Homeಮುಖಪುಟಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಮನೀಶ್ ತಿವಾರಿ ಸಿದ್ಧತೆ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಮನೀಶ್ ತಿವಾರಿ ಸಿದ್ಧತೆ

ಕಾಂಗ್ರೆಸ್ ನಾಯಕತ್ವದ ತೀವ್ರ ಟೀಕಾಕಾರರಲ್ಲಿ ಮನೀಶ್‌ ತಿವಾರಿ ಕೂಡಾ ಒಬ್ಬರು

- Advertisement -
- Advertisement -

ರಾಷ್ಟ್ರೀಯ ಕಾಂಗ್ರೆಸ್‌‌‌ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಒಕ್ಕೂಟ ಸರ್ಕಾರದ ಮಾಜಿ ಸಚಿವ ಮನೀಶ್ ತಿವಾರಿ ಕೂಡ ಸ್ಪರ್ಧಿಸಲು ತಯಾರಿ ನಡೆಸುತ್ತಿದ್ದಾರೆ ಎಂದು ವರದಿಯಾಗಿದ್ದು, ಚುನಾವಣೆಯಲ್ಲಿ ಮತದಾರರಾಗಿರುವ ಪಕ್ಷದ ರಾಜ್ಯ ಪ್ರತಿನಿಧಿಗಳನ್ನು ಭೇಟಿ ಮಾಡಲು ಅವರು ತಮ್ಮ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ಅವರ ನಿಕಟ ಮೂಲಗಳನ್ನು ಉಲ್ಲೇಖಿಸಿ ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರತಿ ಅಭ್ಯರ್ಥಿಯು ತನ್ನ ಹೆಸರನ್ನು ಉಮೇದುವಾರಿಕೆಗೆ ಪ್ರಸ್ತಾಪಿಸಲು 10 ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳ ಅಗತ್ಯವಿದೆ. ಮನೀಶ್‌ ತಿವಾರಿ ಅವರು ಕಾಂಗ್ರೆಸ್ ನಾಯಕತ್ವದ ತೀವ್ರ ಟೀಕಾಕಾರರಲ್ಲಿ ಒಬ್ಬರಾಗಿದ್ದು, ಪಕ್ಷದಲ್ಲಿ ಸುಧಾರಣೆ ಮಾಡಬೇಕು ಎಂದು ಒತ್ತಾಯಿಸುತ್ತಲೆ ಬಂದಿದ್ದಾರೆ. ಒಂದು ವೇಳೆ ಮನೀಶ್‌ ತಿವಾರಿ ಸ್ಪರ್ಧಿಸುವುದು ಖಚಿತವಾದರೆ ಪಕ್ಷದೊಳಗೆ ಬಹುಕೋನಗಳ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಕಾಂಗ್ರೆಸ್ ಕೇಂದ್ರ ಚುನಾವಣಾ ಪ್ರಾಧಿಕಾರ ಗುರುವಾರ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆಯ ಪ್ರಕಾರ, ಗುರುವಾರದಿಂದ ನಾಮಪತ್ರಗಳು ಲಭ್ಯವಿದ್ದು, ನಾಮಪತ್ರಗಳ ಸಲ್ಲಿಕೆ ಸೆಪ್ಟೆಂಬರ್ 24 ಮತ್ತು 30 ರ ನಡುವೆ ನಡೆಯಲಿದೆ.

ಇದನ್ನೂ ಓದಿ: ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಪಕ್ಷದ ನಾಯಕತ್ವ ಸೇರಿದಂತೆ ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕಾಂಗ್ರೆಸ್

ಅಕ್ಟೋಬರ್ 1 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅದೇ ದಿನ ಮಾನ್ಯ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು. ಅಕ್ಟೋಬರ್ 8ರ ವರೆಗೆ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ಇದರ ನಂತರ ಅಂತಿಮ ಪಟ್ಟಿಯನ್ನು ಹೊರತರಲಾಗುವುದು. ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆ ನಡೆಯಲಿದೆ.

ತೀವ್ರ ರಾಜಕೀಯ ಲಾಬಿಯ ನಡುವೆ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಕೇರಳ ಶಶಿ ತರೂರ್‌ ನಡುವೆ ಸ್ಪರ್ಧೆಯ ಸಾಧ್ಯತೆಯಿದೆ. ಈ ನಡುವೆ ಹಿರಿಯ ನಾಯಕ ಸುರೇಶ್ ಪಚೌರಿ ಬುಧವಾರ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.

ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ಎರಡು ಗಂಟೆಗಳ ಕಾಲ ಸಭೆ ನಡೆಸಿದ್ದಾರೆ. ಇದರ ನಂತರ ಅವರು ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ಯಾತ್ರೆ’ಗೆ ಸೇರಲು ಕೇರಳಕ್ಕೆ ತೆರಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಬ್ಯಾನರ್‌ನಲ್ಲಿ ಮಹಾತ್ಮ ಗಾಂಧಿ ಕೊಲೆ ಆರೋಪಿ ಸಾವರ್ಕರ್‌ ಚಿತ್ರ; ಸ್ಥಳೀಯ ನಾಯಕನ ಅಮಾನತು ಮಾಡಿದ ಕಾಂಗ್ರೆಸ್

ಚುನಾವಣೆ ನ್ಯಾಯಯುತವಾಗಿ ನಡೆಯಲಿದ್ದು, ಯಾವುದೇ ಅಭ್ಯರ್ಥಿಯನ್ನು ಬೆಂಬಲಿಸುವುದಿಲ್ಲ ಎಂದು ಸೋನಿಯಾ ಗಾಂಧಿ ಪ್ರತಿಪಾದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೇಲ್ನೋಟಕ್ಕೆ, ರಾಜಸ್ಥಾನದ ವಿಷಯವೂ ಸಭೆಯಲ್ಲಿ ಚರ್ಚೆಯಾಗಿದ್ದು, ಆದರೆ ಅದರ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಗೆಹ್ಲೋಟ್ ಮುಂದಿನ ವಾರ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆಯಾದರೂ, ರಾಜ್ಯದ ಮುಖ್ಯಮಂತ್ರಿ ಕುರ್ಚಿ ಬಿಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭೆ ಚುನಾವಣೆ : ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ಇಂದು ಮತದಾನ

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭೆಯ ಚುನಾವಣೆಯ ಮತದಾನ ಇಂದು (ಏ.9, 2026) ಒಂದೇ ಹಂತದಲ್ಲಿ ನಡೆಯಲಿದೆ. ಈಗಾಗಲೇ ಮತದಾನ ಆರಂಭಗೊಂಡಿದೆ. ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯು...

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...