Homeಅಂತರಾಷ್ಟ್ರೀಯ‘ದ್ವೇಷಾಪರಾಧ ಹೆಚ್ಚಳ’: ಕೆನಡಾದಲ್ಲಿರುವ ಭಾರತೀಯರಿಗೆ ಎಚ್ಚರಿಕೆಯಿಂದ ಇರುವಂತೆ ಕೇಳಿಕೊಂಡ ಭಾರತ

‘ದ್ವೇಷಾಪರಾಧ ಹೆಚ್ಚಳ’: ಕೆನಡಾದಲ್ಲಿರುವ ಭಾರತೀಯರಿಗೆ ಎಚ್ಚರಿಕೆಯಿಂದ ಇರುವಂತೆ ಕೇಳಿಕೊಂಡ ಭಾರತ

- Advertisement -
- Advertisement -

ಕೆನಡಾದಲ್ಲಿ ದ್ವೇಷಪರಾಧಗಳು, ಪ್ರತ್ಯೇಕತಾವಾದ ಹಿಂಸಾಚಾರ ಮತ್ತು ಭಾರತ ವಿರೋಧಿ ಚಟುವಟಿಕೆಗಳ ತೀವ್ರ ಹೆಚ್ಚಳಗೊಂಡಿದ್ದು, ಈ ಹಿನ್ನಲೆಯಲ್ಲಿ ಕೆನಡಾದಲ್ಲಿರುವ ಭಾರತೀಯ ಪ್ರಜೆಗಳು ಮತ್ತು ಆ ದೇಶಕ್ಕೆ ಪ್ರಯಾಣಿಸುವ ಭಾರತೀಯರಿಗೆ ಎಚ್ಚರಿಕೆಯಿಂದ ಇರಲು ಭಾರತ ಶುಕ್ರವಾರ ಸಲಹೆ ನೀಡಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಸಲಹೆ ನೀಡಿದೆ. ಕೆನಡಾದ ಹೈಕಮಿಷನ್ ಅಥವಾ ಕಾನ್ಸುಲೇಟ್ ಜನರಲ್ ಅವರು ಕೆನಡಾದ ಅಧಿಕಾರಿಗಳೊಂದಿಗೆ ಈ ಘಟನೆಗಳ ಬಗ್ಗೆ ಗಮನಸೆಳೆದಿದ್ದು, ಈ ಅಪರಾಧಗಳ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ವಿನಂತಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆನಡಾದಲ್ಲಿ ಈ ಅಪರಾಧ ಎಸಗುವ ಅಪರಾಧಿಗಳನ್ನು ಇದುವರೆಗೆ ಕಾನೂನಿನ ಕುಣಿಕೆಗೆ ಒಳಪಡಿಸಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ.

ಇದನ್ನೂ ಓದಿ: ಕೆನಡಾ: ದ್ವೇಷಪೂರಿತ ದಾಳಿಗೆ ಒಂದೇ ಕುಟುಂಬದ ನಾಲ್ವರು ಬಲಿ

“ಮೇಲೆ ವಿವರಿಸಿದಂತೆ ಅಪರಾಧಗಳ ಹೆಚ್ಚುತ್ತಿರುವ ಘಟನೆಗಳ ಹಿನ್ನಲೆಯಲ್ಲಿ, ಭಾರತೀಯ ಪ್ರಜೆಗಳು ಮತ್ತು ಕೆನಡಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ಶಿಕ್ಷಣಕ್ಕಾಗಿ ಅಥವಾ ಇತರ ಪ್ರಯಾಣಕ್ಕಾಗಿ ಕೆನಡಾಕ್ಕೆ ತೆರಳುವವರು ಸರಿಯಾದ ಎಚ್ಚರಿಕೆಯನ್ನು ವಹಿಸಬೇಕು ಮತ್ತು ಜಾಗರೂಕರಾಗಿರಲು ಸೂಚಿಸಲಾಗಿದೆ” ಎಂದು ಸಚಿವಾಲಯದ ಸಲಹೆಯು ಹೇಳಿದೆ.

ಇದನ್ನೂ ಓದಿ: ಸೆಪ್ಟೆಂಬರ್‌ 5 ‘ಗೌರಿ ಲಂಕೇಶ್‌ ದಿನ’ ಎಂದು ಘೋಷಿಸಿದ ಕೆನಡಾದ ಬರ್ನಾಬಿ ನಗರ!

ಭಾರತೀಯ ಪ್ರಜೆಗಳು ಮತ್ತು ಕೆನಡಾದಲ್ಲಿರುವ ಭಾರತದ ವಿದ್ಯಾರ್ಥಿಗಳು ಸಚಿವಾಲಯದ ವೆಬ್‌ಸೈಟ್‌ಗಳು ಅಥವಾ MADAD ಪೋರ್ಟಲ್ madad.gov.in ಮೂಲಕ ಒಟ್ಟಾವಾದಲ್ಲಿರುವ ಭಾರತದ ಹೈಕಮಿಷನ್ ಅಥವಾ ಟೊರೊಂಟೊ ಮತ್ತು ವ್ಯಾಂಕೋವರ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್‌ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.

ಯಾವುದೇ ಅವಶ್ಯಕತೆ ಅಥವಾ ತುರ್ತು ಸಂದರ್ಭದಲ್ಲಿ ಕೆನಡಾದಲ್ಲಿರುವ ಭಾರತೀಯ ನಾಗರಿಕರೊಂದಿಗೆ ಉತ್ತಮ ಸಂಪರ್ಕ ಸಾಧಿಸಲು ಈ ನೋಂದಣಿಯು ಹೈ ಕಮಿಷನ್ ಮತ್ತು ಕಾನ್ಸುಲೇಟ್ ಜನರಲ್ ಅನ್ನು ಸಕ್ರಿಯಗೊಳಿಸುತ್ತದೆ ಎಂದು ಅದು ಹೇಳಿದೆ.

ಟೊರೊಂಟೊದಲ್ಲಿರುವ BAPS ಸ್ವಾಮಿನಾರಾಯಣ ಮಂದಿರದಲ್ಲಿ ಭಾರತ ವಿರೋಧಿ ಬರಹಗಳನ್ನು ಬರೆದು ವಿರೂಪಗೊಳಿಸಲಾಯಿತು ಎಂದು ಆರೋಪಿಸಲಾಗಿದೆ. ಘಟನೆಯ ನಂತರ ಭಾರತೀಯ ಹೈಕಮಿಷನ್ ಕಳೆದ ವಾರ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಘಟನೆಯ ಬಗ್ಗೆ ತನಿಖೆ ಮಾಡಲು ಮತ್ತು ದುಷ್ಕರ್ಮಿಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ ಕೆನಡಾದ ಅಧಿಕಾರಿಗಳನ್ನು  ವಿನಂತಿಸಿದೆ.

ಇದನ್ನೂ ಓದಿ: ‘ಎಂದೆಂದಿಗೂ ನೀ ಕನ್ನಡವಾಗಿರು’; ಕೆನಡಾದ ಸಂಸತ್ತಿನಲ್ಲಿ ಮೊಳಗಿದ ರಾಷ್ಟ್ರಕವಿ ಕುವೆಂಪು ಗೀತೆ!

ಕೆನಡಾ ಭಾರತೀಯ ಮೂಲದ 16 ಲಕ್ಷ ಜನರಿಗೆ ಮತ್ತು ಅನಿವಾಸಿ ಭಾರತೀಯರಿಗೆ ನೆಲೆಯಾಗಿದೆ. ಪ್ರಪಂಚದಾದ್ಯಂತದ ಭಾರತೀಯರು ಅತೀ ಹೆಚ್ಚು ಇರುವ ರಾಷ್ಟ್ರಗಳಲ್ಲಿ ಕೆನಡಾ ಕೂಡಾ ಒಂದಾಗಿದೆ. ಅಲ್ಲದೆ ಕೆನಡಾದಲ್ಲಿ ರಕ್ಷಣಾ ಸಚಿವೆ ಅನಿತಾ ಆನಂದ್ ಸೇರಿದಂತೆ ಭಾರತೀಯ ಮೂಲದ 17 ಸಂಸದರು ಮತ್ತು ಮೂವರು ಕ್ಯಾಬಿನೆಟ್ ಮಂತ್ರಿಗಳು ದೇಶದ ಆಡಳಿತರೂಢ ಸರ್ಕಾರದಲ್ಲಿ ಇದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...