Homeಚಳವಳಿಹೊಸಪೇಟೆ: ಬಿಎಂಎಂ ಕಾರ್ಖಾನೆ ವಿಸ್ತರಣೆ, ಸಿಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರೀ ವಿರೋಧ

ಹೊಸಪೇಟೆ: ಬಿಎಂಎಂ ಕಾರ್ಖಾನೆ ವಿಸ್ತರಣೆ, ಸಿಮೆಂಟ್ ಫ್ಯಾಕ್ಟರಿ ನಿರ್ಮಾಣಕ್ಕೆ ಭಾರೀ ವಿರೋಧ

ಕಾರ್ಖಾನೆಯಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ತುಂಗಭದ್ರ ಅಣೆಕಟ್ಟೆಗೆ ಹರಿಸಲಾಗುತ್ತಿದೆ. ಕಾರ್ಖಾನೆಯಿಂದ ಹೊರಬೀಳುತ್ತಿರುವ ಧೂಳು ಮಿಶ್ರಿತ ಹೊಗೆ ಹಾನಿಕಾರಕವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

- Advertisement -
- Advertisement -

ಹೊಸಪೇಟೆಯ ಬಳಿಯ ಡಣಾಪುರ ಗ್ರಾಮ ವ್ಯಾಪ್ತಿಯಲ್ಲಿರುವ ಕಳೆದ 20 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಬಿಎಂಎಂ ಇಸ್ಪಾತ್ ಸ್ಟೀಲ್ ತಯಾರಿಕಾ ಕಾರ್ಖಾನೆಯು 2.1 ಎಂಟಿಪಿಎ ಸಾಮರ್ಥ್ಯದ ಘಟಕದ ಯೋಜನೆ ವಿಸ್ತರಣೆಗೆ ಸಜ್ಜಾಗಿದೆ. ಅಲ್ಲದೆ ಸಿಮೆಂಟ್ ಕಾರ್ಖಾನೆಯನ್ನು ಸಹ ಆರಂಭಿಸಲು ಮುಂದಾಗಿದೆ. ಇದರಿಂದ ಈಗಾಗಲೇ ಹದಗೆಟ್ಟಿರುವ ಪರಿಸರ ಮತ್ತಷ್ಟು ಹಾಳಾಗಿ ನಮ್ಮ ಜೀವನ ದುಸ್ತರವಾಗುತ್ತದೆ ಎಂದು ಆರೋಪಿಸಿರುವ ಸ್ಥಳೀಯರು ಘಟಕ ವಿಸ್ತರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸೆಪ್ಟಂಬರ್ 16 ರಂದು ಡಣಾಪುರದಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪರಿಸರ ಸಾರ್ವಜನಿಕ ಆಲಿಕೆ ಕಾರ್ಯಕ್ರಮದಲ್ಲಿ ಪರ-ವಿರೋಧದ ಜಟಾಪಟಿ ನಡೆದಿದೆ. ಕಾರ್ಖಾನೆ ವಿಸ್ತರಣೆಗೆ ಮತ್ತು ಹೊಸ ಸಿಮೆಂಟ್ ಕಾರ್ಖಾನೆ ಸ್ಥಾಪನೆಗೆ ರೈತರು ಸಹಮತ ಸೂಚಿಸಿ ಪತ್ರ ಬರೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದಾಗ ಅಲ್ಲಿ ನರೆದಿದ್ದ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಮ್ಮೆಲೆ ವೇದಿಕೆಯ ಮುಂಭಾಗ ಬಂದು ಫ್ಯಾಕ್ಟರಿ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಅಪರ ಜಿಲ್ಲಾಧಿಕಾರಿ ಮಹೇಶ್ ಬಾಬುರವರು, ಪರ ಮತ್ತು ವಿರೋಧದ ಎರಡು ಅಭಿಪ್ರಾಯಗಳನ್ನು ಗಮನಿಸಿದ್ದೇವೆ. ಬಂದಿರುವ ಅರ್ಜಿಗಳಲ್ಲಿಯೂ ಸಹ ಪರ-ವಿರೋಧವಿದೆ. ಈ ಕುರಿತು ಪರಿಶೀಲಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಗುರುವಾರ ನಡೆದ ಪರಿಸರ ಸಾರ್ವಜನಿಕ ಆಲಿಕೆ ಸಭೆ

ಕೆಲವು ಜನರು ‘ಫ್ಯಾಕ್ಟರಿ ನಿರ್ಮಾಣವಾದರೆ ನಮ್ಮ ಮಕ್ಕಳಿಗೆ ಇಲ್ಲಿಯೇ ಉದ್ಯೋಗ ಸಿಗುತ್ತದೆ ಮತ್ತು ವಲಸೆ ಹೋಗುವುದು ತಪ್ಪುತ್ತದೆ. ಹಾಗಾಗಿ ಕಾರ್ಖಾನೆ ನಿರ್ಮಾಣವಾಗಬೇಕು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ‘ಉದ್ಯೋಗದ ಆಮಿಷ ತೋರಿಸಿ ಇಲ್ಲಿ ಬಂದಿರುವ ಕಾರ್ಖಾನೆಗಳು ಎಷ್ಟು ಜನರಿಗೆ ಉದ್ಯೋಗ ಕೊಟ್ಟಿವೆ? ಇಲ್ಲಿರುವ ಕಾರ್ಮಿಕರನ್ನು ಹೇಗೆ ನಡೆಸಿಕೊಳ್ಳುತ್ತಿವೆ? ಕಂಪನಿಯ ತ್ಯಾಜ್ಯ ನೀರು ಮತ್ತು ಧೂಳು ಮಿಶ್ರಿತ ಹೊಗೆಯಿಂದಾಗಿ ನಮ್ಮ ಆರೋಗ್ಯ ಹಾಳಾಗುತ್ತಿದೆ. ಹಾಗಾಗಿ ಕಾರ್ಖಾನೆ ವಿಸ್ತರಣೆ ಬೇ’ಡ ಎಂದು ಬಹಳಷ್ಟು ಜನರು ವಾದಿಸಿದ್ದಾರೆ.

ಮರಿಯಪ್ಪನಹಳ್ಳಿಯ ರಂಗಭೂಮಿ ಕಲಾವಿದ ಸರ್ದಾರ್ ನಾನುಗೌರಿ.ಕಾಂ ಜೊತೆ ಮಾತನಾಡಿ, “ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಸರ್ಕಾರದ ನಿಯಮಗಳ ಪ್ರಕಾರ ಸಂಬಳ ಕೊಡದೆ ಕಾಂಟ್ರಾಕ್ಟರ್‌ಗಳು ಮೋಸ ಮಾಡುತ್ತಿದ್ದಾರೆ. ಅಲ್ಲದೆ ಕಾರ್ಖಾನೆಯಿಂದ ಹೊರಬರುವ ಕಲುಷಿತ ತ್ಯಾಜ್ಯವನ್ನು ತುಂಗಭದ್ರ ಅಣೆಕಟ್ಟೆಗೆ ಹರಿಸಲಾಗುತ್ತಿದೆ. ಕಾರ್ಖಾನೆಯಿಂದ ಹೊರಬೀಳುತ್ತಿರುವ ಧೂಳು ಮಿಶ್ರಿತ ಹೊಗೆ ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸಾರ್ವಜನಿಕರ ಆರೋಗ್ಯ ಕೆಟ್ಟಿದ್ದು, ಇಲ್ಲಿನ ಜನರಿಗೆ ಶ್ವಾಸಕೋಶದ ಸಮಸ್ಯೆಗಳು ಉಂಟಾಗಿವೆ. ರೈತರ ಬೆಳೆಗಳು ನಾಶವಾಗುತ್ತಿವೆ. ಪ್ರಾಣಿ ಪಕ್ಷಗಳು ಸಂಕುಲ ನಶಿಸುತ್ತಿದೆ. ಈ ಸಣ್ಣ ಪ್ರಮಾಣದ ಘಟಕದಿಂದ ಇಷ್ಟೊಂದು ಅನಾಹುತ ನಡೆಯುತ್ತಿದೆ. ಇನ್ನು ಇದರ ಎರಡು ಪಟ್ಟು ದೊಡ್ಡದಾದ ಸ್ಟೀಲ್ ಪ್ಲಾಂಟ್ ಮತ್ತು ಸಿಮೆಂಟ್ ಕಾರ್ಖಾನೆ ಆರಂಭವಾದರೆ ನಾವು ನೆಮ್ಮದಿಯಿಂದ ಬದುಕಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ.

ಈಗಿರುವ ಕಾರ್ಖಾನೆ ಸಾಕು. ಹೊಸದಾಗಿ ಕಾರ್ಖಾನೆ ಆರಂಭವಾಗುವುದಕ್ಕೆ ನಮ್ಮ ವಿರೋಧವಿದೆ. ಸದ್ಯಕ್ಕೆ ಕಾರ್ಖನೆ ಬಳಿಯಿರುವ ಜಾಗದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಲು, ಕಾಡು ಬೆಳೆಸಿ ಪರಿಸರ ಹಾನಿ ತಡೆಗಟ್ಟಲು ಬಳಸಬೇಕು ಎಂದು ಸರ್ದಾರ್ ಒತ್ತಾಯಿಸಿದ್ದಾರೆ.

ಇದುವರೆಗೂ ಕಾರ್ಖಾನೆ ಸ್ಥಾಪನೆಗಾಗಿ ಭೂಮಿ ಕಳೆದುಕೊಂಡ ಸ್ಥಳೀಯರೊಬ್ಬರು ಪರಿಸರ ಸಾರ್ವಜನಿಕ ಆಲಿಕೆ ಕಾರ್ಯಕ್ರಮದಲ್ಲಿ ಮಾತನಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ. “ಭೂಮಿ ನೀಡುವ ಮುನ್ನ ನಮಗೆ ಉದ್ಯೋಗ ಕೊಡುವ ಭರವಸೆ ನೀಡಲಾಗಿತ್ತು. ಆದರೆ ಇದುವರೆಗೆ ನಮಗೆ ಯಾವುದೇ ಉದ್ಯೋಗ ಸಿಕ್ಕಿಲ್ಲ. ಕಾರ್ಖಾನೆಯವರು ಆಗ ಬನ್ನಿ, ಈಗ ಬನ್ನಿ ಎಂದು ಅಲೆದಾಡಿಸುತ್ತಿದ್ದಾರೆ. ಇನ್ನೊಂದೆಡೆ ಫ್ಯಾಕ್ಟರಿ ದೂಳಿನಿಂದಾಗಿ ಸುತ್ತಲಿನ 90 ಜನರಿಗೆ ಕ್ಷಯ ರೋಗಿ ಬಂದಿದೆ ಎಂದು ವಿಮುಕ್ತಿ ಎನ್‌ಜಿಓದವರು ವರದಿ ಮಾಡಿದ್ದಾರೆ. ಹಾಗಾಗಿ ಇಲ್ಲಿ ಹೊಸ ಫ್ಯಾಕ್ಟರಿ ಬೇಡವೇ ಬೇಡ” ಎಂದು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಡಣಾಪುರದಲ್ಲಿನ ಬಿಎಂಎಂ ಇಸ್ಪಾತ್ ಸ್ಟೀಲ್ ಕಾರ್ಖಾನೆಯ ಹೊಸ ಘಟಕಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಸಿಮೆಂಟ್ ಫ್ಯಾಕ್ಟರಿ ಆರಂಭವಾದರೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಹಾಗಾಗಿ ಬಳ್ಳಾರಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳು ಯಾವುದೇ ಒತ್ತಡ, ಪ್ರಭಾವಕ್ಕೆ ಒಳಗಾಗದೆ ಎಲ್ಲಾ ಆಯಾಮಗಳಿಂದ ಪರೀಶಿಲಿಸಿ ಹೆಜ್ಜೆ ಇಡಬೇಕಾಗಿದೆ.

ಇದನ್ನೂ ಓದಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...