Homeಮುಖಪುಟಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ: ಡಿ.ಕೆ ಶಿವಕುಮಾರ್

- Advertisement -
- Advertisement -

ಪೇ ಸಿಎಂ ಅಭಿಯಾನದ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಮುಜುಗರ ತಂದಿಟ್ಟಿದ್ದ ಕಾಂಗ್ರೆಸ್ ಕಾರ್ಯಕರ್ತರ ಬಂಧನವನ್ನು ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ರವರು, ನಮ್ಮ ಶಾಸಕರೆಲ್ಲರೂ ಸೇರಿ ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಮುಖ್ಯಮಂತ್ರಿಗಳು ಪೋಸ್ಟರ್ ವಿಚಾರಕ್ಕೆ ಇಷ್ಟು ತಲೆ ಕೆಡಿಸಿಕೊಂಡು ಗಾಬರಿಯಾಗಿರುವುದು ಏಕೆ? ಈ ಪೋಸ್ಟರ್ ಅಂಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದು ಏಕೆ? ಬಿಜೆಪಿ ಅವರು ನಮ್ಮ ಬಗ್ಗೆಯೂ ಕ್ಯೂಆರ್ ಕೋಡ್ ಹಾಕಿದ್ದಾರೆ. ನಾನು ವಿಚಾರಣೆಗೆ ಹೋದ ಸಮಯದಲ್ಲಿ ನಾನು ಕಂಬಿ ಹಿಂದೆ ಇರುವಂತೆ ಮಾಧ್ಯಮಗಳು ಫೋಟೋ ಹಾಕಿದ್ದರು. ಹಾಗೆಂದು ನಾನು ಅವರ ವಿರುದ್ಧ ದೂರು ನೀಡಲು ಸಾಧ್ಯವೇ? ಎಂದು ಅವರು ಪ್ರಶ್ನಿಸಿದ್ದಾರೆ.

ರಾಜಕೀಯದಲ್ಲಿ ಇರುವವರನ್ನು ಜನ ಪ್ರಶ್ನಿಸುವುದು, ಟೀಕಿಸುವುದು ಸಹಜ. ಅಧಿಕಾರದಲ್ಲಿ ಇರುವವರು ಇದನ್ನು ಜೀರ್ಣಿಸಿಕೊಳ್ಳಬೇಕು. ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ನಮ್ಮ ಅಭಿಯಾನದಲ್ಲಿ 8 ಸಾವಿರಕ್ಕೂ ಹೆಚ್ಚು ಮಂದಿ, ನಾವು ಭ್ರಷ್ಟಾಚಾರಕ್ಕೆ ಬಲಿಯಾಗಿದ್ದೇವೆ ಎಂದು ತಿಳಿಸಿದ್ದಾರೆ. ಹೀಗಾಗಿ ಪಕ್ಷದ ವತಿಯಿಂದ ನಾವೇ ಟೋಲ್ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಲು ಹೇಳಿದ್ದೆವು ಎಂದು ತಿಳಿಸಿದ್ದಾರೆ.

ನಮ್ಮ ವಿರುದ್ಧ ಟ್ವೀಟ್ ಮಾಡಿದವರನ್ನೂ ಬಂಧಿಸಿ: ಸಿದ್ದರಾಮಯ್ಯ ಆಗ್ರಹ

“ನ್ಯಾಯ ಎಲ್ಲರಿಗೂ ಒಂದೇ ಇರಬೇಕು. ಅವರ ಬಗ್ಗೆ ಪೋಸ್ಟರ್ ಅಂಟಿಸಿದ್ದಾರೆ ಅನ್ನೋ ಕಾರಣಕ್ಕೆ ನಮ್ಮವರ ಬಂಧನವಾದರೆ, ನಮ್ಮವಿರುದ್ಧ ಟ್ವಿಟ್ ಮಾಡಿರುವವರನ್ನೂ ಅರೆಸ್ಟ್ ಮಾಡಿಸಿ’ ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕಾಂಗ್ರೆಸ್ ಪಕ್ಷದಿಂದ 40% ಕಮಿಷನ್ ಆಂದೋಲನ ನಡೆಯುತ್ತಿದೆ. ನಾನು, ಡಿಕೆಶಿ, ಹರಿಪ್ರಸಾದ್ ಎಲ್ಲರೂ ಆಂದೋಲನ ಮಾಡಿದ್ದೇವೆ. ಅದರ ಅಂಗವಾಗಿ ನಿನ್ನೆ ನಮ್ಮ ಕಾರ್ಯಕರ್ತರು ಪೋಸ್ಟರ್ ಅಂಟಿಸಿದ್ದಾರೆ. ಇವೆಲ್ಲಾ ತಪ್ಪು ಕೆಲಸವೇ? ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋದು ತಪ್ಪಾ? ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತೋದು ತಪ್ಪಾ?’ ಎಂದು ಪ್ರಶ್ನಿಸಿದ್ದಾರೆ.

“ಬಿಜೆಪಿಯವರು ಸುಳ್ಳು ಆರೋಪ ಮಾಡಿದ್ದಾರೆ. ನಮ್ಮ ಬಗ್ಗೆಯೂ ‘ಯಾರಿಗೂ ಬೇಡವಾದವರು’ ಅಂತ ಪೋಸ್ಟ‌ ಅಂಟಿಸಿದ್ದಾರೆ ಅಲ್ವಾ, ಹೀಗಿದ್ದ ಮೇಲೆ ಅವರನ್ನು ಯಾಕೆ ಅರೆಸ್ಟ್ ಮಾಡಿಲ್ಲ?” ಎಂದು ಸಿದ್ದರಾಮಯ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

“ನಮ್ಮ ಸಾಮಾಜಿಕ ಜಾಲತಾಣ ವಿಭಾಗದ ಮಾಜಿ ಅಧ್ಯಕ್ಷ ನಾಯ್ಡು ಅವರನ್ನು ರಾತ್ರಿ ಬಂಧನ ಮಾಡಿದ್ದಾರೆ. ಅರ್ಧ ರಾತ್ರಿ ಕಾರ್ಯಾಚರಣೆ ಮಾಡಲು ಅವರೇನು ಕೊಲೆ ಅಥವಾ ಕಳ್ಳತನ ಮಾಡಿದ್ರಾ? ಇವರ ಮೇಲೆ ಕ್ರಮ ತೆಗೆದುಕೊಳ್ಳುವ ಸರ್ಕಾರದವರು ತೆಲಂಗಾಣದಲ್ಲಿ ಪೋಸ್ಟರ್ ಅಂಟಿಸಿದ್ದವರ ವಿರುದ್ಧ ಏನು ಶಿಸ್ತುಕ್ರಮ ಜರುಗಿಸಿದ್ದಾರೆಂದು ಹೇಳಲಿ” ಎಂದು ವಿಪಕ್ಷ ನಾಯಕರು ಕಿಡಿ ಕಾರಿದರು.

‘ಭ್ರಷ್ಟಾಚಾರದ ವಿಚಾರದಲ್ಲಿ ಇಷ್ಟೊಂದು ಸೀರಿಯಸ್ ಆಗಿ ಮಾತನಾಡುವ ಇವರು, ಕೆಂಪಣ್ಣ ಪತ್ರ ಬರೆದು ಇಷ್ಟು ದಿನವಾದರೂ ಯಾಕೆ ತನಿಖೆ ಮಾಡಿಸಲಿಲ್ಲ? ಯಡಿಯೂರಪ್ಪನವರ ಆಪ್ತನ ಮೆಲೆ ದಾಳಿಯಾದಾಗ ದಾಖಲೆ ಸಿಕ್ಕಿತ್ತು, ಆವಾಗ ತನಿಖೆ ಮಾಡಿಸಬೇಕಿತ್ತಲ್ವಾ? ಇದು ಯಾವುದೂ ಜನರಿಗೆ ತಲುಪದಂತೆ ಸದ್ದಿಲ್ಲದೆ ಮುಚ್ಚಿ ಹಾಕುವ ಕೆಲಸ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಪೇ ಸಿಎಂ ಪೋಸ್ಟರ್ ಅಂಟಿಸಿದ ಆರೋಪದ ಮೇಲೆ ಪೊಲೀಸರು ಮಧ್ಯರಾತ್ರಿ ಕಾಂಗ್ರೆಸ್ ಕಾರ್ಯಕರ್ತರಾದ ಗಗನ್ ಯಾದವ್ ಮತ್ತು ಬಿ.ಆರ್ ನಾಯ್ಡು ಎಂಬುವವರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ‘ಪೇಸಿಎಂ’ ಪೋಸ್ಟರ್‌ಗಳು ವೈರಲ್‌; ಸ್ಕ್ಯಾನ್‌ ಮಾಡಿದರೆ ‘40% ವೆಬ್‌ಸೈಟ್‌’ ಓಪನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...