Homeಮುಖಪುಟಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

- Advertisement -
- Advertisement -

ನಮೀಬಿಯಾದಿಂದ ತರಲಾದ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಬಿಟ್ಟಿದ್ದಾರೆ. ಭಾರತದಲ್ಲಿ ಏಳು ದಶಕಗಳ ಹಿಂದೆಯೇ ಚೀತಾಗಳು ನಿರ್ನಾಮವಾದ ಕಾರಣ, ಸರ್ಕಾರ ಮಾಡಿರುವ ಈ ಕೆಲಸ ಮಹತ್ವದೆಂದು ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ಆದರೆ ಈ ಚೀತಾಗಳ ಹಿಂದೆಯೇ ಹಲವಾರು ಪ್ರಶ್ನೆಗಳು ಹುಟ್ಟಿಕೊಂಡಿವೆ. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತರಲಾಗಿರುವ ಪ್ರಾಣಿಗಳ ಮೇಲೆ ಬೀರುವ ಪರಿಣಾಮಗಳೇನು? ಏನೆಲ್ಲ ಎಚ್ಚರ ವಹಿಸಬೇಕಾಗುತ್ತದೆ? ಕುನೋ ಪ್ರದೇಶದಲ್ಲಿರುವ ಆದಿವಾಸಿಗಳ ಕಥೆ ಏನು? ಇತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ. ಪರಿಸರತಜ್ಞರು ಈ ಕುರಿತು ಹಲವಾರು ಆತಂಕಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪರಿಸರ ತಜ್ಞರಾದ ಕಲ್ಕುಳಿ ವಿಠಲ ಹೆಗ್ಡೆ ಹಾಗೂ ಪರಿಸರ ವಿಜ್ಞಾನಿ ನಾಗೇಶ ಹೆಗಡೆಯವರು ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಕಲ್ಕುಳಿ ವಿಠಲ ಹೆಗ್ಡೆಯವರು ಮಾತನಾಡಿ, “ಎಲ್ಲ ಪ್ರಾಣಿಗಳೂ ತಮ್ಮದೇ ಆದ ಸೀಮಿತ ಪ್ರದೇಶಕ್ಕೆ ಹೊಂದಿಕೊಂಡಿರುತ್ತವೆ. ಅವುಗಳು ತಮ್ಮ ಪ್ರದೇಶವನ್ನು ಗುರುತು ಹಾಕಿಕೊಂಡಿರುತ್ತವೆ. ಚಿರತೆ, ಹುಲಿಯಂತಹ ಪ್ರಾಣಿಗಳು ತಾವು ಹೊಂದಿಕೊಂಡ ಪ್ರದೇಶವನ್ನು ಬಿಟ್ಟು ಹೋಗುವುದಿಲ್ಲ. ತಮ್ಮ ವ್ಯಾಪ್ತಿಯನ್ನು ವಿಸ್ತರಿಸುವುದಕ್ಕೂ ಇಚ್ಛಿಸುವುದಿಲ್ಲ. ಯಾಕೆಂದರೆ ಬೇರೆ ಪ್ರದೇಶಕ್ಕೆ ಹೋದರೆ ಘರ್ಷಣೆಯಾಗುತ್ತದೆ. ಹೀಗಾಗಿ ಪ್ರಾಣಿಗಳಲ್ಲಿ ಪ್ರಾದೇಶಿಕವಾದ ಹೊಂದಾಣಿಕೆ ಇರುತ್ತದೆ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮೀಬಿಯಾದಲ್ಲಿನ ವಾತಾವರಣಕ್ಕೂ ಕುನೋ ರಾಷ್ಟ್ರೀಯ ಉದ್ಯಾನದಲ್ಲಿನ ವಾತಾವರಣಕ್ಕೂ ಯಾವುದೇ ವ್ಯತ್ಯಾಸವಿಲ್ಲದೆ ಇರಬಹುದು. ಆದರೆ ತನ್ನದಲ್ಲದ ಪ್ರದೇಶದಲ್ಲಿ ಈ ಪ್ರಾಣಿಗಳು ಬದುಕಿದಾಗ ಅತಿಹೆಚ್ಚು ಕ್ರೂರವಾಗುವ ಸಾಧ್ಯತೆಗಳು ಇರುತ್ತವೆ. ಯಾಕೆಂದರೆ ಈ ಪ್ರಾಣಿಗಳು ಸಹಜವಾಗಿ ಭಯಗೊಂಡಿರುತ್ತವೆ. ಕಂಡಕಂಡವರ ಮೇಲೆಲ್ಲಾ ಎರಗಲು ಮುಂದಾಗುತ್ತವೆ. ಕೃತಕವಾದ ಆಹಾರವನ್ನು ಕೊಡದಿದ್ದರೆ ಅವು ಭಯಗೊಂಡು ಸತ್ತೂ ಹೋಗಬಹುದು. ಎರಡು ಸಾಧ್ಯತೆ ಇದೆ. ಚೀತಾಗಳೇ ತಮ್ಮ ಸಾಮ್ರಾಜ್ಯವನ್ನು ಸ್ಥಾಪಿಸಿ ಎಲ್ಲವನ್ನೂ ಮುಗಿಸಬಹುದು, ಅಥವಾ ಹೆದರಿಕೊಂಡು ತಾವೇ ಸಾಯಬಹುದು” ಎಂದು ವಿವರಿಸಿದರು.

ಸಾಹಿತ್ಯವಿಲ್ಲದ ಹೋರಾಟ, ಹೋರಾಟವಿಲ್ಲದ ಸಾಹಿತ್ಯ ಜೊಳ್ಳು: ಕಲ್ಕುಳಿ ವಿಠಲ ಹೆಗ್ಡೆ | Prajavani
ಕಲ್ಕುಳಿ ವಿಠಲ ಹೆಗ್ಡೆ

“ನಮ್ಮಲ್ಲಿ ಯಾರಾದರೂ ಹಾವುಗಳನ್ನು ಹಿಡಿದಾಗ, ಯಾವುದೋ ಒಂದು ದೂರದ ಪ್ರದೇಶಕ್ಕೆ ಬಿಡುವುದನ್ನು ನೋಡಿದ್ದೇವೆ. ತನ್ನದಲ್ಲದ ಪ್ರದೇಶವೆಂದರೆ ಈ ಹಾವಿಗೆ ಬೇರೆಯ ದೇಶಕ್ಕೆ ಹೋದಂತೆ ಭಾಸವಾಗುತ್ತದೆ. ತನಗೆ ಪರಿಚಯವಿಲ್ಲದ ನೆಲದಲ್ಲಿ ಹೊಂದಾಣಿಕೆ ಮಾಡಿಕೊಂಡು ಬದುಕಬೇಕಾದರೆ ಬಹಳ ಕಾಲ ಬೇಕಾಗುತ್ತದೆ. ಪೇಟೆಗಳಲ್ಲಿ ಮಂಗನ ಕಾಟ ಹೆಚ್ಚಾದಾಗ ಗುಟ್ಟಾಗಿ ಅವುಗಳನ್ನು ಹಿಡಿದು, ಆಗುಂಬೆ ಕಾಡಿಗೆ ತಂದು ಬಿಡುವವರು ಇದ್ದಾರೆ. ಈ ವರ್ಷ ತಂದು ಬಿಟ್ಟ ಮಂಗಗಳಲ್ಲಿ ಅರ್ಧದಷ್ಟು ಮುಂದಿನ ವರ್ಷ ಇರುವುದಿಲ್ಲ” ಎಂದರು.

“ಆಫ್ರಿಕಾದಲ್ಲಿ ಮನುಷ್ಯರೊಟ್ಟಿಗೆ ಬದುಕಿದ ಪ್ರಾಣಿಗಳನ್ನು (ಅಂದರೆ ಮೃಗಾಲಯದಲ್ಲಿ ಬೆಳೆದ ಪ್ರಾಣಿಗಳನ್ನು) ತಂದಿದ್ದಾರೆ. ಇವುಗಳು ಕಾಡಲ್ಲಿ ಬೆಳೆದ ಪ್ರಾಣಿಗಳಲ್ಲ. ಹೀಗಾಗಿ ಮನುಷ್ಯರೊಟ್ಟಿಗೆ ಬೆಳೆದ ಪ್ರಾಣಿಗಳನ್ನು ಮನುಷ್ಯರೇ ಬೆಳೆಸಬೇಕು. ಇವುಗಳು ಸ್ವತಂತ್ರವಾಗಿ ಬೆಳೆಯಲೆಂದು ಬಿಟ್ಟು ಉಪವಾಸ ಕೆಡವಿದರೆ ಮೊದಲು ದಾಳಿ ಮಾಡುವುದು ಮನುಷ್ಯರ ಮೇಲೆಯೇ. ಯಾಕೆಂದರೆ ಈ ಪ್ರಾಣಿಗಳಿಗೆ ಮನುಷ್ಯರ ವಿಷಯ ಮಾತ್ರ ಗೊತ್ತಿರುತ್ತದೆ” ಎಂದು ಎಚ್ಚರಿಸಿದರು.

“ಮೃಗಾಲಯದಲ್ಲಿ ಜನಿಸಿದ ಹುಲಿಗಳನ್ನು ನಾಗರಹೊಳೆ ಕಾಡಿಗೆ ಬಿಟ್ಟರು. ಹುಲಿ ಸಂತತಿ ಹೆಚ್ಚು ಮಾಡಬೇಕೆಂದು ಯೋಚಿಸಿದ್ದರು. ಈ ಹುಲಿಗಳು ಹಿಡಿದದ್ದು ಅರಣ್ಯಾ ಸಿಬ್ಬಂದಿಗಳನ್ನು ಎಂಬುದನ್ನು ಮರೆಯಬಾರದು. ಮನುಷ್ಯರ ಬಗ್ಗೆ ಈ ಪ್ರಾಣಿಗಳಿಗೆ ಗೊತ್ತಿರುತ್ತದೆಯೇ ಹೊರತು, ಶಿಕಾರಿ ಮಾಡಿ ಅಭ್ಯಾಸವಿರುವುದಿಲ್ಲ. ತಾನು ಶಿಕಾರಿ ಮಾಡಬೇಕಾದ ಸಸ್ಯಾಹಾರಿ ಪ್ರಾಣಿ ಎಲ್ಲಿರುತ್ತದೆ ಎಂದು ಈ ಚೀತಾಕ್ಕೆ ಗೊತ್ತಿರಬೇಕು, ಓಡಿಸಿಕೊಂಡು ಹೋಗಿ ಹಿಡಿಯಬೇಕು. ಆಫ್ರಿಕಾದಲ್ಲಿ ಇದ್ದ ಪರಿಸ್ಥಿತಿಗೂ ಇಲ್ಲಿಗೂ ಹೊಂದಿಕೊಳ್ಳಬೇಕು. ಇದು ಬಾಡಿಗೆ ಮನೆ ಬದಲಿಸಿದಷ್ಟು ಸುಲಭವಲ್ಲ” ಎಂದು ಅಭಿಪ್ರಾಯಪಟ್ಟರು.

“ಈ ಚೀತಾಗಳನ್ನು ಮೃಗಾಲಯದಲ್ಲಿ ಸಾಕಬಹುದಿತ್ತು. ಉದಾಹರಣೆಗೆ ಅಮೆರಿಕಾದಲ್ಲಿ ಹುಲಿ ಇರದಿದ್ದರೂ ಅಲ್ಲಿನ ಮೃಗಾಲಯಗಳಲ್ಲಿ ಭಾರತದ ಹುಲಿಗಳನ್ನು ನೋಡಬಹುದು. ಸೂಕ್ತ ವಾತಾವರಣ ಕಲ್ಪಿಸಿ ಪೋಷಣೆ ಮಾಡುತ್ತಾರೆ. ಆದರೆ ಇವುಗಳನ್ನು ಮುಕ್ತವಾದ ಕಾಡಿಗೆ ಬಿಟ್ಟರೆ ಉಳಿಯುವುದು ಕಷ್ಟ. ಮತ್ತಷ್ಟು ಅನಾಹುತಗಳಿಗೆ ಎಡೆಮಾಡಿಕೊಟ್ಟಂತೆ” ಎಂದು ಭವಿಷ್ಯ ನುಡಿದರು.

ಕಾನೂನಿನ ತೊಡಕು ಎದುರಾಗುತ್ತದೆ: ನಾಗೇಶ ಹೆಗಡೆ

ಪರಿಸರ ತಜ್ಞರಾದ ನಾಗೇಶ ಹೆಗಡೆಯವರು ಮಾತನಾಡಿ, “ಚೀತಾಗಳು ಹುಲ್ಲುಗಾವಲು ಪ್ರದೇಶದಲ್ಲಿ ಬದುಕುವ ಪ್ರಾಣಿಗಳಾಗಿವೆ. ಆದರೆ ಇಲ್ಲಿ ಹುಲ್ಲುಗಾವಲು ಇಲ್ಲ. ಇದ್ದಬದ್ಧ ಮರಗಳನ್ನು ಕಡಿದು ಹುಲ್ಲುಗಾವಲು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಅವುಗಳ ಆಹಾರಕ್ಕೆ ಸಾಕಾಗುವಷ್ಟು ಸಸ್ಯಾಹಾರಿ ಪ್ರಾಣಿಗಳು ಬೇಕು. ಸದ್ಯಕ್ಕೆ ಸಮಸ್ಯೆ ಇಲ್ಲವಾದರೂ ಮುಂದಿನ ವರ್ಷಗಳಲ್ಲಿ ಕೃಷ್ಣಮೃಗ, ಜಿಂಕೆ ಮೊದಲಾದ ಪ್ರಾಣಿಗಳನ್ನು ಬೇರೆ ಕಡೆಯಿಂದ ತರಬೇಕಾಗುತ್ತದೆ. ಅದಕ್ಕೂ ಕಾನೂನಿನಲ್ಲಿ ಅವಕಾಶವಿಲ್ಲ. ಒಂದು ವೇಳೆ ಒಂದೆರಡು ಸಾವಿರ ಜಿಂಕೆಗಳನ್ನು ತಂದು ಇಲ್ಲಿಗೆ ಬಿಟ್ಟೆವೆಂದೂ ತಿಳಿಯೋಣ. ಆದರೆ ಅಲ್ಲಿ ಈಗಾಗಲೇ ಕತ್ತೆಕಿರುಬ, ಚಿರತೆಗಳಿವೆ. ಇವುಗಳೇ ಜಿಂಕೆಗಳನ್ನು ತಿಂದು ಮುಗಿಸುತ್ತವೆ. ಚೀತಾಗಳಿಗಿಂತ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತದೆ” ಎಂದು ಹೇಳಿದರು.

May be an image of 1 person
ನಾಗೇಶ ಹೆಗಡೆ

“ಚೀತಾಕ್ಕೆ ಹೋಲಿಸಿದರೆ ಚಿರತೆ ಅತ್ಯಂತ ಅಪಾಯಕಾರಿ ಪ್ರಾಣಿ. ಚಿರತೆಯಂತೆ ಮರ ಹತ್ತಲೂ ಬಾರದ ಪ್ರಾಣಿ ಇದು. ವೇಗವಾಗಿ ಓಡಬಲ್ಲವು ಅಷ್ಟೇ. ಆದರೆ ಚಿರತೆ ಹೊಂಚಿಹಾಕಿ ಭೇಟಿಯಾಡುತ್ತದೆ” ಎಂದು ತಿಳಿಸಿದರು.

“ನಮ್ಮಲ್ಲಿ ಸಾಕಷ್ಟು ಅಳಿವಿನಂಚಿನಲ್ಲಿರುವ ಪ್ರಾಣಿ, ಪಕ್ಷಿಗಳಿವೆ. ಅವುಗಳ ಉಳಿವಿಗಾಗಿ ಮೋದಿಯವರು ಏನನ್ನೂ ಮಾಡಿಲ್ಲ. ವನ್ಯಜೀವಿ ಮಂಡಳಿಗೆ ಮೋದಿಯವರೇ ಅಧ್ಯಕ್ಷರಾಗಿದ್ದಾರೆ. ಆದರೆ ಕಳೆದ ಎಂಟು ವರ್ಷಗಳಿಂದ ಸಣ್ಣದೊಂದು ಸಭೆ ಮಾಡಿದ್ದು ಕಾಣಲಿಲ್ಲ” ಎಂದು ವಿಷಾದಿಸಲಿಲ್ಲ.

“ಗುಜರಾತ್‌ನಲ್ಲಿ ಒಂದೇ ಗುಂಪಿನಲ್ಲಿ ಸಿಂಹಗಳಿವೆ. ರೋಗರುಜಿನ ಬಂದರೆ ಒಮ್ಮೆಲೇ ಸಾಯುತ್ತವೆ. ಹೀಗಾಗಿ ಒಂದಿಷ್ಟು ಸಿಂಹಗಳನ್ನು ಕುನೋಗೆ ತರಬೇಕೆಂದಿದ್ದರು. ಇದಕ್ಕೆ ಗುಜರಾತ್‌ ಸರ್ಕಾರ ಇದಕ್ಕೆ ಸಿದ್ಧವಿರಲಿಲ್ಲ. ಮೋದಿಯವರು ಗುಜರಾತ್‌ನಿಂದ ಸಿಂಹಗಳನ್ನು ತಂದು ಇಲ್ಲಿ ಬಿಡಬಹುದಿತ್ತು. ಆದರೆ ನಮೀಬಿಯಾದಿಂದ ಚೀತಾಗಳನ್ನು ತಂದಿದ್ದಾರೆ” ಎಂದರು.

ಕುನೋ ರಾಷ್ಟ್ರೀಯ ಉದ್ಯಾನ ಭಾಗದಲ್ಲಿನ ಆದಿವಾಸಿಗಳ ಪರಿಸ್ಥಿತಿಯ ಕುರಿತು ಮಾತನಾಡಿದ ಅವರು, “ಈ ಭಾಗದಲ್ಲಿ ಸುಮಾರು 150 ಹಳ್ಳಿಗಳಿವೆ. ಅಲ್ಲಿನ ಆದಿವಾಸಿಗಳನ್ನು ಬೇರೆ ಕಡೆ ಕಳುಹಿಸಬೇಕು. ಸರಿಯಾಗಿ ಪುನರ್‌ವಸತಿ ಕಲ್ಪಿಸಿದರೆ ತಾವಾಗಿಯೇ ಖುಷಿಯಿಂದ ಆದಿವಾಸಿಗಳು ಹೊರಗೆ ಹೋಗಬಹುದು. ಆದರೆ ನಮ್ಮ ದೇಶದಲ್ಲಿ ಸರಿಯಾದ ಮೂಲಸೌಕರ್ಯ ಕಲ್ಪಿಸಿ ಪುನರ್‌ವಸತಿ ಮಾಡಿದ್ದೇ ಅಪರೂಪ. ಎಲ್ಲೋ ಒಂದು ಕಡೆ ತಗಡಿನ ಶೆಡ್ಡು ನಿರ್ಮಿಸಿ ಆದಿವಾಸಿಗಳನ್ನು ಅಲ್ಲಿಗೆ ತಂದು ಬಿಸಾಡುತ್ತಾರೆ. ಮತ್ತೆ ಆದಿವಾಸಿಗಳು ಅತಂತ್ರರಾಗುತ್ತಾರೆ. ಯಾವುದಾದರೂ ಚೀತಾ ಸತ್ತರೆ ಮತ್ತೆ ಈ ಜನರಿಗೆ ತೊಂದರೆ ಕೊಡುತ್ತಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....