Homeಕರ್ನಾಟಕಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

ಬೆಂಗಳೂರಿನಲ್ಲಿ 42 ಕ್ಕೂ ಹೆಚ್ಚು ಕೆರೆಗಳು ಮಾಯವಾಗಿವೆ: ಸದನದಲ್ಲಿ ಕಂದಾಯ ಸಚಿವ ಆರ್‌‌. ಅಶೋಕ್‌ ಮಾಹಿತಿ

- Advertisement -
- Advertisement -

ಬೆಂಗಳೂರಿನಲ್ಲಿ ಇದುವರೆಗೆ 42 ಕೆರೆಗಳು ಕಣ್ಮರೆಯಾಗಿದ್ದು, ಇವುಗಳಲ್ಲಿ ಹೆಚ್ಚಿನ ಕೆರೆಗಳನ್ನು ಕ್ಯಾಬಿನೆಟ್ ಅನುಮೋದನೆಯಿಲ್ಲದೆ ತುಂಬಿಸಲಾಗಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್. ಅಶೋಕ್‌. ಸೋಮವಾರ ನಡೆದ ರಾಜ್ಯ ವಿಧಾನಸಭೆಯ ಅಧಿವೇಶನದ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಹೆಚ್ಚಿನ ಕೆರೆಗಳ ಅತಿಕ್ರಮಣ ನಡೆದಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಹಲವೆಡೆ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಅವಾಂತರಗಳ ಕುರಿತು ವಿಧಾನಸಭೆಯಲ್ಲಿ 12 ಗಂಟೆಗಳ ಕಾಲ ನಡೆದ ಚರ್ಚೆಗೆ ಉತ್ತರಿಸಿದ ಅಶೋಕ್ ಅವರು, “1963 ರಿಂದ ಹಲವಾರು ಕಟ್ಟಡಗಳು ಮತ್ತು ಲೇಔಟ್‌ಗಳನ್ನು ಕೆರೆಗಳನ್ನು ಸಮತಟ್ಟು ಮಾಡಿ ಅವುಗಳ ಮೇಲೆ ನಿರ್ಮಿಸಲಾಗಿದ್ದು, ಹೀಗಾಗಿ ಅವು ಕಣ್ಮರೆಯಾಗುತ್ತಿವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

2 ರಿಂದ 4 ಸಾವಿರ ಮಿಲಿಯನ್ ಕ್ಯೂಬಿಕ್ ಅಡಿ (ಟಿಎಂಸಿಎಫ್‌ಟಿ) ನೀರು ಸಂಗ್ರಹವಾಗುತ್ತಿದ್ದ ಕೆರೆಗಳ ಮೇಲೆ ಲೇಔಟ್‌ಗಳನ್ನು ನಿರ್ಮಿಸಿರುವ ಪ್ರದೇಶಗಳ ಬಗ್ಗೆಯೂ ಕಂದಾಯ ಸಚಿವರು ತಿಳಿಸಿದ್ದಾರೆ. “ಕೆರೆ ಸಮತಟ್ಟು ಮಾಡಿರುವ ಈ ಪ್ರದೇಶಗಳಲ್ಲಿ ರಾಜಾಜಿನಗರ (1963), ಕೋರಮಂಗಲ (1965), ಡಾಲರ್ಸ್ ಕಾಲೋನಿ (1973), ದೊಮ್ಮಲೂರು (1977), HAL-I ಮತ್ತು HAL-II (1978), HSR I ಮತ್ತು II (1986) ಮತ್ತು ಇತರವುಗಳು ಸೇರಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಇನ್ನು ಮುಂದೆ ರಸ್ತೆ ಬದಿ ಪಾರ್ಕಿಂಗ್‌‌‌ಗೆ ಶುಲ್ಕ!

“ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಪ್ರತಿಪಕ್ಷ ನಾಯಕರಿಂದ ಬಂದಿರುವ ಹೇಳಿಕೆಗಳನ್ನು ನೋಡಿದರೆ ಬೊಮ್ಮಾಯಿ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ಸರ್ವನಾಶವಾಯಿತು ಎಂಬಂತೆ ಹೇಳುತ್ತಿದ್ದಾರೆ” ಎಂದು ಅಶೋಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಹಿಂದೆ ರಾಜ್ಯವನ್ನು ಆಳಿದ ಕಾಂಗ್ರೆಸ್ ಸರ್ಕಾರಗಳನ್ನು ಅವರು ದೂಷಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪ್ರತಿಪಕ್ಷದ ನಾಯಕರಾದ ಕೃಷ್ಟ ಬೈರೇಗೌಡ, ಕೆ.ಜೆ.ಜಾರ್ಜ್ ಮತ್ತು ರಾಮಲಿಂಗಾರೆಡ್ಡಿ, “ಇತಿಹಾಸವನ್ನು ನೆನಪಿಸಿಕೊಳ್ಳುವ ಮೂಲಕ ಆಡಳಿತಾರೂಢ ಸರ್ಕಾರ ತಮ್ಮ ವೈಫಲ್ಯಗಳನ್ನು ಮರೆಮಾಚಲು ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಈ ಮಧ್ಯೆ, ಬೆಂಗಳೂರಿನಲ್ಲಿ ಕೆರೆಗಳನ್ನು ಒತ್ತುವರಿ ಮಾಡಿಕೊಂಡಿರುವ ಕುರಿತು ಸಮಗ್ರ ತನಿಖೆಗೆ ಆದೇಶಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. “ಅಭಿವೃದ್ಧಿಯ ಹೆಸರಿನಲ್ಲಿ ಹಿಂದೆ ಮಾಡಿದ ತಪ್ಪುಗಳು ಮರುಕಳಿಸಬಾರದು. ಇದಕ್ಕಾಗಿ, ಈ ಭೂಮಿಯನ್ನು ಯಾವಾಗ ಮತ್ತು ಏಕೆ ಬಳಸಲಾಯಿತು ಎಂಬುದನ್ನು ತನಿಖೆ ಮಾಡುವುದು ಅವಶ್ಯಕ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

“ಯಾವ ರಾಜಕೀಯ ಶಕ್ತಿಗಳು ಕೆರೆಗಳ ಅತಿಕ್ರಮಣವನ್ನು ಖಚಿತಪಡಿಸಿದವು; ಯಾವ ಅಧಿಕಾರಿಗಳು ಕಾರ್ಯವನ್ನು ನಿರ್ವಹಿಸಿದರು; ಇತರರ ಹೆಸರಿನಲ್ಲಿ ಸಂಪತ್ತನ್ನು ಕೂಡಿಟ್ಟವರು ಯಾರು; 2007 ರ ನಂತರ ಯಾರು ಸಂಪತ್ತನ್ನು ಸಂಗ್ರಹಿಸಿದರು ಎಂಬುವುದನ್ನು ತನಿಖೆ ನಡೆಸುತ್ತೇವೆ” ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...