Homeಕರ್ನಾಟಕಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

- Advertisement -
- Advertisement -

ನಮೀಬಿಯಾದಿಂದ ತರಲಾದ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಶನಿವಾರ ಬಿಟ್ಟರು. ಭಾರತದಲ್ಲಿ ಏಳು ದಶಕಗಳ ಹಿಂದೆಯೇ ಚೀತಾಗಳು ನಿರ್ನಾಮವಾದ ಕಾರಣ, ಸರ್ಕಾರ ಮಾಡಿರುವ ಈ ಕೆಲಸ ಮಹತ್ವದೆಂದು ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ದೇಶದಲ್ಲಿ ಚೀತಾಗಳನ್ನು ಬೆಳೆಸುವ ಉದ್ದೇಶದಿಂದ ‘ಚೀತಾ ಯೋಜನೆ’ ಜಾರಿಯಾಗಿದೆ.

ದಶಕಗಳ ಹಿಂದೆ ಈ ಯೋಜನೆ ಜಾರಿಯ ಕೆಲಸಗಳು ಆರಂಭವಾದವು. 2009ರಲ್ಲಿ ಆಫ್ರಿಕಾದಿಂದ ಚೀತಾಗಳನ್ನು ಭಾರತಕ್ಕೆ ತರುವ ಪ್ರಸ್ತಾವ ಸಿದ್ಧಪಡಿಸಲಾಗಿತ್ತು. 2010ರಲ್ಲಿ ಆಗಿನ ಪ್ರಧಾನಿ ಮನಮೋಹನ್‌ ಸಿಂಗ್ ಸರ್ಕಾರ ಚೀತಾ ಯೋಜನೆಗೆ ಅನುಮತಿ ಕೊಟ್ಟಿತ್ತು. ಅದೇ ವರ್ಷ ಆಗಿನ ಪರಿಸರ ಮತ್ತು ಅರಣ್ಯ ಸಚಿವ ಜೈರಾಮ್ ರಮೇಶ್‌‌ ಅವರು ಚೀತಾಗಳನ್ನು ನೋಡಲು ಆಫ್ರಿಕಾಕ್ಕೆ ಹೋಗಿದ್ದರು. 2011ರಲ್ಲಿ 50 ಕೋಟಿ ರೂ. ಮಂಜೂರು ಮಾಡಿ ಪಾವತಿಸಲಾಯಿತು. 2013ರಲ್ಲಿ ಯೋಜನೆಗೆ ಸುಪ್ರೀಂಕೋರ್ಟ್ ತಡೆ ನೀಡಿತು. 2020ರಲ್ಲಿ ಸುಪ್ರೀಂಕೋರ್ಟ್ ತಡೆಯಾಜ್ಞೆಯನ್ನು ರದ್ದುಮಾಡಿತು. ಈಗ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವರ್ಷ ಚೀತಾಗಳನ್ನು ಭಾರತಕ್ಕೆ ಕರೆತಂದಿದೆ. ಚೀತಾವನ್ನು ತರಲು ಯಾರೂ ಪ್ರಯತ್ನಿಸಿರಲಿಲ್ಲ ಎಂದು ಮೋದಿ ಹೇಳಿದರೆ, ಕಾಂಗ್ರೆಸ್ ತಿರುಗೇಟು ನೀಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಕರೆತಂದ ಯೋಜನೆಯಿಂದ ಆಗಿರುವ ಪರಿಣಾಮಗಳೇನು? ಎಂದು ಯೋಚಿಸಬೇಕಿದೆ. ಕಳೆದ ಏಪ್ರಿಲ್ 25ರಂದು ಈ ಚೀತಾ ಯೋಜನೆಯ ಕುರಿತು ಗ್ರೌಂಡ್ ರಿಪೋರ್ಟ್ ಮಾಡಿದ್ದ ‘ಪೀಪಲ್ಸ್‌ ಆರ್ಕೈವ್ ಆಫ್ ರೂರಲ್‌ ಇಂಡಿಯಾ’ (ಪರಿ) ಹಲವು ಆತಂಕಕಾರಿ ಸಂಗತಿಗಳನ್ನು ಬಿಚ್ಚಿಟ್ಟಿತ್ತು. “ಕೊನೊ: ಚೀತಾಗಳು ಒಳಗೆ, ಆದಿವಾಸಿಗಳು ಹೊರಗೆ” ಎಂಬ ವಿಸ್ತೃತ ಲೇಖನವನ್ನು ಪ್ರಕಟಿಸಿತ್ತು. ಇಲ್ಲಿನ ಆದಿವಾಸಿಗಳ ಪರಿಸ್ಥಿತಿಯ ಕುರಿತು ಬೆಳಕು ಚೆಲ್ಲಿತ್ತು.

ಹೆಚ್ಚಿನ ಬೆಲೆಯ ಸಫಾರಿ ಟಿಕೇಟುಗಳನ್ನು ಕೊಂಡು ಆಮದು ಮಾಡಲಾದ ಚೀತಾಗಳನ್ನು ನೋಡಲು ಬರುವ ಜನರಿಗಷ್ಟೇ ಇನ್ನು ಮುಂದೆ ಈ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರವೇಶವಿರಲಿದೆ. ಇದು ಪೂರ್ವನಿಯೋಜಿತವಾಗಿದ್ದು, ಸ್ಥಳೀಯ ನಿವಾಸಿಗಳನ್ನು ಕಾಡಿನಿಂದ ಹೊರಗಟ್ಟಲಾಗುತ್ತದೆ. ಇಲ್ಲಿನ ಹೆಚ್ಚಿನವರು ಬಡತನ ರೇಖೆಗಿಂತ ಕೆಳಗಿದ್ದಾರೆ ಎಂದು ವರದಿ ತಿಳಿಸಿತ್ತು.

“ಈ ವರ್ಷದ ಮಾರ್ಚ್ 6ರಂದು, ಅಲ್ಲಿನ ಅರಣ್ಯ ಚೌಕಿಯಲ್ಲಿ ಒಂದು ಸಭೆಯನ್ನು ಕರೆಯಲಾಯಿತು” ಎಂದು 40 ವರ್ಷದ ಬಲ್ಲು ಆದಿವಾಸಿ ತನ್ನ ಹಳ್ಳಿಯಾದ ಬಾಗ್ಚಾದ ಅಂಚಿನಲ್ಲಿರುವ ಕೂನೊ ಕಾಡಿನತ್ತ ಬೊಟ್ಟು ಮಾಡಿ ಹೇಳಿದ್ದರು. “ಈ ಪ್ರದೇಶವು ರಾಷ್ಟ್ರೀಯ ಉದ್ಯಾನವನವಾಗಿ ಮಾರ್ಪಟ್ಟಿದೆ ಮತ್ತು ನಾವು ಸ್ಥಳಾಂತರಗೊಳ್ಳಬೇಕು ಎಂದು ನಮಗೆ ತಿಳಿಸಲಾಯಿತು” ಎಂದು ತಿಳಿಸಿದ್ದರು.

ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯ ಪಶ್ಚಿಮ ಅಂಚಿನಲ್ಲಿರುವ ಬಾಗ್ಚಾ ಸಹರಿಯಾ ಆದಿವಾಸಿ ಸಮುದಾಯದವರ ಗ್ರಾಮವಾಗಿದ್ದು, ಇಲ್ಲಿನ ಜನರನ್ನು ದುರ್ಬಲ ಬುಡಕಟ್ಟು ಗುಂಪು (ಪಿವಿಟಿಜಿ) ಎಂದು ಗುರುತಿಸಲಾಗಿದೆ. ವಿಜಾಪುರ ಬ್ಲಾಕ್‌ನಲ್ಲಿರುವ ಈ ಗ್ರಾಮವು 2011ರ ಜನಗಣತಿಯ ಪ್ರಕಾರ 556 ಜನಸಂಖ್ಯೆಯನ್ನು ಹೊಂದಿದೆ. ಮಣ್ಣು ಮತ್ತು ಇಟ್ಟಿಗೆಯಿಂದ ನಿರ್ಮಿಸಿದ ಮನೆಗಳಲ್ಲಿ ಇಲ್ಲಿನ ಜನರು ವಾಸಿಸುತ್ತಾರೆ. ಕಲ್ಲಿನ ಚಪ್ಪಡಿಗಳನ್ನು ಛಾವಣಿಯಾಗಿ ಹೊದಿಸಲಾಗಿರುತ್ತದೆ, ಈ ಗ್ರಾಮ ರಾಷ್ಟ್ರೀಯ ಉದ್ಯಾನವನದಿಂದ ಸುತ್ತುವರೆದಿದೆ (ಇದನ್ನು ಕುನೊ ಪಲ್ಪುರ್ ಎಂದೂ ಕರೆಯಲಾಗುತ್ತದೆ), ಅಲ್ಲಿ ಕುನೊ ನದಿ ಹರಿಯುತ್ತದೆ.

ಅರವತ್ತು ವರ್ಷದ ಕಲ್ಲೋ ಆದಿವಾಸಿ ಎಂಬವರು ತಮ್ಮ ಬದುಕನ್ನೆಲ್ಲ ಬಾಗ್ಚಾದಲ್ಲಿಯೇ ಕಳೆದವರು. ‘ಪರಿ’ ತಂಡದೊಂದಿಗೆ ಮಾತನಾಡುತ್ತಾ, “ನಮ್ಮ ಭೂಮಿ ಇಲ್ಲೇ ಇದೆ. ನಮ್ಮ ಕಾಡು ಇಲ್ಲಿದೆ, ನಮ್ಮ ಮನೆ ಇಲ್ಲಿದೆ, ಇಲ್ಲಿ ಏನಿದೆಯೋ ಅದು ನಮ್ಮದು. ಈಗ ನಮ್ಮನ್ನು ತೊರೆಯುವಂತೆ ಒತ್ತಾಯಿಸಲಾಗುತ್ತಿದೆ” ಎಂದು ದುಃಖ ತೋಡಿಕೊಂಡಿದ್ದರು.

ಬಾಗ್ಚಾ ಸುತ್ತಲೂ ಕಾಡು. ಹೆಚ್ಚಿನ ಸಂಖ್ಯೆಯ ಬೀಡಾಡಿ ದನಗಳು. ಇಲ್ಲಿಗೆ ಆರೋಗ್ಯ ಕೇಂದ್ರವು 20 ಕಿಲೋಮೀಟರ್ ದೂರದಲ್ಲಿದೆ. 108ಕ್ಕೆ ಕರೆ ಮಾಡುವ ಮೂಲಕ ಸೌಲಭ್ಯ ಪಡೆಯಬಹುದು, ಆದರೆ ಫೋನ್ ಲೈನ್ ಗಳು ಮತ್ತು ನೆಟ್ವರ್ಕ್ ಕಾರ್ಯನಿರ್ವಹಿಸುತ್ತಿರುವಾಗ ಮಾತ್ರ ಈ ಸೌಲಭ್ಯ ಪಡೆಯಲು ಸಾಧ್ಯ. ಬಾಗ್ಚಾದಲ್ಲಿ ಪ್ರಾಥಮಿಕ ಶಾಲೆ ಇದೆ, ಆದರೆ 5ನೇ ತರಗತಿಯ ನಂತರ ಓದಲು, ಮಕ್ಕಳು 20 ಕಿಲೋಮೀಟರ್ ದೂರದಲ್ಲಿರುವ ಓಚಾದ ಹಿರಿಯ ಪ್ರಾಥಮಿಕ ಶಾಲೆಗೆ ಹೋಗಬೇಕು.

ಸಹರಿಯಾ ಜನರು ಸಣ್ಣ ತುಂಡು ಭೂಮಿಗಳಲ್ಲಿ ಮಳೆಯಾಶ್ರಿತ ಕೃಷಿಯನ್ನು ಮಾಡುತ್ತಾರೆ. ಕಾಡನ್ನು ನಂಬಿ ಬದುಕು ಕಂಡುಕೊಂಡ ಜನರಿವರು. ತೆಂಡು ಎಲೆಗಳು, ಹಣ್ಣುಗಳು, ಬೇರುಗಳು ಮತ್ತು ಗಿಡಮೂಲಿಕೆಗಳು, ಇತ್ಯಾದಿಗಳು ಇವರ ಸಂಪಾದನೆಯ ಮೂಲವಾಗಿದ್ದವು. ಕಾಡಿನಿಂದ ಹೊರಹೋಗುವುದೆಂದರೆ ಈ ಎಲ್ಲಾ ಆದಾಯ ಮೂಲಗಳನ್ನು ಕಳೆದುಕೊಳ್ಳುವುದೇ ಆಗಿದೆ.

“ನಮಗೆ ಕಾಡು ನೀಡುತ್ತಿದ್ದ ಸುರಕ್ಷಿತ ಭಾವನೆ ಇಲ್ಲವಾಗುತ್ತದೆ. ಇನ್ನು ಮುಂದೆ ಚಿರ್‌ ಮತ್ತು ಗೊಂಡ್‌ ಸಂಗ್ರಹಿಸಲು ಸಾಧ್ಯವಿಲ್ಲ. ನಮ್ಮ ಉಪ್ಪು ಮತ್ತು ಎ‍ಣ್ಣೆಯ ಖರ್ಚು ಇದರಿಂದಲೇ ಹುಟ್ಟುತ್ತಿತ್ತು. ನಮಗೆ ದಿನಗೂಲಿಯೊಂದೇ ಆಯ್ಕೆಯಾಗಿ ಉಳಿಯಲಿದೆ” ಎಂದು ಸಹಾರಿಯ ಸಮುದಾಯದ ಹರೇತ್‌ ಆದಿವಾಸಿ ನೋವು ತೋಡಿಕೊಂಡಿದ್ದಾರೆ.

ಚೀತಾ ಯೋಜನೆಯಿಂದ ಹೇಗೆ ಇಲ್ಲಿನ ಆದಿವಾಸಿಗಳು ತೊಂದರೆಗೀಡಾಗಿದ್ದಾರೆ ಎಂಬುದನ್ನು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ನೇತೃತ್ವದ ‘ಪರಿ’ ತಂಡ ವಿಸ್ತೃತವಾಗಿ ಹೊರಗೆಡವಿದೆ. (ವಿವರಗಳನ್ನು ಓದಲು ‘ಇಲ್ಲಿ’ ಕ್ಲಿಕ್ ಮಾಡಿ)

ಇದನ್ನೂ ಓದಿರಿ: ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ

ಪ್ರಕೃತಿ ವಿರೋಧಿ ಕೃತ್ಯ: ನವೀನ್ ಸೂರಿಂಜೆ

“ಆಫ್ರಿಕಾದಿಂದ ಭಾರತಕ್ಕೆ ಚೀತಾವನ್ನು ತಂದಿರೋದನ್ನು ವೈಭವಿಕರೀಸಲಾಗುತ್ತಿದೆ. ವಾಸ್ತವವಾಗಿ ಇದು ಪ್ರಕೃತಿ ವಿರೋಧಿ ಮತ್ತು ಮಾನವ ವಿರೋಧಿ ಕೃತ್ಯ” ಎನ್ನುತ್ತಾರೆ ಪತ್ರಕರ್ತ ನವೀನ್ ಸೂರಿಂಜೆ.

“ಆಫ್ರಿಕಾದಿಂದ ತಂದ ಚೀತಾವನ್ನು ಅದರದ್ದಲ್ಲದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗುತ್ತದೆ. ಜಗತ್ತಿನ ಅತ್ಯಂತ ವೇಗದ ಮತ್ತು ಕ್ರೂರ ಪ್ರಾಣಿಯಾದ ಚೀತಾ ತನ್ನದಲ್ಲದ ಅಪರಿಚಿತ ಕಾಡಲ್ಲಿ ಬೇಟೆಯನ್ನು ಹುಡುಕಬೇಕು. ಅದು ಕಾಡಿನ ಸುತ್ತ ಇರುವ ಆದಿವಾಸಿಗಳ ಬದುಕಿನ ಮೇಲೆ ಪರಿಣಾಮ ಬೀರುತ್ತದೆ. ಆಹಾರದ ಕೊರತೆಯಾದಾಗ, ಹೊಸ ಕಾಡಲ್ಲಿ ಬೇಟೆ ಸಿಗದೇ ಇದ್ದಾಗ ಕುನೋ ಅರಣ್ಯ ಪ್ರದೇಶದ ಅಂಚಿನಲ್ಲಿರುವ ಆದಿವಾಸಿಗಳು ಮತ್ತು ಅವರ ಹಟ್ಟಿಯಲ್ಲಿರುವ ದನಗಳತ್ತಾ ಚೀತಾದ ಗಮನ ಸೆಳೆಯಬಹುದು. ಜೊತೆಗೆ ಕಾಡಿನ ಹೊಸ ಚೀತಾಗಳ ಆಗಮನದಿಂದ ಚಿರತೆಗಳು ಮತ್ತು ಹುಲಿಗಳು ಕಾಡಿನ ಹೊರ ಭಾಗದಲ್ಲಿ ಸುಲಭವಾಗಿ ಸಿಗುವ ಮನುಷ್ಯರು ಮತ್ತು ಮನುಷ್ಯರು ಸಾಕಿದ ಪ್ರಾಣಿಗಳ ಮೇಲೆ ಎರಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಇದು ಮೋದಿಯಿಂದಾದ ಸಮಸ್ಯೆ ಮಾತ್ರವಲ್ಲ. ನಮ್ಮದೇ ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲೂ ಈ ಸಮಸ್ಯೆ ಇದೆ‌. ಯಾವುದಾದರೂ ಊರಲ್ಲಿ ಚಿರತೆ ಸಿಕ್ಕಿದರೆ ಅದನ್ನು ಹಿಡಿದು ಪಶ್ಚಿಮ ಘಟ್ಟದಲ್ಲಿ ಬಿಡುತ್ತಾರೆ. ಎಲ್ಲೇ ಕಾಳಿಂಗ ಸರ್ಪ, ಹುಲಿಯ ಪ್ರಭೇದಗಳು ಸಿಕ್ಕರೂ ಪಶ್ಚಿಮ ಘಟ್ಟದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡಲಾಗುತ್ತದೆ. ಈ ರೀತಿ ಸಿಕ್ಕ ಪ್ರಾಣಿಗಳ ನಿಜವಾದ ವಾಸಸ್ಥಳ ಎಲ್ಲಿ? ಅವು ಯಾವ ಕಾಡಿನಿಂದ ತಪ್ಪಿಸಿಕೊಂಡು ಬಂದವು ಎಂಬ ಬಗ್ಗೆ ಅಧ್ಯಯನ ಮಾಡುವ ಗೋಜಿಗೆ ಯಾರೂ ಹೋಗುವುದಿಲ್ಲ. ಯಾವುದೋ ಒಂದು ಕಾಡಾದರೆ ಆಯ್ತು. ಹೀಗೆ ಮಾಡಿದ್ದರಿಂದ ಕುತ್ಲೂರು ಸೇರಿದಂತೆ ಹಲವಾರು ಕಾಡಂಚಿನ ಗ್ರಾಮದ ಆದಿವಾಸಿಗಳು ತೊಂದರೆ ಅನುಭವಿಸಿದ್ದಿದೆ. ಈ ರೀತಿ ಎಲ್ಲೆಲ್ಲಿಂದಲೋ ಪ್ರಾಣಿಗಳ ತಂದು ನಮ್ಮ ಕಾಡಲ್ಲಿ ತಂದು ಬಿಡುವುದನ್ನು ಮಲೆಕುಡಿಯ ಸಮುದಾಯ ಪ್ರತಿಭಟನೆ ಕೂಡಾ ನಡೆಸಿತ್ತು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ೫೫೬ ಜನ ಆದಿವಾಸಿಗಳ ಬದುಕನ್ನು ಹಾಳುಮಾಡಿ, ವಿದೇಶದಿಂದ ಚಿರತೆ ತಂದು ಸಾಕಬೇಕಾದ ಅನಿವಾರ್ಯತೆ ನಮಗೆ ಇದೆಯಾ? ಈ ಆದಿವಾಸಿಗಳ ಬದುಕಿಗೆ ಬೆಲೆಯೇ ಇಲ್ಲವಾ?

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...