Homeದಲಿತ್ ಫೈಲ್ಸ್ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌...

ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌ ಭಾವಚಿತ್ರ

ವೆಂಕಟೇಶ್ವರನ ಫೋಟೋ ತೆರವು ಮಾಡಿ ಸಂವಿಧಾನಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಫೋಟೋ ಇರಿಸುತ್ತಿರುವ ವಿಡಿಯೊ ವೈರಲ್ ಆಗಿದೆ.

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿ ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಸಂತ್ರಸ್ತ ಬಾಲಕನ ಕುಟುಂಬವು ತನ್ನ ಮನೆಯಲ್ಲಿದ್ದ ದೇವರ ಫೋಟೋಗಳನ್ನು ತೆರವು ಮಾಡಿದೆ.

ಘಟನೆಯ ಬಳಿಕ ಸ್ಥಳಕ್ಕೆ ಧಾವಿಸಿದ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ  ಯುವಕರು, ಕುಟುಂಬಕ್ಕೆ ಅರಿವು ಮೂಡಿಸಿದ್ದಾರೆ. “ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಹೇಳಿದ್ದಾರೆ.

ಸಿಮೆಂಟ್‌ ಕಲ್ಲಿನಿಂದ ನಿರ್ಮಿಸಲಾದ, ಇನ್ನೂ ಕಾಂಕ್ರೀಟ್ ಕಾಣದಿರುವ ಮನೆಯಲ್ಲಿ ಪುಟ್ಟ ಬಾಲಕನೊಂದಿಗೆ ದಂಪತಿ ಶೋಭಾ ಹಾಗೂ ರಮೇಶ್ ವಾಸವಿದ್ದಾರೆ. ಸಂತ್ರಸ್ತ ಬಾಲಕನ ಮನೆಗೆ ತೆರಳಿದ ಸಂಘಟಕರು ಜಾಗೃತಿ ಮೂಡಿಸಿದ್ದಾರೆ.

ಮನೆಯಲ್ಲಿದ್ದ ವೆಂಕಟೇಶ್ವರನ ಫೋಟೋಗಳನ್ನು ತೆಗೆದ ಶೋಭಾ ದಂಪತಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ರವರ ಭಾವಚಿತ್ರ ಇಟ್ಟಿದ್ದಾರೆ. ಜೊತೆಗೆ ಬುದ್ಧನ ವಿಗ್ರಹವನ್ನು ಪಕ್ಕದಲ್ಲಿ ಇರಿಸಿದ್ದಾರೆ. ಫೋಟೋ ತೆರವಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗುತ್ತಿದೆ.

ಕುಟುಂಬದೊಂದಿಗೆ ಎಎಸ್‌ಎಸ್‌ಕೆಯ ಮುಖಂಡರಾದ ಸಂದೇಶ್‌ ಮಾತನಾಡಿ, “ರಾಮಕೃಷ್ಣ, ಭೂತಮ್ಮ, ಇನ್ಯಾರೂ ಇಲ್ಲ. ಅಂಬೇಡ್ಕರ್‌ ಒಬ್ಬರೇ ನಮಗೆ ದೇವರು. ನಿಮಗೆ ನ್ಯಾಯ ಸಿಕ್ಕಿದೆ ಎಂದರೆ ಅಂಬೇಡ್ಕರ್‌ ಕಾರಣ. ಅವರನ್ನು ಸ್ಮರಿಸಬೇಕು. ಮಕ್ಕಳಿಗೆ ಅವರ ಬಗ್ಗೆ ತಿಳಿಸಿಕೊಡಬೇಕೇ ಹೊರತು ದೇವರುಗಳ ಬಗ್ಗೆ ಅಲ್ಲ” ಎಂದು ತಿಳಿಸಿದ್ದಾರೆ.

“ನಿಮಗೆ ಎಲ್ಲರೂ ಸಹಾಯ ಮಾಡುತ್ತಾರೆ. ಹಾಗೆಂದು ಕಾನೂನು ಮೀರುವ ಕೆಲಸವನ್ನು ನಾವು ಮಾಡಬಾರದು” ಎಂದಿದ್ದಾರೆ.

ದೇವರಿಗೆ ಅಪವಿತ್ರವಾಗಿತೆಂದು ಆರೋಪಿಸಿ ಆ ಬಾಲಕನ ಕುಟುಂಬವನ್ನು ಊರಿನ ಸವರ್ಣೀಯರು ಬಹಿಷ್ಕಾರ ಹಾಕಿದ್ದರು. ಈ ಬಡ ಕುಟುಂಬಕ್ಕೆ ಅರವತ್ತು ಸಾವಿರ ರೂ. ದಂಡವನ್ನೂ ವಿಧಿಸಿದ್ದರು. ಗ್ರಾಮದ ದಲಿತ ಬಾಲಕ ದೇವರ ಮೆರವಣಿಗೆಯ ವೇಳೆ ದೇವರ ಕೋಲನ್ನು ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂದು ಆರೋಪಿಸಿ ಹೊಡೆಯಲು ಮುಂದಾಗಿದ್ದರು.

ಅಟ್ರಾಸಿಟಿ ಪ್ರಕರಣ ದಾಖಲು

ಸಾಮಾಜಿಕ ಬಹಿಷ್ಕಾರದ ಸುದ್ದಿ ವೈರಲ್ ಆದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಗ್ರಾಮದ ಸವರ್ಣೀಯ ಸಮುದಾಯಕ್ಕೆ ಸೇರಿದ ಜಿ.ನಾರಾಯಣಸ್ವಾಮಿ ಬಿನ್ ಗೋಪಾಲಪ್ಪ, ಜಿ.ರಮೇಶ್, ಗೋಪಾಲಪ್ಪ, ವೆಂಕಟೇಶಪ್ಪ, ಕೋಟೆಪ್ಪ, ನಾರಾಯಣಸ್ವಾಮಿ, ಚಲಪತಿ, ಮೋಹನ್ ರಾವ್‌, ಚಿನ್ನಯ್ಯ ವಿರುದ್ಧ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆಯ ಕಾಯ್ದೆ 1989 ಅಡಿ ಹಾಗೂ ಐಪಿಸಿ ಕಲಂ 143, 147, 148, 149 504, 506 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಒಳ್ಳೆಯ ಮಾಹಿತಿ ಅಸ್ಪೃಶ್ಯತೆ ಆಚರಣೆ ಮಾಡುವವರಿಗೆ ಕಾನೂನು ರೀತಿಯಲ್ಲೇ ಶಿಕ್ಷೆ ವಿಧಿಸಿದೆ.ಜೈ ಭೀಮ್

LEAVE A REPLY

Please enter your comment!
Please enter your name here

- Advertisment -

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...