Homeದಲಿತ್ ಫೈಲ್ಸ್ಮಾಲೂರು: ದಲಿತ ಬಾಲಕ ದೇವರು ಮುಟ್ಟಿದನೆಂದು ಶೋಷಿತ ಕುಟುಂಬಕ್ಕೆ ಬಹಿಷ್ಕಾರ; 60 ಸಾವಿರ ರೂ. ದಂಡ

ಮಾಲೂರು: ದಲಿತ ಬಾಲಕ ದೇವರು ಮುಟ್ಟಿದನೆಂದು ಶೋಷಿತ ಕುಟುಂಬಕ್ಕೆ ಬಹಿಷ್ಕಾರ; 60 ಸಾವಿರ ರೂ. ದಂಡ

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಹುಳೇರಹಳ್ಳಿಯಲ್ಲಿ ಗ್ರಾಮದೇವತೆಯ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ಇತ್ತೀಚೆಗೆ ನಡೆದಿದೆ.

ದೇವರಿಗೆ ಅಪವಿತ್ರವಾಗಿತೆಂದು ಆರೋಪಿಸಿ ಆ ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ ಹಾಕಿದ್ದಾರೆ. ಜೊತೆಗೆ ಈ ಬಡ ಕುಟುಂಬಕ್ಕೆ ಅರವತ್ತು ಸಾವಿರ ರೂ. ದಂಡವನ್ನು ವಿಧಿಸಿದ್ದಾರೆ ಎಂಬ ಆರೋಪ ಬಂದಿದೆ.

ಗ್ರಾಮದ ದಲಿತ ಬಾಲಕ ದೇವರ ಮೆರವಣಿಗೆಯ ವೇಳೆ ದೇವರ ಕೋಲನ್ನು ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂದು ಆರೋಪಿಸಿ ಹೊಡೆಯಲು ಮುಂದಾಗಿದ್ದರು. ಜೊತೆಗೆ ಬಾಲಕನ ಕುಟುಂಬವನ್ನು ಕರೆಸಿ ಅರವತ್ತು ಸಾವಿರ ರೂ. ದಂಡ ವಿಧಿಸಿದ್ದರು.

“ನೀನು ಇಲ್ಲಿಗೆ ಬರಬಾರದು. ದೇವರನ್ನು ಮುಟ್ಟಿ ಮೈಲಿಗೆ ಮಾಡಿದ್ದೀಯ. ಅರವತ್ತು ಸಾವಿರ ದಂಡ ಕಟ್ಟಿದರೆ ಮಾತ್ರ ಊರಿನೊಳಗೆ ನಿಮ್ಮ ಕುಟುಂಬ ಪ್ರವೇಶಿಸಬಹುದು” ಎಂದು ತಿಳಿಸಿರುವುದಾಗಿ ಬಾಲಕ ಹೇಳಿಕೆ ನೀಡಿದ್ದಾನೆ.

ಘಟನೆಯನ್ನು ವಿವರಿಸಿರುವ ಬಾಲಕ, “ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನಾರಾಯಣಸ್ವಾಮಿ ಅವರು ಹೊಡೆಯಲು ಬಂದರು” ಎಂದು ತಿಳಿಸಿದ್ದಾನೆ.

ಬಾಲಕನ ತಾಯಿ ಶೋಭಾ ಮಾತನಾಡಿ, “‌ಅಂದು ನಾನು ಊರಿನಲ್ಲಿ ಇರಲಿಲ್ಲ. ಎಂದಿನಂತೆ ಬೆಳಿಗ್ಗೆ ಎದ್ದು ರೈಲು ಹತ್ತಿ ಬೆಂಗಳೂರಿಗೆ ಹೌಸ್‌ಕೀಪಿಂಗ್ ಕೆಲಸಕ್ಕೆ ಹೋಗಿದ್ದೆ. ಮನೆಗೆ ಬಂದಾಗ ವಿಷಯ ತಿಳಿಯಿತು. ನಾವು ದೇವರಿಗಾಗಿ ಅರವತ್ತು ಸಾವಿರ ರೂ. ಖರ್ಚು ಮಾಡಿದ್ದೇವೆ. ದೇವರು ಬಿಂದಿ (ಅಪವಿತ್ರ) ಆಗಿದೆ. ನಾವು ಶಾಂತಿ (ಪವಿತ್ರ) ಮಾಡಿಸಲೇಬೇಕು. ನೀವು ದುಡ್ಡು ಕಟ್ಟಲೇಬೇಕು ಅಂದರು. ನಮ್ಮ ಕೈಲಿ ಕಟ್ಟಲು ಆಗಲ್ಲ ಎಂದೆ. ಇಲ್ಲವಾದರೆ ಊರು ಖಾಲಿ ಮಾಡಿರಿ” ಎಂದು ಬೆದರಿಕೆ ಹಾಕಿರುವುದಾಗಿ ವಿವರಿಸಿದ್ದಾರೆ.

“ನಾವು ದಿನಕ್ಕೆ ಮುನ್ನೂರು ರೂಪಾಯಿ ಕೂಲಿ ಮಾಡೋರು. ಅರವತ್ತು ಸಾವಿರ ರೂ.ಗಳನ್ನು ಎಲ್ಲಿಂದ ತಂದುಕೊಡಲಿ? ನಮ್ಮ ಪರವಾಗಿ ಯಾರೂ ನಿಲ್ಲಲಿಲ್ಲ. ಊರಿಂದ ಆಚೆ ಬಂದು ಮಾಧ್ಯಮದೊಂದಿಗೆ ವಿಷಯ ಹಂಚಿಕೊಂಡಿದ್ದೇವೆ” ಎಂದಿದ್ದಾರೆ.

ಇದನ್ನೂ ಓದಿರಿ: ಇಸ್ಲಾಂ, ಕ್ರಿಶ್ಚಿಯನ್‌ಗೆ ಮತಾಂತರವಾದ ದಲಿತರ ಸ್ಥಿತಿಗತಿ ತಿಳಿಯಲು ರಾಷ್ಟ್ರೀಯ ಆಯೋಗ ರಚಿಸಲು ಸಿದ್ಧತೆ!?

‘ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ ಸಂಘಟನೆ’ಯ ಸಂದೇಶ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ. “ನೀವೇನು ಹೆದರಬೇಕಿಲ್ಲ. ನೀವು ಭಾರತ ದೇಶದಲ್ಲಿದ್ದೀರಿ. ಇದು ಯಾರಪ್ಪನ ದೇಶವೂ ಅಲ್ಲ. ಸಂವಿಧಾನದ ಅಡಿಯಲ್ಲಿ ನೀವಿದ್ದೀರಿ” ಎಂದು ಹೇಳಿದ್ದಾರೆ.

“ಮನುಷ್ಯರಾಗಿ ಹೀಗೆ ಯಾರೂ ನಡೆದುಕೊಳ್ಳಬಾರದು. ದಲಿತರಾಗಿ ಹುಟ್ಟಿರುವುದೇ ನಮ್ಮದು ತಪ್ಪಾಯಿತಾ?” ಎಂದು ಪ್ರಶ್ನಿಸಿರುವ ಅವರು, “ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಹೋರಾಡುತ್ತೇವೆ. ಅಧಿಕಾರಿಗಳು ಭೇಟಿ ನೀಡುವುದಾಗಿ ತಿಳಿಸಿದ್ದಾರೆ. ಎಸ್‌.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು” ಎಂದು ಪ್ರತಿಕ್ರಿಯಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸಂದೇಶ್‌, “ಗ್ರಾಮದಲ್ಲಿ ಹದಿನೈದು ದಲಿತರ ಮನೆಗಳಿದ್ದರೆ, ಎಂಟು ನೂರು ಸವರ್ಣೀಯರ ಮನೆಗಳಿವೆ. ಈ ಗ್ರಾಮದಲ್ಲಿ ಪದೇಪದೇ ಇದೇ ರೀತಿಯ ದೌರ್ಜನ್ಯಗಳಾಗುತ್ತಿವೆ. ಆದರೆ ದಲಿತರು ಧೈರ್ಯ ಮಾಡಿ ಮುಂದೆ ಬರುತ್ತಿಲ್ಲ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೊದಲು ಪೊಲೀಸ್ ಟಾಣೆಯಲ್ಲಿ ದೂರು ದಾಕಲಿಸಬೇಕು. ಇಲ್ಲದಿದ್ದರೆ ಇಂತಹ ದೌರ್ಜನ್ಯಗಳು ನಡೆಯುತ್ತಲೇ ಇರುತ್ತವೆ.

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...