Homeಕರ್ನಾಟಕಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

ಮಹಾರಾಷ್ಟ್ರಕ್ಕೂ ಕಾಲಿಟ್ಟ ಲಂಪಿ ವೈರಸ್‌; ಜಾನುವಾರುಗಳ ಸರಣಿ ಸಾವು; ಎಚ್ಚೆತ್ತುಕೊಂಡಿದೆಯೇ ಕರ್ನಾಟಕ ಸರ್ಕಾರ?

- Advertisement -
- Advertisement -

ಮಹಾರಾಷ್ಟ್ರದಲ್ಲಿ ಲಂಪಿ ವೈರಸ್‌ನಿಂದ 126 ಜಾನುವಾರುಗಳು ಸಾವನ್ನಪ್ಪಿವೆ. ಇಲ್ಲಿನ 25 ಜಿಲ್ಲೆಗಳು ಸೋಂಕಿಗೆ ಒಳಗಾಗಿವೆ ಎಂದು ರಾಜ್ಯದ ಪಶುಸಂಗೋಪನಾ ಇಲಾಖೆ ಶನಿವಾರ ಮಾಹಿತಿ ನೀಡಿದೆ.

“ಜಲಗಾಂವ್ ಜಿಲ್ಲೆಯಲ್ಲಿ 47, ಅಹ್ಮದ್‌ನಗರ ಜಿಲ್ಲೆಯಲ್ಲಿ 21, ಧುಲೆಯಲ್ಲಿ 2, ಅಕೋಲಾದಲ್ಲಿ 18, ಪುಣೆಯಲ್ಲಿ 14, ಲಾತೂರ್‌ನಲ್ಲಿ 2, ಸತಾರಾದಲ್ಲಿ 6, ಬುಲ್ಧಾನದಲ್ಲಿ 5, ಅಮರಾವತಿಯಲ್ಲಿ 7, ಸಾಂಗ್ಲಿ, ವಾಶಿಮ್‌, ಜಲ್ನಾ ಮತ್ತು ನಾಗ್ಪುರ ಜಿಲ್ಲೆಯಲ್ಲಿ ಒಂದೊಂದು ಪ್ರಕರಣ ಸೇರಿದಂತೆ ಒಟ್ಟು 126 ಸೋಂಕಿತ ಪ್ರಾಣಿಗಳು ಸಾವನ್ನಪ್ಪಿವೆ” ಎಂದು ಪ್ರಕಟಣೆ ತಿಳಿಸಿದೆ.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ವೇಗವಾಗಿ ಹರಡುತ್ತಿದ್ದರೂ, ಇದು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನ ಮೂಲಕ ಮನುಷ್ಯರಿಗೆ ಹರಡುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಹಾರಾಷ್ಟ್ರ ರಾಜ್ಯದಾದ್ಯಂತ ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ವೇಗವಾಗಿ ಹರಡುತ್ತಿದೆ. ಇದು ಹಸುವಿನ ಚರ್ಮದ ವೈರಲ್ ಕಾಯಿಲೆಯಾಗಿದೆ. ಈ ರೋಗವು ಪ್ರಾಣಿಗಳಿಂದ ಅಥವಾ ಹಸುವಿನ ಹಾಲಿನಿಂದ ಮನುಷ್ಯರಿಗೆ ಹರಡುವುದಿಲ್ಲ” ಎಂದು ಮಹಾರಾಷ್ಟ್ರ ಪಶುಸಂಗೋಪನಾ ಇಲಾಖೆಯ ಪ್ರಕಟಣೆ ತಿಳಿಸಿದೆ.

ಸರಕಾರದ ಪರವಾಗಿ ಐಎಎಸ್‌ ಅಧಿಕಾರಿ ಸಚೀಂದ್ರ ಪ್ರತಾಪ್‌ ಸಿಂಗ್‌ ಮನವಿ ಮಾಡಿದ್ದು, “ರೋಗವು ಹಸು, ರಾಸುಗಳಿಗೆ ಮಾತ್ರ ಹರಡಿದ್ದು, ಝೂನೋಟಿಕ್ ಆಗಿರುವುದಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ವದಂತಿ ಹಬ್ಬಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ.

ಪರಿಸ್ಥಿತಿಯನ್ನು ಎದುರಿಸಲು ಮಾಡಲಾಗುತ್ತಿರುವ ವ್ಯವಸ್ಥೆಗಳ ಬಗ್ಗೆ ಅವರು ಮತ್ತಷ್ಟು ಮಾಹಿತಿ ನೀಡಿದ್ದಾರೆ. ಪಶುಸಂಗೋಪನಾ ಇಲಾಖೆ ಪ್ರಕಾರ, ರೋಗದ ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನು ಖರೀದಿಸಲು ಪ್ರತಿ ಜಿಲ್ಲೆಗೆ ₹ 1 ಕೋಟಿ ರೂ ನೀಡಲಾಗುತ್ತಿದೆ. ಮಹಾರಾಷ್ಟ್ರ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ (MAFSU) ವ್ಯಾಕ್ಸಿನೇಟರ್‌ಗಳು ಮತ್ತು ಇಂಟರ್ನ್‌ಗಳಿಗೆ ಪ್ರತಿ ಲಸಿಕೆಗೆ ₹ 3 ಗೌರವಧನವನ್ನೂ ನೀಡಲಾಗುತ್ತಿದೆ.

“ಸರ್ಕಾರಿ ಪಶುವೈದ್ಯಾಧಿಕಾರಿಗಳು ಮತ್ತು ಖಾಸಗಿ ವೈದ್ಯರು ಎಂಎಎಫ್‌ಎಸ್‌ಯು ಚಿಕಿತ್ಸಾ ಕಾರ್ಯಸೂಚಿಯಂತೆ ಕ್ರಮ ಕೈಗೊಳ್ಳಬೇಕು. ಜಾನುವಾರುಗಳಲ್ಲಿನ ಯಾವುದೇ ರೋಗಲಕ್ಷಣಗಳ ಬಗ್ಗೆ ಹತ್ತಿರದ ಸರ್ಕಾರಿ ಜಾನುವಾರು ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಬೇಕು” ಎಂದು ಸೂಚಿಸಲಾಗಿದೆ.

ಇದನ್ನೂ ಓದಿರಿ: ನೆರೆರಾಜ್ಯಗಳಲ್ಲಿಯೂ ಹೈನುಗಾರಿಕೆ ಬಿಕ್ಕಟ್ಟಿನಲ್ಲಿ…

ಪಶುಸಂಗೋಪನಾ ಇಲಾಖೆಯ ಆಯುಕ್ತರು ಪ್ರತಿಕ್ರಿಯೆ ನೀಡಿದ್ದು, “ಪ್ರಾಣಿಗಳಲ್ಲಿ ಈ ರೋಗದ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗೆ ಮಾಹಿತಿ ನೀಡಬೇಕೆಂದು ‘ಪ್ರಾಣಿಗಳ ಅಧಿನಿಯಮ, 2009’ರ ಪ್ರಕಾರ ನಿರ್ದೇಶಿಸಲಾಗಿದೆ” ಎಂದಿದ್ದಾರೆ.

ನೊಣಗಳು, ಸೊಳ್ಳೆಗಳು, ಉಣ್ಣಿಗಳ ಮೂಲಕ ರೋಗ ಹರಡುವುದರಿಂದ ಕೀಟನಾಶಕಗಳ ಸಿಂಪಡಣೆ ಮಾಡುವಂತೆ ಮಹಾರಾಷ್ಟ್ರದ ಪಶುಸಂಗೋಪನಾ ಇಲಾಖೆಯು ಗ್ರಾಮ-ಪಂಚಾಯತ್‌ಗಳಿಗೆ ಆದೇಶಿಸಿದೆ.

ತಿಂಗಳ ಹಿಂದೆಯೇ ಕಾಣಿಸಿಕೊಂಡಿತ್ತು ಲಂಪಿ ಹಾವಳಿ

ಆಗಸ್ಟ್ ತಿಂಗಳಲ್ಲಿಯೇ ಲಂಪಿ ವೈರಸ್‌ ಹಾವಳಿ ಕಾಣಿಸಿಕೊಂಡಿತ್ತು. ದೇಶದ ವಿವಿಧ ರಾಜ್ಯಗಳಲ್ಲಿ ಸೋಂಕು ತಗುಲಿರುವ ಕುರಿತು ವರದಿಯಾಗಿದ್ದವು.

“ಒಂದು ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಂಟು ರಾಜ್ಯಗಳಲ್ಲಿ 7,300 ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ. ಸೋಂಕನ್ನು ತಡೆಗಟ್ಟಲು ಲಸಿಕೆ ಅಭಿಯಾನವನ್ನು ಹೆಚ್ಚಿಸಲಾಗಿದೆ” ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಆಗಸ್ಟ್‌ 21ರಂದು ‘ದಿ ಹಿಂದೂ’ ವರದಿ ಮಾಡಿತ್ತು.

ಲಂಪಿ ಸ್ಕಿನ್ ಡಿಸೀಸ್ (ಎಲ್‌ಎಸ್‌ಡಿ) ಜಾನುವಾರುಗಳನ್ನು ಬಾಧಿಸುವ ಸಾಂಕ್ರಾಮಿಕ ವೈರಲ್ ಕಾಯಿಲೆಯಾಗಿದೆ. ಈ ವೈರಸ್‌ನಿಂದಾಗಿ ಜಾನುವಾರುಗಳು ಜ್ವರಕ್ಕೆ ತುತ್ತಾಗುತ್ತವೆ. ಚರ್ಮದ ಮೇಲೆ ಗಂಟುಗಳು ಮೂಡುತ್ತವೆ.

ಎಲ್‌ಎಸ್‌ಡಿ ಇತ್ತೀಚಿನ ವರ್ಷಗಳಲ್ಲಿ ಮಧ್ಯಪ್ರಾಚ್ಯ ಮತ್ತು ಯುರೋಪ್‌ ದೇಶಗಳಲ್ಲಿ ಏಕಾಏಕಿ ಹರಡಿತು. ನಂತರ ಏಷ್ಯಕ್ಕೆ ಕಾಲಿಟ್ಟಿತು. ಜುಲೈ 2019ರಲ್ಲಿ ಬಾಂಗ್ಲಾದೇಶದಲ್ಲಿ ಈ ರೋಗವು ಪತ್ತೆಯಾಗಿತ್ತು.

2019ರಲ್ಲಿ ಭಾರತದಲ್ಲಿಯೂ ಎಲ್‌ಎಸ್‌ಡಿ ವರದಿಯಾಗಿತ್ತು. ಪೂರ್ವ ರಾಜ್ಯಗಳಲ್ಲಿ, ವಿಶೇಷವಾಗಿ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಎಲ್ಎಸ್‌ಡಿ ಮೊದಲ ಪ್ರಕರಣ ವರದಿಯಾಯಿತು. ಆದರೆ ಈ ವರ್ಷ ಪಶ್ಚಿಮ ಮತ್ತು ಉತ್ತರ ರಾಜ್ಯಗಳಲ್ಲಿ, ಅಂಡಮಾನ್ ನಿಕೋಬಾರ್‌ನಲ್ಲಿ ಈ ರೋಗ ವರದಿಯಾಗಿದೆ ಎಂದು ‘ದಿ ಹಿಂದೂ’ ವರದಿ ತಿಳಿಸಿತ್ತು.

“ಮೊದಲಿಗೆ ಗುಜರಾತ್‌ನಲ್ಲಿ ಎಲ್‌ಎಸ್‌ಡಿ ವರದಿಯಾಗಿದೆ. ಇದು ಈಗ ಎಂಟು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ಹರಡಿದೆ. ಇದುವರೆಗೆ 1.85 ಲಕ್ಷಕ್ಕೂ ಹೆಚ್ಚು ಜಾನುವಾರುಗಳು ಬಾಧಿತವಾಗಿವೆ. ಜುಲೈನಲ್ಲಿ ರೋಗ ಹರಡಿದ ನಂತರ 7,300ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿವೆ” ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದರು.

ಪಂಜಾಬ್‌ನಲ್ಲಿ ಇದುವರೆಗೆ ಸುಮಾರು 74,325 ಜಾನುವಾರುಗಳು ಬಾಧಿತವಾಗಿದ್ದರೆ, ಗುಜರಾತ್‌ನಲ್ಲಿ 58,546, ರಾಜಸ್ಥಾನದಲ್ಲಿ 43,962, ಜಮ್ಮು ಮತ್ತು ಕಾಶ್ಮೀರದಲ್ಲಿ 6,385, ಉತ್ತರಾಖಂಡದಲ್ಲಿ 1,300, ಹಿಮಾಚಲ ಪ್ರದೇಶದಲ್ಲಿ 532, ಅಂಡಮಾನ್ ಮತ್ತು ನಿಕೋಬಾರ್‌ನಲ್ಲಿ 260 ಜಾನುವಾರುಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದ್ದರು.

ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಇದುವರೆಗೆ (ಆಗಸ್ಟ್‌ವರೆಗೆ) 7,300 ಜಾನುವಾರುಗಳು ಸಾವನ್ನಪ್ಪಿವೆ. ಪಂಜಾಬ್‌ನಲ್ಲಿ 3,359, ರಾಜಸ್ಥಾನದಲ್ಲಿ 2,111, ಗುಜರಾತ್‌ನಲ್ಲಿ 1,679, ಜಮ್ಮು ಮತ್ತು ಕಾಶ್ಮೀರದಲ್ಲಿ 62, ಹಿಮಾಚಲ ಪ್ರದೇಶದಲ್ಲಿ 38, ಉತ್ತರಾಖಂಡದಲ್ಲಿ 36 ಮತ್ತು ಅಂಡಮಾನ್ ನಿಕೋಬಾರ್‌ನಲ್ಲಿ 29 ಪ್ರಾಣಿಗಳು ಸಾವನ್ನಪ್ಪಿವೆ. ಹರಿಯಾಣದಲ್ಲೂ ಎಲ್‌ಎಸ್‌ಡಿ ಸೋಂಕಿನ ವರದಿಗಳಿವೆ.

ಕರ್ನಾಟಕದಲ್ಲಿ ಮುಂಜಾಗ್ರತೆ ವಹಿಸಲಾಗಿದೆಯೇ?

“ಕರ್ನಾಟಕದಲ್ಲಿ ಎಲ್‌ಎಸ್‌ಡಿ ಸೋಂಕಿಗೆ ಸಂಬಂಧಿಸಿದಂತೆ ಯಾವುದಾದರೂ ಕ್ರಮ ಜರುಗಿಸಲಾಗಿದೆಯೇ?” ಎಂಬ ಪ್ರಶ್ನೆ ಮೂಡಿದೆ. ರಾಜ್ಯದ ಪರಿಸ್ಥಿತಿಯ ಕುರಿತು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಮೈಸೂರು ಜಿಲ್ಲೆಯ ವೈದ್ಯಾಧಿಕಾರಿ ಡಾ.ಮಹೇಶ್‌ಕುಮಾರ್‌, “ಸಾಮಾನ್ಯವಾಗಿ ಈ ರೀತಿಯ ಪ್ರಕರಣಗಳು ವರದಿಯಾದಾಗ, ಗಡಿ ಜಿಲ್ಲೆಗಳಲ್ಲಿ, ಚೆಕ್‌ ಪೋಸ್ಟ್‌ಗಳಲ್ಲಿ ಎಚ್ಚರ ವಹಿಸಲಾಗುತ್ತದೆ. ಯಾವುದೇ ಜಾನುವಾರು ಗಡಿ ದಾಟದಂತೆ ನೋಡಿಕೊಳ್ಳಲಾಗುತ್ತದೆ. ಕೋವಿಡ್‌ ಹರಡಿದ ಸಂದರ್ಭದಲ್ಲಿ ಈ ಸೋಂಕು ಕಾಣಿಸಿಕೊಂಡಿತು. ಮುಂಜಾಗ್ರತೆ ಅಗತ್ಯವಿದೆ. ಸೋಂಕಿನ ಲಕ್ಷಣಗಳು ಕಂಡ ತಕ್ಷಣ ವೈದ್ಯರಿಗೆ ತಿಳಿಸಬೇಕು” ಎಂದು ರೈತರಿಗೆ ಮನವಿ ಮಾಡಿದರು.

“ಜಾನುವಾರುಗಳಿಗೆ ಕಾಯಿಲೆಗಳು ಬಂದಾಗ ರೈತರು ಕೆಲವೊಮ್ಮೆ ನಾಟಿ ಔಷಧಿ ಕೊಡಿಸಿ, ಮೂರ್ನಾಲ್ಕು ದಿನಗಳ ನಂತರ ನಮ್ಮ ಬಳಿ ಬರುತ್ತಾರೆ. ಎಲ್‌ಎಸ್‌ಡಿ ಸೋಂಕಿಗೆ ನಿರ್ದಿಷ್ಟ ವಾಕ್ಸಿನ್‌ ನಮ್ಮಲ್ಲಿ ಲಭ್ಯವಾಗಿಲ್ಲ. ಆದರೆ ಈಗ ನೀಡಲಾಗುತ್ತಿರುವ ವಾಕ್ಸಿನ್‌, ಈ ಕಾಯಿಲೆಗೆ ಕೊಂಚ ಹತ್ತಿರದ ಸಂಬಂಧ ಹೊಂದಿರುವ ಲಸಿಕೆಯಾಗಿದೆ. ಈ ಲಸಿಕೆಯನ್ನು ನೀಡುವ ಮೂಲಕವೂ ಒಂದಿಷ್ಟು ಸೋಂಕು ತಡೆಗಟ್ಟಲಾಗುತ್ತಿದೆ. ಆರಂಭಿಕ ಹಂತದಲ್ಲೇ ಮುಂಜಾಗ್ರತೆ ವಹಿಸಿದರೆ ಜಾನುವಾರುಗಳು ಗುಣಮುಖವಾಗಬಹುದು” ಎಂದರು.

ಇದನ್ನೂ ಓದಿರಿ: ಗೋವು ಸಾಕಣೆಯ ಗೋಳು ಕೇಳುವವರ್‍ಯಾರು? ಇದು ಹೈನುಗಾರಿಕೆಯ ಕಥೆ-ವ್ಯಥೆ!

ಪಶುವೈದ್ಯಾಧಿಕಾರಿ ಟಿ.ಎಸ್.ರಮಾನಂದ್ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಬೇರೆ ದೇಶಗಳಲ್ಲಿ ವಾಕ್ಸಿನ್ ಅಭಿವೃದ್ಧಿಪಡಿಸಿದ್ದಾರೆ. ಮೇಕೆಗೆ ತಗುಲುವ ಪೋಕ್ಸ್‌ ವೈರಾಣುವಿಗೆ ಸಂಬಂಧಿಸಿದಂತೆ ನೀಡುವ ಲಸಿಕೆಯನ್ನು ನಮ್ಮಲ್ಲಿ ಕೆಲವು ಕಡೆ ಬಳಸುತ್ತಿದ್ದಾರೆ. ಎಲ್‌ಎಸ್‌ಡಿ ಹದಿನೈದು ದಿನ ಹರಡಿ ನಂತರ ಕಡಿಮೆಯಾಗುತ್ತದೆ. ಆದರೆ ಜಾನುವಾರುಗಳು ಸಾಯುತ್ತಿರುವುದು ನಮ್ಮ ದುರ್ದೈವ” ಎಂದು ವಿಷಾದಿಸಿದರು.

“ರೈತರು ಎಚ್ಚರಿಕೆ ವಹಿಸಬೇಕು. ಯಾವುದಾದರೂ ಒಂದು ಜಾನುವಾರಿಗೆ ಈ ಕಾಯಿಲೆ ಕಾಣಿಸಿಕೊಂಡ ತಕ್ಷಣ ಐಸೊಲೇಷನ್‌ ಮಾಡಬೇಕು. ಆರೋಗ್ಯವಂತ ಜಾನುವಾರುಗಳನ್ನು ಬೇರೆಡೆ ಇರಿಸಿಬೇಕು. ಕೊಟ್ಟಿಗೆಯನ್ನು ಶುಚಿಗೊಳಿಸಬೇಕು” ಎಂದು ಸಲಹೆ ನೀಡಿದರು.

“ನಮ್ಮ ವೈದ್ಯರು ನೀಡುವ ಮಾಹಿತಿ ಪ್ರಕಾರ ಜಾಗೃತಿ ಮೂಡಿಸುವ ಕೆಲಸಗಳಾಗುತ್ತಿವೆ. ಸೋಂಕು ಕಾಣಿಸಿಕೊಂಡ ಜಾನುವಾರುಗಳನ್ನು ಬೇರೆಡೆ ಇರಿಸಲು ಸೂಚನೆಗಳನ್ನು ನೀಡುತ್ತಿದ್ದಾರೆ” ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...