Homeಅಂತರಾಷ್ಟ್ರೀಯಇಂಗ್ಲೆಂಡ್‌: ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಹಿಂದುತ್ವ ಪ್ರೇರಿತ ಯುವಕರು; ಭುಗಿಲೆದ್ದ ಘರ್ಷಣೆ

ಇಂಗ್ಲೆಂಡ್‌: ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಹಿಂದುತ್ವ ಪ್ರೇರಿತ ಯುವಕರು; ಭುಗಿಲೆದ್ದ ಘರ್ಷಣೆ

- Advertisement -
- Advertisement -

ಶನಿವಾರ ಇಂಗ್ಲೆಂಡ್‌‌ನ ಲೀಸೆಸ್ಟರ್‌‌ನಲ್ಲಿ ಯುವಕರ ಗುಂಪೊಂದು ನಡೆಸಿದ ಮೆರವಣಿಗೆಯು ಕೋಮು ‘ಘರ್ಷಣೆ’ಗಳನ್ನು ಹುಟ್ಟುಹಾಕಿದೆ. ಹಿಂದುತ್ವದ ಬೆಂಬಲಿಗರು ಎಂದು ಆರೋಪಿಸಲಾಗಿರುವ ಮೆರವಣಿಯಲ್ಲಿದ್ದ ಯುವಕರೆಲ್ಲರೂ ಮಾಸ್ಕ್‌ ಧರಿಸಿದ್ದು, ಕೈಗಳಲ್ಲಿ ಚಾಕು ಮತ್ತು ಇತರ ಅಸ್ತ್ರಗಳನ್ನು ಇಟ್ಟುಕೊಂಡಿದ್ದರು. ಮೆರವಣಿಗೆಯ ಉದ್ದಕ್ಕೂ ಜೈಶ್ರೀರಾಮ್ ಸೇರಿದಂತೆ ಮುಸ್ಲಿಂ ವಿರೂಧಿ ಘೋಷಣೆಗಳು ಕೂಗಿ ಬಾಟಲಿಗಳನ್ನು ಎಸೆದು ಕಿಟಕಿ ಗಾಜುಗಳನ್ನು ಒಡೆದಿದ್ದಾರಲ್ಲದೆ ಬದಿಯಲ್ಲಿ ಇದ್ದ ವ್ಯಕ್ತಿಯೊಬ್ಬರಿಗೆ ಥಳಿಸುತ್ತಿರುವ ವಿಡಿಯೊಗಳು ಕೂಡಾ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಘರ್ಷಣೆಯ ಹಿನ್ನಲೆಯಲ್ಲಿ ಪೊಲೀಸರು ಮತ್ತು ಸಮುದಾಯದ ಮುಖಂಡರು ನಾಗರಿಕರಿಗೆ ಶಾಂತವಾಗಿರಲು ಕರೆ ನೀಡಿದ್ದಾರೆ. ಶನಿವಾರ ಇಬ್ಬರನ್ನು ಬಂಧಿಸಲಾಗಿದ್ದು, ಸೆಕ್ಷನ್ ‘60 ಸ್ಟಾಪ್ ಆಂಡ್‌ ಸರ್ಚ್’ ಅಧಿಕಾರದ ಅಡಿಯಲ್ಲಿ ಹೆಚ್ಚಿನ ಸಂಖ್ಯೆ ಜನರನ್ನು ಜನರನ್ನು ಹುಡುಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ 15 ಜನರನ್ನು ಬಂಧಿಸಲಾಗಿದೆ ಎಂದು ಬಿಬಿಸಿ ವರದಿ ಹೇಳಿದೆ. ಆಗಸ್ಟ್ 28 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ನಡೆದ ನಂತರ ಲೀಸೆಸ್ಟರ್‌‌ನ ಪೂರ್ವದಲ್ಲಿ ಕೆಲವು ಗೊಂದಲಕಾರಿ ಘಟನೆಗಳು ನಡೆದಿದ್ದು, ಈ ಸರಣಿಗೆ ಹೊಸದಾಗಿ ಶನಿವಾರದ ಘರ್ಷಣೆಯು ಸೇರಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರದ ಗ್ರೀನ್ ಲೇನ್ ರಸ್ತೆಯಲ್ಲಿ, ಹಲವಾರು ಮುಸ್ಲಿಂ ಒಡೆತನದ ವ್ಯಾಪಾರಿ ಮಳಿಗೆಗಳು ಮತ್ತು ಹಿಂದೂ ದೇವಾಲಯ ಇದ್ದು, ಹಿಂದೂ ಯುವಕರ ಗುಂಪು ಶನಿವಾರ ಆ ಪ್ರದೇಶದ ಮೂಲಕ ಮೆರವಣಿಗೆ ನಡೆಸುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಸಾಮಾಜಿಕ ಕಾರ್ಯಕರ್ತ ಮಜಿದ್ ಫ್ರೀಮನ್ ಶನಿವಾರ ಸಂಜೆ ಬೆಲ್‌ಗ್ರೇವ್ ರಸ್ತೆಯಲ್ಲಿ ನಡೆದ ಘಟನೆಗಳನ್ನು ಚಿತ್ರೀಕರಿಸಿದ್ದು, ಅವರುಗಳನ್ನು ಟ್ವಿಟರ್‌ನಲ್ಲಿ ಅಫ್‌ಲೋಡ್‌ ಮಾಡಿದ್ದಾರೆ. ಅವರು ಪೋಸ್ಟ್‌ ಮಾಡಿರುವ ವೀಡಿಯೋವೊಂದರಲ್ಲಿ, ಗಾಜಿನ ಬಾಟಲಿಗಳನ್ನು ಒಡೆದು ಹಾಕುವ ಶಬ್ದ ಕೇಳಿಸುತ್ತಿದ್ದು, ಪೊಲೀಸರು ಅವರನ್ನು ದೂರ ಹೋಗುವಂತೆ ಕೂಗುತ್ತಾರೆ.

ಇದನ್ನೂ ಓದಿ: ಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

“ಅವರು ಬಾಟಲಿಗಳು ಸೇರಿದಂತೆ ಎಲ್ಲವನ್ನೂ ಎಸೆಯುತ್ತಿದ್ದರು. ಮಸೀದಿಯ ಹಿಂದೆ ಬರುತ್ತಿದ್ದು ಸಮುದಾಯವನ್ನು ನಿಂದಿಸುತ್ತಿದ್ದರು. ಅಷ್ಟೆ ಅಲ್ಲದೆ ದೈಹಿಕವಾಗಿ ಜನರನ್ನು ಹೊಡೆಯುತ್ತಿದ್ದರು” ಎಂದು ಫ್ರೀಮನ್ ಹೇಳಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಹಿಂದುತ್ವ ಯುವಕರ ಮೆರವಣಿಗೆಗೆ ಪ್ರತಿಕ್ರಿಯೆಯಾಗಿ ನಗರದಲ್ಲಿ ಮುಸ್ಲಿಂ ಯುವಕರು ಕೂಡಾ ಪೂರ್ವಸಿದ್ಧತೆಯಿಲ್ಲದೆ ಸಭೆ ನಡೆಸಿದ್ದಾರೆ ಎಂದು ಗಾರ್ಡಿಯನ್ ವರದಿ ಹೇಳಿದೆ. “ನಾವು ಪೊಲೀಸರನ್ನು ನಂಬಲು ಸಾಧ್ಯವಿಲ್ಲ, ನಮ್ಮ ಸಮುದಾಯವನ್ನು ನಾವೇ ರಕ್ಷಿಸಿಕೊಳ್ಳುತ್ತೇವೆ” ಎಂದು ಯುವಕರು ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

ಸರಣಿ ಘರ್ಷಣೆಗಳಿಂದ ಲೀಸೆಸ್ಟರ್‌ನ ಹಿಂದೂ ಸಮುದಾಯದಲ್ಲೂ ಭೀತಿ ಎದುರಾಗಿದೆ. ರಾಷ್ಟ್ರೀಯ ಹಿಂದೂ ಸಂಘಟನೆಯ ಅಧ್ಯಕ್ಷರಾಗಿರುವ ಲೀಸೆಸ್ಟರ್ ನಿವಾಸಿ ‘ದೃಷ್ಟಿ ಮಾ’ ಅವರು,“ಕಳೆದ ಮೂರು ದಶಕಗಳಲ್ಲೆ ಇತ್ತೀಚೆಗಿನ ಅಶಾಂತಿಯು ಅತಿಕೆಟ್ಟದಾಗಿದೆ. ಮೊದಲ ತಲೆಮಾರಿನ ವಲಸಿಗ ಸಮುದಾಯವು ಹಿಂದೂ ಸಮುದಾಯವನ್ನು ಗುರಿಯಾಗಿಸುತ್ತಿದೆ. ನಗರದ ಕೆಲವು ಮುಸ್ಲಿಮರು ಹಿಂದೂ ಕುಟುಂಬಗಳಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

“ಅವರು ಬೆದರಿಕೆ ಮತ್ತು ದಾಳಿಗೆ ಒಳಗಾಗಿದ್ದಾರೆ. ಪೊಲೀಸರು ಆಸ್ತಿ, ಜನರು ಮತ್ತು ಪೂಜಾ ಸ್ಥಳಗಳನ್ನು ರಕ್ಷಿಸಲು ವಿಫಲರಾಗಿದ್ದಾರೆ. ನಮ್ಮನ್ನು ರಕ್ಷಿಸಿಕೊಳ್ಳಲು ನಮಗೆ ಹಕ್ಕಿದೆ” ಎಂದು ಅವರು ಹೇಳಿದ್ದಾರೆ. ಈ ನಡುವೆ ಯುವಕರ ಗುಂಪೊಂದು ದೇವಾಲಯದ ಹೊರ ಹಾಕಿದ್ದ ಕೇಸರಿ ಧ್ವಜವನ್ನು ಕಿತ್ತು ಹಾಕಿರುವ ವಿಡಿಯೊ ಕೂಡಾ ವೈರಲ್ ಆಗಿದೆ.

“ಪೂರ್ವ ಲೀಸೆಸ್ಟರ್‌ನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿರುವ ಹಲವಾರು ವರದಿಗಳಿವೆ. ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಶನಿವಾರ ಸಂಜೆ ಲೀಸೆಸ್ಟರ್‌ಶೈರ್ ಪೊಲೀಸ್‌ ಫೋರ್ಸ್‌ನ ತಾತ್ಕಾಲಿಕ ಮುಖ್ಯ ಕಾನ್ಸ್‌ಟೇಬಲ್ ರಾಬ್ ನಿಕ್ಸನ್ ಅವರು ಸಾಮಾಜಿಕ ಮಾಧ್ಯಮದ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಭಾನುವಾರ ಯುವಕರ ಗುಂಪುಗಳು ಯೋಜಿತವಲ್ಲದ ಪ್ರತಿಭಟನೆಯನ್ನು ಪ್ರಾರಂಭಿಸಿದ ನಂತರ ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. “ಹಲವಾರು ಹಿಂಸಾಚಾರ ಮತ್ತು ಹಾನಿಯ ಘಟನೆಗಳನ್ನು ಪೊಲೀಸರಿಗೆ ವರದಿ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

“ಲೀಸೆಸ್ಟರ್‌ನ ಮೆಲ್ಟನ್ ರಸ್ತೆಯಲ್ಲಿರುವ ಧಾರ್ಮಿಕ ಕಟ್ಟಡದ ಹೊರಗೆ ವ್ಯಕ್ತಿಯೊಬ್ಬ ಧ್ವಜವನ್ನು ಕೆಳಗೆ ಎಳೆಯುತ್ತಿರುವ ವೀಡಿಯೊ ಪ್ರಸಾರವಾಗುತ್ತಿದ್ದು, ಈ ಬಗ್ಗೆ ನಮಗೆ ತಿಳಿದಿದೆ. ಪೊಲೀಸ್ ಅಧಿಕಾರಿಗಳು ಈ ಪ್ರದೇಶದಲ್ಲಿ ಸಾರ್ವಜನಿಕ ಸುವ್ಯವಸ್ಥೆಯೊಂದಿಗೆ ವ್ಯವಹರಿಸುವಾಗ ಇದು ಸಂಭವಿಸಿದೆ ಎಂದು ತೋರುತ್ತದೆ. ಈ ಘಟನೆಯ ಕುರಿತು ತನಿಖೆ ನಡೆಸಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಶನಿವಾರ ಇಬ್ಬರನ್ನು ಬಂಧಿಸಿಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಂಧಿತರಲ್ಲಿ ಒಬ್ಬನನ್ನು ಹಿಂಸೆಗೆ ಸಂಚು ರೂಪಿಸಿದ ಶಂಕೆಯ ಮೇಲೆ ಬಂಧಿಸಲಾಗಿದ್ದು, ಮತ್ತೊಬ್ಬ ವ್ಯಕ್ತಿಯನ್ನು ಬ್ಲೇಡ್‌ ರೀತಿಯ ವಸ್ತುವನ್ನು ಹೊಂದಿರುವ ಶಂಕೆಯ ಮೇಲೆ ಬಂಧಿಸಲಾಗಿದೆ. ಇಬ್ಬರೂ ಭಾನುವಾರವೂ ಪೊಲೀಸ್ ಕಸ್ಟಡಿಯಲ್ಲಿದ್ದರು ದಿ ಗಾರ್ಡಿಯನ್ ವರದಿ ಹೇಳಿದೆ.

“ನಾವು ಸ್ಥಳೀಯ ಸಮುದಾಯದ ಮುಖಂಡರ ಬೆಂಬಲದೊಂದಿಗೆ ಸಂವಾದ ಮತ್ತು ಶಾಂತಿಗೆ ಕರೆ ನೀಡುವುದನ್ನು ಮುಂದುವರಿಸುತ್ತಿದ್ದೇವೆ. ನಗರದಲ್ಲಿ ಹಿಂಸೆ ಅಥವಾ ಅವ್ಯವಸ್ಥೆಯನ್ನು ನಾವು ಸಹಿಸುವುದಿಲ್ಲ. ಮುಂಬರುವ ದಿನಗಳಲ್ಲಿ ಮಹತ್ವದ ಪೊಲೀಸ್ ಕಾರ್ಯಾಚರಣೆಯು ಪ್ರದೇಶದಲ್ಲಿ ಉಳಿಯುತ್ತದೆ” ಎಂದು ಪೊಲೀಸರು ಹೇಳಿದ್ದಾರೆ.

ಲೀಸೆಸ್ಟರ್ ಮೂಲದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಸುಲೇಮಾನ್ ನಗ್ಡಿ,“ನಾವು ಬೀದಿಗಳಲ್ಲಿ ನೋಡಿರುವುದು ತುಂಬಾ ಆತಂಕಕಾರಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ಸಮುದಾಯಗಳ ಎಡೆಯಲ್ಲಿ ಈ ರೀತಿಯ ಸಮಸ್ಯೆ ನಡೆಯುತ್ತಿತ್ತು. ಆದರೆ ಅದು ಇಷ್ಟೊಂದು ಕೆಟ್ಟದಾಗಿ ಈ ವರೆಗೆ ಭುಗಿಲೆದ್ದಿಲ್ಲ. ನಮಗೆ ಶಾಂತಿ ಬೇಕಿದ್ದು, ಹಿಂಸಾಚಾರ ನಿಲ್ಲಬೇಕು. ಕೆಲವು ಅತೃಪ್ತ ಯುವಕರು ವಿನಾಶವನ್ನು ಉಂಟುಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!

ಲೀಸೆಸ್ಟರ್‌ನಲ್ಲಿರುವ ಹಿಂದೂ ಮತ್ತು ಜೈನ ದೇವಾಲಯಗಳು ಮತ್ತು ಸಮುದಾಯ ಸಂಘಟನೆಗಳ ಮುಖಂಡರು ನೀಡಿದ ಹೇಳಿಕೆಯಲ್ಲಿ, “ಶನಿವಾರದ ಪೂರ್ವಸಿದ್ಧತೆಯಿಲ್ಲದ ಮೆರವಣಿಗೆಯ ಬಗ್ಗೆ ತಿಳಿಯಲು ಪೊಲೀಸರೊಂದಿಗೆ ಕೆಲಸ ಮಾಡುತ್ತಿದ್ದೇವೆ. ಬೆಲ್‌ಗ್ರೇವ್ ಮತ್ತು ನಾರ್ತ್ ಎವಿಂಗ್‌ಟನ್‌ನ ಬೀದಿಗಳಲ್ಲಿ ಸಂವೇದನಾಶೀಲವಲ್ಲದ ಮತ್ತು ಸಂಪೂರ್ಣವಾಗಿ ಅವಮಾನಕರ ಕೃತ್ಯಗಳನ್ನು ನಾವು ಖಂಡಿಸುತ್ತೇವೆ. ಲೀಸೆಸ್ಟರ್ ನಗರದೊಳಗಿನ ಸಂಬಂಧಗಳು ಮತ್ತು ಏಕತೆಯನ್ನು ಹಾಳುಮಾಡುವ ಇಂತಹ ಆಕ್ರಮಣಕಾರಿ ಕೃತ್ಯಗಳನ್ನು ಹಿಂದೂ ಸಮುದಾಯದ ನಾಯಕರು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...