Homeಮುಖಪುಟಕುಟುಂಬ ರಾಜಕಾರಣ ಕೊನೆಗೊಳಿಸುತ್ತೇವೆ ಎಂದ ಜೆ.ಪಿ ನಡ್ಡಾ: ಜಯ್ ಶಾ ಎಷ್ಟು ಶತಕ ಬಾರಿಸಿದ್ದಾರೆ ಎಂದು...

ಕುಟುಂಬ ರಾಜಕಾರಣ ಕೊನೆಗೊಳಿಸುತ್ತೇವೆ ಎಂದ ಜೆ.ಪಿ ನಡ್ಡಾ: ಜಯ್ ಶಾ ಎಷ್ಟು ಶತಕ ಬಾರಿಸಿದ್ದಾರೆ ಎಂದು ಪ್ರಶ್ನಿಸಿದ DMK

1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿದೆ.

- Advertisement -
- Advertisement -

ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಡಿಎಂಕೆ ಪಕ್ಷಗಳ ನಡುವೆ ವಾಕ್ಸಮರ ಆರಂಭವಾಗಿದೆ. ಹೊಸ ಶಿಕ್ಷಣ ನೀತಿ ಮತ್ತು ನೀಟ್ ಪ್ರವೇಶ ಪರೀಕ್ಷೆ ವಿರುದ್ಧ ತಮಿಳುನಾಡು ಸರ್ಕಾರ ನಿರ್ಣಯ ಕೈಗೊಂಡಿದನ್ನು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರು ‘ಅವಿದ್ಯಾವಂತರು ಆಡಳಿತದ ಚುಕ್ಕಾಣಿ ಹಿಡಿದರೆ ಹೀಗಾಗುತ್ತದೆ’ ಎಂದು ಟೀಕಿಸಿದ್ದಾರೆ. ಅಲ್ಲದೆ ಕುಟುಂಬ ರಾಜಕಾರಣದ ಮೂಲಕ ಹಣ ಲೂಟಿ ಹೊಡೆಯುವ ಪಂಚಾಯತ್ ಆಗಿದೆ ಎಂದು ಡಿಎಂಕೆ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.

ತಮಿಳುನಾಡಿನ ಕರೈಕುಡಿಯಲ್ಲಿ ಜೆ.ಪಿ ನಡ್ಡಾ ಮಾತನಾಡುತ್ತಾ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳಿದ್ದು ವಂಶವಾಹಿ ರಾಜಕಾರಣವನ್ನು ಪ್ರೋತ್ಸಾಹಿಸುತ್ತಿವೆ. ಅವುಗಳನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಆಡಳಿತಾರೂಢ ಡಿಎಂಕೆ ಸರ್ಕಾರವು “ಕೇಂದ್ರದಲ್ಲಿ ಅಧಿಕಾರದಲ್ಲಿರುವವರ ಶೈಕ್ಷಣಿಕ ಅರ್ಹತೆ ಕೇಳುವ ಮಟ್ಟಕ್ಕೆ ತಾನು ಇಳಿಯುವುದಿಲ್ಲ” ಎಂದು ತಿರುಗೇಟು ನೀಡಿದೆ. ಕುಟುಂಬ ರಾಜಕಾರಣ ಟೀಕೆಗೆ ಪ್ರತಿಕ್ರಿಯಿಸಿ ‘ಜಯ್ ಶಾ ಯಾರು ಮತ್ತು ಅವರು ಎಷ್ಟು ಶತಕ ಬಾರಿಸಿದ್ದಾರೆ’ ಎಂದು ಪ್ರಶ್ನಿಸಿದೆ.

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಬಿಜೆಪಿ ಅತಿ ಹೆಚ್ಚು ವಂಶವಾಹಿ ರಾಜಕಾರಣ ಮಾಡುತ್ತಿದೆ. ಗೃಹ ಸಚಿವ ಅಮಿತ್‌ ಶಾರವರ ಮಗ ಜಯ್ ಶಾರವರು ಯಾವುದೇ ಅನುಭವ, ಅರ್ಹತೆ ಇಲ್ಲದಿದ್ದರೂ ಎರಡೆರಡೂ ಬಾರಿಗೆ ಭಾರತದ ಅತಿ ಶ್ರೀಮಂತ ಕ್ರೀಡಾ ಸಂಸ್ಥೆಯಾದ ಬಿಸಿಸಿಐನ ಕಾರ್ಯದರರ್ಶಿಯಾಗಿದ್ದು ಹೇಗೆ ಎಂದು ಡಿಎಂಕೆ ವಕ್ತಾರ ಎ.ಶರವಣನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಂಶಾಡಳಿತ ರಾಜಕಾರಣದ ವಿರುದ್ಧ ಗುಡುಗಿದ ಮೋದಿ: ಅವರು ಮರೆತ ಬಿಜೆಪಿ ಕುಟುಂಬ ರಾಜಕಾರಣದ ಪಟ್ಟಿ ಇಲ್ಲಿದೆ

ದ್ವೇ‍ಷ ಮತ್ತು ವಿಭಜಕ ಸಿದ್ದಾಂತದ ಸೃಷ್ಟಿಕರ್ತ ಬಿಜೆಪಿ ಪಕ್ಷವಾಗಿದೆ. ಅದು ಬಿಜೆಪಿಯ ನಿಜವಾದ ಮುಖವಾಗಿದೆ. ಯುವಜನರಿಗೆ ಉದ್ಯೋಗ ನೀಡಲು ವಿಫಲವಾಗಿರುವ ಬಿಜೆಪಿಯನ್ನು 2024ರಲ್ಲಿ ತಮಿಳುನಾಡಿನ ಜನ ತಿರಸ್ಕರಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯು ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಕಳೆದ ಎರಡು ಚುನಾವಣೆಗಳ ಫಲಿತಾಂಶ ನಿರಾಶದಾಯಕವಾಗಿದೆ. ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಲ್ಲಿ ಒಂದನ್ನು ಸಹ ಗೆಲ್ಲಲು ಸಾಧ್ಯವಾಗಿಲ್ಲ. ಅಲ್ಲದೇ 234 ಕ್ಷೇತ್ರಗಳ ವಿಧಾನಸಭೆಯಲ್ಲಿ ಕೇವಲ 4 ಸದಸ್ಯರನ್ನು ಮಾತ್ರ ಹೊಂದಿದೆ. ಎಐಎಡಿಎಂಕೆ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಅದು ಸದ್ಯ ಎಐಎಡಿಎಂಕೆ ಬಿಕ್ಕಟ್ಟಿನ ರಾಜಕೀಯ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ.

ಇನ್ನು ಜೆ.ಪಿ ನಡ್ಡಾರವರು ಕುಟುಂಬ ರಾಜಕಾರಣವನ್ನು ಟೀಕಿಸಿದ್ದಾರೆ. ಆದರೆ ಅವರೆ ಅದರ ಫಲಾನುಭವಿಗಳು ಎಂದು ವಿಪಕ್ಷಗಳು ಟೀಕಿಸಿವೆ. ಸದ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅವರು ಜಬಲ್‌ ಪುರದ ಮಾಜಿ ಸಂಸದೆ ಜಯಶ್ರೀ ಬ್ಯಾನರ್ಜಿಯವರ ಅಳಿಯರಾಗಿದ್ದಾರೆ.

ಮಾರ್ಚ್ 2019 ರಲ್ಲಿ ಬ್ಲೂಮ್‌ಬರ್ಗ್ ಕ್ವಿಂಟ್ ಪ್ರಕಟಿಸಿದ ಇಂಡಿಯಾ ಸ್ಪೆಂಡ್ ಅಧ್ಯಯನದಂತೆ 1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿದೆ. ಅದರ ಪೂರ್ಣ ವರದಿ ಓದಲು, ಬಿಜೆಪಿ ವಂಶವಾಹಿನಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕುಟುಂಬ ರಾಜಕಾರಣದ ಆರೋಪ: ಬಿಜೆಪಿ ವಂಶಾಡಳಿತ ರಾಜಕಾರಣದ ಪಟ್ಟಿ ನೀಡಿದ ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...