋಹಿತ್ ಚಕ್ರತೀರ್ಥ ಬರೆದ ಲೇಖನವೊಂದನ್ನು ಪಠ್ಯಪುಸ್ತಕ ಸಮಿತಿಯಲ್ಲಿ ಚರ್ಚೆಯನ್ನೇ ನಡೆಸದೇ ಕುವೆಂಪು ವಿಶ್ವವಿದ್ಯಾಲಯದ ಬಿಸಿಎ ಪದವಿಯ ಪಠ್ಯಕ್ಕೆ ಸೇರಿಸಿರುವುದು ಚರ್ಚೆಗೆ ಕಾರಣವಾಗಿದೆ.

ಈ ಕುರಿತು ‘ಪ್ರಜಾವಾಣಿ’ ದಿನಪತ್ರಿಕೆ ವಿಶೇಷ ವರದಿ ಮಾಡಿದ್ದು, “ವಿಶ್ವವಿದ್ಯಾಲಯದ ವ್ಯಾಪ್ತಿಯ ಪದವಿ ಕಾಲೇಜುಗಳ ಪಠ್ಯಗಳನ್ನು ಎನ್‌ಇಪಿ ಪಠ್ಯಕ್ರಮದಂತೆ ಪರಿಷ್ಕರಿಸಲಾಗುತ್ತಿದೆ. ಕನ್ನಡ ಭಾಷಾ ವಿಷಯದ ಪಠ್ಯದ ತಂತ್ರಜ್ಞಾನ ವಿಭಾಗದಲ್ಲಿನ ‘ಕೃತಕ ಬುದ್ದಿವಂತಿಕೆ; ಭವಿಷ್ಯ ತಂತ್ರಜ್ಞಾನದ ಹೆಬ್ಬಾಗಿಲು’ ಲೇಖನದ ಲೇಖಕರ ಹೆಸರು ರೋಹಿತ್‌ ಬೆಂಗಳೂರು ಎಂದು ಸೇರಿಸಲಾಗಿದೆ. ಇದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ” ಎಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಠ್ಯಪುಸ್ತಕ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಾಗ, “ಇದು ರೋಹಿತ್ ಚಕ್ರತೀರ್ಥ ಅವರ ಲೇಖನ. ಅವರ ಪೂರ್ಣ ಹೆಸರನ್ನು ಮರೆಮಾಚಿ ಮೋಸ ಮಾಡಲಾಗಿದೆ” ಎಂದು ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಸಭೆಯಲ್ಲಿ ಮಾತಿಗೆ ಮಾತು ಬೆಳೆದು, ಸದಸ್ಯರು ಪರಸ್ಪರ ಎಳೆದಾಡಿಕೊಂಡರು ಎಂದು ಮೂಲಗಳನ್ನು ಉಲ್ಲೇಖಿಸಿ ಪತ್ರಿಕೆ ವರದಿ ಮಾಡಿದೆ.

ರೋಹಿತ್‌ ಚಕ್ರತೀರ್ಥ ಸಂಪಾದಕತ್ವದ ‘ಸೂತ್ರ’ ಪತ್ರಿಕೆಯ 2021ರ ಆಗಸ್ಟ್‌ ಸಂಚಿಕೆಯಲ್ಲಿ ಈ ಲೇಖನ ಪ್ರಕಟವಾಗಿದೆ. ಮುದ್ರಿತ ಪ್ರತಿಯಲ್ಲಿ ಲೇಖಕರ ಹೆಸರು ‘ತತ್ವಬೋಧ’ ಎಂದಿದೆ. ಆದರೆ, ಕುವೆಂಪು ವಿಶ್ವವಿದ್ಯಾಲಯದ ಪಠ್ಯಪುಸ್ತಕದಲ್ಲಿ ರೋಹಿತ್ ಬೆಂಗಳೂರು ಹೆಸರು ನಮೂದಿಸಲಾಗಿದೆ. ಲೇಖನ ಬಳಸಿಕೊಳ್ಳಲು ಅನುಮತಿ ನೀಡಿದ ಪತ್ರಿಕೆಯ ಸಂಪಾದಕೀಯ ಬಳಗ, ಲೇಖಕರ ಹೆಸರನ್ನು ‘ರೋಹಿತ್‌ ಬೆಂಗಳೂರು’ ಎಂದು ಹಾಕುವಂತೆ ಸೂಚಿಸಿರುವುದಾಗಿ ವರದಿಯಾಗಿದೆ.

ವಿದ್ಯಾರ್ಥಿಗಳಿಗೆ ಲೇಖಕರ ಪರಿಚಯ ಮಾಡಿಕೊಡಬೇಕಲ್ಲವೇ?

ಒಂದು ಲೇಖನವನ್ನು ಪಠ್ಯದಲ್ಲಿ ಅಳವಡಿಸಿದರೆ ಅದನ್ನು ಬರೆದವರ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಡಬೇಕಾಗುತ್ತದೆ. ಆದರೆ ಈ ರೀತಿಯಲ್ಲಿ ಪಠ್ಯವನ್ನು ಅಳವಡಿಸಿದರೆ ಲೇಖಕರ ಪರಿಚಯವನ್ನು ಮಾಡಿಕೊಡಲು ಹೇಗೆ ಸಾಧ್ಯ ಎಂಬ ಪ್ರಶ್ನೆಯೂ ಹುಟ್ಟಿಕೊಂಡಿದೆ.

ಇದನ್ನೂ ಓದಿರಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ಈ ಕುರಿತು ಪ್ರಶ್ನಿಸಿರುವ ಕನ್ನಡ ಪ್ರಾಧ್ಯಾಪಕರು ಹಾಗೂ ಭಾಷಾ ತಜ್ಞರೂ ಆದ ಡಾ.ರಂಗನಾಥ ಕಂಟನಕುಂಟೆ, “ಪಠ್ಯಪುಸ್ತಕಗಳಲ್ಲಿ ಸೇರ್ಪಡೆ ಆಗುವ ಬರೆಹಗಳ ಕುರಿತು ಪಾಠ ಮಾಡುವಾಗ ಲೇಖಕರ ಪರಿಚಯ ಮಾಡುವುದು ಒಂದು ಕ್ರಮ. ವಿದ್ಯಾರ್ಥಿಗಳಿಗೆ ಆ ಮೂಲಕ ಬರೆಹಗಾರರ ಕುರಿತು ತಿಳಿವು ನೀಡಲಾಗುವುದು. ಅದಕ್ಕೆ ಲೇಖಕರ ಬಗೆಗೆ ಸರಿಯಾದ ಮಾಹಿತಿಯನ್ನು ಟಿಪ್ಪಣಿಯಾಗಿ ಕೊಡಲಾಗುವುದು. ಆದರೆ ಇಲ್ಲಿ ಲೇಖಕನ ಹೆಸರನ್ನೇ ಸರಿಯಾಗಿ ನೀಡದೆ ಇರುವುದು ಎದ್ದು ಕಾಣುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಲೇಖಕನ ಹೆಸರನ್ನು ಏಕೆ ಬಚ್ಚಿಡಲಾಗುತ್ತಿದೆ? ಹೀಗೆ ಮಾಡುವುದರಿಂದ ಪಠ್ಯದ ಅಧಿಕೃತತೆಯ ಪ್ರಶ್ನೆ ಮೂಡುವುದಿಲ್ಲವೇ? ಪಠ್ಯ ಪುಸ್ತಕ ಗುಪ್ತ ಸಾಹಿತ್ಯವೇ? ಯಾಕೆ ಇಂತಹ ಕಳ್ಳಾಟ? ಇದು ಕೊನೆಗೆ ವಿವಿಗಳ ಘನತೆಯನ್ನು ಪ್ರಶ್ನೆ ಮಾಡುವ ಸನ್ನಿವೇಶ ಸೃಷ್ಟಿಸುತ್ತದೆ” ಎಂದು ಎಚ್ಚರಿಸಿದ್ದಾರೆ.

ಜಿ.ಎನ್‌.ಧನಂಜಯಮೂರ್ತಿ ಎಂಬವರು ಪ್ರತಿಕ್ರಿಯೆ ನೀಡಿದ್ದು, “ಕುವೆಂಪು ವಿಶ್ವವಿದ್ಯಾಲಯದ ವಾಟ್ಸಾಪ್ ಗ್ರೂಪಿನಲ್ಲಿ ಚರ್ಚೆ ನಡೆಯುತ್ತಿದೆ. ತಮ್ಮ ಆತ್ಮರತಿಯ ಬಗ್ಗೆ ಪರಸ್ಪರ ಭಜನೆ ಮಾಡಿಕೊಳ್ಳುವವರೆಲ್ಲ ಈಗ ಮೌನಕ್ಕೆ ಶರಣಾಗಿದ್ದಾರೆ. ಕೆಲವರಿಗೆ ತಿಳಿ ಹೇಳಿದರೆ ಅಸಂಬದ್ಧವಾಗಿ ವರ್ತಿಸುತ್ತಾರೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆಯೊ ನೋಡಬೇಕು. ಕುವೆಂಪು ಬಗ್ಗೆ ಟ್ರೋಲ್ ಮಾಡುವ ವ್ಯಕ್ತಿಯನ್ನು ಕುವೆಂಪು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಓದಬೇಕಾದದ್ದು ದುರಂತ” ಎಂದಿದ್ದಾರೆ.

ಸಾಮಾಜಿಕ ಕಾರ್ಯಕರ್ತರಾದ ಹರ್ಷಕುಮಾರ್‌ ಕುಗ್ವೆಯವರು ಈ ಕುರಿತು ಪೋಸ್ಟ್ ಮಾಡಿದ್ದು, “ಇದರ ನೇರ ಹೊಣೆಗಾರಿಕೆಯನ್ನು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರಶಾಂತ್‌ ನಾಯಕ್‌ ಅವರು ಹೊರುವರೆ? ಯಾಕೆಂದರೆ ಪಠ್ಯ ಪುಸ್ತಕ ಸಮಿತಿಯ ಪ್ರಧಾನ ಸಂಪಾದಕರೂ ಅವರೇ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...