Homeದಲಿತ್ ಫೈಲ್ಸ್ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಮತಾಂತರವಾದ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ, ಬೇಡವೇ ಎಂಬ ಪ್ರಶ್ನೆ ಸುಪ್ರೀಂಕೋರ್ಟ್‌ನಲ್ಲಿರುವ ಕಾರಣ, ಆಯೋಗ ರಚನೆಯ ಪ್ರಸ್ತಾಪ ಮಹತ್ವ ಪಡೆದಿದೆ.

- Advertisement -
- Advertisement -

ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಂಡ ಪರಿಶಿಷ್ಟ ಜಾತಿಗಳ ಅಥವಾ ದಲಿತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅಧ್ಯಯನ ಮಾಡಲು ರಾಷ್ಟ್ರೀಯ ಆಯೋಗವನ್ನು ರಚಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಇಂತಹ ಆಯೋಗವನ್ನು ರಚಿಸುವ ಪ್ರಸ್ತಾವನೆ ಕೇಂದ್ರದಲ್ಲಿ ಸಕ್ರಿಯವಾಗಿ ಚರ್ಚೆಯಾಗುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿರುವುದಾಗಿ ‘ಇಂಡಿಯನ್‌ ಎಕ್ಸ್‌ಪ್ರೆಸ್’ ಸುದ್ದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆಯೋಗ ರಚನೆಗೆ ಹಸಿರು ನಿಶಾನೆ ತೋರಿವೆ. ಗೃಹ, ಕಾನೂನು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹಾಗೂ ಹಣಕಾಸು ಸಚಿವಾಲಯಗಳ ನಡುವೆ ಈ ಪ್ರಸ್ತಾವನೆಯ ಕುರಿತು ಸಮಾಲೋಚನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ಕಲ್ಪಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಇಂತಹದೊಂದು ಆಯೋಗವನ್ನು ಸ್ಥಾಪಿಸಲು ಮುಂದಾಗಿರುವುದು ಮಹತ್ವ ಪಡೆದಿದೆ.

ಸಂವಿಧಾನದ ವಿಧಿ 341ರ ಪ್ರಕಾರ ಹಿಂದೂ ಧರ್ಮ, ಸಿಖ್ ಧರ್ಮ ಅಥವಾ ಬೌದ್ಧ ಧರ್ಮಕ್ಕಿಂತ ಭಿನ್ನವಾದ ಯಾವುದೇ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ. ಹಿಂದೂಧರ್ಮವನ್ನು ಮಾತ್ರ ಕೇಂದ್ರೀಕರಿಸಿ ‘ಎಸ್‌ಸಿ’ ಎಂದು ವರ್ಗೀಕರಿಸಿದ ಮೂಲ ಆದೇಶವನ್ನು 1956ರಲ್ಲಿ ತಿದ್ದುಪಡಿ ಮಾಡಿ ಸಿಖ್ಖರನ್ನು ಸೇರಿಸಲಾಯಿತು. 1990ರಲ್ಲಿ ಮತ್ತೆ ತಿದ್ದುಪಡಿ ಮಾಡಿ ಬೌದ್ಧರನ್ನೂ ಸೇರಿಸಲಾಯಿತು.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ವಿಕ್ರಮ್ ನಾಥ್ ಅವರನ್ನು ಒಳಗೊಂಡಂತೆ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 30ರಂದು ನಡೆಸಿತು. ಅರ್ಜಿದಾರರು ಎತ್ತಿರುವ ವಿಷಯದ ಬಗ್ಗೆ ಸರ್ಕಾರದ ನಿಲುವನ್ನು ದಾಖಲಿಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ಪೀಠವು ಸಾಲಿಸಿಟರ್ ಜನರಲ್‌ಗೆ ಮೂರು ವಾರಗಳ ಕಾಲಾವಕಾಶ ನೀಡಿತು. ಅಕ್ಟೋಬರ್ 11 ಮತ್ತೆ ವಿಚಾರಣೆ ನಡೆಯಲಿದೆ.

ಪ್ರಸ್ತಾವಿತ ಆಯೋಗವು ಮೂರು ಅಥವಾ ನಾಲ್ಕು ಸದಸ್ಯರನ್ನು ಒಳಗೊಳ್ಳಬಹುದು, ಆಯೋಗದ ಅಧ್ಯಕ್ಷರು ಕೇಂದ್ರ ಕ್ಯಾಬಿನೆಟ್ ಮಂತ್ರಿಯ ಶ್ರೇಣಿಯನ್ನು ಹೊಂದಿರಬಹುದು. ಆಯೋಗದ ವರದಿಯನ್ನು ಸಲ್ಲಿಸಲು ಒಂದು ವರ್ಷಕ್ಕಿಂತ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರ ಸ್ಥಿತಿಯಲ್ಲಿನ ಬದಲಾವಣೆಗಳನ್ನು ಅಧ್ಯಯನ ಮಾಡುವುದರ ಜೊತೆಗೆ, ಪ್ರಸ್ತುತ ಎಸ್‌ಸಿ ಪಟ್ಟಿಗೆ ಹೆಚ್ಚಿನ ಸಮುದಾಯಗಳನ್ನು ಸೇರಿಸುವ ಪರಿಣಾಮದ ಕುರಿತು ಪ್ರಸ್ತಾವಿತ ಆಯೋಗ ಚರ್ಚಿಸಲಿದೆ.

ಎಸ್ಟಿಗಳು ಮತ್ತು ಒಬಿಸಿಗಳಿಗೆ ಯಾವುದೇ ಧಾರ್ಮಿಕ ಚೌಕಟ್ಟು ಇಲ್ಲದ ಕಾರಣ ಈ ಆಯೋಗ ದಲಿತರಿಗೆ ಮಾತ್ರ ಸೀಮಿತವಾಗಿದೆ. “ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯ ಹಕ್ಕುಗಳು ಧಾರ್ಮಿಕ ನಂಬಿಕೆಗೆ ಸಂಬಂಧಪಡುವುದಿಲ್ಲ” ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ವೆಬ್‌ಸೈಟ್ ಸ್ಪಷ್ಟಪಡಿಸುತ್ತದೆ.

ಇದಲ್ಲದೆ, ಮಂಡಲ್ ಆಯೋಗದ ವರದಿಯ ಅನುಷ್ಠಾನದ ನಂತರ, ಹಲವಾರು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಮುದಾಯಗಳು ಕೇಂದ್ರ ಅಥವಾ ರಾಜ್ಯಗಳ ಒಬಿಸಿ ಪಟ್ಟಿಗಳಲ್ಲಿ ಸ್ಥಾನ ಪಡೆದಿವೆ.

ಎಸ್‌ಸಿ ಸಮುದಾಯಕ್ಕೆ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 15 ರಷ್ಟು ಮೀಸಲಾತಿ ಮತ್ತು ಎಸ್‌ಟಿಗಳಿಗೆ ಶೇಕಡಾ 7.5 ಮೀಸಲಾತಿ, ಒಬಿಸಿಗಳಿಗೆ ಶೇಕಡಾ 27 ಮೀಸಲಾತಿ ನೀಡಲಾಗಿದೆ.

ಮುಖ್ಯವಾಗಿ ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ ಎಂಬ ಪ್ರಶ್ನೆ ಹಿಂದಿನ ಸರ್ಕಾರಗಳ ಮುಂದೆಯೂ ಬಂದಿತ್ತು.

ಇದನ್ನೂ ಓದಿರಿ: ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

ಅಕ್ಟೋಬರ್ 2004ರಲ್ಲಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಆಗಿನ ಯುಪಿಎ ಸರ್ಕಾರವು, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಸ್ಥಿತಿಯ ಉನ್ನತಿಗೆ ಕ್ರಮ ವಹಿಸಲು ಮುಂದಾಗಿತ್ತು. ಸೂಕ್ತ ಶಿಫಾರಸು ನೀಡುವಂತೆ ಮಾಜಿ ಮುಖ್ಯ ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಅವರ ನೇತೃತ್ವದಲ್ಲಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ರಚಿಸಲಾಗಿತ್ತು.

ಮೇ 2007ರಲ್ಲಿ ರಂಗನಾಥ್ ಮಿಶ್ರಾ ಆಯೋಗವು ತನ್ನ ವರದಿಯನ್ನು ಸಲ್ಲಿಸಿತು. ಎಸ್‌ಸಿ ಸ್ಥಾನಮಾನವನ್ನು ಸಂಪೂರ್ಣವಾಗಿ ಧರ್ಮದಿಂದ ಬೇರ್ಪಡಿಸಬೇಕು. ಎಸ್‌ಟಿ ಸ್ಥಾನಮಾನದಂತೆ ಇಲ್ಲಿ ಧರ್ಮ-ತಟಸ್ಥವಾಗಿರಬೇಕು ಎಂದು ಶಿಫಾರಸು ಮಾಡಿತು. ಶಿಫಾರಸ್ಸುಗಳು ಕ್ಷೇತ್ರ ಅಧ್ಯಯನದಿಂದ ರುಜುವಾತಾಗಿಲ್ಲ ಎಂಬ ಕಾರಣಕ್ಕೆ ಅಂದಿನ ಯುಪಿಎ ಸರಕಾರ ಶಿಫಾರಸಗಳನ್ನು ಅಂಗೀಕರಿಸಿರಲಿಲ್ಲ.

ಪ್ರತ್ಯೇಕವಾಗಿ, 2007ರಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ನೀಡಿದ ಅಧ್ಯಯನವು ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನವನ್ನು ನೀಡಬೇಕೆಂದು ತೀರ್ಮಾನಿಸಿದೆ. ಆ ಶೋಧನೆಯು ಸಹ, ವಿಶ್ವಾಸಾರ್ಹವಾಗಿಲ್ಲವೆಂದು ಅಂಗೀಕರಿಸಲ್ಪಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...