Homeಅಂಕಣಗಳುಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

- Advertisement -
- Advertisement -

ಸಂತೆಗೆ ಹೋದ ಮಾದಣ್ಣ ಮಡದಿ ಹೇಳಿದ ಸಾಮಾನುಗಳನ್ನ ಬಿಟ್ಟು ಬೆಕ್ಕಿನ ಮರಿ ತಂದನಂತಲ್ಲಾ. ಅದನ್ನು ನೋಡಿದ ಮದಡಿ, “ಅಯ್ಯೊ ನಿನ್ನ ಮನಿಮಾರತ್ತ, ಮನಿಗೆ ಬೇಕಾದ ಸಾಮಾನು ತರದು ಬುಟ್ಟು ಕೊತ್ತಿಮರಿ ತಂದಿದ್ದಿಯಲ್ಲಾ, ನಿನ್ನ ಮರುಳು ಬುದ್ದಿಗೇನೆಳನಾ” ಎಂದು ಜಗಳಾ ತೆಗೆದಳಂತಲ್ಲಾ. ಆಗ ಬೆಕ್ಕಿನ ತಲೆ ಸವರಿದ ಮಾದಣ್ಣ, “ಮನೆಲಿ ಇಲಿ ಜಾಸ್ತಿಯಾಗ್ಯವೆ” ಅಂತ ನೀನೆ ಹೇಳಿದಲ್ಲಾ ಎಂದಾಗ, “ಇಲಿ ಜಾಸ್ತಿಯಾಗ್ಯವೆ ಸರಿ ಇಲಿ ಅವುಸ್ತಿ ತರಕ್ಕೇನಾಗಿತ್ತು? ಈ ಬೆಕ್ಕಿನ ಮರಿ ಸಾಕಕ್ಕೆ ಹಾಲು ಬೇಕು, ಹಾಲು ಬೇಕಾದ್ರೆ ಹಸ ತರಬೇಕು, ಅದಕೆ ಹುಲ್ಲು ಹಾಕಬೇಕು, ಸಗಣಿ ತಗಿಬೇಕು, ಗಂಜಲ ಬಳಿಬೇಕು, ಇದನ್ಯಲ್ಲ ಮಾಡೋಳು ನಾನು” ಎಂದು ಗೊಣಗುತ್ತಿರುವಾಗ ಮಾದಣ್ಣ, ಬೆಕ್ಕಿನ ಮರಿಯನ್ನ ವಿವಿಧ ಭಂಗಿಯಲ್ಲಿ ನಿಲ್ಲಿಸಿ ’ವಾಹ್ ಏನು ಭಂಗಿ, ಆ ಕಣ್ಣೇನು, ಆ ಮೀಸೆಯೇನು’ ಎಂದು ವರ್ಣಿಸುತ್ತ ಕಣ್ಣಿನಲ್ಲೇ ಫೋಟೋ ಕ್ಲಿಕ್ಕಿಸುತ್ತಿದ್ದನಂತಲ್ಲಾ, ಥೊತ್ತೇರಿ.

*****

ಈ ಬೆಕ್ಕಿನ ಕತೆ ಟೈಮಿನಲ್ಲೇ ನೆನಪಿಗೆ ಬಂದಿದ್ದೇನೆಂದರೆ, ಮುಸ್ಲಿಮ್ ದೊರೆಗಳು ಈ ದೇಶಕ್ಕೆ ದಾಳಿಯ ಮುಖಾಂತರ ಬಂದವರು; ಧನ ಕನಕ ವಸ್ತುಗಳನ್ನು ಲೂಟಿ ಮಾಡುವ ಮನಸ್ಸಿನಿಂದ ರೂಪುಗೊಂಡದ್ದು ದಾಳಿ. ಹಾಗೆ ಬಂದ ಮುಸ್ಲಿಮರು ದಾಳಿ ಮಾಡಿಕೊಂಡು ಓಡಲಿಲ್ಲ, ಬದಲಿಗೆ ಇಲ್ಲೇ ನಿಂತರು. ಆಗ ನಮ್ಮ ಪುರೋಹಿತಶಾಹಿಗಳು ದೇವಸ್ಥಾನದ ಗರ್ಭಗುಡಿಯಲ್ಲಿ ಭದ್ರವಾಗಿ ಕುಳಿತು ಭಜನೆ ಮಾಡುತ್ತಿದ್ದರು. ನಂತರ ಪ್ರಸಾದ ಪಾನಕ ಪಡೆಯುತ್ತಿದ್ದರು. ಹೊರಬಂದು ನೋಡಿದಾಗ ಮುಸಲ್ಮಾನ ದೊರೆಗಳು ಊರನ್ನೇ ಅಕ್ರಮಿಸಿ ರಾಜರುಗಳಾಗಿ ಮೆರೆಯುತ್ತಿದ್ದರು. ತಡಮಾಡದೆ ಪುರೋಹಿತಶಾಹಿಗಳು ಮುಸ್ಲಿಂ ರಾಜರ ಆಸ್ಥಾನಕ್ಕೆ ನುಗ್ಗಿ ಕರಣಿಕರಾದರು, ಮಂತ್ರಿಗಳಾದರು, ರಾಜನನ್ನು ನಗಿಸುವ ವಿಧೂಷಕರಾದರು, ಸಂಗೀತಗಾರರಾದರು. ಇದು ಸುಮಾರು ಆರುನೂರು ವರ್ಷಗಳು ಸತತವಾಗಿ ನಡೆಯಿತು. ಈ ಪುರೋಹಿತರು ತಮ್ಮ ಬುದ್ಧಿಯನ್ನು ಶೂದ್ರರಿಗೂ ಅಂಟಿಸಿದ ಫಲವಾಗಿ, ಅವರನ್ನಾಳುತ್ತಿರುವ ನಾಯಕ, ಪ್ರವಾಹದಿಂದ ಉತ್ತರ ಭಾರತವೇ ನಲುಗಿಹೋಗುತ್ತಿರುವ ಸಮಯದಲ್ಲಿ ತಲೆಕೆಡಿಸಿಕೊಳ್ಳದೆ, ನಮೀಬಿಯಾದಿಂದ ಚೀತಾ ತಂದು, ಬೋನಿನಿಂದ ಹೊರಬಿಟ್ಟು, ಎಲ್ಲರೂ ಕೈ ಎತ್ತಿ ಚಿರತೆಗಳನ್ನು ಸ್ವಾಗತಿಸಿ ಚಪ್ಪಾಳೆ ಹೊಡೆಯಿರಿ ಎಂದರಂತಲ್ಲಾ. ಆ ಕೂಡಲೇ ಜನಸ್ತೋಮ ಅಂಗೈ ಉರಿಯುವಂತೆ ಚಪ್ಪಾಳೆ ತಟ್ಟಿ ಗಾಳಿ ಹಾಕಿಕೊಂಡವಂತಲ್ಲಾ, ಥೂತ್ತೇರಿ

*****

ಭಾರತದಿಂದ ಚೀತಾ ಕಣ್ಮರೆಯಾದ ನಂತರ ಹುಟ್ಟಿದ ಮೋದಿಯವರು, ಹಾಗೆಯೇ ವಿರಳವಾಗುತ್ತಿರುವ ಗುಳ್ಳೆ ನರಿಗಳ ಬಗ್ಗೆ ತಲೆಕೆಡಿಸಿಕೊಳ್ಳುವರೆಂದು ಆಶಿಸುವ ಸಮಯದಲ್ಲೇ ಕಿಡಿಗೇಡಿಗಳು, ಗುಳ್ಳೆನರಿಗಳ ಗುಣವನ್ನು ವಿಶ್ಲೇಷಣೆ ಮಾಡಿದ್ದಾರಲ್ಲಾ. ಗುಳ್ಳೆ ನರಿ ಎಂದೂ ಶ್ರಮವಹಿಸಿ ಭೇಟೆಯಾಡಿದ್ದಿಲ್ಲ. ದೊಡ್ಡಪ್ರಾಣಿ ಮಾಡುವ ಬೇಟೆಯನ್ನು ಕದಿಯುವ ಸಂಚುರೂಪಿಸುತ್ತದೆ. ಬಲಿಯಾದ ನಂತರ ಪೊದೆಮರೆಯಿಂದ ಓಡಿಬಂದು ಬೇಕಾದ ಖಂಡವನ್ನು ಬಾಯಿಗಾಕಿಕೊಂಡು ಹೊಟ್ಟೆಹೊರಿಯುತ್ತದೆ. ಈ ಪ್ರಾಣಿಗೆ ಹೋಲುವ ಮನುಷ್ಯರು ಹೇರಳವಾಗಿದ್ದು, ಅದೂ ಮೋದಿ ಸುತ್ತಲೂ ಇರುವುದರಿಂದ, ಗುಳ್ಳೆನರಿ ತರುವುದು ಬೇಡವೆಂದು ಬುದ್ಧೀಜೀವಿಗಳು ವಾದಿಸುತ್ತಿದ್ದಾರಲ್ಲಾ, ಥೂತ್ತೇರಿ

*****

ಮೋದಿ ತಂದಿರುವ ಚೀತಾಗಳು ಒಂದು ಕಾಲದಲ್ಲಿ ನಾಯಿಗಳಂತಿದ್ದವು ಎಂದು ಭಾರತಕ್ಕೆ ಬಂದ ಪ್ರವಾಸಿಗರು ದಾಖಲಿಸಿ ಹೋಗಿದ್ದಾರೆ. ಇವುಗಳ ಸಂಖ್ಯೆಯ ಹೆಚ್ಚಳದಿಂದ ಕಾಡಿನಲ್ಲಿ ಜಿಂಕೆ, ಕಡವೆ, ಮೊಲ ಮತ್ತು ಹಂದಿಗಳ ಸಂಖ್ಯೆ ನಿರ್ನಾಮವಾಗುತ್ತದೆಂದು ಕಾಡಿನ ಮಾಂಸ ಪ್ರಿಯರು ಇದರ ನಿರ್ನಾಮಕ್ಕೆ ಕಾರಣರಾದರು. ಇದನ್ನ ಮರಳಿ ತರಬೇಕಾದರೆ ಎಪ್ಪತ್ತು ವರ್ಷಗಳ ಹಿಂದಿದ್ದ ಕಾಡು ಈಗಿದೆಯೆ? ಅಂದಿನ ಪ್ರಾಣಿಗಳು ಈಗಿವೆಯೇ? ಎಂಟು ಚೀತಾಗಳು ಮುಂದೆ ಸಂತಾನೋತ್ಪತ್ತಿ ಮಾಡಿ, ಪ್ರತಿದಿನ ಅವುಗಳು ಬೇಟಿಯಾಡಿದರೆ ಇನ್ಯಾವ ಪ್ರಾಣಿ ಸಂಕುಲ ನಿರ್ನಾಮವಾಗುತ್ತದೊ ಹೇಳಲು ಬರುವುದಿಲ್ಲ. ಯಾವ ಮುಂದಾಲೋಚನೆಯೂ ಇಲ್ಲದ ಜನ ನಾಯಕರು ಮತ್ತು ಚೀತಾಗಳು ಬಂದ ಕೂಡಲೇ ಮೋದಿ ಆಜ್ಞೆಯಂತೆ ಚಪ್ಪಾಳೆ ಹೊಡೆದ ಜನಸ್ತೋಮದ ಸಂಭ್ರಮ ನೋಡಿದ ಕಾಂಗೈಗಳು, ಚೀತಾಗಳನ್ನ ಮತ್ತೆ ತಂದು ನಮ್ಮ ಕಾಡಿಲ್ಲದ ನಾಡಿಗೆ ಬಿಡುವ ಯೋಜನೆ ನಮ್ಮದು. ಈಗ ಬಂದಿರುವ ಚೀತಾಗಳು ನಮಗೆ ಕೃತಜ್ಞತೆ ಸಲ್ಲಿಸಬೇಕೆಂದು ಹೇಳಿದ್ದಾರಂತಲ್ಲಾ, ಥೂತ್ತೇರಿ.

*****

ಅಂಬೇಡ್ಕರ್‌ರವರ ನಿಜವಾದ ಅನುಯಾಯಿ ಮೋದೀಜಿಯವರು ಎಂದು ಮಾಜಿ ರಾಷ್ಟಪತಿಗಳಾದ ಕೋವಿಂದಣ್ಣನವರು ಹೇಳಿ ಸಾಮಾನ್ಯ ಜನರನ್ನ ದಂಗುಬಡಿಸಿದ್ದಾರಲ್ಲಾ. ಈ ಶತಮಾನದ ತಮಾಷೆಯೆಂದರೆ ಇದೇ. ಕೋವಿಂದ್ ಅವರು ರಾಷ್ಟಪತಿ ಸ್ಥಾನ ಅಲಂಕರಿಸಬೇಕಾದರೆ, ಆ ಪರಂಪರೆಯನ್ನ ತಿಳಿದವರು, ನಮ್ಮ ಗ್ರಹಿಕೆಗೆ ನಿಲುಕದ ಯಾವುದೋ ವಿದ್ವತ್ತು ಕೋವಿಂದರಲ್ಲಿರಬಹುದೆಂದು ಭಾವಿಸಿದ್ದರು. ಏಕೆಂದರೆ ಭಾರತದ ಹಿಂದಿನ ಹಲವು ರಾಷ್ಟ್ರಪತಿಗಳು ವಿದ್ವತ್ತಿನ ಪಂಡಿತರಾಗಿದ್ದರು. ಬಾಬು ರಾಜೇಂದ್ರ ಪ್ರಸಾದ್, ಡಾ. ಸರ್ವಪಲ್ಲಿ ರಾಥಾಕೃಷ್ಣ, ವಿ.ವಿ ಗಿರಿ ಇವರೆಲ್ಲಾ ಪ್ರಪಂಚದ ಬಹುದೊಡ್ಡ ಪ್ರಜಾಪ್ರಭುತ್ವದ ದೇಶಕ್ಕೆ ಕಳಸವಿಟ್ಟಂತೆ ಕಂಡರು. ಆ ಸ್ಥಾನ ಕೆಳಗಿಳಿದದ್ದು ಫಕ್ರುದ್ದೀನ್ ಆಲಿ ಅಹಮದ್ ಕಾಲದಲ್ಲಿ. ಯಾಕೆಂದರೆ ಅವರು ತುರ್ತುಪರಿಸ್ಥಿತಿ ಬಿಲ್ಲಿಗೆ ಸಹಿಮಾಡಿದರು. ಆದರೂ ಆ ನಂತರ ಬಂದವರೆಲ್ಲಾ ಆ ಸ್ಥಾನಕ್ಕೆ ಗೌರವ ತಂದಿದ್ದರು. ಈಗಿನ ವಿಪರ್ಯಾಸವೆಂದರೆ ಅಂಬೇಡ್ಕರ್ ಮತ್ತು ಮೋದಿಯನ್ನು ಒಂದೇ ತಕ್ಕಡಿಯಲ್ಲಿ ತೂಗಿ ನೋಡಿರುವ ಕೋವಿಂದಣ್ಣ ಮುಂದೆ ಯಾರ್‍ಯಾರನ್ನು ಹೋಲಿಕೆ ಮಾಡುತ್ತಾರೆಂದು ಜನಕ್ಕೆ ದಿಗಿಲಾಗಿದೆಯಂತಲ್ಲಾ. ಏಕೆಂದರೆ ಕೋವಿಂದ್ ಅವರು ಅಡಿರುವ ಮಾತು ಆದಿತ್ಯನಾಥರಿಂದಲೋ ಚಕ್ರವರ್ತಿ ಸೂಲಿಬೆಲೆ ಅಥವಾ ಸಿ.ಟಿ ರವಿ ಬಾಯಿಂದಲೊ ಬರುವ ಮಾತು. ಸಂವಿಧಾನ ರಚನೆ ಮಾಡಿದ ಅಂಬೇಡ್ಕರನ್ನ ಸಂವಿಧಾನವನ್ನೇ ಮೂಲೆಗುಂಪು ಮಾಡ ಹೊರಟ ಮೋದಿಗೆ ಹೋಲಿಸಿದ್ದು ಅಜ್ಞಾನದ ಪರಮಾವಧಿ ಎಂದು ಹೇಳಲು ಭಯವಾಗುತ್ತಿದೆಯಲ್ಲಾ, ಥೂತ್ತೇರಿ..


ಇದನ್ನೂ ಓದಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...