Homeದಲಿತ್ ಫೈಲ್ಸ್ಮಾಲೂರು: ದಲಿತ ಬಾಲಕ ದೇವರು ಮುಟ್ಟಿದನೆಂದು ಶೋಷಿತ ಕುಟುಂಬಕ್ಕೆ ಬಹಿಷ್ಕಾರ; 60 ಸಾವಿರ ರೂ. ದಂಡ

ಮಾಲೂರು: ದಲಿತ ಬಾಲಕ ದೇವರು ಮುಟ್ಟಿದನೆಂದು ಶೋಷಿತ ಕುಟುಂಬಕ್ಕೆ ಬಹಿಷ್ಕಾರ; 60 ಸಾವಿರ ರೂ. ದಂಡ

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಹುಳೇರಹಳ್ಳಿಯಲ್ಲಿ ಗ್ರಾಮದೇವತೆಯ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಇತ್ತೀಚೆಗೆ ನಡೆದಿದೆ.

ದೇವರಿಗೆ ಅಪವಿತ್ರವಾಗಿತೆಂದು ಆರೋಪಿಸಿ ಆ ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ ಹಾಕಿದ್ದಾರೆ. ಜೊತೆಗೆ ಈ ಬಡ ಕುಟುಂಬಕ್ಕೆ ಅರವತ್ತು ಸಾವಿರ ರೂ. ದಂಡವನ್ನು ವಿಧಿಸಿದ್ದಾರೆ ಎಂಬ ಆರೋಪ ಬಂದಿದೆ.

ಗ್ರಾಮದ ದಲಿತ ಬಾಲಕ ದೇವರ ಮೆರವಣಿಗೆಯ ವೇಳೆ ದೇವರ ಕೋಲನ್ನು ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂದು ಆರೋಪಿಸಿ ಹೊಡೆಯಲು ಮುಂದಾಗಿದ್ದರು. ಜೊತೆಗೆ ಬಾಲಕನ ಕುಟುಂಬವನ್ನು ಕರೆಸಿ ಅರವತ್ತು ಸಾವಿರ ರೂ. ದಂಡ ವಿಧಿಸಿದ್ದರು.

“ನೀನು ಇಲ್ಲಿಗೆ ಬರಬಾರದು. ದೇವರನ್ನು ಮುಟ್ಟಿ ಮೈಲಿಗೆ ಮಾಡಿದ್ದೀಯ. ಅರವತ್ತು ಸಾವಿರ ದಂಡ ಕಟ್ಟಿದರೆ ಮಾತ್ರ ಊರಿನೊಳಗೆ ನಿಮ್ಮ ಕುಟುಂಬ ಪ್ರವೇಶಿಸಬಹುದು” ಎಂದು ತಿಳಿಸಿರುವುದಾಗಿ ಬಾಲಕ ಹೇಳಿಕೆ ನೀಡಿದ್ದಾನೆ.

ಘಟನೆಯನ್ನು ವಿವರಿಸಿರುವ ಬಾಲಕ, “ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾರಾಯಣಸ್ವಾಮಿ ಅವರು ಹೊಡೆಯಲು ಬಂದರು” ಎಂದು ತಿಳಿಸಿದ್ದಾನೆ.

ಬಾಲಕನ ತಾಯಿ ಶೋಭಾ ಮಾತನಾಡಿ, “‌ಅಂದು ನಾನು ಊರಿನಲ್ಲಿ ಇರಲಿಲ್ಲ. ಎಂದಿನಂತೆ ಬೆಳಿಗ್ಗೆ ಎದ್ದು ರೈಲು ಹತ್ತಿ ಬೆಂಗಳೂರಿಗೆ ಹೌಸ್‌ಕೀಪಿಂಗ್ ಕೆಲಸಕ್ಕೆ ಹೋಗಿದ್ದೆ. ಮನೆಗೆ ಬಂದಾಗ ವಿಷಯ ತಿಳಿಯಿತು. ನಾವು ದೇವರಿಗಾಗಿ ಅರವತ್ತು ಸಾವಿರ ರೂ. ಖರ್ಚು ಮಾಡಿದ್ದೇವೆ. ದೇವರು ಬಿಂದಿ (ಅಪವಿತ್ರ) ಆಗಿದೆ. ನಾವು ಶಾಂತಿ (ಪವಿತ್ರ) ಮಾಡಿಸಲೇಬೇಕು. ನೀವು ದುಡ್ಡು ಕಟ್ಟಲೇಬೇಕು ಅಂದರು. ನಮ್ಮ ಕೈಲಿ ಕಟ್ಟಲು ಆಗಲ್ಲ ಎಂದೆ. ಇಲ್ಲವಾದರೆ ಊರು ಖಾಲಿ ಮಾಡಿರಿ” ಎಂದು ಬೆದರಿಕೆ ಹಾಕಿರುವುದಾಗಿ ವಿವರಿಸಿದ್ದಾರೆ.

“ನಾವು ದಿನಕ್ಕೆ ಮುನ್ನೂರು ರೂಪಾಯಿ ಕೂಲಿ ಮಾಡೋರು. ಅರವತ್ತು ಸಾವಿರ ರೂ.ಗಳನ್ನು ಎಲ್ಲಿಂದ ತಂದುಕೊಡಲಿ? ನಮ್ಮ ಪರವಾಗಿ ಯಾರೂ ನಿಲ್ಲಲಿಲ್ಲ. ಊರಿಂದ ಆಚೆ ಬಂದು ಮಾಧ್ಯಮದೊಂದಿಗೆ ವಿಷಯ ಹಂಚಿಕೊಂಡಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

‘ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ ಸಂಘಟನೆ’ಯ ಸಂದೇಶ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. “ನೀವೇನು ಹೆದರಬೇಕಿಲ್ಲ. ನೀವು ಭಾರತ ದೇಶದಲ್ಲಿದ್ದೀರಿ. ಇದು ಯಾರಪ್ಪನ ದೇಶವೂ ಅಲ್ಲ. ಸಂವಿಧಾನದ ಅಡಿಯಲ್ಲಿ ನೀವಿದ್ದೀರಿ” ಎಂದು ಹೇಳಿದ್ದಾರೆ.

“ಮನುಷ್ಯರಾಗಿ ಹೀಗೆ ಯಾರೂ ನಡೆದುಕೊಳ್ಳಬಾರದು. ದಲಿತರಾಗಿ ಹುಟ್ಟಿರುವುದೇ ನಮ್ಮದು ತಪ್ಪಾಯಿತಾ?” ಎಂದು ಪ್ರಶ್ನಿಸಿರುವ ಅವರು, “ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಹೋರಾಡುತ್ತೇವೆ. ಅಧಿಕಾರಿಗಳು ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಎಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು” ಎಂದು ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸಂದೇಶ್‌, “ಗ್ರಾಮದಲ್ಲಿ ಹದಿನೈದು ದಲಿತರ ಮನೆಗಳಿದ್ದರೆ, ಎಂಟು ನೂರು ಸವರ್ಣೀಯರ ಮನೆಗಳಿವೆ. ಈ ಗ್ರಾಮದಲ್ಲಿ ಪದೇಪದೇ ಇದೇ ರೀತಿಯ ದೌರ್ಜನ್ಯಗಳಾಗುತ್ತಿವೆ. ಆದರೆ ದಲಿತರು ಧೈರ್ಯ ಮಾಡಿ ಮುಂದೆ ಬರುತ್ತಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಪೊಲೀಸ್ ಟಾಣೆಯಲ್ಲಿ ದೂರು ದಾಕಲಿಸಬೇಕು. ಇಲ್ಲದಿದ್ದರೆ ಇಂತಹ ದೌರ್ಜನ್ಯಗಳು ನಡೆಯುತ್ತಲೇ ಇರುತ್ತವೆ.

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: 28 ವರ್ಷಗಳ ಕಾಲ ಸೇನಾ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ ಶ್ರೀನಗರ ನ್ಯಾಯಾಲಯ

1997 ರಲ್ಲಿ ಸೇನಾ ಕಸ್ಟಡಿಗೆ ತೆಗೆದುಕೊಂಡ ಸುಮಾರು 28 ವರ್ಷಗಳ ನಂತರ ಶ್ರೀನಗರ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಸತ್ತನೆಂದು ಘೋಷಿಸಿದೆ. ಬಂಧನದಲ್ಲಿದ್ದಾಗ ಕೊಲ್ಲಲ್ಪಟ್ಟಿದ್ದಾನೆ ಎಂಬ ತನಿಖಾ ಸಂಶೋಧನೆಗಳನ್ನು ಉಲ್ಲೇಖಿಸಿ ಮತ್ತು ಸಾವಿನ ಕಾನೂನುಬದ್ಧ...

ದೆಹಲಿ: ವೇತನ ಕೇಳಿದ್ದಕ್ಕೆ ಅಪಾಯಕಾರಿ ಚರಂಡಿ ಸ್ವಚ್ಛಗೊಳಿಸಲು ಒತ್ತಾಯ; ಸುರಕ್ಷತಾ ಸಾಧನಗಳಿಲ್ಲದೆ ಚರಂಡಿಗಿಳಿದ ನೈರ್ಮಲ್ಯ ಕಾರ್ಮಿಕ ಸಾವು

ವಾಲ್ಮೀಕಿ ಸಮುದಾಯದ ಗುತ್ತಿಗೆ ನೈರ್ಮಲ್ಯ ಕಾರ್ಮಿಕ ರಾಹುಲ್ (32) ಮಾರ್ಚ್ 30 ರಂದು ದಿಲ್ಶಾದ್ ಗಾರ್ಡನ್‌ನ ತಹಿರ್‌ಪುರದಲ್ಲಿ 8 ರಿಂದ 10 ಅಡಿ ಆಳದ ಚರಂಡಿಯನ್ನು ಹಸ್ತಚಾಲಿತವಾಗಿ ಹೂಳು ತೆಗೆಯುವಾಗ ಯಾವುದೇ ಸುರಕ್ಷತಾ...

ಗಾಝಾ | ಇಸ್ರೇಲ್ ದಾಳಿಯಲ್ಲಿ ಅಲ್‌-ಜಝೀರಾ ಪತ್ರಕರ್ತ ಸಾವು : ತೀವ್ರ ಖಂಡನೆ ವ್ಯಕ್ತಪಡಿಸಿದ ಮಾಧ್ಯಮ ಸಂಸ್ಥೆ

ಗಾಝಾ ಪಟ್ಟಿಯಲ್ಲಿ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್-ಜಝೀರಾ ಮಾಧ್ಯಮ ಸಂಸ್ಥೆಯ ಪತ್ರಕರ್ತ ಮೊಹಮ್ಮದ್ ವಿಶಾಹ್ ಸಾವನ್ನಪ್ಪಿದ್ದಾರೆ. ಗಾಝಾ ನಗರದ ಪಶ್ಚಿಮ ಭಾಗದಲ್ಲಿರುವ ಕರಾವಳಿ ರಸ್ತೆಯಾದ ಅಲ್-ರಶೀದ್ ಸ್ಟ್ರೀಟ್‌ನಲ್ಲಿ ಬುಧವಾರ (ಏ.8) ಕಾರಿನ...

ಅಸ್ಸಾಂ : ಮತದಾನದ ಹಿಂದಿನ ದಿನ ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಅಭ್ಯರ್ಥಿ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಉದಲ್ಗುರಿ (ಎಸ್‌ಟಿ) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುರೇನ್ ದೈಮರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ ಎಂದು ವರದಿಯಾಗಿದೆ. ಪಕ್ಷದ ನಾಯಕತ್ವದಿಂದ...

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...