Homeಮುಖಪುಟಕವಿತಾ ಲಂಕೇಶ್‌ ನಿರ್ದೇಶನದ "ಗೌರಿ" ಸಾಕ್ಷ್ಯಚಿತ್ರಕ್ಕೆ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ

ಕವಿತಾ ಲಂಕೇಶ್‌ ನಿರ್ದೇಶನದ “ಗೌರಿ” ಸಾಕ್ಷ್ಯಚಿತ್ರಕ್ಕೆ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ

- Advertisement -
- Advertisement -

ಖ್ಯಾತ ನಿರ್ದೇಶಕಿ ಕವಿತಾ ಲಂಕೇಶ್‌ರವರು ನಿರ್ದೇಶಿಸಿರುವ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ಕುರಿತು “ಗೌರಿ” ಸಾಕ್ಷ್ಯಚಿತ್ರವು 2022ರ ಟೊರೊಂಟೊ ವುಮೆನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ ಜಯಿಸಿದೆ.

ಅಲ್ಲದೆ ಈ ಸಾಕ್ಷ್ಯಚಿತ್ರವು ಮಾಂಟ್ರಿಯಲ್‌ನ ಸೌತ್ ಏಷ್ಯಾ ಫಿಲ್ಮ್ ಫೆಸ್ಟಿವಲ್‌ಗೂ ಸಹ ಆಯ್ಕೆಯಾಗಿದೆ. ಡಾಕ್ ನ್ಯೂಯಾರ್ಕ್, ಆಮ್‌ಸ್ಟರ್‌ಡ್ಯಾಮ್‌ನ ಇಂಟರ್‌ನ್ಯಾಶನಲ್ ಡಾಕ್ಯುಮೆಂಟರಿ ಫಿಲ್ಮ್ ಫೆಸ್ಟಿವಲ್, ಸನ್‌ಡಾನ್ಸ್ ಫಿಲ್ಮ್ ಫೆಸ್ಟಿವಲ್ ಮತ್ತು ಪ್ರಪಂಚದಾದ್ಯಂತದ ಇತರ ಸಿನಿಮೋತ್ಸವಗಳಿಗೆ ಈ ಸಾಕ್ಷ್ಯಚಿತ್ರವನ್ನು ಪರಿಗಣಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ 200 ಕ್ಕೂ ಹೆಚ್ಚು ಪತ್ರಕರ್ತರ ಮೇಲೆ ದಾಳಿಗಳು ನಡೆದ ವರದಿಯಾಗಿವೆ. 30 ಕ್ಕೂ ಹೆಚ್ಚು ಪತ್ರಕರ್ತರನ್ನು ಕಳೆದ ದಶಕದಲ್ಲಿ ಹತ್ಯೆ ಮಾಡಲಾಗಿದೆ. ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಸ್ಥಾನವು 180 ರಲ್ಲಿ 150ಕ್ಕೆ ಕುಸಿದಿದೆ. ಭಿನ್ನಮತೀಯರು ಮತ್ತು ಪತ್ರಕರ್ತರ ಮೇಲಿನ ದಾಳಿಗಳು ಹೊಸದಲ್ಲ ಮತ್ತು ಭಾರತಕ್ಕೆ ಸೀಮಿತವಾಗಿಲ್ಲ, ಆದರೆ ಕಳೆದ ದಶಕದಲ್ಲಿನ ಈ ದಾಳಿಗಳು ತೀವ್ರ ರೂಪದಲ್ಲಿದ್ದು ಚಿಂತಿಸಬೇಕಾದ ವಿಷಯಗಳಾಗಿವೆ ಎಂದು ಕವಿತಾ ಲಂಕೇಶ್ ಹೇಳಿದ್ದಾರೆ.

ಕವಿತಾ ಲಂಕೇಶ್

 

ಈ ಸಾಕ್ಷ್ಯ ಚಿತ್ರವು ಭಾರತದಲ್ಲಿ ಪತ್ರಕರ್ತರು ದಿನನಿತ್ಯವು ಎದುರಿಸುತ್ತಿರುವ ಮೌಖಿಕ, ದೈಹಿಕ ದಾಳಿಗಳನ್ನು ತೆರೆದಿಡುತ್ತಿದೆ. ತಮ್ಮ ದಿಟ್ಟ ವರದಿಗಳ ಕಾರಣಕ್ಕಾಗಿ ಗೌರಿಯವರು ತಮ್ಮ ಮೇಲಿನ 80ಕ್ಕೂ ಹೆಚ್ಚು ಪ್ರಕರಣಗಳನ್ನು ರಾಜ್ಯಾದ್ಯಂತ ಓಡಾಡುತ್ತಾ ಹೇಗೆ ಅದನ್ನೊಂದು ಅವಕಾಶವನ್ನಾಗಿ ಬಳಸಿಕೊಂಡರು ಎಂಬುದರ ವಿವರಣೆ ಇಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಆಂಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್‌ “ಗೌರಿ” ಸಾಕ್ಷ್ಯಚಿತ್ರವನ್ನು ನಿರ್ಮಾಣಕ್ಕೆ ಕೈಜೋಡಿಸಿದೆ. ಈ ಸಂಸ್ಥೆಯು ತಮ್ಮ ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸಾಚಾರಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡ ಪತ್ರಕರ್ತರ ಸಾಕ್ಷ್ಯಚಿತ್ರಗಳ ಪ್ರಸ್ತಾಪಗಳಿಗೆ ಕರೆ ನೀಡಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು, ಆ ಪೈಕಿ ನಾಲ್ಕು ಚಿತ್ರಗಳನ್ನು ಫ್ರೀ ಪ್ರೆಸ್‌ ಆಯ್ಕೆ ಮಾಡಿದ್ದು, ಅದರಲ್ಲಿ ‘ಗೌರಿ’ ಅವರ ಕುರಿತ ತಮ್ಮ ಸಾಕ್ಷ್ಯಾಚಿತ್ರವೂ ಒಂದಾಗಿದೆ.

ಇದನ್ನೂ ಓದಿ: ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....