Homeದಲಿತ್ ಫೈಲ್ಸ್ಮಾಲೂರು: ದಲಿತ ಬಾಲಕ ದೇವರು ಮುಟ್ಟಿದನೆಂದು ಶೋಷಿತ ಕುಟುಂಬಕ್ಕೆ ಬಹಿಷ್ಕಾರ; 60 ಸಾವಿರ ರೂ. ದಂಡ

ಮಾಲೂರು: ದಲಿತ ಬಾಲಕ ದೇವರು ಮುಟ್ಟಿದನೆಂದು ಶೋಷಿತ ಕುಟುಂಬಕ್ಕೆ ಬಹಿಷ್ಕಾರ; 60 ಸಾವಿರ ರೂ. ದಂಡ

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಹುಳೇರಹಳ್ಳಿಯಲ್ಲಿ ಗ್ರಾಮದೇವತೆಯ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಇತ್ತೀಚೆಗೆ ನಡೆದಿದೆ.

ದೇವರಿಗೆ ಅಪವಿತ್ರವಾಗಿತೆಂದು ಆರೋಪಿಸಿ ಆ ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ ಹಾಕಿದ್ದಾರೆ. ಜೊತೆಗೆ ಈ ಬಡ ಕುಟುಂಬಕ್ಕೆ ಅರವತ್ತು ಸಾವಿರ ರೂ. ದಂಡವನ್ನು ವಿಧಿಸಿದ್ದಾರೆ ಎಂಬ ಆರೋಪ ಬಂದಿದೆ.

ಗ್ರಾಮದ ದಲಿತ ಬಾಲಕ ದೇವರ ಮೆರವಣಿಗೆಯ ವೇಳೆ ದೇವರ ಕೋಲನ್ನು ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂದು ಆರೋಪಿಸಿ ಹೊಡೆಯಲು ಮುಂದಾಗಿದ್ದರು. ಜೊತೆಗೆ ಬಾಲಕನ ಕುಟುಂಬವನ್ನು ಕರೆಸಿ ಅರವತ್ತು ಸಾವಿರ ರೂ. ದಂಡ ವಿಧಿಸಿದ್ದರು.

“ನೀನು ಇಲ್ಲಿಗೆ ಬರಬಾರದು. ದೇವರನ್ನು ಮುಟ್ಟಿ ಮೈಲಿಗೆ ಮಾಡಿದ್ದೀಯ. ಅರವತ್ತು ಸಾವಿರ ದಂಡ ಕಟ್ಟಿದರೆ ಮಾತ್ರ ಊರಿನೊಳಗೆ ನಿಮ್ಮ ಕುಟುಂಬ ಪ್ರವೇಶಿಸಬಹುದು” ಎಂದು ತಿಳಿಸಿರುವುದಾಗಿ ಬಾಲಕ ಹೇಳಿಕೆ ನೀಡಿದ್ದಾನೆ.

ಘಟನೆಯನ್ನು ವಿವರಿಸಿರುವ ಬಾಲಕ, “ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾರಾಯಣಸ್ವಾಮಿ ಅವರು ಹೊಡೆಯಲು ಬಂದರು” ಎಂದು ತಿಳಿಸಿದ್ದಾನೆ.

ಬಾಲಕನ ತಾಯಿ ಶೋಭಾ ಮಾತನಾಡಿ, “‌ಅಂದು ನಾನು ಊರಿನಲ್ಲಿ ಇರಲಿಲ್ಲ. ಎಂದಿನಂತೆ ಬೆಳಿಗ್ಗೆ ಎದ್ದು ರೈಲು ಹತ್ತಿ ಬೆಂಗಳೂರಿಗೆ ಹೌಸ್‌ಕೀಪಿಂಗ್ ಕೆಲಸಕ್ಕೆ ಹೋಗಿದ್ದೆ. ಮನೆಗೆ ಬಂದಾಗ ವಿಷಯ ತಿಳಿಯಿತು. ನಾವು ದೇವರಿಗಾಗಿ ಅರವತ್ತು ಸಾವಿರ ರೂ. ಖರ್ಚು ಮಾಡಿದ್ದೇವೆ. ದೇವರು ಬಿಂದಿ (ಅಪವಿತ್ರ) ಆಗಿದೆ. ನಾವು ಶಾಂತಿ (ಪವಿತ್ರ) ಮಾಡಿಸಲೇಬೇಕು. ನೀವು ದುಡ್ಡು ಕಟ್ಟಲೇಬೇಕು ಅಂದರು. ನಮ್ಮ ಕೈಲಿ ಕಟ್ಟಲು ಆಗಲ್ಲ ಎಂದೆ. ಇಲ್ಲವಾದರೆ ಊರು ಖಾಲಿ ಮಾಡಿರಿ” ಎಂದು ಬೆದರಿಕೆ ಹಾಕಿರುವುದಾಗಿ ವಿವರಿಸಿದ್ದಾರೆ.

“ನಾವು ದಿನಕ್ಕೆ ಮುನ್ನೂರು ರೂಪಾಯಿ ಕೂಲಿ ಮಾಡೋರು. ಅರವತ್ತು ಸಾವಿರ ರೂ.ಗಳನ್ನು ಎಲ್ಲಿಂದ ತಂದುಕೊಡಲಿ? ನಮ್ಮ ಪರವಾಗಿ ಯಾರೂ ನಿಲ್ಲಲಿಲ್ಲ. ಊರಿಂದ ಆಚೆ ಬಂದು ಮಾಧ್ಯಮದೊಂದಿಗೆ ವಿಷಯ ಹಂಚಿಕೊಂಡಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

‘ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ ಸಂಘಟನೆ’ಯ ಸಂದೇಶ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. “ನೀವೇನು ಹೆದರಬೇಕಿಲ್ಲ. ನೀವು ಭಾರತ ದೇಶದಲ್ಲಿದ್ದೀರಿ. ಇದು ಯಾರಪ್ಪನ ದೇಶವೂ ಅಲ್ಲ. ಸಂವಿಧಾನದ ಅಡಿಯಲ್ಲಿ ನೀವಿದ್ದೀರಿ” ಎಂದು ಹೇಳಿದ್ದಾರೆ.

“ಮನುಷ್ಯರಾಗಿ ಹೀಗೆ ಯಾರೂ ನಡೆದುಕೊಳ್ಳಬಾರದು. ದಲಿತರಾಗಿ ಹುಟ್ಟಿರುವುದೇ ನಮ್ಮದು ತಪ್ಪಾಯಿತಾ?” ಎಂದು ಪ್ರಶ್ನಿಸಿರುವ ಅವರು, “ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಹೋರಾಡುತ್ತೇವೆ. ಅಧಿಕಾರಿಗಳು ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಎಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು” ಎಂದು ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸಂದೇಶ್‌, “ಗ್ರಾಮದಲ್ಲಿ ಹದಿನೈದು ದಲಿತರ ಮನೆಗಳಿದ್ದರೆ, ಎಂಟು ನೂರು ಸವರ್ಣೀಯರ ಮನೆಗಳಿವೆ. ಈ ಗ್ರಾಮದಲ್ಲಿ ಪದೇಪದೇ ಇದೇ ರೀತಿಯ ದೌರ್ಜನ್ಯಗಳಾಗುತ್ತಿವೆ. ಆದರೆ ದಲಿತರು ಧೈರ್ಯ ಮಾಡಿ ಮುಂದೆ ಬರುತ್ತಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಪೊಲೀಸ್ ಟಾಣೆಯಲ್ಲಿ ದೂರು ದಾಕಲಿಸಬೇಕು. ಇಲ್ಲದಿದ್ದರೆ ಇಂತಹ ದೌರ್ಜನ್ಯಗಳು ನಡೆಯುತ್ತಲೇ ಇರುತ್ತವೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...