Homeಚಳವಳಿದಲಿತ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಮೀನಾ ಕಂದಸಾಮಿ ಅವರಿಗೆ PEN ಜರ್ಮನಿ ಪ್ರಶಸ್ತಿ

ದಲಿತ ಹಕ್ಕುಗಳ ಹೋರಾಟಗಾರ್ತಿ, ಲೇಖಕಿ ಮೀನಾ ಕಂದಸಾಮಿ ಅವರಿಗೆ PEN ಜರ್ಮನಿ ಪ್ರಶಸ್ತಿ

- Advertisement -
- Advertisement -

ಜರ್ಮನಿಯ ಡಾರ್ಮ್‌ಸ್ಟಾಡ್ಟ್‌ನಲ್ಲಿರುವ ಪೆನ್‌‌‌ ಕೇಂದ್ರ(PEN Center)ವು ‘ಹರ್ಮನ್ ಕೆಸ್ಟನ್ ಪ್ರಶಸ್ತಿ’ಯ ವಿಜೇತರನ್ನು ಸೋಮವಾರ ಘೋಷಿಸಿದೆ. ಈ ವರ್ಷದ ಪ್ರಶಸ್ತಿಯು ಭಾರತೀಯ ಲೇಖಕಿ ಮತ್ತು ಕವಯಿತ್ರಿ ಮೀನಾ ಕಂದಸಾಮಿ ಅವರಿಗೆ ಸಂದಿದೆ.

ಪ್ರಶಸ್ತಿ ಘೋಷಣೆ ಬಗ್ಗೆ ಸಂತಸ ವ್ಯಕ್ತಪಡಿಸಿದರು ಮೀನಾ ಕಂದಸಾಮಿ ಅವರು, “ಪ್ರಾಮಾಣಿಕವಾಗಿ ಹೇಳಬೇಕೆಂದರೆ ಇದಕ್ಕೆ ಹೇಗೆ ಪ್ರತಿಕ್ರಿಯೆ ನೀಡಬೇಕು ಎಂದು ನನಗೆ ಗೊತ್ತಾಗುತ್ತಿಲ್ಲ. ಈ ಹಿಂದೆ ಈ ಪ್ರಶಸ್ತಿಯನ್ನು ಸ್ವೀಕರಿಸಿದವರಲ್ಲಿ ಗುಂಟರ್ ಗ್ರಾಸ್ ಮತ್ತು ಹೆರಾಲ್ಡ್ ಪಿಂಟರ್ ಇದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಜಾಪ್ರಭುತ್ವದ ನಿರ್ಭೀತ ಹೋರಾಟಗಾರ್ತಿ

“ಮೀನಾ ಕಂದಸಾಮಿ ಪ್ರಜಾಪ್ರಭುತ್ವದ ಮತ್ತು ಮಾನವ ಹಕ್ಕುಗಳ ನಿರ್ಭೀತ ಹೋರಾಟಗಾರ್ತಿಯಾಗಿದ್ದಾರೆ. ಭಾರತದಲ್ಲಿ ಭೂರಹಿತರು, ಅಲ್ಪಸಂಖ್ಯಾತರು ಮತ್ತು ದಲಿತರ ದಮನದ ವಿರುದ್ಧ ಅವರು ಹೋರಾಡುತ್ತಿದ್ದಾರೆ” ಎಂದು ಜರ್ಮನ್ PEN ಸೆಂಟರ್‌ನ ಉಪಾಧ್ಯಕ್ಷ ಕಾರ್ನೆಲಿಯಾ ಜೆಟ್ಸೆ ಹೇಳಿದ್ದಾರೆ.

“ಪರಾನುಭೂತಿ, ವಿಶ್ಲೇಷಣಾತ್ಮಕ ನಿಖರತೆ ಮತ್ತು ಸಾಹಿತ್ಯಿಕ ಉತ್ಸಾಹದಿಂದ, ಕಂದಸಾಮಿ ಅವರು ಪಿತೃಪ್ರಭುತ್ವ, ಊಳಿಗಮಾನ್ಯ ಸಂರಚನೆ, ಮಹಿಳೆಯರ ವಿರುದ್ಧದ ಹಿಂಸೆ, ಕಡಿವಾಣವಿಲ್ಲದ ಬಂಡವಾಳಶಾಹಿಯ ಪರಿಣಾಮಗಳು ಮತ್ತು ದಕ್ಷಿಣ ಭಾರತದಲ್ಲಿ ರೈತರ ಹತ್ಯಾಕಾಂಡದ ಬಗ್ಗೆ ಮಾತನಾಡುತ್ತಾರೆ. ಅವರ ಭಾಷಣಗಳು ಮತ್ತು ಬರಹಗಳಲ್ಲಿ ಇವುಗಳನ್ನು ಗುರುತಿಸುತ್ತಾರೆ” ಎಂದು ಜೆಟ್ಸೆ ಹೇಳಿದ್ದಾರೆ.

ಪ್ರಶಸ್ತಿಯನ್ನು ಪ್ರಾಯೋಜಿಸುವ ಜರ್ಮನಿಯ ಹೆಸ್ಸೆ ರಾಜ್ಯದ ಕಲೆ ಮತ್ತು ಸಂಸ್ಕೃತಿ ಸಚಿವೆ ಏಂಜೆಲಾ ಡಾರ್ನ್ ಅವರು ಮೀನಾ ಕಂದಸಾಮಿ ಅವರನ್ನು ಶ್ಲಾಘಿಸಿದ್ದು, ‘‘ಅವರು ತಮ್ಮ ಪುಸ್ತಕಗಳಲ್ಲಿ ಅಸಮಾನತೆ ಮತ್ತು ದಮನದ ವಿರುದ್ಧ ಬಂಡಾಯವೆದ್ದಿದ್ದಾರೆ. ಹಿಂಸಾಚಾರದ ಬಲಿಪಶುಗಳಿಗೆ ಧ್ವನಿ ನೀಡುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

ಶೋಷಣೆಗೆ ಒಳಗಾದವರ ಪರವಾಗಿ ನಿಲ್ಲುವವರು

ಮೀನಾ ಕಂದಸಾಮಿ ಅವರು 1984 ರಲ್ಲಿ ಚೆನ್ನೈನಲ್ಲಿ ಜನಿಸಿದರು. ಹದಿಹರೆಯದಿಂದಲೂ ಕವನ ಬರೆಯುತ್ತಿದ್ದ ಅವರು, ತನ್ನನ್ನು ತಾನು ‘ಜಾತಿ ವಿರೋಧಿ ಹೋರಾಟಗಾರ್ತಿ, ಕವಿ, ಕಾದಂಬರಿಕಾರ್ತಿ ಮತ್ತು ಅನುವಾದಕಿ’ ಎಂದು ಕರೆದುಕೊಳ್ಳುತ್ತಾಳೆ. ಅವರ ವೆಬ್‌ಸೈಟ್‌ನ ಪ್ರಕಾರ, ಅವರ ಬರವಣಿಗೆಯು ಜಾತಿ, ಲಿಂಗ ಮತ್ತು ಜನಾಂಗೀಯ ದಬ್ಬಾಳಿಕೆಯ ವಿರುದ್ಧ ಉಗ್ರಗಾಮಿ ಪ್ರತಿರೋಧವನ್ನು ಗುರುತಿಸುತ್ತದೆ.

‘ದಿ ಜಿಪ್ಸಿ ಗಾಡೆಸ್’ (2014), ‘ವೆನ್ ಐ ಹಿಟ್ ಯು: ಆರ್‌ ಎ ಪೋರ್ಟ್ರೇಟ್ ಆಫ್ ದಿ ರೈಟರ್ ಆಸ್ ಎ ಯಂಗ್ ವೈಫ್’ (2017) ಪುಸ್ತಕಗಳು ಮೀನಾ ಕಂದಸಾಮಿ ಅವರ ಪ್ರಮುಖ ಕೃತಿಗಳಾಗಿವೆ. ‘Ms Militancy’ (2010) ಮತ್ತು ‘#ThisPoemWillProvokeYou and Other Poems’ (2015) ಎಂಬ ಕವಿತೆಗಳ ಸಂಕಲನಗಳನ್ನು ಕೂಡಾ ಅವರು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ‘ಹೋರಾಟಗಾರರನ್ನು ಬಿತ್ತಲಾಗುತ್ತದೆ; ಹೂಳಲಾಗುವುದಿಲ್ಲ’ – ಸ್ಟಾನ್‌ಸ್ವಾಮಿ ನಿಧನಕ್ಕೆ ಒಕ್ಕೂಟ ಸರ್ಕಾರದ ವಿರುದ್ದ ದೇಶದಾದ್ಯಂತ ಆಕ್ರೋಶ

ಜರ್ಮನಿಯ PEN ಕೇಂದ್ರವು ಈ ವರ್ಷ ನವೆಂಬರ್ 15 ರಂದು ಡಾರ್ಮ್‌ಸ್ಟಾಡ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಮೀನಾ ಕಂದಸಾಮಿ ಅವರಿಗೆ ಪ್ರಶಸ್ತಿಯನ್ನು ನೀಡಲಿದೆ. ವಿಜೇತರಿಗೆ ಬಹುಮಾನದ ಹಣವಾಗಿ 16 ಲಕ್ಷ ರೂ. (20,000 ಯೂರೊ)ಗಳನ್ನು ಮೊತ್ತವನ್ನು ಪಡೆಯುತ್ತಾರೆ. ಈ ವರ್ಷ, PEN ಕೇಂದ್ರವು “ವೀಟರ್ ಸ್ಕ್ರಿಬೆನ್” ಎಂಬ ವೆಬ್‌ಸೈಟ್ ಅನ್ನು ಪ್ರೋತ್ಸಾಹಕ್ಕಾಗಿ ವಿಶೇಷ ಪ್ರಶಸ್ತಿಯೊಂದಿಗೆ ಗೌರವಿಸುತ್ತಿದೆ. ದೇಶಭ್ರಷ್ಟರಾಗಿರುವ ಲೇಖಕರು ಮತ್ತು ಸಂಘರ್ಷ ವಲಯಗಳ ಬರಹಗಾರರಿಗೆ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸಲು ವೆಬ್‌ಸೈಟ್‌ ವೇದಿಕೆ ನೀಡುತ್ತಿದೆ.

ಹರ್ಮನ್ ಕೆಸ್ಟನ್ ಪ್ರಶಸ್ತಿಯು ಕಿರುಕುಳಕ್ಕೊಳಗಾದ ಲೇಖಕರು ಮತ್ತು ಪತ್ರಕರ್ತರ ಹಕ್ಕುಗಳಿಗಾಗಿ ನಿಲ್ಲುವ ವ್ಯಕ್ತಿಗಳನ್ನು ಗೌರವಿಸುತ್ತದೆ. ಈ ಹಿಂದೆ ಈ ಪ್ರಶಸ್ತಿ ಪುರಸ್ಕೃತರಲ್ಲಿ ಗುಂಟರ್ ಗ್ರಾಸ್, ಅನ್ನಾ ಪೊಲಿಟ್‌ಕೋವ್ಸ್ಕಯಾ, ಲಿಯು ಕ್ಸಿಯಾಬೊ, ಹೆರಾಲ್ಡ್ ಪಿಂಟರ್ ಮತ್ತು ಕ್ಯಾನ್ ಡುಂಡರ್ ಸೇರಿದ್ದಾರೆ.

ಕಂದಸಾಮಿ ಅವರ ಕಾದಂಬರಿಗಳು ಮಹಿಳಾ ಪ್ರಶಸ್ತಿ, ಅಂತರರಾಷ್ಟ್ರೀಯ ಡೈಲನ್ ಥಾಮಸ್ ಪ್ರಶಸ್ತಿ ಮತ್ತು ಹಿಂದೂ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿವೆ. ಈ ವರ್ಷ ಅವರು ಯುನೈಟೆಡ್ ಕಿಂಗ್‌ಡಂನ ರಾಯಲ್ ಸೊಸೈಟಿ ಆಫ್ ಲಿಟರೇಚರ್ (RSL) ನ ಫೆಲೋ ಆಗಿ ಆಯ್ಕೆಯಾದರು. 2021 ರಲ್ಲಿ ‘ದಿ ಆರ್ಡರ್ಸ್ ವರ್ ಟು ರೇಪ್ ಯು: ತಮಿಳು ಟೈಗ್ರೆಸಸ್ ಇನ್ ದಿ ಈಲಂ ಸ್ಟ್ರಗಲ್’ ಎಂಬ ಶೀರ್ಷಿಕೆಯ ಪ್ರಬಂಧಗಳ ಸಂಗ್ರಹವನ್ನು ಸಹ ಬಿಡುಗಡೆ ಮಾಡಿದ್ದಾರೆ.

ಇದನ್ನೂ ಓದಿ: ‘ಶೂದ್ರ’ ಪದಬಳಕೆ: ಪ್ರಗ್ಯಾ ಠಾಕೂರ್‌ಗೆ ತಿರುಗೇಟು ಕೊಟ್ಟ ಮೀನಾ ಕಂದಸಾಮಿ

2018 ರಲ್ಲಿ ಜಾತಿ ಆಧಾರಿತ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದಲ್ಲಿ ಬಂಧಿಸಲ್ಪಟ್ಟ ತೆಲುಗು ಕ್ರಾಂತಿಕಾರಿ ಕವಿ ವರವರ ರಾವ್ ಸೇರಿದಂತೆ ಭಾರತದಲ್ಲಿ ಲೇಖಕರ ದಮನದ ಬಗ್ಗೆ ಕಂದಸಾಮಿ ಧ್ವನಿಯೆತ್ತಿದ್ದಾರೆ. ಎಡಪಂಥೀಯ ಸಂಘಟನೆಗಳೊಂದಿಗಿನ ಸಂಬಂಧಕ್ಕಾಗಿ ಜೈಲಿನಲ್ಲಿರುವ ಕವಿ, ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬಾ ಅವರನ್ನು ಬೆಂಬಲಿಸಿ ಅವರು ಮಾತನಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...