Homeದಲಿತ್ ಫೈಲ್ಸ್ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌...

ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌ ಭಾವಚಿತ್ರ

ವೆಂಕಟೇಶ್ವರನ ಫೋಟೋ ತೆರವು ಮಾಡಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಫೋಟೋ ಇರಿಸುತ್ತಿರುವ ವಿಡಿಯೊ ವೈರಲ್ ಆಗಿದೆ.

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿ ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಸಂತ್ರಸ್ತ ಬಾಲಕನ ಕುಟುಂಬವು ತನ್ನ ಮನೆಯಲ್ಲಿದ್ದ ದೇವರ ಫೋಟೋಗಳನ್ನು ತೆರವು ಮಾಡಿದೆ.

ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ  ಯುವಕರು, ಕುಟುಂಬಕ್ಕೆ ಅರಿವು ಮೂಡಿಸಿದ್ದಾರೆ. “ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಹೇಳಿದ್ದಾರೆ.

ಸಿಮೆಂಟ್‌ ಕಲ್ಲಿನಿಂದ ನಿರ್ಮಿಸಲಾದ, ಇನ್ನೂ ಕಾಂಕ್ರೀಟ್ ಕಾಣದಿರುವ ಮನೆಯಲ್ಲಿ ಪುಟ್ಟ ಬಾಲಕನೊಂದಿಗೆ ದಂಪತಿ ಶೋಭಾ ಹಾಗೂ ರಮೇಶ್ ವಾಸವಿದ್ದಾರೆ. ಸಂತ್ರಸ್ತ ಬಾಲಕನ ಮನೆಗೆ ತೆರಳಿದ ಸಂಘಟಕರು ಜಾಗೃತಿ ಮೂಡಿಸಿದ್ದಾರೆ.

ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟಿದ್ದಾರೆ. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದಾರೆ. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.

ಕುಟುಂಬದೊಂದಿಗೆ ಎಎಸ್‌ಎಸ್‌ಕೆಯ ಮುಖಂಡರಾದ ಸಂದೇಶ್‌ ಮಾತನಾಡಿ, “ರಾಮಕೃಷ್ಣ, ಭೂತಮ್ಮ, ಇನ್ಯಾರೂ ಇಲ್ಲ. ಅಂಬೇಡ್ಕರ್‌ ಒಬ್ಬರೇ ನಮಗೆ ದೇವರು. ನಿಮಗೆ ನ್ಯಾಯ ಸಿಕ್ಕಿದೆ ಎಂದರೆ ಅಂಬೇಡ್ಕರ್‌ ಕಾರಣ. ಅವರನ್ನು ಸ್ಮರಿಸಬೇಕು. ಮಕ್ಕಳಿಗೆ ಅವರ ಬಗ್ಗೆ ತಿಳಿಸಿಕೊಡಬೇಕೇ ಹೊರತು ದೇವರುಗಳ ಬಗ್ಗೆ ಅಲ್ಲ” ಎಂದು ತಿಳಿಸಿದ್ದಾರೆ.

“ನಿಮಗೆ ಎಲ್ಲರೂ ಸಹಾಯ ಮಾಡುತ್ತಾರೆ. ಹಾಗೆಂದು ಕಾನೂನು ಮೀರುವ ಕೆಲಸವನ್ನು ನಾವು ಮಾಡಬಾರದು” ಎಂದಿದ್ದಾರೆ.

ದೇವರಿಗೆ ಅಪವಿತ್ರವಾಗಿತೆಂದು ಆರೋಪಿಸಿ ಆ ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ ಹಾಕಿದ್ದರು. ಈ ಬಡ ಕುಟುಂಬಕ್ಕೆ ಅರವತ್ತು ಸಾವಿರ ರೂ. ದಂಡವನ್ನೂ ವಿಧಿಸಿದ್ದರು. ಗ್ರಾಮದ ದಲಿತ ಬಾಲಕ ದೇವರ ಮೆರವಣಿಗೆಯ ವೇಳೆ ದೇವರ ಕೋಲನ್ನು ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂದು ಆರೋಪಿಸಿ ಹೊಡೆಯಲು ಮುಂದಾಗಿದ್ದರು.

ಅಟ್ರಾಸಿಟಿ ಪ್ರಕರಣ ದಾಖಲು

ಸಾಮಾಜಿಕ ಬಹಿಷ್ಕಾರದ ಸುದ್ದಿ ವೈರಲ್ ಆದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಗ್ರಾಮದ ಸವರ್ಣೀಯ ಸಮುದಾಯಕ್ಕೆ ಸೇರಿದ ಜಿ.ನಾರಾಯಣಸ್ವಾಮಿ ಬಿನ್ ಗೋಪಾಲಪ್ಪ, ಜಿ.ರಮೇಶ್, ಗೋಪಾಲಪ್ಪ, ವೆಂಕಟೇಶಪ್ಪ, ಕೋಟೆಪ್ಪ, ನಾರಾಯಣಸ್ವಾಮಿ, ಚಲಪತಿ, ಮೋಹನ್ ರಾವ್‌, ಚಿನ್ನಯ್ಯ ವಿರುದ್ಧ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆಯ ಕಾಯ್ದೆ 1989 ಅಡಿ ಹಾಗೂ ಐಪಿಸಿ ಕಲಂ 143, 147, 148, 149 504, 506 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಳ್ಳೆಯ ಮಾಹಿತಿ ಅಸ್ಪೃಶ್ಯತೆ ಆಚರಣೆ ಮಾಡುವವರಿಗೆ ಕಾನೂನು ರೀತಿಯಲ್ಲೇ ಶಿಕ್ಷೆ ವಿಧಿಸಿದೆ.ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....