Homeಮುಖಪುಟಸೋನಿಯಾ ಗಾಂಧಿ ಭೇಟಿಯಾಗಲಿರುವ ನಿತೀಶ್ ಕುಮಾರ್, ಲಾಲು ಯಾದವ್; 2024 ರ ಚುನಾವಣೆಗೆ ಮಹಾಮೈತ್ರಿ?

ಸೋನಿಯಾ ಗಾಂಧಿ ಭೇಟಿಯಾಗಲಿರುವ ನಿತೀಶ್ ಕುಮಾರ್, ಲಾಲು ಯಾದವ್; 2024 ರ ಚುನಾವಣೆಗೆ ಮಹಾಮೈತ್ರಿ?

- Advertisement -
- Advertisement -

ಬಿಹಾರ ಮಹಾಮೈತ್ರಿಕೂಟದ ಇಬ್ಬರು ಉನ್ನತ ನಾಯಕರಾದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳದ ಲಾಲು ಯಾದವ್ ಅವರು ಭಾನುವಾರ ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಕಳೆದ ಆರು ವರ್ಷಗಳ ನಂತರ ಇದು ಅವರ ಮೊದಲ ಭೇಟಿಯಾಗಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ ಕೂಡಾ ಹಾಜರಾಗಬೇಕು ಎಂದು ಅವರಿಬ್ಬರೂ ಆಶಿಸಿದ್ದರು ಎಂದು ಮೂಲಗಳು ತಿಳಿಸಿವೆ. ಆದರೆ ಭಾರತ್‌ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ರಾಹುಲ್‌ ಗಾಂಧಿಯವರು ಕೇರಳದಲ್ಲಿದ್ದು, ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿತೀಶ್ ಕುಮಾರ್ ಮತ್ತು ಸೋನಿಯಾ ಗಾಂಧಿ ಅವರು 2015 ರ ಬಿಹಾರ ಚುನಾವಣೆಯ ಮೊದಲು ರಂಜಾ‌ನ್‌ನ ಇಫ್ತಾರ್‌ನಲ್ಲಿ ಕೊನೆಯ ಬಾರಿ ಭೇಟಿಯಾಗಿದ್ದರು.

ಈ ತಿಂಗಳ ಆರಂಭದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರು ತಮ್ಮ ದೆಹಲಿ ಭೇಟಿಯ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದರು. ಆ ಸಮಯದಲ್ಲಿ ಸೋನಿಯಾ ಗಾಂಧಿ ವೈದ್ಯಕೀಯ ಚಿಕಿತ್ಸೆಗಾಗಿ ವಿದೇಶದಲ್ಲಿದ್ದರು.

ಇದನ್ನೂ ಓದಿ: ದೇಶದ ಎಲ್ಲಾ ಪ್ರಮುಖ ವಿಪಕ್ಷಗಳ ನಾಯಕರ ಭೇಟಿಯಾದ ಬಿಹಾರ ಸಿಎಂ ನಿತೀಶ್ ಕುಮಾರ್‌‌

ಲಾಲೂ ಪ್ರಸಾದ್‌ ಯಾದವ್‌ ಅವರು ಮೇವು ಹಗರಣದ ಪ್ರಕರಣಗಳಲ್ಲಿ 2018 ರಲ್ಲಿ ಜೈಲು ಪಾಲಾಗಿದ್ದರು. ಅನಾರೋಗ್ಯದ ಜಾಮೀನಿನ ಮೇಲೆ ಹೊರಗಿರುವ ಅವರು ಮುಂಬರುವ ವಾರಗಳಲ್ಲಿ ಮೂತ್ರಪಿಂಡ ಕಸಿಗಾಗಿ ಸಿಂಗಾಪುರಕ್ಕೆ ಹೋಗಲಿದ್ದಾರೆ.

ಸೋನಿಯಾ ಗಾಂಧಿಯನ್ನು ಬಿಹಾರದ ಇಬ್ಬರು ಪ್ರಮುಖ ರಾಜಕೀಯ ನಾಯಕರ ಭೇಟಿಯನ್ನು ಸೌಜನ್ಯದ ಭೇಟಿ ಎಂದು ಮೂಲಗಳು ಸೂಚಿಸಿದರೆ, ಮಹಾಮೈತ್ರಿಕೂಟವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯುವುದು ಸೇರಿದಂತೆ ಕೆಲವು ಗಂಭೀರ ವಿಷಯಗಳ ಚರ್ಚೆ ನಡೆಯುವ ಸಾಧ್ಯತೆಯು ಇದೆ ಎಂದು ವರದಿಯಾಗಿದೆ.

ರಾಷ್ಟ್ರಮಟ್ಟದಲ್ಲಿ ಮಹಾಮೈತ್ರಿಕೂಟದ ಸಾಧ್ಯತೆಯನ್ನು ಬಿಹಾರದ ನಾಯಕರು ಪರಿಶೋಧಿಸುತ್ತಿದ್ದು, ವಿಶೇಷವಾಗಿ 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಬಿಜೆಪಿ ವಿರುದ್ಧದ ಒಗ್ಗಟ್ಟಿನ ರಂಗಕ್ಕೆ ವಿರೋಧ ಪಕ್ಷವನ್ನು ಹೆಣೆಯುವಲ್ಲಿ ನಿತೀಶ್‌ ಕುಮಾರ್ ಕೆಲಸ ಮಾಡುತ್ತಿದ್ದಾರೆ.

ಕಾಂಗ್ರೆಸ್ ತನ್ನ ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಿದ್ಧತೆ ನಡೆಸುತ್ತಿರುವ ನಡುವೆ ಈ ಭೇಟಿ ನಡೆಯುತ್ತಿದೆ. ಗುರುವಾರದಿಂದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಇದನ್ನೂ ಓದಿ: ‘ಕಾಂಗ್ರೆಸ್ ಇನ್ನೂ ದೊಡ್ಡ ಪಕ್ಷ’: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌

ಆರಂಭದಲ್ಲಿ ಕೇರಳ ಸಂಸದ ಶಶಿ ತರೂರ್ ಮತ್ತು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನಡುವೆ ನಡೆಯಬಹುದೆಂದು ನಿರೀಕ್ಷಿಸಲಾದ ಸ್ಪರ್ಧೆಯು, ಇದೀಗ ಬಹುಕೋನ ಸ್ಪರ್ಧೆ ನಡೆಯುವ ಸಾಧ್ಯತೆ ಇರಬಹುದು ಎನ್ನಲಾಗಿದ್ದು, ಪಕ್ಷದ ಮತ್ತೊಬ್ಬ ನಾಯಕ ಮನೀಶ್ ತಿವಾರಿ ಹಾಗೂ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಸೇರಿದಂತೆ ಹಲವಾರು ನಾಯಕರು ಆಸಕ್ತಿ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...