Homeಮುಖಪುಟಬಿಎಂಎಸ್ ಟ್ರಸ್ಟ್ ಅಕ್ರಮ: ಸಚಿವ ಅಶ್ವಥ್ ನಾರಾಯಣ್ ರಾಜೀನಾಮೆಗೆ ಮಾಜಿ ಸಿಎಂ ಎಚ್‌ಡಿಕೆ ಒತ್ತಾಯ

ಬಿಎಂಎಸ್ ಟ್ರಸ್ಟ್ ಅಕ್ರಮ: ಸಚಿವ ಅಶ್ವಥ್ ನಾರಾಯಣ್ ರಾಜೀನಾಮೆಗೆ ಮಾಜಿ ಸಿಎಂ ಎಚ್‌ಡಿಕೆ ಒತ್ತಾಯ

- Advertisement -
- Advertisement -

ಬೆಂಗಳೂರಿನ BMS ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ನಲ್ಲಿ ಹಲವಾರು ಅಕ್ರಮಗಳು ನಡೆದಿದ್ದು, ಇದಕ್ಕೆ ಕಾರಣರಾದ ಸಚಿವ ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಬುಧವಾರ ಸದನದಲ್ಲಿ ವಿವರವಾಗಿ ಮಾತನಾಡಿದ ಅವರು, BMS ಟ್ರಸ್ಟ್‌ಗೆಗೆ ದಾನಿ ಟ್ರಸ್ಟಿ ಮತ್ತು ಅಜೀವ ಟ್ರಸ್ಟಿ ನೇಮಕಾತಿಯಲ್ಲಿ ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಅಕ್ರಮಗಳನ್ನು ಎಸಗಲಾಗಿದೆ. ಟ್ರಸ್ಟಿನ ಮೂಲ ಡೀಡ್ ನ ಷರತ್ತುಗಳ ಉಲ್ಲಂಘನೆ ಮಾಡಲಾಗಿದೆ. ಕೆಲ ಪಟ್ಟಭದ್ರ ಹಿತಾಸಕ್ತಿಗಳು BMS ಎಜ್ಯುಕೇಷನಲ್ ಟ್ರಸ್ಟ್ ಅನ್ನು ಹೊಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಸಾವಿರಾರು ಕೋಟಿ ರೂ. ಮೌಲ್ಯದ ಸರಕಾರಿ ಸ್ವತ್ತನ್ನು ಬಿಜೆಪಿ ಸರ್ಕಾರ ಸದ್ದಿಲ್ಲದೆ ಖಾಸಗಿ ರಿಯಲ್ ಎಸ್ಟೇಟ್ ಪಟ್ಟಭದ್ರರಿಗೆ ಧಾರೆ ಎರೆದುಕೊಡುತ್ತಿದೆ. BMS ಎಂಜೀಯರಿಂಗ್‌ ಕಾಲೇಜಿನಲ್ಲಿ ಸೀಟ್‌ ಬ್ಲಾಕಿಂಗ್‌, ಪೇಮೆಂಟ್‌ ಸೀಟುಗಳನ್ನು 50:50 ರಂತೆ ಟ್ರಸ್ಟಿಗಳಿಬ್ಬರು ಹಂಚಿಕೊಂಡಿದ್ದಾರೆ. ಕಾಮೆಡ್-ಕೆ ಆಕ್ಷೇಪಣಾ ಪತ್ರ, ಸರಕಾರದ ಇಬ್ಬರು ಅಧಿಕಾರಿಗಳು ಟ್ರಸ್ಟಿನ ಅಕ್ರಮಗಳ ಬಗ್ಗೆ ಪತ್ರಗಳನ್ನು ಬರೆದಿದ್ದಾರೆ. ಆದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಅವರು ಕಿಡಿಕಾರಿದರು.

2018ರಲ್ಲಿ ನಾವು ಅಧಿಕಾರದಲ್ಲಿದ್ದಾಗ ದಾನಿ ಟ್ರಸ್ಟಿ, ಅಜೀವ ಟ್ರಸ್ಟಿ ನೇಮಕದ ಬಗ್ಗೆ BMS ಟ್ರಸ್ಟಿನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳು ಅಕ್ರಮ ಎಂದು ಸಾರಿ, ಆ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿಸಿದ್ದೆವು. ಆದರೆ ಈಗಿನ ಬಿಜೆಪಿ ಸರಕಾರ ಈ ಅಕ್ರಮ ತಿದ್ದುಪಡಿಗಳನ್ನು ಶರವೇಗದಲ್ಲಿ ಪುರಸ್ಕರಿಸಿದ್ದು ಹೇಗೆ? ಎಂದು ಅವರು ಪ್ರಶ್ನಿಸಿದ್ದಾರೆ.

ಸದನದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡಿದ ಅವರು, BMS ಟ್ರಸ್ಟ್‌ʼನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಟ್ರಸ್ಟ್‌ ಮತ್ತು ಅದರ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು. ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್‌ರವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್‌ರವರು ದಾಖಲೆಗಳಲ್ಲಿ ಏನೂ ಇಲ್ಲ. ಕುಮಾರಸ್ವಾಮಿಯವರು ಕೇವಲ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ ಎಂದಿದ್ದಾರೆ. ಇದರಿಂದ ಕ್ರೋಧಗೊಂಡ ಕುಮಾರಸ್ವಾಮಿಯವರು ನನ್ನ ಬಗ್ಗೆ ಮಾತನಾಡುವ ಯೋಗ್ಯತೆ ನಿನಗೆದೆಯೇ? ನಾನು ಯಾರ ಮನೆ ಹಾಳು ಮಾಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಅಶ್ವಥ್ ನಾರಾಯಣ್ ಸಹ ನನ್ನ ಬಗ್ಗೆ ಮಾತನಾಡಲು ನಿಮಗೆ ಯೋಗ್ಯತೆಯಿಲ್ಲ ಎಂದು ಪ್ರತಿಕ್ರಿಸಿದರು.

ಇಂದು ಸದನದಲ್ಲಿ ಎಚ್.ಡಿ ಕುಮಾರಸ್ವಾಮಿಯವರು ಎತ್ತಿರುವ ಪ್ರಶ್ನೆಗಳಿಗೆ ಅಶ್ವಥ್ ನಾರಾಯಣ್‌ರವರು ಉತ್ತರಿಸಬೇಕಾಗಿದ್ದು, ಅದಕ್ಕೆ ಮುಂಚೆ ಇಂದು ಸಿಎಂ ಬೊಮ್ಮಾಯಿಯವರೊಂದಿಗೆ ಚರ್ಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ; ಸಾರ್ವಕಾಲಿಕ ಕುಸಿತ: ಡಾಲರ್ ಎದುರು ರೂಪಾಯಿ ಮೌಲ್ಯ 81 ರೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...