Homeಮುಖಪುಟಕವಿತಾ ಲಂಕೇಶ್‌ ನಿರ್ದೇಶನದ "ಗೌರಿ" ಸಾಕ್ಷ್ಯಚಿತ್ರಕ್ಕೆ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ

ಕವಿತಾ ಲಂಕೇಶ್‌ ನಿರ್ದೇಶನದ “ಗೌರಿ” ಸಾಕ್ಷ್ಯಚಿತ್ರಕ್ಕೆ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ

- Advertisement -
- Advertisement -

ಖ್ಯಾತ ನಿರ್ದೇಶಕಿ ಕವಿತಾ ಲಂಕೇಶ್‌ರವರು ನಿರ್ದೇಶಿಸಿರುವ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ಕುರಿತು “ಗೌರಿ” ಸಾಕ್ಷ್ಯಚಿತ್ರವು 2022ರ ಟೊರೊಂಟೊ ವುಮೆನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬೆಸ್ಟ್ ಹ್ಯೂಮನ್ ರೈಟ್ಸ್ ಪ್ರಶಸ್ತಿ ಜಯಿಸಿದೆ.

ಅಲ್ಲದೆ ಈ ಸಾಕ್ಷ್ಯಚಿತ್ರವು ಮಾಂಟ್ರಿಯಲ್‌ನ ಸೌತ್ ಏಷ್ಯಾ ಫಿಲ್ಮ್ ಫೆಸ್ಟಿವಲ್‌ಗೂ ಸಹ ಆಯ್ಕೆಯಾಗಿದೆ. ಡಾಕ್ ನ್ಯೂಯಾರ್ಕ್, ಆಮ್‌ಸ್ಟರ್‌ಡ್ಯಾಮ್‌ನ ಇಂಟರ್‌ನ್ಯಾಶನಲ್ ಡಾಕ್ಯುಮೆಂಟರಿ ಫಿಲ್ಮ್ ಫೆಸ್ಟಿವಲ್, ಸನ್‌ಡಾನ್ಸ್ ಫಿಲ್ಮ್ ಫೆಸ್ಟಿವಲ್ ಮತ್ತು ಪ್ರಪಂಚದಾದ್ಯಂತದ ಇತರ ಸಿನಿಮೋತ್ಸವಗಳಿಗೆ ಈ ಸಾಕ್ಷ್ಯಚಿತ್ರವನ್ನು ಪರಿಗಣಿಸಲಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಭಾರತದಲ್ಲಿ 200 ಕ್ಕೂ ಹೆಚ್ಚು ಪತ್ರಕರ್ತರ ಮೇಲೆ ದಾಳಿಗಳು ನಡೆದ ವರದಿಯಾಗಿವೆ. 30 ಕ್ಕೂ ಹೆಚ್ಚು ಪತ್ರಕರ್ತರನ್ನು ಕಳೆದ ದಶಕದಲ್ಲಿ ಹತ್ಯೆ ಮಾಡಲಾಗಿದೆ. ಜಾಗತಿಕ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತದ ಸ್ಥಾನವು 180 ರಲ್ಲಿ 150ಕ್ಕೆ ಕುಸಿದಿದೆ. ಭಿನ್ನಮತೀಯರು ಮತ್ತು ಪತ್ರಕರ್ತರ ಮೇಲಿನ ದಾಳಿಗಳು ಹೊಸದಲ್ಲ ಮತ್ತು ಭಾರತಕ್ಕೆ ಸೀಮಿತವಾಗಿಲ್ಲ, ಆದರೆ ಕಳೆದ ದಶಕದಲ್ಲಿನ ಈ ದಾಳಿಗಳು ತೀವ್ರ ರೂಪದಲ್ಲಿದ್ದು ಚಿಂತಿಸಬೇಕಾದ ವಿಷಯಗಳಾಗಿವೆ ಎಂದು ಕವಿತಾ ಲಂಕೇಶ್ ಹೇಳಿದ್ದಾರೆ.

ಕವಿತಾ ಲಂಕೇಶ್

 

ಈ ಸಾಕ್ಷ್ಯ ಚಿತ್ರವು ಭಾರತದಲ್ಲಿ ಪತ್ರಕರ್ತರು ದಿನನಿತ್ಯವು ಎದುರಿಸುತ್ತಿರುವ ಮೌಖಿಕ, ದೈಹಿಕ ದಾಳಿಗಳನ್ನು ತೆರೆದಿಡುತ್ತಿದೆ. ತಮ್ಮ ದಿಟ್ಟ ವರದಿಗಳ ಕಾರಣಕ್ಕಾಗಿ ಗೌರಿಯವರು ತಮ್ಮ ಮೇಲಿನ 80ಕ್ಕೂ ಹೆಚ್ಚು ಪ್ರಕರಣಗಳನ್ನು ರಾಜ್ಯಾದ್ಯಂತ ಓಡಾಡುತ್ತಾ ಹೇಗೆ ಅದನ್ನೊಂದು ಅವಕಾಶವನ್ನಾಗಿ ಬಳಸಿಕೊಂಡರು ಎಂಬುದರ ವಿವರಣೆ ಇಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ಆಂಸ್ಟರ್‌ಡ್ಯಾಮ್‌ನ ಫ್ರೀ ಪ್ರೆಸ್ ಅನ್‌ಲಿಮಿಟೆಡ್‌ “ಗೌರಿ” ಸಾಕ್ಷ್ಯಚಿತ್ರವನ್ನು ನಿರ್ಮಾಣಕ್ಕೆ ಕೈಜೋಡಿಸಿದೆ. ಈ ಸಂಸ್ಥೆಯು ತಮ್ಮ ವೃತ್ತಿಪರ ಸೇವೆಯ ಕಾರಣದಿಂದಾಗಿ ಹಿಂಸಾಚಾರಕ್ಕೆ ಒಳಗಾಗಿ ಪ್ರಾಣ ಕಳೆದುಕೊಂಡ ಪತ್ರಕರ್ತರ ಸಾಕ್ಷ್ಯಚಿತ್ರಗಳ ಪ್ರಸ್ತಾಪಗಳಿಗೆ ಕರೆ ನೀಡಿತ್ತು. ಸುಮಾರು 300 ಪ್ರಸ್ತಾವನೆಗಳು ಬಂದಿದ್ದವು, ಆ ಪೈಕಿ ನಾಲ್ಕು ಚಿತ್ರಗಳನ್ನು ಫ್ರೀ ಪ್ರೆಸ್‌ ಆಯ್ಕೆ ಮಾಡಿದ್ದು, ಅದರಲ್ಲಿ ‘ಗೌರಿ’ ಅವರ ಕುರಿತ ತಮ್ಮ ಸಾಕ್ಷ್ಯಾಚಿತ್ರವೂ ಒಂದಾಗಿದೆ.

ಇದನ್ನೂ ಓದಿ: ಗೌರಿ ಲಂಕೇಶ್‌ ಕುರಿತು ಸಾಕ್ಷ್ಯಚಿತ್ರ ನಿರ್ಮಿಸುತ್ತಿರುವ ಕವಿತಾ ಲಂಕೇಶ್: ಮುಂದಿನ ತಿಂಗಳು ಬಿಡುಗಡೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

4 COMMENTS

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...