Homeಮುಖಪುಟಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

- Advertisement -
- Advertisement -

ನಮೀಬಿಯಾದಿಂದ ತರಲಾದ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಬಿಟ್ಟಿದ್ದಾರೆ. ಭಾರತದಲ್ಲಿ ಏಳು ದಶಕಗಳ ಹಿಂದೆಯೇ ಚೀತಾಗಳು ನಿರ್ನಾಮವಾದ ಕಾರಣ, ಸರ್ಕಾರ ಮಾಡಿರುವ ಈ ಕೆಲಸ ಮಹತ್ವದೆಂದು ಶ್ಲಾಘನೆಗಳು ವ್ಯಕ್ತವಾಗುತ್ತಿವೆ. ಆದರೆ ಈ ಚೀತಾಗಳ ಹಿಂದೆಯೇ ಹಲವಾರು ಪ್ರಶ್ನೆಗಳು ಹುಟ್ಟಿಕೊಂಡಿವೆ. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತರಲಾಗಿರುವ ಪ್ರಾಣಿಗಳ ಮೇಲೆ ಬೀರುವ ಪರಿಣಾಮಗಳೇನು? ಏನೆಲ್ಲ ಎಚ್ಚರ ವಹಿಸಬೇಕಾಗುತ್ತದೆ? ಕುನೋ ಪ್ರದೇಶದಲ್ಲಿರುವ ಆದಿವಾಸಿಗಳ ಕಥೆ ಏನು? ಇತ್ಯಾದಿ ಪ್ರಶ್ನೆಗಳು ಹುಟ್ಟಿಕೊಂಡಿವೆ. ಪರಿಸರತಜ್ಞರು ಈ ಕುರಿತು ಹಲವಾರು ಆತಂಕಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಪರಿಸರ ತಜ್ಞರಾದ ಕಲ್ಕುಳಿ ವಿಠಲ ಹೆಗ್ಡೆ ಹಾಗೂ ಪರಿಸರ ವಿಜ್ಞಾನಿ ನಾಗೇಶ ಹೆಗಡೆಯವರು ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಕಲ್ಕುಳಿ ವಿಠಲ ಹೆಗ್ಡೆಯವರು ಮಾತನಾಡಿ, “ಎಲ್ಲ ಪ್ರಾಣಿಗಳೂ ತಮ್ಮದೇ ಆದ ಸೀಮಿತ ಪ್ರದೇಶಕ್ಕೆ ಹೊಂದಿಕೊಂಡಿರುತ್ತವೆ. ಅವುಗಳು ತಮ್ಮ ಪ್ರದೇಶವನ್ನು ಗುರುತು ಹಾಕಿಕೊಂಡಿರುತ್ತವೆ. ಚಿರತೆ, ಹುಲಿಯಂತಹ ಪ್ರಾಣಿಗಳು ತಾವು ಹೊಂದಿಕೊಂಡ ಪ್ರದೇಶವನ್ನು ಬಿಟ್ಟು ಹೋಗುವುದಿಲ್ಲ. ತಮ್ಮ ವ್ಯಾಪ್ತಿಯನ್ನು ವಿಸ್ತರಿಸುವುದಕ್ಕೂ ಇಚ್ಛಿಸುವುದಿಲ್ಲ. ಯಾಕೆಂದರೆ ಬೇರೆ ಪ್ರದೇಶಕ್ಕೆ ಹೋದರೆ ಘರ್ಷಣೆಯಾಗುತ್ತದೆ. ಹೀಗಾಗಿ ಪ್ರಾಣಿಗಳಲ್ಲಿ ಪ್ರಾದೇಶಿಕವಾದ ಹೊಂದಾಣಿಕೆ ಇರುತ್ತದೆ” ಎಂದು ತಿಳಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮೀಬಿಯಾದಲ್ಲಿನ ವಾತಾವರಣಕ್ಕೂ ಕುನೋ ರಾಷ್ಟ್ರೀಯ ಉದ್ಯಾನದಲ್ಲಿನ ವಾತಾವರಣಕ್ಕೂ ಯಾವುದೇ ವ್ಯತ್ಯಾಸವಿಲ್ಲದೆ ಇರಬಹುದು. ಆದರೆ ತನ್ನದಲ್ಲದ ಪ್ರದೇಶದಲ್ಲಿ ಈ ಪ್ರಾಣಿಗಳು ಬದುಕಿದಾಗ ಅತಿಹೆಚ್ಚು ಕ್ರೂರವಾಗುವ ಸಾಧ್ಯತೆಗಳು ಇರುತ್ತವೆ. ಯಾಕೆಂದರೆ ಈ ಪ್ರಾಣಿಗಳು ಸಹಜವಾಗಿ ಭಯಗೊಂಡಿರುತ್ತವೆ. ಕಂಡಕಂಡವರ ಮೇಲೆಲ್ಲಾ ಎರಗಲು ಮುಂದಾಗುತ್ತವೆ. ಕೃತಕವಾದ ಆಹಾರವನ್ನು ಕೊಡದಿದ್ದರೆ ಅವು ಭಯಗೊಂಡು ಸತ್ತೂ ಹೋಗಬಹುದು. ಎರಡು ಸಾಧ್ಯತೆ ಇದೆ. ಚೀತಾಗಳೇ ತಮ್ಮ ಸಾಮ್ರಾಜ್ಯವನ್ನು ಸ್ಥಾಪಿಸಿ ಎಲ್ಲವನ್ನೂ ಮುಗಿಸಬಹುದು, ಅಥವಾ ಹೆದರಿಕೊಂಡು ತಾವೇ ಸಾಯಬಹುದು” ಎಂದು ವಿವರಿಸಿದರು.

ಸಾಹಿತ್ಯವಿಲ್ಲದ ಹೋರಾಟ, ಹೋರಾಟವಿಲ್ಲದ ಸಾಹಿತ್ಯ ಜೊಳ್ಳು: ಕಲ್ಕುಳಿ ವಿಠಲ ಹೆಗ್ಡೆ | Prajavani
ಕಲ್ಕುಳಿ ವಿಠಲ ಹೆಗ್ಡೆ

“ನಮ್ಮಲ್ಲಿ ಯಾರಾದರೂ ಹಾವುಗಳನ್ನು ಹಿಡಿದಾಗ, ಯಾವುದೋ ಒಂದು ದೂರದ ಪ್ರದೇಶಕ್ಕೆ ಬಿಡುವುದನ್ನು ನೋಡಿದ್ದೇವೆ. ತನ್ನದಲ್ಲದ ಪ್ರದೇಶವೆಂದರೆ ಈ ಹಾವಿಗೆ ಬೇರೆಯ ದೇಶಕ್ಕೆ ಹೋದಂತೆ ಭಾಸವಾಗುತ್ತದೆ. ತನಗೆ ಪರಿಚಯವಿಲ್ಲದ ನೆಲದಲ್ಲಿ ಹೊಂದಾಣಿಕೆ ಮಾಡಿಕೊಂಡು ಬದುಕಬೇಕಾದರೆ ಬಹಳ ಕಾಲ ಬೇಕಾಗುತ್ತದೆ. ಪೇಟೆಗಳಲ್ಲಿ ಮಂಗನ ಕಾಟ ಹೆಚ್ಚಾದಾಗ ಗುಟ್ಟಾಗಿ ಅವುಗಳನ್ನು ಹಿಡಿದು, ಆಗುಂಬೆ ಕಾಡಿಗೆ ತಂದು ಬಿಡುವವರು ಇದ್ದಾರೆ. ಈ ವರ್ಷ ತಂದು ಬಿಟ್ಟ ಮಂಗಗಳಲ್ಲಿ ಅರ್ಧದಷ್ಟು ಮುಂದಿನ ವರ್ಷ ಇರುವುದಿಲ್ಲ” ಎಂದರು.

“ಆಫ್ರಿಕಾದಲ್ಲಿ ಮನುಷ್ಯರೊಟ್ಟಿಗೆ ಬದುಕಿದ ಪ್ರಾಣಿಗಳನ್ನು (ಅಂದರೆ ಮೃಗಾಲಯದಲ್ಲಿ ಬೆಳೆದ ಪ್ರಾಣಿಗಳನ್ನು) ತಂದಿದ್ದಾರೆ. ಇವುಗಳು ಕಾಡಲ್ಲಿ ಬೆಳೆದ ಪ್ರಾಣಿಗಳಲ್ಲ. ಹೀಗಾಗಿ ಮನುಷ್ಯರೊಟ್ಟಿಗೆ ಬೆಳೆದ ಪ್ರಾಣಿಗಳನ್ನು ಮನುಷ್ಯರೇ ಬೆಳೆಸಬೇಕು. ಇವುಗಳು ಸ್ವತಂತ್ರವಾಗಿ ಬೆಳೆಯಲೆಂದು ಬಿಟ್ಟು ಉಪವಾಸ ಕೆಡವಿದರೆ ಮೊದಲು ದಾಳಿ ಮಾಡುವುದು ಮನುಷ್ಯರ ಮೇಲೆಯೇ. ಯಾಕೆಂದರೆ ಈ ಪ್ರಾಣಿಗಳಿಗೆ ಮನುಷ್ಯರ ವಿಷಯ ಮಾತ್ರ ಗೊತ್ತಿರುತ್ತದೆ” ಎಂದು ಎಚ್ಚರಿಸಿದರು.

“ಮೃಗಾಲಯದಲ್ಲಿ ಜನಿಸಿದ ಹುಲಿಗಳನ್ನು ನಾಗರಹೊಳೆ ಕಾಡಿಗೆ ಬಿಟ್ಟರು. ಹುಲಿ ಸಂತತಿ ಹೆಚ್ಚು ಮಾಡಬೇಕೆಂದು ಯೋಚಿಸಿದ್ದರು. ಈ ಹುಲಿಗಳು ಹಿಡಿದದ್ದು ಅರಣ್ಯಾ ಸಿಬ್ಬಂದಿಗಳನ್ನು ಎಂಬುದನ್ನು ಮರೆಯಬಾರದು. ಮನುಷ್ಯರ ಬಗ್ಗೆ ಈ ಪ್ರಾಣಿಗಳಿಗೆ ಗೊತ್ತಿರುತ್ತದೆಯೇ ಹೊರತು, ಶಿಕಾರಿ ಮಾಡಿ ಅಭ್ಯಾಸವಿರುವುದಿಲ್ಲ. ತಾನು ಶಿಕಾರಿ ಮಾಡಬೇಕಾದ ಸಸ್ಯಾಹಾರಿ ಪ್ರಾಣಿ ಎಲ್ಲಿರುತ್ತದೆ ಎಂದು ಈ ಚೀತಾಕ್ಕೆ ಗೊತ್ತಿರಬೇಕು, ಓಡಿಸಿಕೊಂಡು ಹೋಗಿ ಹಿಡಿಯಬೇಕು. ಆಫ್ರಿಕಾದಲ್ಲಿ ಇದ್ದ ಪರಿಸ್ಥಿತಿಗೂ ಇಲ್ಲಿಗೂ ಹೊಂದಿಕೊಳ್ಳಬೇಕು. ಇದು ಬಾಡಿಗೆ ಮನೆ ಬದಲಿಸಿದಷ್ಟು ಸುಲಭವಲ್ಲ” ಎಂದು ಅಭಿಪ್ರಾಯಪಟ್ಟರು.

“ಈ ಚೀತಾಗಳನ್ನು ಮೃಗಾಲಯದಲ್ಲಿ ಸಾಕಬಹುದಿತ್ತು. ಉದಾಹರಣೆಗೆ ಅಮೆರಿಕಾದಲ್ಲಿ ಹುಲಿ ಇರದಿದ್ದರೂ ಅಲ್ಲಿನ ಮೃಗಾಲಯಗಳಲ್ಲಿ ಭಾರತದ ಹುಲಿಗಳನ್ನು ನೋಡಬಹುದು. ಸೂಕ್ತ ವಾತಾವರಣ ಕಲ್ಪಿಸಿ ಪೋಷಣೆ ಮಾಡುತ್ತಾರೆ. ಆದರೆ ಇವುಗಳನ್ನು ಮುಕ್ತವಾದ ಕಾಡಿಗೆ ಬಿಟ್ಟರೆ ಉಳಿಯುವುದು ಕಷ್ಟ. ಮತ್ತಷ್ಟು ಅನಾಹುತಗಳಿಗೆ ಎಡೆಮಾಡಿಕೊಟ್ಟಂತೆ” ಎಂದು ಭವಿಷ್ಯ ನುಡಿದರು.

ಕಾನೂನಿನ ತೊಡಕು ಎದುರಾಗುತ್ತದೆ: ನಾಗೇಶ ಹೆಗಡೆ

ಪರಿಸರ ತಜ್ಞರಾದ ನಾಗೇಶ ಹೆಗಡೆಯವರು ಮಾತನಾಡಿ, “ಚೀತಾಗಳು ಹುಲ್ಲುಗಾವಲು ಪ್ರದೇಶದಲ್ಲಿ ಬದುಕುವ ಪ್ರಾಣಿಗಳಾಗಿವೆ. ಆದರೆ ಇಲ್ಲಿ ಹುಲ್ಲುಗಾವಲು ಇಲ್ಲ. ಇದ್ದಬದ್ಧ ಮರಗಳನ್ನು ಕಡಿದು ಹುಲ್ಲುಗಾವಲು ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಅವುಗಳ ಆಹಾರಕ್ಕೆ ಸಾಕಾಗುವಷ್ಟು ಸಸ್ಯಾಹಾರಿ ಪ್ರಾಣಿಗಳು ಬೇಕು. ಸದ್ಯಕ್ಕೆ ಸಮಸ್ಯೆ ಇಲ್ಲವಾದರೂ ಮುಂದಿನ ವರ್ಷಗಳಲ್ಲಿ ಕೃಷ್ಣಮೃಗ, ಜಿಂಕೆ ಮೊದಲಾದ ಪ್ರಾಣಿಗಳನ್ನು ಬೇರೆ ಕಡೆಯಿಂದ ತರಬೇಕಾಗುತ್ತದೆ. ಅದಕ್ಕೂ ಕಾನೂನಿನಲ್ಲಿ ಅವಕಾಶವಿಲ್ಲ. ಒಂದು ವೇಳೆ ಒಂದೆರಡು ಸಾವಿರ ಜಿಂಕೆಗಳನ್ನು ತಂದು ಇಲ್ಲಿಗೆ ಬಿಟ್ಟೆವೆಂದೂ ತಿಳಿಯೋಣ. ಆದರೆ ಅಲ್ಲಿ ಈಗಾಗಲೇ ಕತ್ತೆಕಿರುಬ, ಚಿರತೆಗಳಿವೆ. ಇವುಗಳೇ ಜಿಂಕೆಗಳನ್ನು ತಿಂದು ಮುಗಿಸುತ್ತವೆ. ಚೀತಾಗಳಿಗಿಂತ ಚಿರತೆಗಳ ಸಂಖ್ಯೆ ಹೆಚ್ಚಾಗುತ್ತದೆ” ಎಂದು ಹೇಳಿದರು.

May be an image of 1 person
ನಾಗೇಶ ಹೆಗಡೆ

“ಚೀತಾಕ್ಕೆ ಹೋಲಿಸಿದರೆ ಚಿರತೆ ಅತ್ಯಂತ ಅಪಾಯಕಾರಿ ಪ್ರಾಣಿ. ಚಿರತೆಯಂತೆ ಮರ ಹತ್ತಲೂ ಬಾರದ ಪ್ರಾಣಿ ಇದು. ವೇಗವಾಗಿ ಓಡಬಲ್ಲವು ಅಷ್ಟೇ. ಆದರೆ ಚಿರತೆ ಹೊಂಚಿಹಾಕಿ ಭೇಟಿಯಾಡುತ್ತದೆ” ಎಂದು ತಿಳಿಸಿದರು.

“ನಮ್ಮಲ್ಲಿ ಸಾಕಷ್ಟು ಅಳಿವಿನಂಚಿನಲ್ಲಿರುವ ಪ್ರಾಣಿ, ಪಕ್ಷಿಗಳಿವೆ. ಅವುಗಳ ಉಳಿವಿಗಾಗಿ ಮೋದಿಯವರು ಏನನ್ನೂ ಮಾಡಿಲ್ಲ. ವನ್ಯಜೀವಿ ಮಂಡಳಿಗೆ ಮೋದಿಯವರೇ ಅಧ್ಯಕ್ಷರಾಗಿದ್ದಾರೆ. ಆದರೆ ಕಳೆದ ಎಂಟು ವರ್ಷಗಳಿಂದ ಸಣ್ಣದೊಂದು ಸಭೆ ಮಾಡಿದ್ದು ಕಾಣಲಿಲ್ಲ” ಎಂದು ವಿಷಾದಿಸಲಿಲ್ಲ.

“ಗುಜರಾತ್‌ನಲ್ಲಿ ಒಂದೇ ಗುಂಪಿನಲ್ಲಿ ಸಿಂಹಗಳಿವೆ. ರೋಗರುಜಿನ ಬಂದರೆ ಒಮ್ಮೆಲೇ ಸಾಯುತ್ತವೆ. ಹೀಗಾಗಿ ಒಂದಿಷ್ಟು ಸಿಂಹಗಳನ್ನು ಕುನೋಗೆ ತರಬೇಕೆಂದಿದ್ದರು. ಇದಕ್ಕೆ ಗುಜರಾತ್‌ ಸರ್ಕಾರ ಇದಕ್ಕೆ ಸಿದ್ಧವಿರಲಿಲ್ಲ. ಮೋದಿಯವರು ಗುಜರಾತ್‌ನಿಂದ ಸಿಂಹಗಳನ್ನು ತಂದು ಇಲ್ಲಿ ಬಿಡಬಹುದಿತ್ತು. ಆದರೆ ನಮೀಬಿಯಾದಿಂದ ಚೀತಾಗಳನ್ನು ತಂದಿದ್ದಾರೆ” ಎಂದರು.

ಕುನೋ ರಾಷ್ಟ್ರೀಯ ಉದ್ಯಾನ ಭಾಗದಲ್ಲಿನ ಆದಿವಾಸಿಗಳ ಪರಿಸ್ಥಿತಿಯ ಕುರಿತು ಮಾತನಾಡಿದ ಅವರು, “ಈ ಭಾಗದಲ್ಲಿ ಸುಮಾರು 150 ಹಳ್ಳಿಗಳಿವೆ. ಅಲ್ಲಿನ ಆದಿವಾಸಿಗಳನ್ನು ಬೇರೆ ಕಡೆ ಕಳುಹಿಸಬೇಕು. ಸರಿಯಾಗಿ ಪುನರ್‌ವಸತಿ ಕಲ್ಪಿಸಿದರೆ ತಾವಾಗಿಯೇ ಖುಷಿಯಿಂದ ಆದಿವಾಸಿಗಳು ಹೊರಗೆ ಹೋಗಬಹುದು. ಆದರೆ ನಮ್ಮ ದೇಶದಲ್ಲಿ ಸರಿಯಾದ ಮೂಲಸೌಕರ್ಯ ಕಲ್ಪಿಸಿ ಪುನರ್‌ವಸತಿ ಮಾಡಿದ್ದೇ ಅಪರೂಪ. ಎಲ್ಲೋ ಒಂದು ಕಡೆ ತಗಡಿನ ಶೆಡ್ಡು ನಿರ್ಮಿಸಿ ಆದಿವಾಸಿಗಳನ್ನು ಅಲ್ಲಿಗೆ ತಂದು ಬಿಸಾಡುತ್ತಾರೆ. ಮತ್ತೆ ಆದಿವಾಸಿಗಳು ಅತಂತ್ರರಾಗುತ್ತಾರೆ. ಯಾವುದಾದರೂ ಚೀತಾ ಸತ್ತರೆ ಮತ್ತೆ ಈ ಜನರಿಗೆ ತೊಂದರೆ ಕೊಡುತ್ತಾರೆ” ಎಂದು ಆತಂಕ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...