Homeಮುಖಪುಟದ್ವೇಷ ಭಾಷಣ ತಡೆಯುವಲ್ಲಿ ಟಿ.ವಿ. ಆಂಕರ್‌ಗಳ ಪಾತ್ರ ಮುಖ್ಯವಾಗಿದೆ: ಸುಪ್ರೀಂ ಕೋರ್ಟ್

ದ್ವೇಷ ಭಾಷಣ ತಡೆಯುವಲ್ಲಿ ಟಿ.ವಿ. ಆಂಕರ್‌ಗಳ ಪಾತ್ರ ಮುಖ್ಯವಾಗಿದೆ: ಸುಪ್ರೀಂ ಕೋರ್ಟ್

- Advertisement -
- Advertisement -

“ಯಾರಾದರೂ ದ್ವೇಷ ಭಾಷಣವನ್ನು ಮಾಡುವಾಗ ಅದನ್ನು ತಡೆಯುವಲ್ಲಿ ಟೆಲಿವಿಷನ್‌ ಚಾನೆಲ್‌ ನಿರೂಪಕರ ಪಾತ್ರ ಮುಖ್ಯವಾಗಿದೆ” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ದ್ವೇಷದ ಮಾತುಗಳು ಟಿವಿ ಚಾನೆಲ್‌ಗಳಲ್ಲಿ ಬರುತ್ತಿರುವಾಗ ‘ಆಂಕರ್‌ನ ಪಾತ್ರ’ ‘ಬಹಳ ಮುಖ್ಯ’ವಾಗಿರುತ್ತದೆ ಎಂದು ತಿಳಿಸಿರುವ ಕೋರ್ಟ್, ಸರ್ಕಾರ ಏಕೆ ‘ಮೂಕ ಪ್ರೇಕ್ಷಕರಾಗಿ ಉಳಿದಿದೆ’ ಎಂದೂ ಪ್ರಶ್ನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯವಾಹಿನಿ ಮಾಧ್ಯಮ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿನ ಈ ಭಾಷಣಗಳಿಗೆ ಯಾವುದೇ ತಡೆ ಇಲ್ಲವಾಗಿದೆ. ದ್ವೇಷ ಭಾಷಣವನ್ನು ಯಾರೇ ಮಾಡಿದರೂ ಅದು ಮುಂದುವರೆಯದಂತೆ ತಕ್ಷಣವೇ ಕ್ರಮವಹಿಸುವುದು (ಆಂಕರ್‌ಗಳ) ಕರ್ತವ್ಯವಾಗಿದೆ” ಎಂದು ಕೋರ್ಟ್ ಹೇಳಿದೆ.

ಕಳೆದ ವರ್ಷದಿಂದ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ಕೆ.ಎಂ.ಜೋಸೆಫ್, “ಪತ್ರಿಕಾ ಸ್ವಾತಂತ್ರ್ಯ ಮುಖ್ಯವಾಗಿದೆ. ಆದರೆ ನಮ್ಮದು ಅಮೆರಿಕದಂತೆ ತೀರ ಸ್ವತಂತ್ರವಲ್ಲ. ನಾವು ಎಲ್ಲಿಗೆ ಗೆರೆ ಎಳೆಯಬೇಕು ಎಂಬುದು ತಿಳಿದಿರಬೇಕು’’ ಎಂದು ಅಭಿಪ್ರಾಯಪಟ್ಟರು.

“ಯಾರನ್ನಾದರೂ ಕೊಲ್ಲುವ ರೀತಿಯಲ್ಲಿ ದ್ವೇಷದ ಭಾಷಣವು ಪದರಗಳನ್ನು ಹೊಂದಿದೆ. ನೀವು ನಿಧಾನವಾಗಿ ಕೊಲ್ಲಬಹುದು ಅಥವಾ ಬೇರೆ ರೀತಿಯಲ್ಲಿ ಕೊಲ್ಲಬಹುದು” ಎಂದು ಆತಂಕ ವ್ಯಕ್ತಪಡಿಸಿರುವ ನ್ಯಾಯಾಲಯ, “ದ್ವೇಷದ ಭಾಷಣವು ವೀಕ್ಷಕರಿಗೆ ಏಕೆ ಆಸಕ್ತಿದಾಯಕವಾಗಿದೆ” ಎಂದು ಪ್ರಶ್ನಿಸಿದೆ.

“ಸರ್ಕಾರವು ಪ್ರತಿಕೂಲವಾದ ನಿಲುವನ್ನು ತೆಗೆದುಕೊಳ್ಳಬಾರದು. ಆದರೆ ನ್ಯಾಯಾಲಯಕ್ಕೆ ಸಹಾಯ ಮಾಡಬೇಕು” ಎಂದಿರುವ ಕೋರ್ಟ್, “ಇದು ಕ್ಷುಲ್ಲಕ ವಿಷಯವೇ?” ಎಂದು ಕೇಳಿದೆ.

ದ್ವೇಷದ ಭಾಷಣವನ್ನು ತಡೆಯುವ ಕುರಿತು ಕಾನೂನು ಆಯೋಗದ ಶಿಫಾರಸುಗಳ ಸಂಬಂಧ ಕ್ರಮ ಜರುಗಿಸಲು ಉದ್ದೇಶಿಸಿದ್ದರೆ ಕೇಂದ್ರ ಸರ್ಕಾರವು ಸ್ಪಷ್ಟಪಡಿಸಬೇಕೆಂದು ನ್ಯಾಯಾಲಯ ಸೂಚಿಸಿದ್ದು, ನವೆಂಬರ್ 23 ರಂದು ಮುಂದಿನ ವಿಚಾರಣೆಯನ್ನು ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ಸೂಚನೆಯಂತೆ ಕಾನೂನು ಆಯೋಗವು ನಿರ್ದಿಷ್ಟ ಕಾನೂನುಗಳನ್ನು ಶಿಫಾರಸು ಮಾಡುವ ವರದಿಯನ್ನು 2017ರಲ್ಲಿ ಸಲ್ಲಿಸಿತ್ತು. “ಭಾರತದ ಯಾವುದೇ ಕಾನೂನಿನಲ್ಲಿ ದ್ವೇಷದ ಭಾಷಣವನ್ನು ವ್ಯಾಖ್ಯಾನಿಸಲಾಗಿಲ್ಲ. ಆದರೆ ಕೆಲವು ಶಾಸನಗಳಲ್ಲಿನ ಕಾನೂನು ನಿಬಂಧನೆಗಳು ವಾಕ್ ಸ್ವಾತಂತ್ರ್ಯಕ್ಕೆ ಅವಕಾಶ ನೀಡಿದ್ದರೂ, ಕೆಲವು ಮಾದರಿಯ ಮಾತುಗಳನ್ನು ನಿಷೇಧಿಸುತ್ತವೆ” ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಕೆಲವೊಮ್ಮೆ ನಿರಾಶವಾದಿಯಾಗುತ್ತೇನೆ ಮತ್ತು ಏಕಾಂಗಿ ಕೂಡಾ: ಜೈಲಿನಿಂದ ಉಮರ್ ಖಾಲಿದ್ ಪತ್ರ

ಆಯೋಗವು ಕರಡು ಶಾಸನವನ್ನೂ ರೂಪಿಸಿದೆ. ಹೊಸ ಸೆಕ್ಷನ್‌ಗಳಾದ 153C (ದ್ವೇಷಕ್ಕೆ ಪ್ರಚೋದನೆಯನ್ನು ನಿಷೇಧಿಸುವುದು) ಮತ್ತು 505A (ಕೆಲವು ಸಂದರ್ಭಗಳಲ್ಲಿ ಭಯ, ಎಚ್ಚರಿಕೆ ಅಥವಾ ಹಿಂಸಾಚಾರದ ಪ್ರಚೋದನೆಯನ್ನು ಉಂಟುಮಾಡುವುದು) ಸೇರಿಸಲು ಸೂಚಿಸಿದೆ.

ಟಿವಿ ಕಾರ್ಯಕ್ರಮಗಳು, ಸಂಜೆಯ ಚರ್ಚೆಗಳು ವೈರಲ್‌ ಆಗುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ. ಇಂಟರ್ನೆಟ್ ಕಂಪನಿಗಳು ದ್ವೇಷದ ಭಾಷಣವನ್ನು ನಿಗ್ರಹಿಸುವಲ್ಲಿ ಕ್ರಮ ಜರುಗಿಸುತ್ತಿಲ್ಲ ಎಂಬ ಟೀಕೆಗಳೂ ವ್ಯಕ್ತವಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....