Homeಕರ್ನಾಟಕಈಶ್ವರಪ್ಪ ಸಿಎಂ ಆಗ್ತಾರಾ? ಸಾರಾ ಮಹೇಶ್ ಭೇಟಿ ತೆರೆದಿಡುತ್ತಿರೊ ಹೊಸ ಚರ್ಚೆ!

ಈಶ್ವರಪ್ಪ ಸಿಎಂ ಆಗ್ತಾರಾ? ಸಾರಾ ಮಹೇಶ್ ಭೇಟಿ ತೆರೆದಿಡುತ್ತಿರೊ ಹೊಸ ಚರ್ಚೆ!

- Advertisement -
- Advertisement -

ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ. ಸರ್ಕಾರ ಉಳಿದೆ ಉಳಿಯುತ್ತೆ, ವಿಶ್ವಾಸಮತ ಯಾಚನೆ ಮಾಡುತ್ತೇನೆ ಅನ್ನೊ ಕಾನ್ಫಿಡೆನ್ಸಿನಲ್ಲಿ ಕುಮಾರಸ್ವಾಮಿ ಮಾತಾಡುತ್ತಿದ್ದರೆ, ಅತ್ತ ಬಿಜೆಪಿ ಅದಾಗಲೆ ಸಚಿವ ಸಂಪುಟದ ಲಿಸ್ಟನ್ನೆ ತಯಾರಿ ಮಾಡಿಕೊಂಡು ಕೂತ ವರ್ತಮಾನ ಕೇಳಿಬರುತ್ತಿದೆ.

ಈ ನಡುವೆ ಜೆಡಿಎಸ್.ನ ಸಾರಾ ಮಾಹೇಶ್ ನಿನ್ನೆ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಮತ್ತು ಈಶ್ವರಪ್ಪರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಯಾಕೆಂದರೆ ಸಾರಾ ಮಹೇಶ್ ಕೇವಲ ಜೆಡಿಎಸ್ ಪಕ್ಷದ ಮಾಮೂಲಿ ಶಾಸಕರಷ್ಟೆ ಅಲ್ಲ, ಕುಮಾರಸ್ವಾಮಿ ಅತ್ಯಾಪ್ತ. ಕುಮಾರಸ್ವಾಮಿಯ ಅಷ್ಟೂ ಫೈನಾನ್ಷಿಯಲ್ ಬೇಕು ಬೇಡಗಳನ್ನು ಈಡೇರಿಸುತ್ತಿರೋದು ಇದೇ ಮಹೇಶ್. ಹಾಗಾಗಿ ಸರ್ಕಾರದ ಆಡಳಿತದಲ್ಲಿ ಸಾರಾ ಮಹೇಶ್ ವಿಪರೀತ ಹಸ್ತಕ್ಷೇಪ ಮಾಡುತ್ತಿರುವ ಅರೋಪಗಳೂ ಕೇಳಿಬಂದಿದ್ದವು.

ಈಗ ಅತೃಪ್ತ ಅವಾಂತರಿಯಾಗಿ ಬಾಂಬೆ ಸೇರಿಕೊಂಡಿರುವ ಎಚ್.ವಿಶ್ವನಾಥ್ ಗೆ ಇರುವ ಅಸಮಾಧಾನಗಳಲ್ಲಿ ಸಾರಾ ಫ್ಯಾಕ್ಟರ್ ಕೂಡಾ ಒಂದು. ಅಂಥಾ ವ್ಯಕ್ತಿ ಈ ಸಂದರ್ಭದಲ್ಲಿ ಬಿಜೆಪಿ ನಾಯಕರನ್ನು ಭೇಟಿ ಆಗಿರುವುದರ ಹಿಂದೆ ಒಂದು ರಾಜಕೀಯ ಲೆಕ್ಕಾಚಾರ ಇರಲೇಬೇಕಲ್ಲವಾ?

ಆ ಭೇಟಿಯನ್ನು ಅರ್ಥೈಸುವ ಹೊಸ ಚರ್ಚೆಯೊಂದು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಮಂತ್ರಿ ಕಂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾರೆ ಕುದ್ದಾಗಿ ಈ ಆಪರೇಷನ್ ಹಿಂದೆ ಕೆಲಸ ಮಾಡುತ್ತಿರೋದ್ರಿಂದ ಹೇಗೂ ಈ ಮೈತ್ರಿ ಸರ್ಕಾರ ಉಳಿಯಲಾರದು ಎಂಬ ತೀರ್ಮಾನಕ್ಕೆ ಬಂದಿರುವ ದೇವೇಗೌಡರು ಇದೀಗ ಹೊಸ ದಾಳ ಉರುಳಿಸಿದ್ದಾರೆ ಎನ್ನುತ್ತಿದೆ ಈ ವಾದ.

ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೂ, ಹಿಂದೆ ತಮ್ಮ ಜೊತೆ ಜಟಾಪಟಿ ಮಾಡಿಕೊಂಡಿದ್ದ ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ದೂರ ಇಡುವ ಸಲುವಾಗಿ ಈಶ್ವರಪ್ಪರನ್ನು ಸಿಎಂ ಮಾಡುವ ಪ್ರಸ್ತಾಪವನ್ನು ಗೌಡರು ಚಲಾವಣೆಗೆ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ. ಈಶ್ವರಪ್ಪ ಸಿಎಂ ಆಗುವುದಾದರೆ, ಜೆಡಿಎಸ್ ಪಕ್ಷವು ಬಿಜೆಪಿಗೆ ಬಾಹ್ಯ ಬೆಂಬಲ ನೀಡುತ್ತದೆ ಎಂಬ ಸಂದೇಶವನ್ನು ತಲುಪಿಸುವುದಕ್ಕೆಂದೆ ಸಾರಾ ಮಹೇಶ್ ಮುರಳೀಧರ್ ರಾವ ಮತ್ತು ಈಶ್ವರಪ್ಪರನ್ನು ಭೇಟಿಯಾಗಿದ್ದು ಎನ್ನಲಾಗುತ್ತಿದೆ. ಆ ಭೇಟಿಯ ಬೆನ್ನಲ್ಲೇ ಮುರಳೀಧರ್ ರಾವ್ ಅತ್ತ ಹೈದ್ರಾಬಾದ್ ಸೇರಿಕೊಂಡರೆ, ಇತ್ತ ಈಶ್ವರಪ್ಪ ಯಾರ ಸಂಪರ್ಕಕ್ಕು ನಿಲುಕದೆ ಇರುವುದು ಯಡ್ಯುರಪ್ಪನವರನ್ನು ತಬ್ಬಿಬ್ಬಾಗುವಂತೆ ಮಾಡಿದೆ ಅನ್ನೋದು ಲೇಟೆಸ್ಟ್ ವರ್ತಮಾನ.

ಈ ಹಿಂದೆ ಟ್ವೆಂಟಿ ಟ್ವೆಂಟಿ ಸರ್ಕಾರದಲ್ಲಿ ಜೆಡಿಎಸ್ ಮಾಡಿದ್ದ ನಂಬಿಕೆದ್ರೋಹವನ್ನು ಮರೆತಿಲ್ಲದ ಬಿಜೆಪಿ ಸುತಾರಾಂ ದೇವೆಗೌಡರ ಈ ಪ್ರಸ್ತಾಪವನ್ನು ಒಪ್ಪೋದಿಲ್ಲ ಎಂದು ಒಂದು ಬಣ ಹೇಳಿದರೆ, ಪಕ್ಷದೊಳಗೇ ಯಡಿಯೂರಪ್ಪಗೆ ಸಿಎಂ ಸೀಟು ತಪ್ಪಿಸಬೇಕೆಂದು ತಂತ್ರ ಹೂಡಿರುವ ಮತ್ತೊಂದು ಬಣ, ಶಾಸಕರ ರಾಜೀನಾಮೆ-ಅನರ್ಹತೆ, ಸ್ಪೀಕರ್, ಸುಪ್ರಿಂ ಕೋರ್ಟ್ ಜಂಜಡ, ಅವರಿಗೆ ಮಂತ್ರಿಗಿರಿ ಕೊಡುವ ಇಕ್ಕಟ್ಟಿಗಿಂತ ಇದೇ ವಾಸಿ ಎಂದು ವಾದಿಸುತ್ತಿರೋದಾಗಿ ಕೇಳಿಬಂದಿದೆ.

ಕರ್ನಾಟಕದ ಪ್ರಸ್ತುತ ರಾಜಕೀಯ ಸನ್ನಿವೇಶದಲ್ಲಿ ಯಾವುದನ್ನೂ ತಳ್ಳಿ ಹಾಕುವಂತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...