Homeಕರ್ನಾಟಕಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

ಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

- Advertisement -
- Advertisement -

ಬೆಂಗಳೂರಿನಲ್ಲಿ ಪಾವತಿ ಪಾರ್ಕಿಂಗ್‌‌‌ ಅನ್ನು ಪರಿಚಯಿಸಲು ಟೆಂಡರ್‌ಗಳನ್ನು ಆಹ್ವಾನಿಸಲು ಬೃಹತ್‌‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿದ್ಧವಾಗಿದೆ. 2021ರ ಫೆಬ್ರವರಿ 2 ರಂದು ರಾಜ್ಯ ಸರ್ಕಾರವು ಅನುಮೋದಿಸಿದ ಪಾರ್ಕಿಂಗ್ ನೀತಿಯ ಅಡಿಯಲ್ಲಿ, ನಗರವನ್ನು ಉಚಿತ ಪಾರ್ಕಿಂಗ್‌ನಿಂದ ಪಾವತಿಸಿದ ಪಾರ್ಕಿಂಗ್‌ ನಗರವಾಗಿ ರೂಪಿಸಲು ಹೊರಟಿದೆ. ಈ ಮೂಲಕ ವೈಯಕ್ತಿಕ ವಾಹನಗಳ ಬಳಕೆಯನ್ನು ಪರೋಕ್ಷವಾಗಿ ನಿರುತ್ಸಾಹಗೊಳಿಸುವ ಜವಾಬ್ದಾರಿಯನ್ನು ಬಿಬಿಎಂಪಿಗೆ ವಹಿಸಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯವು (DULT) ವಿವರವಾದ ಅಧ್ಯಯನದ ನಂತರ ಸಿದ್ಧಪಡಿಸಿದ ಮತ್ತು ಎಲ್ಲಾ ಎಂಟು ವಲಯಗಳಲ್ಲಿ ಜಾರಿಗೊಳಿಸುವ ಯೋಜನೆಯೊಂದಿಗೆ ಕನಿಷ್ಠ 188 ಕೋಟಿ ರೂ.ಗಳ ವಾರ್ಷಿಕ ಆದಾಯವನ್ನು ಗಳಿಸುವ ಉದ್ದೇಶವನ್ನು ಬಿಬಿಎಂಪಿ ಸಂಸ್ಥೆ ಹೊಂದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

DULT ನ ಅಧಿಕಾರಿಗಳು ದ್ವಿಚಕ್ರ ಮತ್ತು ನಾಲ್ಕು ಚಕ್ರಗಳ ಜೊತೆಗೆ, ಸೈಕಲ್‌ಗಳು, ಲೋಡ್-ಅನ್‌ಲೋಡಿಂಗ್ ಮತ್ತು ಆಟೋ ಸ್ಟ್ಯಾಂಡ್‌ಗಳಿಗೆ ಅನ್ವಯವಾಗುವ ಸ್ಥಳದಲ್ಲಿ ಪಾರ್ಕಿಂಗ್ ಸ್ಥಳವನ್ನು ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಒಂದು ಅಥವಾ ಎರಡು ದಿನಗಳಲ್ಲಿ ಟೆಂಡರ್‌ಗಳು ಬಿಡ್ಡಿಂಗ್‌ಗೆ ಲಭ್ಯವಿರುತ್ತವೆ ಎಂದು ಬಿಬಿಎಂಪಿ ಮುಖ್ಯ ಇಂಜಿನಿಯರ್‌ ಬಿ.ಎಸ್. ಪ್ರಹ್ಲಾದ್ ಹೇಳಿದ್ದಾರೆ. ರಸ್ತೆಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿದ ನಂತರ ಪಾರ್ಕಿಂಗ್ ಶುಲ್ಕವನ್ನು ನಿರ್ಧರಿಸಲಾಗಿದೆ ಎಂದು ಟ್ರಾಫಿಕ್ ಎಂಜಿನಿಯರಿಂಗ್ ಸೆಲ್ (ಟಿಇಸಿ) ಅಧಿಕಾರಿಗಳು ತಿಳಿಸಿದ್ದಾರೆ.

“ಭೂಮಿಯ ಮಾರುಕಟ್ಟೆ ಮೌಲ್ಯ ಮತ್ತು ಕ್ಯಾರೇಜ್‌ ವೇ ಅಗಲದ ಆಧಾರದ ಮೇಲೆ ರಸ್ತೆಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಲಾಗಿದೆ. ಸ್ಥಳದ ಲಭ್ಯತೆಯ ಆಧಾರದ ಮೇಲೆ ಪ್ರತಿಯೊಂದು ವಲಯಗಳಲ್ಲಿ ಪಾರ್ಕಿಂಗ್ ಸ್ಥಳವನ್ನು ಗುರುತಿಸಲಾಗಿದೆ” ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ಎಂಜಿನಿಯರ್ (TEC) ) ಹೆಚ್.ಎನ್. ಜಯಸಿಂಹ ಹೇಳಿದ್ದಾರೆ.

ಬೆಳಿಗ್ಗೆ 7 ರಿಂದ ರಾತ್ರಿ 10 ರವರೆಗೆ ದಿನಕ್ಕೆ 12 ರಿಂದ 15 ಗಂಟೆಗಳ ಕಾಲ ಪಾವತಿ ಪಾರ್ಕಿಂಗ್ ಜಾರಿಯಲ್ಲಿರುತ್ತದೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

“ಪಾರ್ಕಿಂಗ್ ಶುಲ್ಕ ಮತ್ತು ವಾಹನ ನಿಲುಗಡೆ ಅವಧಿಯ ಕುರಿತು ಚರ್ಚೆ ಅಂತಿಮ ಹಂತದಲ್ಲಿದೆ. ತಾತ್ಕಾಲಿಕವಾಗಿ ‘ಎ ವರ್ಗ’ದ ಪಾರ್ಕಿಂಗ್ ಸ್ಥಳವನ್ನು ದ್ವಿಚಕ್ರ ವಾಹನಗಳಿಗೆ ರೂ 15/ಗಂಟೆಗೆ ಮತ್ತು ನಾಲ್ಕು-ಚಕ್ರ ವಾಹನಗಳಿಗೆ ರೂ 30/ಗಂಟೆ ವೆಚ್ಚವಾಗಲಿದೆ” ಎಂದು ಅವರು ಹೇಳಿದ್ದಾರೆ.

“‘ಬಿ ವರ್ಗ’ ಜಾಗದಲ್ಲಿ ಪಾರ್ಕಿಂಗ್ ದ್ವಿಚಕ್ರ ವಾಹನಗಳಿಗೆ ರೂ 10/ಗಂಟೆಗೆ ಮತ್ತು ಕಾರುಗಳಿಗೆ 20 ರೂ. ವೆಚ್ಚವಾಗಲಿದೆ. ‘ಸಿ ವರ್ಗ’ದ ಪಾರ್ಕಿಂಗ್ ಜಾಗವೂ ಅಗ್ಗದಲ್ಲಿ ಲಭ್ಯವಾಗಲಿದ್ದು, ಬೈಕ್ ಮತ್ತು ಕಾರ್ ಮಾಲೀಕರು ಕ್ರಮವಾಗಿ 5 ರೂ. ಮತ್ತು 10ರೂ. ಪ್ರತಿ ಗಂಟೆಗೆ ಪಾವತಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಬೆಂಗಳೂರು ಹೊರ ವಲಯದಲ್ಲಿ ಅಗ್ಗ

ಯಲಹಂಕ, ಬೊಮ್ಮನಹಳ್ಳಿ, ರಾಜರಾಜೇಶ್ವರಿ ನಗರ ಮತ್ತು ದಾಸರಹಳ್ಳಿಯಂತಹ ವಲಯಗಳಲ್ಲಿ, ಹೆಚ್ಚಿನ ರಸ್ತೆಗಳು ಎ ವರ್ಗಕ್ಕೆ ಬರದ ಕಾರಣ ಪಾರ್ಕಿಂಗ್ ಶುಲ್ಕವು ಮಧ್ಯಮವಾಗಿರುತ್ತದೆ. ಆದರೆ, ನಗರದ ಪ್ರಮುಖ ಪ್ರದೇಶಗಳು ಮತ್ತು ದಟ್ಟಣೆಯ ಕಾರಿಡಾರ್‌ಗಳಲ್ಲಿ ಈ ವೆಚ್ಚವು ಹೆಚ್ಚಾಗಿರುತ್ತದೆ.

ಇದನ್ನೂ ಓದಿ: ಬಿಬಿಎಂಪಿ ಚುನಾವಣೆಯಲ್ಲಿ ಮೀಸಲಾತಿಯ ಬಗ್ಗೆ..

ಬಿಬಿಎಂಪಿಯು ಪೂರ್ವ ವಲಯದಿಂದ ಕನಿಷ್ಠ 62 ಕೋಟಿ ರೂ. ಪಾರ್ಕಿಂಗ್ ಆದಾಯವನ್ನು ಗಳಿಸುವ ನಿರೀಕ್ಷೆಯನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ದಕ್ಷಿಣ (50 ಕೋಟಿ) ಮತ್ತು ಪಶ್ಚಿಮ (ರೂ. 20.71 ಕೋಟಿ) ವಲಯಗಳು ಇವೆ. ರಾಜರಾಜೇಶ್ವರಿನಗರದಿಂದ (5 ಕೋಟಿ ರೂ.) ಕನಿಷ್ಠ ಮೊತ್ತವನ್ನು ಅಧಿಕಾರಿಗಳು ನಿರೀಕ್ಷಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ರೀ ಸ್ವಾಮೀ, ನಿಮ್ಗೆ ಜನರಿಂದ ದುಡ್ಡು ಹೇಗೆ ಕಸಿಯಬೇಕು ಅಂತಾ ಗೊತ್ತೇ ವಿನಃ, ಅವರಿಗೆ ಏನು ಅನುಕೂಲ ಕೊಡಬೇಕು ಅನ್ನೋ ಕನಿಷ್ಠ ಮಟ್ಟದ ಆಲೋಚನೆ ಕೂಡ ನಿಮ್ಗೆ ಬರೊಲ್ವೆ,, ಒಂದೂ ರೋಡ್ ಸರೀ ಇಲ್ಲಾ, ಫ್ಲೈ ಓವರ್ ಯಾವುದೂ ನೆಟ್ಟಗೆ ಮಾಡಿಲ್ಲ, ಜಾಯಿಂಟ್ ಗಳಲ್ಲಿ ಗ್ಯಾಪ್ ಜಾಸ್ತಿ ಇದೆ, ಗಾಡಿಗಳು ಜಂಪ್ ಆಗೀ ಆಗೀ, ನಮ್ಮ ಗಾಡಿ ಹಾಳಗಿದಲ್ದೆ, ನಮ್ಮ ಸೊಂಟಾನೂ ಮುರಿದು ಬೀಳುತ್ತೆ, ಮೋರಿಗಳನ್ನೆಲ್ಲಾ unsceintific ಆಗೀ ಕಾಂಕ್ರೀಟ್ ಮಾಡೀ, ಮಳೆ ನೀರು ಭೂಮಿಯಲ್ಲಿ ಒಂದು ಚೂರೂ ಇಂಗಿ ಕೊಳ್ಳದೆ ಎಲ್ಲಾ ನೀರೂ ರಾಜಾ ಕಾಲುವೆಗೆ ಹರಿದು, ಮುಂಚಿನ ಹಾಗೆ ಭೂಮಿಯ ಒಳಗೆ ನೀರು ಹೋಗದ ಹಾಗೆ ಮಾಡಿ ಅಂತರ್ಜಲವನ್ನು ಪೂರ್ತಿ ಕಡಿಮೆ ಮಾಡಿ, ಬರಡು ಭೂಮಿ ಮಾಡಿದ್ದೀರಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....