Homeಮುಖಪುಟದ್ವೇಷ ಭಾಷಣ ತಡೆಯುವಲ್ಲಿ ಟಿ.ವಿ. ಆಂಕರ್‌ಗಳ ಪಾತ್ರ ಮುಖ್ಯವಾಗಿದೆ: ಸುಪ್ರೀಂ ಕೋರ್ಟ್

ದ್ವೇಷ ಭಾಷಣ ತಡೆಯುವಲ್ಲಿ ಟಿ.ವಿ. ಆಂಕರ್‌ಗಳ ಪಾತ್ರ ಮುಖ್ಯವಾಗಿದೆ: ಸುಪ್ರೀಂ ಕೋರ್ಟ್

- Advertisement -
- Advertisement -

“ಯಾರಾದರೂ ದ್ವೇಷ ಭಾಷಣವನ್ನು ಮಾಡುವಾಗ ಅದನ್ನು ತಡೆಯುವಲ್ಲಿ ಟೆಲಿವಿಷನ್‌ ಚಾನೆಲ್‌ ನಿರೂಪಕರ ಪಾತ್ರ ಮುಖ್ಯವಾಗಿದೆ” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ದ್ವೇಷದ ಮಾತುಗಳು ಟಿವಿ ಚಾನೆಲ್‌ಗಳಲ್ಲಿ ಬರುತ್ತಿರುವಾಗ ‘ಆಂಕರ್‌ನ ಪಾತ್ರ’ ‘ಬಹಳ ಮುಖ್ಯ’ವಾಗಿರುತ್ತದೆ ಎಂದು ತಿಳಿಸಿರುವ ಕೋರ್ಟ್, ಸರ್ಕಾರ ಏಕೆ ‘ಮೂಕ ಪ್ರೇಕ್ಷಕರಾಗಿ ಉಳಿದಿದೆ’ ಎಂದೂ ಪ್ರಶ್ನಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮುಖ್ಯವಾಹಿನಿ ಮಾಧ್ಯಮ ಅಥವಾ ಸಾಮಾಜಿಕ ಮಾಧ್ಯಮಗಳಲ್ಲಿನ ಈ ಭಾಷಣಗಳಿಗೆ ಯಾವುದೇ ತಡೆ ಇಲ್ಲವಾಗಿದೆ. ದ್ವೇಷ ಭಾಷಣವನ್ನು ಯಾರೇ ಮಾಡಿದರೂ ಅದು ಮುಂದುವರೆಯದಂತೆ ತಕ್ಷಣವೇ ಕ್ರಮವಹಿಸುವುದು (ಆಂಕರ್‌ಗಳ) ಕರ್ತವ್ಯವಾಗಿದೆ” ಎಂದು ಕೋರ್ಟ್ ಹೇಳಿದೆ.

ಕಳೆದ ವರ್ಷದಿಂದ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ಕೆ.ಎಂ.ಜೋಸೆಫ್, “ಪತ್ರಿಕಾ ಸ್ವಾತಂತ್ರ್ಯ ಮುಖ್ಯವಾಗಿದೆ. ಆದರೆ ನಮ್ಮದು ಅಮೆರಿಕದಂತೆ ತೀರ ಸ್ವತಂತ್ರವಲ್ಲ. ನಾವು ಎಲ್ಲಿಗೆ ಗೆರೆ ಎಳೆಯಬೇಕು ಎಂಬುದು ತಿಳಿದಿರಬೇಕು’’ ಎಂದು ಅಭಿಪ್ರಾಯಪಟ್ಟರು.

“ಯಾರನ್ನಾದರೂ ಕೊಲ್ಲುವ ರೀತಿಯಲ್ಲಿ ದ್ವೇಷದ ಭಾಷಣವು ಪದರಗಳನ್ನು ಹೊಂದಿದೆ. ನೀವು ನಿಧಾನವಾಗಿ ಕೊಲ್ಲಬಹುದು ಅಥವಾ ಬೇರೆ ರೀತಿಯಲ್ಲಿ ಕೊಲ್ಲಬಹುದು” ಎಂದು ಆತಂಕ ವ್ಯಕ್ತಪಡಿಸಿರುವ ನ್ಯಾಯಾಲಯ, “ದ್ವೇಷದ ಭಾಷಣವು ವೀಕ್ಷಕರಿಗೆ ಏಕೆ ಆಸಕ್ತಿದಾಯಕವಾಗಿದೆ” ಎಂದು ಪ್ರಶ್ನಿಸಿದೆ.

“ಸರ್ಕಾರವು ಪ್ರತಿಕೂಲವಾದ ನಿಲುವನ್ನು ತೆಗೆದುಕೊಳ್ಳಬಾರದು. ಆದರೆ ನ್ಯಾಯಾಲಯಕ್ಕೆ ಸಹಾಯ ಮಾಡಬೇಕು” ಎಂದಿರುವ ಕೋರ್ಟ್, “ಇದು ಕ್ಷುಲ್ಲಕ ವಿಷಯವೇ?” ಎಂದು ಕೇಳಿದೆ.

ದ್ವೇಷದ ಭಾಷಣವನ್ನು ತಡೆಯುವ ಕುರಿತು ಕಾನೂನು ಆಯೋಗದ ಶಿಫಾರಸುಗಳ ಸಂಬಂಧ ಕ್ರಮ ಜರುಗಿಸಲು ಉದ್ದೇಶಿಸಿದ್ದರೆ ಕೇಂದ್ರ ಸರ್ಕಾರವು ಸ್ಪಷ್ಟಪಡಿಸಬೇಕೆಂದು ನ್ಯಾಯಾಲಯ ಸೂಚಿಸಿದ್ದು, ನವೆಂಬರ್ 23 ರಂದು ಮುಂದಿನ ವಿಚಾರಣೆಯನ್ನು ನಡೆಸಲಿದೆ.

ಸುಪ್ರೀಂ ಕೋರ್ಟ್‌ನ ಸೂಚನೆಯಂತೆ ಕಾನೂನು ಆಯೋಗವು ನಿರ್ದಿಷ್ಟ ಕಾನೂನುಗಳನ್ನು ಶಿಫಾರಸು ಮಾಡುವ ವರದಿಯನ್ನು 2017ರಲ್ಲಿ ಸಲ್ಲಿಸಿತ್ತು. “ಭಾರತದ ಯಾವುದೇ ಕಾನೂನಿನಲ್ಲಿ ದ್ವೇಷದ ಭಾಷಣವನ್ನು ವ್ಯಾಖ್ಯಾನಿಸಲಾಗಿಲ್ಲ. ಆದರೆ ಕೆಲವು ಶಾಸನಗಳಲ್ಲಿನ ಕಾನೂನು ನಿಬಂಧನೆಗಳು ವಾಕ್ ಸ್ವಾತಂತ್ರ್ಯಕ್ಕೆ ಅವಕಾಶ ನೀಡಿದ್ದರೂ, ಕೆಲವು ಮಾದರಿಯ ಮಾತುಗಳನ್ನು ನಿಷೇಧಿಸುತ್ತವೆ” ಎಂದು ಆಯೋಗ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ಕೆಲವೊಮ್ಮೆ ನಿರಾಶವಾದಿಯಾಗುತ್ತೇನೆ ಮತ್ತು ಏಕಾಂಗಿ ಕೂಡಾ: ಜೈಲಿನಿಂದ ಉಮರ್ ಖಾಲಿದ್ ಪತ್ರ

ಆಯೋಗವು ಕರಡು ಶಾಸನವನ್ನೂ ರೂಪಿಸಿದೆ. ಹೊಸ ಸೆಕ್ಷನ್‌ಗಳಾದ 153C (ದ್ವೇಷಕ್ಕೆ ಪ್ರಚೋದನೆಯನ್ನು ನಿಷೇಧಿಸುವುದು) ಮತ್ತು 505A (ಕೆಲವು ಸಂದರ್ಭಗಳಲ್ಲಿ ಭಯ, ಎಚ್ಚರಿಕೆ ಅಥವಾ ಹಿಂಸಾಚಾರದ ಪ್ರಚೋದನೆಯನ್ನು ಉಂಟುಮಾಡುವುದು) ಸೇರಿಸಲು ಸೂಚಿಸಿದೆ.

ಟಿವಿ ಕಾರ್ಯಕ್ರಮಗಳು, ಸಂಜೆಯ ಚರ್ಚೆಗಳು ವೈರಲ್‌ ಆಗುತ್ತಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ. ಇಂಟರ್ನೆಟ್ ಕಂಪನಿಗಳು ದ್ವೇಷದ ಭಾಷಣವನ್ನು ನಿಗ್ರಹಿಸುವಲ್ಲಿ ಕ್ರಮ ಜರುಗಿಸುತ್ತಿಲ್ಲ ಎಂಬ ಟೀಕೆಗಳೂ ವ್ಯಕ್ತವಾಗುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...