Homeಮುಖಪುಟಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

- Advertisement -
- Advertisement -

ಪೇ ಸಿಎಂ ಅಭಿಯಾನದ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಮುಜುಗರ ತಂದಿಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಂಧನವನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರು, ನಮ್ಮ ಶಾಸಕರೆಲ್ಲರೂ ಸೇರಿ ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿಗಳು ಪೋಸ್ಟರ್ ವಿಚಾರಕ್ಕೆ ಇಷ್ಟು ತಲೆ ಕೆಡಿಸಿಕೊಂಡು ಗಾಬರಿಯಾಗಿರುವುದು ಏಕೆ? ಈ ಪೋಸ್ಟರ್ ಅಂಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದು ಏಕೆ? ಬಿಜೆಪಿ ಅವರು ನಮ್ಮ ಬಗ್ಗೆಯೂ ಕ್ಯೂಆರ್ ಕೋಡ್ ಹಾಕಿದ್ದಾರೆ. ನಾನು ವಿಚಾರಣೆಗೆ ಹೋದ ಸಮಯದಲ್ಲಿ ನಾನು ಕಂಬಿ ಹಿಂದೆ ಇರುವಂತೆ ಮಾಧ್ಯಮಗಳು ಫೋಟೋ ಹಾಕಿದ್ದರು. ಹಾಗೆಂದು ನಾನು ಅವರ ವಿರುದ್ಧ ದೂರು ನೀಡಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜಕೀಯದಲ್ಲಿ ಇರುವವರನ್ನು ಜನ ಪ್ರಶ್ನಿಸುವುದು, ಟೀಕಿಸುವುದು ಸಹಜ. ಅಧಿಕಾರದಲ್ಲಿ ಇರುವವರು ಇದನ್ನು ಜೀರ್ಣಿಸಿಕೊಳ್ಳಬೇಕು. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ನಮ್ಮ ಅಭಿಯಾನದಲ್ಲಿ 8 ಸಾವಿರಕ್ಕೂ ಹೆಚ್ಚು ಮಂದಿ, ನಾವು ಭ್ರಷ್ಟಾಚಾರಕ್ಕೆ ಬಲಿಯಾಗಿದ್ದೇವೆ ಎಂದು ತಿಳಿಸಿದ್ದಾರೆ. ಹೀಗಾಗಿ ಪಕ್ಷದ ವತಿಯಿಂದ ನಾವೇ ಟೋಲ್ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಲು ಹೇಳಿದ್ದೆವು ಎಂದು ತಿಳಿಸಿದ್ದಾರೆ.

ನಮ್ಮ ವಿರುದ್ಧ ಟ್ವೀಟ್ ಮಾಡಿದವರನ್ನೂ ಬಂಧಿಸಿ: ಸಿದ್ದರಾಮಯ್ಯ ಆಗ್ರಹ

“ನ್ಯಾಯ ಎಲ್ಲರಿಗೂ ಒಂದೇ ಇರಬೇಕು. ಅವರ ಬಗ್ಗೆ ಪೋಸ್ಟರ್ ಅಂಟಿಸಿದ್ದಾರೆ ಅನ್ನೋ ಕಾರಣಕ್ಕೆ ನಮ್ಮವರ ಬಂಧನವಾದರೆ, ನಮ್ಮವಿರುದ್ಧ ಟ್ವಿಟ್ ಮಾಡಿರುವವರನ್ನೂ ಅರೆಸ್ಟ್ ಮಾಡಿಸಿ’ ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕಾಂಗ್ರೆಸ್ ಪಕ್ಷದಿಂದ 40% ಕಮಿಷನ್ ಆಂದೋಲನ ನಡೆಯುತ್ತಿದೆ. ನಾನು, ಡಿಕೆಶಿ, ಹರಿಪ್ರಸಾದ್ ಎಲ್ಲರೂ ಆಂದೋಲನ ಮಾಡಿದ್ದೇವೆ. ಅದರ ಅಂಗವಾಗಿ ನಿನ್ನೆ ನಮ್ಮ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದಾರೆ. ಇವೆಲ್ಲಾ ತಪ್ಪು ಕೆಲಸವೇ? ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋದು ತಪ್ಪಾ? ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತೋದು ತಪ್ಪಾ?’ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯವರು ಸುಳ್ಳು ಆರೋಪ ಮಾಡಿದ್ದಾರೆ. ನಮ್ಮ ಬಗ್ಗೆಯೂ ‘ಯಾರಿಗೂ ಬೇಡವಾದವರು’ ಅಂತ ಪೋಸ್ಟ‌ ಅಂಟಿಸಿದ್ದಾರೆ ಅಲ್ವಾ, ಹೀಗಿದ್ದ ಮೇಲೆ ಅವರನ್ನು ಯಾಕೆ ಅರೆಸ್ಟ್ ಮಾಡಿಲ್ಲ?” ಎಂದು ಸಿದ್ದರಾಮಯ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

“ನಮ್ಮ ಸಾಮಾಜಿಕ ಜಾಲತಾಣ ವಿಭಾಗದ ಮಾಜಿ ಅಧ್ಯಕ್ಷ ನಾಯ್ಡು ಅವರನ್ನು ರಾತ್ರಿ ಬಂಧನ ಮಾಡಿದ್ದಾರೆ. ಅರ್ಧ ರಾತ್ರಿ ಕಾರ್ಯಾಚರಣೆ ಮಾಡಲು ಅವರೇನು ಕೊಲೆ ಅಥವಾ ಕಳ್ಳತನ ಮಾಡಿದ್ರಾ? ಇವರ ಮೇಲೆ ಕ್ರಮ ತೆಗೆದುಕೊಳ್ಳುವ ಸರ್ಕಾರದವರು ತೆಲಂಗಾಣದಲ್ಲಿ ಪೋಸ್ಟರ್ ಅಂಟಿಸಿದ್ದವರ ವಿರುದ್ಧ ಏನು ಶಿಸ್ತುಕ್ರಮ ಜರುಗಿಸಿದ್ದಾರೆಂದು ಹೇಳಲಿ” ಎಂದು ವಿಪಕ್ಷ ನಾಯಕರು ಕಿಡಿ ಕಾರಿದರು.

‘ಭ್ರಷ್ಟಾಚಾರದ ವಿಚಾರದಲ್ಲಿ ಇಷ್ಟೊಂದು ಸೀರಿಯಸ್ ಆಗಿ ಮಾತನಾಡುವ ಇವರು, ಕೆಂಪಣ್ಣ ಪತ್ರ ಬರೆದು ಇಷ್ಟು ದಿನವಾದರೂ ಯಾಕೆ ತನಿಖೆ ಮಾಡಿಸಲಿಲ್ಲ? ಯಡಿಯೂರಪ್ಪನವರ ಆಪ್ತನ ಮೆಲೆ ದಾಳಿಯಾದಾಗ ದಾಖಲೆ ಸಿಕ್ಕಿತ್ತು, ಆವಾಗ ತನಿಖೆ ಮಾಡಿಸಬೇಕಿತ್ತಲ್ವಾ? ಇದು ಯಾವುದೂ ಜನರಿಗೆ ತಲುಪದಂತೆ ಸದ್ದಿಲ್ಲದೆ ಮುಚ್ಚಿ ಹಾಕುವ ಕೆಲಸ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಪೇ ಸಿಎಂ ಪೋಸ್ಟರ್ ಅಂಟಿಸಿದ ಆರೋಪದ ಮೇಲೆ ಪೊಲೀಸರು ಮಧ್ಯರಾತ್ರಿ ಕಾಂಗ್ರೆಸ್ ಕಾರ್ಯಕರ್ತರಾದ ಗಗನ್ ಯಾದವ್ ಮತ್ತು ಬಿ.ಆರ್ ನಾಯ್ಡು ಎಂಬುವವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...