Homeಮುಖಪುಟಕುಟುಂಬ ರಾಜಕಾರಣ ಕೊನೆಗೊಳಿಸುತ್ತೇವೆ ಎಂದ ಜೆ.ಪಿ ನಡ್ಡಾ: ಜಯ್ ಶಾ ಎಷ್ಟು ಶತಕ ಬಾರಿಸಿದ್ದಾರೆ ಎಂದು...

ಕುಟುಂಬ ರಾಜಕಾರಣ ಕೊನೆಗೊಳಿಸುತ್ತೇವೆ ಎಂದ ಜೆ.ಪಿ ನಡ್ಡಾ: ಜಯ್ ಶಾ ಎಷ್ಟು ಶತಕ ಬಾರಿಸಿದ್ದಾರೆ ಎಂದು ಪ್ರಶ್ನಿಸಿದ DMK

1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿದೆ.

- Advertisement -
- Advertisement -

ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಡಿಎಂಕೆ ಪಕ್ಷಗಳ ನಡುವೆ ವಾಕ್ಸಮರ ಆರಂಭವಾಗಿದೆ. ಹೊಸ ಶಿಕ್ಷಣ ನೀತಿ ಮತ್ತು ನೀಟ್ ಪ್ರವೇಶ ಪರೀಕ್ಷೆ ವಿರುದ್ಧ ತಮಿಳುನಾಡು ಸರ್ಕಾರ ನಿರ್ಣಯ ಕೈಗೊಂಡಿದನ್ನು ಟೀಕಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರು ‘ಅವಿದ್ಯಾವಂತರು ಆಡಳಿತದ ಚುಕ್ಕಾಣಿ ಹಿಡಿದರೆ ಹೀಗಾಗುತ್ತದೆ’ ಎಂದು ಟೀಕಿಸಿದ್ದಾರೆ. ಅಲ್ಲದೆ ಕುಟುಂಬ ರಾಜಕಾರಣದ ಮೂಲಕ ಹಣ ಲೂಟಿ ಹೊಡೆಯುವ ಪಂಚಾಯತ್ ಆಗಿದೆ ಎಂದು ಡಿಎಂಕೆ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.

ತಮಿಳುನಾಡಿನ ಕರೈಕುಡಿಯಲ್ಲಿ ಜೆ.ಪಿ ನಡ್ಡಾ ಮಾತನಾಡುತ್ತಾ, ಜಮ್ಮು ಕಾಶ್ಮೀರ, ಪಶ್ಚಿಮ ಬಂಗಾಳ, ತೆಲಂಗಾಣ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಪ್ರಾದೇಶಿಕ ಪಕ್ಷಗಳಿದ್ದು ವಂಶವಾಹಿ ರಾಜಕಾರಣವನ್ನು ಪ್ರೋತ್ಸಾಹಿಸುತ್ತಿವೆ. ಅವುಗಳನ್ನು ನಿರ್ಮೂಲನೆ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಇದಕ್ಕೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಆಡಳಿತಾರೂಢ ಡಿಎಂಕೆ ಸರ್ಕಾರವು “ಕೇಂದ್ರದಲ್ಲಿ ಅಧಿಕಾರದಲ್ಲಿರುವವರ ಶೈಕ್ಷಣಿಕ ಅರ್ಹತೆ ಕೇಳುವ ಮಟ್ಟಕ್ಕೆ ತಾನು ಇಳಿಯುವುದಿಲ್ಲ” ಎಂದು ತಿರುಗೇಟು ನೀಡಿದೆ. ಕುಟುಂಬ ರಾಜಕಾರಣ ಟೀಕೆಗೆ ಪ್ರತಿಕ್ರಿಯಿಸಿ ‘ಜಯ್ ಶಾ ಯಾರು ಮತ್ತು ಅವರು ಎಷ್ಟು ಶತಕ ಬಾರಿಸಿದ್ದಾರೆ’ ಎಂದು ಪ್ರಶ್ನಿಸಿದೆ.

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ಬಿಜೆಪಿ ಅತಿ ಹೆಚ್ಚು ವಂಶವಾಹಿ ರಾಜಕಾರಣ ಮಾಡುತ್ತಿದೆ. ಗೃಹ ಸಚಿವ ಅಮಿತ್‌ ಶಾರವರ ಮಗ ಜಯ್ ಶಾರವರು ಯಾವುದೇ ಅನುಭವ, ಅರ್ಹತೆ ಇಲ್ಲದಿದ್ದರೂ ಎರಡೆರಡೂ ಬಾರಿಗೆ ಭಾರತದ ಅತಿ ಶ್ರೀಮಂತ ಕ್ರೀಡಾ ಸಂಸ್ಥೆಯಾದ ಬಿಸಿಸಿಐನ ಕಾರ್ಯದರರ್ಶಿಯಾಗಿದ್ದು ಹೇಗೆ ಎಂದು ಡಿಎಂಕೆ ವಕ್ತಾರ ಎ.ಶರವಣನ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಂಶಾಡಳಿತ ರಾಜಕಾರಣದ ವಿರುದ್ಧ ಗುಡುಗಿದ ಮೋದಿ: ಅವರು ಮರೆತ ಬಿಜೆಪಿ ಕುಟುಂಬ ರಾಜಕಾರಣದ ಪಟ್ಟಿ ಇಲ್ಲಿದೆ

ದ್ವೇ‍ಷ ಮತ್ತು ವಿಭಜಕ ಸಿದ್ದಾಂತದ ಸೃಷ್ಟಿಕರ್ತ ಬಿಜೆಪಿ ಪಕ್ಷವಾಗಿದೆ. ಅದು ಬಿಜೆಪಿಯ ನಿಜವಾದ ಮುಖವಾಗಿದೆ. ಯುವಜನರಿಗೆ ಉದ್ಯೋಗ ನೀಡಲು ವಿಫಲವಾಗಿರುವ ಬಿಜೆಪಿಯನ್ನು 2024ರಲ್ಲಿ ತಮಿಳುನಾಡಿನ ಜನ ತಿರಸ್ಕರಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯು ತಮಿಳುನಾಡಿನಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ. ಆದರೆ ಕಳೆದ ಎರಡು ಚುನಾವಣೆಗಳ ಫಲಿತಾಂಶ ನಿರಾಶದಾಯಕವಾಗಿದೆ. ತಮಿಳುನಾಡಿನ 39 ಲೋಕಸಭಾ ಕ್ಷೇತ್ರಗಳಲ್ಲಿ ಒಂದನ್ನು ಸಹ ಗೆಲ್ಲಲು ಸಾಧ್ಯವಾಗಿಲ್ಲ. ಅಲ್ಲದೇ 234 ಕ್ಷೇತ್ರಗಳ ವಿಧಾನಸಭೆಯಲ್ಲಿ ಕೇವಲ 4 ಸದಸ್ಯರನ್ನು ಮಾತ್ರ ಹೊಂದಿದೆ. ಎಐಎಡಿಎಂಕೆ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿರುವ ಅದು ಸದ್ಯ ಎಐಎಡಿಎಂಕೆ ಬಿಕ್ಕಟ್ಟಿನ ರಾಜಕೀಯ ಲಾಭ ಪಡೆಯಲು ಬಿಜೆಪಿ ಯತ್ನಿಸುತ್ತಿದೆ.

ಇನ್ನು ಜೆ.ಪಿ ನಡ್ಡಾರವರು ಕುಟುಂಬ ರಾಜಕಾರಣವನ್ನು ಟೀಕಿಸಿದ್ದಾರೆ. ಆದರೆ ಅವರೆ ಅದರ ಫಲಾನುಭವಿಗಳು ಎಂದು ವಿಪಕ್ಷಗಳು ಟೀಕಿಸಿವೆ. ಸದ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅವರು ಜಬಲ್‌ ಪುರದ ಮಾಜಿ ಸಂಸದೆ ಜಯಶ್ರೀ ಬ್ಯಾನರ್ಜಿಯವರ ಅಳಿಯರಾಗಿದ್ದಾರೆ.

ಮಾರ್ಚ್ 2019 ರಲ್ಲಿ ಬ್ಲೂಮ್‌ಬರ್ಗ್ ಕ್ವಿಂಟ್ ಪ್ರಕಟಿಸಿದ ಇಂಡಿಯಾ ಸ್ಪೆಂಡ್ ಅಧ್ಯಯನದಂತೆ 1999 ರಿಂದ ಕಾಂಗ್ರೆಸ್ 36 ವಂಶಾಡಳಿತದ ಸಂಸತ್ ಸದಸ್ಯರನ್ನು ಲೋಕಸಭೆಗೆ ಆಯ್ಕೆ ಮಾಡಿದ್ದರೆ ಬಿಜೆಪಿಯು ಸಹ 31 ಸದಸ್ಯರನ್ನು ಆಯ್ಕೆ ಮಾಡಿದೆ. ಅದರ ಪೂರ್ಣ ವರದಿ ಓದಲು, ಬಿಜೆಪಿ ವಂಶವಾಹಿನಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕುಟುಂಬ ರಾಜಕಾರಣದ ಆರೋಪ: ಬಿಜೆಪಿ ವಂಶಾಡಳಿತ ರಾಜಕಾರಣದ ಪಟ್ಟಿ ನೀಡಿದ ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...