Homeಕರ್ನಾಟಕಮಾಲೂರು: ದಲಿತ ಬಾಲಕನ ಮನೆಗೆ ಶಾಸಕ ನಂಜೇಗೌಡ ಭೇಟಿ - ನೆರವಿನ ಭರವಸೆ

ಮಾಲೂರು: ದಲಿತ ಬಾಲಕನ ಮನೆಗೆ ಶಾಸಕ ನಂಜೇಗೌಡ ಭೇಟಿ – ನೆರವಿನ ಭರವಸೆ

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿನ ಅಸ್ಪೃಶ್ಯತೆ ಆಚರಣೆ ಘಟನೆ ಹಿನ್ನೆಲೆಯಲ್ಲಿ ಗ್ರಾಮದ ದಲಿತ ಬಾಲಕನ ಕುಟುಂಬಕ್ಕೆ ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ನಂಜೇಗೌಡ ಭೇಟಿ ನೀಡಿ ನೆರವಿನ ಭರವಸೆ ನೀಡಿದ್ದಾರೆ.

ದಲಿತ ಬಾಲಕನ ಮನೆಯಲ್ಲಿಯೇ ಊಟ ಮಾಡಿದ ಶಾಸಕರು ಆರ್ಥಿಕ ನೆರವು ನೀಡುವ ಭರವಸೆ ನೀಡಿದ್ದಾರೆ. ಬಾಲಕನ ತಾಯಿ ಶೋಭಾ ಅವರಿಗೆ ಸಾಂತ್ವಾನ ಮತ್ತು ಧೈರ್ಯ ಹೇಳಿದ ಅವರು ಉದ್ಯೋಗ ದೊರಕಿಸುವುದಾಗಿ ತಿಳಿಸಿದರು.

ಗ್ರಾಮಕ್ಕೆ ಹತ್ತಿರವಿರುವ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ನಲ್ಲಿ ಅಡುಗೆ ಸಹಾಯಕಿ ಕೆಲಸ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಕುಟುಂಬಕ್ಕೆ ನಿವೇಶನ ನೀಡುವುದಾಗಿ ತಿಳಿಸಿದ್ದಾರೆ.

ಆ ಕುಟುಂಬಕ್ಕೆ ನಿವೇಶನ ದೊರೆತಿದ್ದು, ಆ ಜಾಗವನ್ನು ಸಮತಟ್ಟು ಮಾಡುವ ಕೆಲಸ ನಡೆಯುತ್ತಿದ್ದು, ಕಾಮಗಾರಿ ಮುಗಿದ ಕೂಡಲೇ ಕುಟುಂಬಕ್ಕೆ ಹಸ್ತಾಂತರಿಸುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮಿಯವರ ನೇತೃತ್ವದಲ್ಲಿ ಉಳ್ಳೇರಹಳ್ಳಿ ಗ್ರಾಮದಲ್ಲಿ ಶಾಂತಿ ಸಭೆ ನಡೆಸಲಾಗಿದೆ. ಸವರ್ಣಿಯ ಕುಟುಂಬಗಳು ಈ ರೀತಿಯ ತಪ್ಪನ್ನು ಮುಂದುವರೆಸದಂತೆ ಎಚ್ಚರಿಕೆ ನೀಡಲಾಗಿದೆ.

ಘಟನೆಯ ಹಿನ್ನೆಲೆ

ಗ್ರಾಮದೇವತೆ ಭೂತಮ್ಮನ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಗುಜ್ಜಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು, ಬಾಲಕನ ಕುಟುಂಬಕ್ಕೆ 60 ಸಾವಿರ ದಂಡ ವಿಧಿಸಿ ಸಾಮಾಜಿಕ ಬಹಿಷ್ಕಾರದ ಬೆದರಿಕೆ ಹಾಕಿದ್ದರು. ಸಂತ್ರಸ್ತ ಬಾಲಕನ ಈ ಕುರಿತು ಮಾಡಿದ ವಿಡಿಯೋ ವೈರಲ್ ಆಗಿ ಮಾಧ್ಯಮಗಳಲ್ಲಿ ಘಟನೆಯನ್ನು ಖಂಡಿಸಲಾಗಿತ್ತು.

ಸಾಮಾಜಿಕ ಬಹಿಷ್ಕಾರದ ಸುದ್ದಿ ವೈರಲ್ ಆದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಗ್ರಾಮದ ಸವರ್ಣೀಯ ಸಮುದಾಯಕ್ಕೆ ಸೇರಿದ ಜಿ.ನಾರಾಯಣಸ್ವಾಮಿ ಬಿನ್ ಗೋಪಾಲಪ್ಪ, ಜಿ.ರಮೇಶ್, ಗೋಪಾಲಪ್ಪ, ವೆಂಕಟೇಶಪ್ಪ, ಕೋಟೆಪ್ಪ, ನಾರಾಯಣಸ್ವಾಮಿ, ಚಲಪತಿ, ಮೋಹನ್ ರಾವ್‌, ಚಿನ್ನಯ್ಯ ವಿರುದ್ಧ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆಯ ಕಾಯ್ದೆ 1989 ಅಡಿ ಹಾಗೂ ಐಪಿಸಿ ಕಲಂ 143, 147, 148, 149 504, 506 ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಇದೇ ಸಂದರ್ಭದಲ್ಲಿ ಅಂಬೇಡ್ಕರ್‌ ಸೇವಾ ಸಮಿತಿ ಕರ್ನಾಟಕ (ಎಎಸ್‌ಎಸ್‌ಕೆ) ಸಂಘಟನೆಯ ಯುವಕರು ಕುಟುಂಬವನ್ನು ಭೇಟಿ ಮಾಡಿ ಧೈರ್ಯ ನೀಡಿದ್ದಲ್ಲದೆ ಅರಿವು ಮೂಡಿಸಿದ್ದಾರೆ. ಆ ನಂತರ ಕುಟುಂಬವು ತನ್ನ ಮನೆಯಲ್ಲಿದ್ದ ದೇವರ ಫೋಟೋಗಳನ್ನು ತೆರವು ಮಾಡಿ, ಆ ಸ್ಥಳದಲ್ಲಿ ಅಂಬೇಡ್ಕರ್ ಮತ್ತು ಬುದ್ದನ ಫೋಟೊ ಹಾಕಿತ್ತು. ಇದು ಸಹ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮೆಚ್ಚುಗೆಗೆ ಪಾತ್ರವಾಗಿತ್ತು.

“ನಿಮ್ಮ ಮನೆಯಲ್ಲಿ ಇರಬೇಕಾದದ್ದು ಈ ದೇವರ ಫೋಟೋಗಳಲ್ಲ. ನಿಮಗೆ ನ್ಯಾಯ ದೊರಕಿಸಿಕೊಟ್ಟ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಫೋಟೋ” ಎಂದು ಎಎಸ್‌ಎಸ್‌ಕೆ ಸಂಘಟನೆಯ ಮುಖಂಡರು ಹೇಳಿದ್ದರು.

ಇದನ್ನೂ ಓದಿ: ಮಾಲೂರು: ದಲಿತ ಬಾಲಕ ದೇವರು ಮುಟ್ಟಿದನೆಂದು ಶೋಷಿತ ಕುಟುಂಬಕ್ಕೆ ಬಹಿಷ್ಕಾರ; 60 ಸಾವಿರ ರೂ. ದಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...