Homeದಲಿತ್ ಫೈಲ್ಸ್ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌...

ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌ ಭಾವಚಿತ್ರ

ವೆಂಕಟೇಶ್ವರನ ಫೋಟೋ ತೆರವು ಮಾಡಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಫೋಟೋ ಇರಿಸುತ್ತಿರುವ ವಿಡಿಯೊ ವೈರಲ್ ಆಗಿದೆ.

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿ ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಸಂತ್ರಸ್ತ ಬಾಲಕನ ಕುಟುಂಬವು ತನ್ನ ಮನೆಯಲ್ಲಿದ್ದ ದೇವರ ಫೋಟೋಗಳನ್ನು ತೆರವು ಮಾಡಿದೆ.

ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ  ಯುವಕರು, ಕುಟುಂಬಕ್ಕೆ ಅರಿವು ಮೂಡಿಸಿದ್ದಾರೆ. “ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಹೇಳಿದ್ದಾರೆ.

ಸಿಮೆಂಟ್‌ ಕಲ್ಲಿನಿಂದ ನಿರ್ಮಿಸಲಾದ, ಇನ್ನೂ ಕಾಂಕ್ರೀಟ್ ಕಾಣದಿರುವ ಮನೆಯಲ್ಲಿ ಪುಟ್ಟ ಬಾಲಕನೊಂದಿಗೆ ದಂಪತಿ ಶೋಭಾ ಹಾಗೂ ರಮೇಶ್ ವಾಸವಿದ್ದಾರೆ. ಸಂತ್ರಸ್ತ ಬಾಲಕನ ಮನೆಗೆ ತೆರಳಿದ ಸಂಘಟಕರು ಜಾಗೃತಿ ಮೂಡಿಸಿದ್ದಾರೆ.

ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟಿದ್ದಾರೆ. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದಾರೆ. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.

ಕುಟುಂಬದೊಂದಿಗೆ ಎಎಸ್‌ಎಸ್‌ಕೆಯ ಮುಖಂಡರಾದ ಸಂದೇಶ್‌ ಮಾತನಾಡಿ, “ರಾಮಕೃಷ್ಣ, ಭೂತಮ್ಮ, ಇನ್ಯಾರೂ ಇಲ್ಲ. ಅಂಬೇಡ್ಕರ್‌ ಒಬ್ಬರೇ ನಮಗೆ ದೇವರು. ನಿಮಗೆ ನ್ಯಾಯ ಸಿಕ್ಕಿದೆ ಎಂದರೆ ಅಂಬೇಡ್ಕರ್‌ ಕಾರಣ. ಅವರನ್ನು ಸ್ಮರಿಸಬೇಕು. ಮಕ್ಕಳಿಗೆ ಅವರ ಬಗ್ಗೆ ತಿಳಿಸಿಕೊಡಬೇಕೇ ಹೊರತು ದೇವರುಗಳ ಬಗ್ಗೆ ಅಲ್ಲ” ಎಂದು ತಿಳಿಸಿದ್ದಾರೆ.

“ನಿಮಗೆ ಎಲ್ಲರೂ ಸಹಾಯ ಮಾಡುತ್ತಾರೆ. ಹಾಗೆಂದು ಕಾನೂನು ಮೀರುವ ಕೆಲಸವನ್ನು ನಾವು ಮಾಡಬಾರದು” ಎಂದಿದ್ದಾರೆ.

ದೇವರಿಗೆ ಅಪವಿತ್ರವಾಗಿತೆಂದು ಆರೋಪಿಸಿ ಆ ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ ಹಾಕಿದ್ದರು. ಈ ಬಡ ಕುಟುಂಬಕ್ಕೆ ಅರವತ್ತು ಸಾವಿರ ರೂ. ದಂಡವನ್ನೂ ವಿಧಿಸಿದ್ದರು. ಗ್ರಾಮದ ದಲಿತ ಬಾಲಕ ದೇವರ ಮೆರವಣಿಗೆಯ ವೇಳೆ ದೇವರ ಕೋಲನ್ನು ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂದು ಆರೋಪಿಸಿ ಹೊಡೆಯಲು ಮುಂದಾಗಿದ್ದರು.

ಅಟ್ರಾಸಿಟಿ ಪ್ರಕರಣ ದಾಖಲು

ಸಾಮಾಜಿಕ ಬಹಿಷ್ಕಾರದ ಸುದ್ದಿ ವೈರಲ್ ಆದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಗ್ರಾಮದ ಸವರ್ಣೀಯ ಸಮುದಾಯಕ್ಕೆ ಸೇರಿದ ಜಿ.ನಾರಾಯಣಸ್ವಾಮಿ ಬಿನ್ ಗೋಪಾಲಪ್ಪ, ಜಿ.ರಮೇಶ್, ಗೋಪಾಲಪ್ಪ, ವೆಂಕಟೇಶಪ್ಪ, ಕೋಟೆಪ್ಪ, ನಾರಾಯಣಸ್ವಾಮಿ, ಚಲಪತಿ, ಮೋಹನ್ ರಾವ್‌, ಚಿನ್ನಯ್ಯ ವಿರುದ್ಧ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆಯ ಕಾಯ್ದೆ 1989 ಅಡಿ ಹಾಗೂ ಐಪಿಸಿ ಕಲಂ 143, 147, 148, 149 504, 506 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಳ್ಳೆಯ ಮಾಹಿತಿ ಅಸ್ಪೃಶ್ಯತೆ ಆಚರಣೆ ಮಾಡುವವರಿಗೆ ಕಾನೂನು ರೀತಿಯಲ್ಲೇ ಶಿಕ್ಷೆ ವಿಧಿಸಿದೆ.ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...