Homeದಲಿತ್ ಫೈಲ್ಸ್ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

ಮತಾಂತರವಾದ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ, ಬೇಡವೇ ಎಂಬ ಪ್ರಶ್ನೆ ಸುಪ್ರೀಂಕೋರ್ಟ್‌ನಲ್ಲಿರುವ ಕಾರಣ, ಆಯೋಗ ರಚನೆಯ ಪ್ರಸ್ತಾಪ ಮಹತ್ವ ಪಡೆದಿದೆ.

- Advertisement -
- Advertisement -

ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಸಿಖ್ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಗಳಿಗೆ ಮತಾಂತರಗೊಂಡ ಪರಿಶಿಷ್ಟ ಜಾತಿಗಳ ಅಥವಾ ದಲಿತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಯನ್ನು ಅಧ್ಯಯನ ಮಾಡಲು ರಾಷ್ಟ್ರೀಯ ಆಯೋಗವನ್ನು ರಚಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಇಂತಹ ಆಯೋಗವನ್ನು ರಚಿಸುವ ಪ್ರಸ್ತಾವನೆ ಕೇಂದ್ರದಲ್ಲಿ ಸಕ್ರಿಯವಾಗಿ ಚರ್ಚೆಯಾಗುತ್ತಿದ್ದು, ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿದುಬಂದಿರುವುದಾಗಿ ‘ಇಂಡಿಯನ್‌ ಎಕ್ಸ್‌ಪ್ರೆಸ್’ ಸುದ್ದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಆಯೋಗ ರಚನೆಗೆ ಹಸಿರು ನಿಶಾನೆ ತೋರಿವೆ. ಗೃಹ, ಕಾನೂನು, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಹಾಗೂ ಹಣಕಾಸು ಸಚಿವಾಲಯಗಳ ನಡುವೆ ಈ ಪ್ರಸ್ತಾವನೆಯ ಕುರಿತು ಸಮಾಲೋಚನೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ಕಲ್ಪಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ಇಂತಹದೊಂದು ಆಯೋಗವನ್ನು ಸ್ಥಾಪಿಸಲು ಮುಂದಾಗಿರುವುದು ಮಹತ್ವ ಪಡೆದಿದೆ.

ಸಂವಿಧಾನದ ವಿಧಿ 341ರ ಪ್ರಕಾರ ಹಿಂದೂ ಧರ್ಮ, ಸಿಖ್ ಧರ್ಮ ಅಥವಾ ಬೌದ್ಧ ಧರ್ಮಕ್ಕಿಂತ ಭಿನ್ನವಾದ ಯಾವುದೇ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ. ಹಿಂದೂಧರ್ಮವನ್ನು ಮಾತ್ರ ಕೇಂದ್ರೀಕರಿಸಿ ‘ಎಸ್‌ಸಿ’ ಎಂದು ವರ್ಗೀಕರಿಸಿದ ಮೂಲ ಆದೇಶವನ್ನು 1956ರಲ್ಲಿ ತಿದ್ದುಪಡಿ ಮಾಡಿ ಸಿಖ್ಖರನ್ನು ಸೇರಿಸಲಾಯಿತು. 1990ರಲ್ಲಿ ಮತ್ತೆ ತಿದ್ದುಪಡಿ ಮಾಡಿ ಬೌದ್ಧರನ್ನೂ ಸೇರಿಸಲಾಯಿತು.

ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ವಿಕ್ರಮ್ ನಾಥ್ ಅವರನ್ನು ಒಳಗೊಂಡಂತೆ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್‌ 30ರಂದು ನಡೆಸಿತು. ಅರ್ಜಿದಾರರು ಎತ್ತಿರುವ ವಿಷಯದ ಬಗ್ಗೆ ಸರ್ಕಾರದ ನಿಲುವನ್ನು ದಾಖಲಿಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. ಪೀಠವು ಸಾಲಿಸಿಟರ್ ಜನರಲ್‌ಗೆ ಮೂರು ವಾರಗಳ ಕಾಲಾವಕಾಶ ನೀಡಿತು. ಅಕ್ಟೋಬರ್ 11 ಮತ್ತೆ ವಿಚಾರಣೆ ನಡೆಯಲಿದೆ.

ಪ್ರಸ್ತಾವಿತ ಆಯೋಗವು ಮೂರು ಅಥವಾ ನಾಲ್ಕು ಸದಸ್ಯರನ್ನು ಒಳಗೊಳ್ಳಬಹುದು, ಆಯೋಗದ ಅಧ್ಯಕ್ಷರು ಕೇಂದ್ರ ಕ್ಯಾಬಿನೆಟ್ ಮಂತ್ರಿಯ ಶ್ರೇಣಿಯನ್ನು ಹೊಂದಿರಬಹುದು. ಆಯೋಗದ ವರದಿಯನ್ನು ಸಲ್ಲಿಸಲು ಒಂದು ವರ್ಷಕ್ಕಿಂತ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳಬಹುದು ಎಂದು ಅಂದಾಜಿಸಲಾಗಿದೆ.

ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರ ಸ್ಥಿತಿಯಲ್ಲಿನ ಬದಲಾವಣೆಗಳನ್ನು ಅಧ್ಯಯನ ಮಾಡುವುದರ ಜೊತೆಗೆ, ಪ್ರಸ್ತುತ ಎಸ್‌ಸಿ ಪಟ್ಟಿಗೆ ಹೆಚ್ಚಿನ ಸಮುದಾಯಗಳನ್ನು ಸೇರಿಸುವ ಪರಿಣಾಮದ ಕುರಿತು ಪ್ರಸ್ತಾವಿತ ಆಯೋಗ ಚರ್ಚಿಸಲಿದೆ.

ಎಸ್ಟಿಗಳು ಮತ್ತು ಒಬಿಸಿಗಳಿಗೆ ಯಾವುದೇ ಧಾರ್ಮಿಕ ಚೌಕಟ್ಟು ಇಲ್ಲದ ಕಾರಣ ಈ ಆಯೋಗ ದಲಿತರಿಗೆ ಮಾತ್ರ ಸೀಮಿತವಾಗಿದೆ. “ಪರಿಶಿಷ್ಟ ಪಂಗಡಕ್ಕೆ ಸೇರಿದ ವ್ಯಕ್ತಿಯ ಹಕ್ಕುಗಳು ಧಾರ್ಮಿಕ ನಂಬಿಕೆಗೆ ಸಂಬಂಧಪಡುವುದಿಲ್ಲ” ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ವೆಬ್‌ಸೈಟ್ ಸ್ಪಷ್ಟಪಡಿಸುತ್ತದೆ.

ಇದಲ್ಲದೆ, ಮಂಡಲ್ ಆಯೋಗದ ವರದಿಯ ಅನುಷ್ಠಾನದ ನಂತರ, ಹಲವಾರು ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಮುದಾಯಗಳು ಕೇಂದ್ರ ಅಥವಾ ರಾಜ್ಯಗಳ ಒಬಿಸಿ ಪಟ್ಟಿಗಳಲ್ಲಿ ಸ್ಥಾನ ಪಡೆದಿವೆ.

ಎಸ್‌ಸಿ ಸಮುದಾಯಕ್ಕೆ ಕೇಂದ್ರ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 15 ರಷ್ಟು ಮೀಸಲಾತಿ ಮತ್ತು ಎಸ್‌ಟಿಗಳಿಗೆ ಶೇಕಡಾ 7.5 ಮೀಸಲಾತಿ, ಒಬಿಸಿಗಳಿಗೆ ಶೇಕಡಾ 27 ಮೀಸಲಾತಿ ನೀಡಲಾಗಿದೆ.

ಮುಖ್ಯವಾಗಿ ಕ್ರಿಶ್ಚಿಯನ್ ಅಥವಾ ಇಸ್ಲಾಂಗೆ ಮತಾಂತರಗೊಂಡ ದಲಿತರಿಗೆ ಎಸ್‌ಸಿ ಮೀಸಲಾತಿ ನೀಡಬೇಕೇ ಎಂಬ ಪ್ರಶ್ನೆ ಹಿಂದಿನ ಸರ್ಕಾರಗಳ ಮುಂದೆಯೂ ಬಂದಿತ್ತು.

ಇದನ್ನೂ ಓದಿರಿ: ದಲಿತ ಮಕ್ಕಳ ಮೇಲೆ ಮುಂದುವರಿದ ದೌರ್ಜನ್ಯ: ಪ್ರಕರಣ 1, 2, 3, 4

ಅಕ್ಟೋಬರ್ 2004ರಲ್ಲಿ ಡಾ.ಮನಮೋಹನ್ ಸಿಂಗ್ ನೇತೃತ್ವದ ಆಗಿನ ಯುಪಿಎ ಸರ್ಕಾರವು, ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಸ್ಥಿತಿಯ ಉನ್ನತಿಗೆ ಕ್ರಮ ವಹಿಸಲು ಮುಂದಾಗಿತ್ತು. ಸೂಕ್ತ ಶಿಫಾರಸು ನೀಡುವಂತೆ ಮಾಜಿ ಮುಖ್ಯ ನ್ಯಾಯಮೂರ್ತಿ ರಂಗನಾಥ್ ಮಿಶ್ರಾ ಅವರ ನೇತೃತ್ವದಲ್ಲಿ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗವನ್ನು ರಚಿಸಲಾಗಿತ್ತು.

ಮೇ 2007ರಲ್ಲಿ ರಂಗನಾಥ್ ಮಿಶ್ರಾ ಆಯೋಗವು ತನ್ನ ವರದಿಯನ್ನು ಸಲ್ಲಿಸಿತು. ಎಸ್‌ಸಿ ಸ್ಥಾನಮಾನವನ್ನು ಸಂಪೂರ್ಣವಾಗಿ ಧರ್ಮದಿಂದ ಬೇರ್ಪಡಿಸಬೇಕು. ಎಸ್‌ಟಿ ಸ್ಥಾನಮಾನದಂತೆ ಇಲ್ಲಿ ಧರ್ಮ-ತಟಸ್ಥವಾಗಿರಬೇಕು ಎಂದು ಶಿಫಾರಸು ಮಾಡಿತು. ಶಿಫಾರಸ್ಸುಗಳು ಕ್ಷೇತ್ರ ಅಧ್ಯಯನದಿಂದ ರುಜುವಾತಾಗಿಲ್ಲ ಎಂಬ ಕಾರಣಕ್ಕೆ ಅಂದಿನ ಯುಪಿಎ ಸರಕಾರ ಶಿಫಾರಸಗಳನ್ನು ಅಂಗೀಕರಿಸಿರಲಿಲ್ಲ.

ಪ್ರತ್ಯೇಕವಾಗಿ, 2007ರಲ್ಲಿ ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗವು ನೀಡಿದ ಅಧ್ಯಯನವು ದಲಿತ ಕ್ರಿಶ್ಚಿಯನ್ನರು ಮತ್ತು ದಲಿತ ಮುಸ್ಲಿಮರಿಗೆ ಎಸ್‌ಸಿ ಸ್ಥಾನಮಾನವನ್ನು ನೀಡಬೇಕೆಂದು ತೀರ್ಮಾನಿಸಿದೆ. ಆ ಶೋಧನೆಯು ಸಹ, ವಿಶ್ವಾಸಾರ್ಹವಾಗಿಲ್ಲವೆಂದು ಅಂಗೀಕರಿಸಲ್ಪಟ್ಟಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...