Homeಅಂಕಣಗಳುಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

- Advertisement -
- Advertisement -

ಸಂತೆಗೆ ಹೋದ ಮಾದಣ್ಣ ಮಡದಿ ಹೇಳಿದ ಸಾಮಾನುಗಳನ್ನ ಬಿಟ್ಟು ಬೆಕ್ಕಿನ ಮರಿ ತಂದನಂತಲ್ಲಾ. ಅದನ್ನು ನೋಡಿದ ಮದಡಿ, “ಅಯ್ಯೊ ನಿನ್ನ ಮನಿಮಾರತ್ತ, ಮನಿಗೆ ಬೇಕಾದ ಸಾಮಾನು ತರದು ಬುಟ್ಟು ಕೊತ್ತಿಮರಿ ತಂದಿದ್ದಿಯಲ್ಲಾ, ನಿನ್ನ ಮರುಳು ಬುದ್ದಿಗೇನೆಳನಾ” ಎಂದು ಜಗಳಾ ತೆಗೆದಳಂತಲ್ಲಾ. ಆಗ ಬೆಕ್ಕಿನ ತಲೆ ಸವರಿದ ಮಾದಣ್ಣ, “ಮನೆಲಿ ಇಲಿ ಜಾಸ್ತಿಯಾಗ್ಯವೆ” ಅಂತ ನೀನೆ ಹೇಳಿದಲ್ಲಾ ಎಂದಾಗ, “ಇಲಿ ಜಾಸ್ತಿಯಾಗ್ಯವೆ ಸರಿ ಇಲಿ ಅವುಸ್ತಿ ತರಕ್ಕೇನಾಗಿತ್ತು? ಈ ಬೆಕ್ಕಿನ ಮರಿ ಸಾಕಕ್ಕೆ ಹಾಲು ಬೇಕು, ಹಾಲು ಬೇಕಾದ್ರೆ ಹಸ ತರಬೇಕು, ಅದಕೆ ಹುಲ್ಲು ಹಾಕಬೇಕು, ಸಗಣಿ ತಗಿಬೇಕು, ಗಂಜಲ ಬಳಿಬೇಕು, ಇದನ್ಯಲ್ಲ ಮಾಡೋಳು ನಾನು” ಎಂದು ಗೊಣಗುತ್ತಿರುವಾಗ ಮಾದಣ್ಣ, ಬೆಕ್ಕಿನ ಮರಿಯನ್ನ ವಿವಿಧ ಭಂಗಿಯಲ್ಲಿ ನಿಲ್ಲಿಸಿ ’ವಾಹ್ ಏನು ಭಂಗಿ, ಆ ಕಣ್ಣೇನು, ಆ ಮೀಸೆಯೇನು’ ಎಂದು ವರ್ಣಿಸುತ್ತ ಕಣ್ಣಿನಲ್ಲೇ ಫೋಟೋ ಕ್ಲಿಕ್ಕಿಸುತ್ತಿದ್ದನಂತಲ್ಲಾ, ಥೊತ್ತೇರಿ.

*****

ಈ ಬೆಕ್ಕಿನ ಕತೆ ಟೈಮಿನಲ್ಲೇ ನೆನಪಿಗೆ ಬಂದಿದ್ದೇನೆಂದರೆ, ಮುಸ್ಲಿಮ್ ದೊರೆಗಳು ಈ ದೇಶಕ್ಕೆ ದಾಳಿಯ ಮುಖಾಂತರ ಬಂದವರು; ಧನ ಕನಕ ವಸ್ತುಗಳನ್ನು ಲೂಟಿ ಮಾಡುವ ಮನಸ್ಸಿನಿಂದ ರೂಪುಗೊಂಡದ್ದು ದಾಳಿ. ಹಾಗೆ ಬಂದ ಮುಸ್ಲಿಮರು ದಾಳಿ ಮಾಡಿಕೊಂಡು ಓಡಲಿಲ್ಲ, ಬದಲಿಗೆ ಇಲ್ಲೇ ನಿಂತರು. ಆಗ ನಮ್ಮ ಪುರೋಹಿತಶಾಹಿಗಳು ದೇವಸ್ಥಾನದ ಗರ್ಭಗುಡಿಯಲ್ಲಿ ಭದ್ರವಾಗಿ ಕುಳಿತು ಭಜನೆ ಮಾಡುತ್ತಿದ್ದರು. ನಂತರ ಪ್ರಸಾದ ಪಾನಕ ಪಡೆಯುತ್ತಿದ್ದರು. ಹೊರಬಂದು ನೋಡಿದಾಗ ಮುಸಲ್ಮಾನ ದೊರೆಗಳು ಊರನ್ನೇ ಅಕ್ರಮಿಸಿ ರಾಜರುಗಳಾಗಿ ಮೆರೆಯುತ್ತಿದ್ದರು. ತಡಮಾಡದೆ ಪುರೋಹಿತಶಾಹಿಗಳು ಮುಸ್ಲಿಂ ರಾಜರ ಆಸ್ಥಾನಕ್ಕೆ ನುಗ್ಗಿ ಕರಣಿಕರಾದರು, ಮಂತ್ರಿಗಳಾದರು, ರಾಜನನ್ನು ನಗಿಸುವ ವಿಧೂಷಕರಾದರು, ಸಂಗೀತಗಾರರಾದರು. ಇದು ಸುಮಾರು ಆರುನೂರು ವರ್ಷಗಳು ಸತತವಾಗಿ ನಡೆಯಿತು. ಈ ಪುರೋಹಿತರು ತಮ್ಮ ಬುದ್ಧಿಯನ್ನು ಶೂದ್ರರಿಗೂ ಅಂಟಿಸಿದ ಫಲವಾಗಿ, ಅವರನ್ನಾಳುತ್ತಿರುವ ನಾಯಕ, ಪ್ರವಾಹದಿಂದ ಉತ್ತರ ಭಾರತವೇ ನಲುಗಿಹೋಗುತ್ತಿರುವ ಸಮಯದಲ್ಲಿ ತಲೆಕೆಡಿಸಿಕೊಳ್ಳದೆ, ನಮೀಬಿಯಾದಿಂದ ಚೀತಾ ತಂದು, ಬೋನಿನಿಂದ ಹೊರಬಿಟ್ಟು, ಎಲ್ಲರೂ ಕೈ ಎತ್ತಿ ಚಿರತೆಗಳನ್ನು ಸ್ವಾಗತಿಸಿ ಚಪ್ಪಾಳೆ ಹೊಡೆಯಿರಿ ಎಂದರಂತಲ್ಲಾ. ಆ ಕೂಡಲೇ ಜನಸ್ತೋಮ ಅಂಗೈ ಉರಿಯುವಂತೆ ಚಪ್ಪಾಳೆ ತಟ್ಟಿ ಗಾಳಿ ಹಾಕಿಕೊಂಡವಂತಲ್ಲಾ, ಥೂತ್ತೇರಿ

*****

ಭಾರತದಿಂದ ಚೀತಾ ಕಣ್ಮರೆಯಾದ ನಂತರ ಹುಟ್ಟಿದ ಮೋದಿಯವರು, ಹಾಗೆಯೇ ವಿರಳವಾಗುತ್ತಿರುವ ಗುಳ್ಳೆ ನರಿಗಳ ಬಗ್ಗೆ ತಲೆಕೆಡಿಸಿಕೊಳ್ಳುವರೆಂದು ಆಶಿಸುವ ಸಮಯದಲ್ಲೇ ಕಿಡಿಗೇಡಿಗಳು, ಗುಳ್ಳೆನರಿಗಳ ಗುಣವನ್ನು ವಿಶ್ಲೇಷಣೆ ಮಾಡಿದ್ದಾರಲ್ಲಾ. ಗುಳ್ಳೆ ನರಿ ಎಂದೂ ಶ್ರಮವಹಿಸಿ ಭೇಟೆಯಾಡಿದ್ದಿಲ್ಲ. ದೊಡ್ಡಪ್ರಾಣಿ ಮಾಡುವ ಬೇಟೆಯನ್ನು ಕದಿಯುವ ಸಂಚುರೂಪಿಸುತ್ತದೆ. ಬಲಿಯಾದ ನಂತರ ಪೊದೆಮರೆಯಿಂದ ಓಡಿಬಂದು ಬೇಕಾದ ಖಂಡವನ್ನು ಬಾಯಿಗಾಕಿಕೊಂಡು ಹೊಟ್ಟೆಹೊರಿಯುತ್ತದೆ. ಈ ಪ್ರಾಣಿಗೆ ಹೋಲುವ ಮನುಷ್ಯರು ಹೇರಳವಾಗಿದ್ದು, ಅದೂ ಮೋದಿ ಸುತ್ತಲೂ ಇರುವುದರಿಂದ, ಗುಳ್ಳೆನರಿ ತರುವುದು ಬೇಡವೆಂದು ಬುದ್ಧೀಜೀವಿಗಳು ವಾದಿಸುತ್ತಿದ್ದಾರಲ್ಲಾ, ಥೂತ್ತೇರಿ

*****

ಮೋದಿ ತಂದಿರುವ ಚೀತಾಗಳು ಒಂದು ಕಾಲದಲ್ಲಿ ನಾಯಿಗಳಂತಿದ್ದವು ಎಂದು ಭಾರತಕ್ಕೆ ಬಂದ ಪ್ರವಾಸಿಗರು ದಾಖಲಿಸಿ ಹೋಗಿದ್ದಾರೆ. ಇವುಗಳ ಸಂಖ್ಯೆಯ ಹೆಚ್ಚಳದಿಂದ ಕಾಡಿನಲ್ಲಿ ಜಿಂಕೆ, ಕಡವೆ, ಮೊಲ ಮತ್ತು ಹಂದಿಗಳ ಸಂಖ್ಯೆ ನಿರ್ನಾಮವಾಗುತ್ತದೆಂದು ಕಾಡಿನ ಮಾಂಸ ಪ್ರಿಯರು ಇದರ ನಿರ್ನಾಮಕ್ಕೆ ಕಾರಣರಾದರು. ಇದನ್ನ ಮರಳಿ ತರಬೇಕಾದರೆ ಎಪ್ಪತ್ತು ವರ್ಷಗಳ ಹಿಂದಿದ್ದ ಕಾಡು ಈಗಿದೆಯೆ? ಅಂದಿನ ಪ್ರಾಣಿಗಳು ಈಗಿವೆಯೇ? ಎಂಟು ಚೀತಾಗಳು ಮುಂದೆ ಸಂತಾನೋತ್ಪತ್ತಿ ಮಾಡಿ, ಪ್ರತಿದಿನ ಅವುಗಳು ಬೇಟಿಯಾಡಿದರೆ ಇನ್ಯಾವ ಪ್ರಾಣಿ ಸಂಕುಲ ನಿರ್ನಾಮವಾಗುತ್ತದೊ ಹೇಳಲು ಬರುವುದಿಲ್ಲ. ಯಾವ ಮುಂದಾಲೋಚನೆಯೂ ಇಲ್ಲದ ಜನ ನಾಯಕರು ಮತ್ತು ಚೀತಾಗಳು ಬಂದ ಕೂಡಲೇ ಮೋದಿ ಆಜ್ಞೆಯಂತೆ ಚಪ್ಪಾಳೆ ಹೊಡೆದ ಜನಸ್ತೋಮದ ಸಂಭ್ರಮ ನೋಡಿದ ಕಾಂಗೈಗಳು, ಚೀತಾಗಳನ್ನ ಮತ್ತೆ ತಂದು ನಮ್ಮ ಕಾಡಿಲ್ಲದ ನಾಡಿಗೆ ಬಿಡುವ ಯೋಜನೆ ನಮ್ಮದು. ಈಗ ಬಂದಿರುವ ಚೀತಾಗಳು ನಮಗೆ ಕೃತಜ್ಞತೆ ಸಲ್ಲಿಸಬೇಕೆಂದು ಹೇಳಿದ್ದಾರಂತಲ್ಲಾ, ಥೂತ್ತೇರಿ.

*****

ಅಂಬೇಡ್ಕರ್‌ರವರ ನಿಜವಾದ ಅನುಯಾಯಿ ಮೋದೀಜಿಯವರು ಎಂದು ಮಾಜಿ ರಾಷ್ಟಪತಿಗಳಾದ ಕೋವಿಂದಣ್ಣನವರು ಹೇಳಿ ಸಾಮಾನ್ಯ ಜನರನ್ನ ದಂಗುಬಡಿಸಿದ್ದಾರಲ್ಲಾ. ಈ ಶತಮಾನದ ತಮಾಷೆಯೆಂದರೆ ಇದೇ. ಕೋವಿಂದ್ ಅವರು ರಾಷ್ಟಪತಿ ಸ್ಥಾನ ಅಲಂಕರಿಸಬೇಕಾದರೆ, ಆ ಪರಂಪರೆಯನ್ನ ತಿಳಿದವರು, ನಮ್ಮ ಗ್ರಹಿಕೆಗೆ ನಿಲುಕದ ಯಾವುದೋ ವಿದ್ವತ್ತು ಕೋವಿಂದರಲ್ಲಿರಬಹುದೆಂದು ಭಾವಿಸಿದ್ದರು. ಏಕೆಂದರೆ ಭಾರತದ ಹಿಂದಿನ ಹಲವು ರಾಷ್ಟ್ರಪತಿಗಳು ವಿದ್ವತ್ತಿನ ಪಂಡಿತರಾಗಿದ್ದರು. ಬಾಬು ರಾಜೇಂದ್ರ ಪ್ರಸಾದ್, ಡಾ. ಸರ್ವಪಲ್ಲಿ ರಾಥಾಕೃಷ್ಣ, ವಿ.ವಿ ಗಿರಿ ಇವರೆಲ್ಲಾ ಪ್ರಪಂಚದ ಬಹುದೊಡ್ಡ ಪ್ರಜಾಪ್ರಭುತ್ವದ ದೇಶಕ್ಕೆ ಕಳಸವಿಟ್ಟಂತೆ ಕಂಡರು. ಆ ಸ್ಥಾನ ಕೆಳಗಿಳಿದದ್ದು ಫಕ್ರುದ್ದೀನ್ ಆಲಿ ಅಹಮದ್ ಕಾಲದಲ್ಲಿ. ಯಾಕೆಂದರೆ ಅವರು ತುರ್ತುಪರಿಸ್ಥಿತಿ ಬಿಲ್ಲಿಗೆ ಸಹಿಮಾಡಿದರು. ಆದರೂ ಆ ನಂತರ ಬಂದವರೆಲ್ಲಾ ಆ ಸ್ಥಾನಕ್ಕೆ ಗೌರವ ತಂದಿದ್ದರು. ಈಗಿನ ವಿಪರ್ಯಾಸವೆಂದರೆ ಅಂಬೇಡ್ಕರ್ ಮತ್ತು ಮೋದಿಯನ್ನು ಒಂದೇ ತಕ್ಕಡಿಯಲ್ಲಿ ತೂಗಿ ನೋಡಿರುವ ಕೋವಿಂದಣ್ಣ ಮುಂದೆ ಯಾರ್‍ಯಾರನ್ನು ಹೋಲಿಕೆ ಮಾಡುತ್ತಾರೆಂದು ಜನಕ್ಕೆ ದಿಗಿಲಾಗಿದೆಯಂತಲ್ಲಾ. ಏಕೆಂದರೆ ಕೋವಿಂದ್ ಅವರು ಅಡಿರುವ ಮಾತು ಆದಿತ್ಯನಾಥರಿಂದಲೋ ಚಕ್ರವರ್ತಿ ಸೂಲಿಬೆಲೆ ಅಥವಾ ಸಿ.ಟಿ ರವಿ ಬಾಯಿಂದಲೊ ಬರುವ ಮಾತು. ಸಂವಿಧಾನ ರಚನೆ ಮಾಡಿದ ಅಂಬೇಡ್ಕರನ್ನ ಸಂವಿಧಾನವನ್ನೇ ಮೂಲೆಗುಂಪು ಮಾಡ ಹೊರಟ ಮೋದಿಗೆ ಹೋಲಿಸಿದ್ದು ಅಜ್ಞಾನದ ಪರಮಾವಧಿ ಎಂದು ಹೇಳಲು ಭಯವಾಗುತ್ತಿದೆಯಲ್ಲಾ, ಥೂತ್ತೇರಿ..


ಇದನ್ನೂ ಓದಿ: ಚಕ್ರತೀರ್ಥನ ರೋಗ ಜೋಷಿಗೂ ಬಡಿಯಿತಂತಲ್ಲಾ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...