Homeಅಂತರಾಷ್ಟ್ರೀಯಇಂಗ್ಲೆಂಡ್‌‌ನ ಲೀಸೆಸ್ಟರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಹಿಂದೂ-ಮುಸ್ಲಿಂ ಮುಖಂಡರ ಐಕ್ಯತೆಯ ಮಂತ್ರ

ಇಂಗ್ಲೆಂಡ್‌‌ನ ಲೀಸೆಸ್ಟರ್ ಹಿಂಸಾಚಾರ: ಶಾಂತಿ ಕಾಪಾಡುವಂತೆ ಹಿಂದೂ-ಮುಸ್ಲಿಂ ಮುಖಂಡರ ಐಕ್ಯತೆಯ ಮಂತ್ರ

- Advertisement -
- Advertisement -

ಇಂಗ್ಲೆಂಡ್‌ನ ಲೀಸೆಸ್ಟರ್‌‌ನಲ್ಲಿ ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಈವರೆಗೆ 47 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ನಗರದಲ್ಲಿ ಸೌಹಾರ್ದತೆಗಾಗಿ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಮುಖಂಡರು ಒಗ್ಗಟ್ಟಾಗಿದ್ದು, ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

“ನಾವು ಲೀಸೆಸ್ಟರ್‌ನ ಕುಟುಂಬವಾಗಿದ್ದು ಹಿಂದೂಗಳು ಮತ್ತು ಮುಸ್ಲಿಮರಾಗಿ ಇಲ್ಲಿ ನಿಂತಿಲ್ಲ. ಸಹೋದರ ಸಹೋದರಿಯರಂತೆ ನಿಮ್ಮ ಮುಂದೆ ನಿಂತಿದ್ದೇವೆ. ವಿಭಜನೆಗೆ ಕಾರಣವಾಗುವ ಯಾವುದೇ ವಿದೇಶಿ ಉಗ್ರಗಾಮಿ ಸಿದ್ಧಾಂತಕ್ಕೆ ಲೀಸೆಸ್ಟರ್ ಸ್ಥಾನವಿಲ್ಲ” ಎಂದು ಮುಖಂಡರೊಬ್ಬರು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಮ್ಮ ಎರಡು ಧರ್ಮಗಳು ಈ ಅದ್ಭುತ ನಗರದಲ್ಲಿ ಅರ್ಧ ಶತಮಾನಕ್ಕೂ ಹೆಚ್ಚು ಕಾಲ ಸಾಮರಸ್ಯದಿಂದ ಬದುಕಿವೆ. ನಾವು ಒಟ್ಟಿಗೆ ಈ ನಗರಕ್ಕೆ ಬಂದಿದ್ದು, ಒಂದೇ ಸವಾಲುಗಳನ್ನು ಒಟ್ಟಿಗೆ ಎದುರಿಸಿದ್ದೇವೆ. ನಾವು ಜನಾಂಗೀಯ ದ್ವೇಷಿಗಳ ವಿರುದ್ಧ ಒಟ್ಟಾಗಿ ಹೋರಾಡಿದ್ದೇವೆ. ಒಗ್ಗಟ್ಟಿನಲ್ಲೆ ಈ ನಗರವನ್ನು ವೈವಿಧ್ಯತೆ ಮತ್ತು ಸಮುದಾಯದ ಒಗ್ಗಟ್ಟಿನ ದಾರಿದೀಪವನ್ನಾಗಿ ಮಾಡಿದೆವು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಂಗ್ಲೆಂಡ್‌: ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಹಿಂದುತ್ವ ಪ್ರೇರಿತ ಯುವಕರು; ಭುಗಿಲೆದ್ದ ಘರ್ಷಣೆ

“ಸಭ್ಯ ಸಮಾಜದ ಭಾಗವಾಗಿರದ ಉದ್ವೇಗ ಮತ್ತು ಹಿಂಸೆಯ ಬಗ್ಗೆ ಸಮುದಾಯಗಳಿಗೆ ದುಃಖ ಉಂಟಾಗಿದ್ದು, ಅಘಾತಗೊಂಡಿದೆ. ನಾವು ಎಲ್ಲಾ ಧಾರ್ಮಿಕ ಸ್ಥಳಗಳು, ಮಸೀದಿಗಳು ಮತ್ತು ದೇವಾಲಯಗಳ ಪಾವಿತ್ರ್ಯತೆಯನ್ನು ಗೌರವಿಸುವಂತೆ ಕೇಳಿಕೊಳ್ಳುತ್ತೇವೆ. ಜೋರಾದ ಸಂಗೀತ, ಧ್ವಜಧಾರಣೆ, ಅವಹೇಳನಕಾರಿ ಘೋಷಣೆಗಳು ಅಥವಾ ಪವಿತ್ರ ಬಟ್ಟೆಯ ವಿರುದ್ಧದ ದಾಳಿಗಳೊಂದಿಗೆ ಪ್ರಚೋದನೆಗೆ ಒಳಗಾಗಬೇಡಿ” ಎಂದು ಅವರು ಜನರನ್ನು ಒತ್ತಾಯಿಸಿದ್ದಾರೆ.

ಪೂರ್ವ ಇಂಗ್ಲೆಂಡ್ ನಗರದಲ್ಲಿ ಮತ್ತಷ್ಟು ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ತಡೆಯಲು ನಡೆಯುತ್ತಿರುವ ಪೊಲೀಸ್‌ ಕಾರ್ಯಾಚರಣೆಯ ಭಾಗವಾಗಿ 47 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಇಂದು ಹೇಳಿದ್ದಾರೆ.

ಭಾರತವು ಪಾಕಿಸ್ತಾನವನ್ನು ಸೋಲಿಸಿದ ಆಗಸ್ಟ್ 28 ರ ಕ್ರಿಕೆಟ್ ಪಂದ್ಯದ ನಂತರ ನಗರದಲ್ಲಿ ಉದ್ವಿಗ್ನತೆ ಪ್ರಾರಂಭವಾಗಿತ್ತು. ಕಳೆದ ಶನಿವಾರ ಹಿಂದುತ್ವ ಬೆಂಬಲಿಗರು ಮಾಸ್ಕ್‌ ಧರಿಸಿ, ಕೈಯಲ್ಲಿ ಮಾರಕಾಸ್ತ್ರ ಹಿಡಿದು ಮುಸ್ಲಿಂ ವಿರೋಧಿ ಘೋಷಣೆಗಳೊಂದಿಗೆ ಮುಸ್ಲಿಂ ಬಾಹುಳ್ಯ ಪ್ರದೇಶಗಳಲ್ಲಿ ಮೆರವಣಿಗೆ ನಡೆಸಿದ್ದರು. ಈ ವೇಳೆ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸುವ ವಿಡಿಯೊ ಮತ್ತು ಬಾಟಲಿಗಳಲ್ಲಿ ಎಸೆಯುವ ವಿಡಿಯೊ ಕೂಡಾ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ನಂತರ ಭಾನುವಾರ ಮುಸ್ಲಿಂ ಯುವಕರು ಕೂಡಾ ಸಭೆ ನಡೆಸಿ ದಾಂದಲೆ ಎಬ್ಬಿಸಿದ್ದರು.

ಇದನ್ನೂ ಓದಿ: 19 ವರ್ಷದೊಳಗಿನ ವಿಶ್ವಕಪ್ ಕ್ರಿಕೆಟ್ ಫೈನಲ್: ಇಂಗ್ಲೆಂಡ್ ಮಣಿಸಿ 5ನೇ ಬಾರಿ ಕಪ್ ಗೆದ್ದ ಭಾರತ

ಘರ್ಷಣೆಯ ಸಮಯದಲ್ಲಿ ಆಕ್ರಮಣಕಾರಿ ಶಸ್ತ್ರಾಸ್ತ್ರವನ್ನು ಹೊಂದಿದ್ದಕ್ಕಾಗಿ 20 ವರ್ಷದ ಯುವಕನಿಗೆ 10 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಲೀಸೆಸ್ಟರ್‌ಶೈರ್ ಪೊಲೀಸ್‌ನ ತಾತ್ಕಾಲಿಕ ಮುಖ್ಯ ಕಾನ್ಸ್‌ಟೇಬಲ್ ರಾಬ್ ನಿಕ್ಸನ್, “ಬಂಧಿತರಲ್ಲಿ ಕೆಲವರು ನಗರದ ಹೊರಭಾಗದವರಾಗಿದ್ದು, ಕೆಲವರು ಬರ್ಮಿಂಗ್‌ಹ್ಯಾಮ್‌ನವರೂ ಇದ್ದರು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...