Homeಮುಖಪುಟಕೊಳಕಾಗಿದ್ದ ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ; ನಾಟಕ ಎಂದ ಜನರು

ಕೊಳಕಾಗಿದ್ದ ಶೌಚಾಲಯವನ್ನು ಬರಿಗೈಯಲ್ಲಿ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ; ನಾಟಕ ಎಂದ ಜನರು

- Advertisement -
- Advertisement -

ಬಿಜೆಪಿ ಸಂಸದ ಜನಾರ್ದನ್‌ ಮಿಶ್ರಾ ಅವರು ಮಧ್ಯಪ್ರದೇಶದ ಖಟ್ಖಾರಿಯ ಬಾಲಕಿಯರ ಶಾಲೆಯ ಶೌಚಾಲಯವನ್ನು ತಮ್ಮ ಬರಿ ಕೈಗಳಿಂದ ಸ್ವಚ್ಛಗೊಳಿಸಿದ್ದಾರೆ. ರೇವಾ ಕ್ಷೇತ್ರದ ಸಂಸದರಾಗಿರುವ ಅವರು ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೀಡಿಯೋದಲ್ಲಿ ಮಿಶ್ರಾ ಅವರು ಯಾವುದೇ ಇತರ ಉಪಕರಣಗಳು ಅಥವಾ ನೈರ್ಮಲ್ಯ ಉತ್ಪನ್ನಗಳನ್ನು ಬಳಸದೆ ತನ್ನ ಬರಿ ಕೈಗಳಿಂದ ಸ್ವಚ್ಛಗೊಳಿಸುತ್ತಿರುವುದನ್ನು ಕಾಣಬಹುದು. ಇಷ್ಟೆ ಅಲ್ಲದೆ ಈ ವಿಡಿಯೊವನ್ನು ತಮ್ಮ ಟ್ವಿಟರ್‌ ಹ್ಯಾಂಡಲ್‌ನಲ್ಲೂ ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪಕ್ಷದಿಂದ ನಡೆಸುತ್ತಿರುವ ಸೇವಾ ಪಖ್ವಾಡದ ಅಡಿಯಲ್ಲಿ, ಯುವ ಮೋರ್ಚಾ ಖಟ್ಖಾರಿಯ ಬಾಲಕಿಯರ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮದ ನಂತರ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಿದೆ” ಎಂದು ಅವರು ಟ್ವಿಟರ್‌ನಲ್ಲಿ ಬರೆದು ಕೊಂಡಿದ್ದಾರೆ. ಈ ಟ್ವೀಟನ್ನು ಅವರು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಇತರರಿಗೂ ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿ ಟೀಕೆ: ‘ಜಯ್ ಶಾ ಎಷ್ಟು ಶತಕಗಳನ್ನು ಬಾರಿಸಿದ್ದಾರೆ?’ ಎಂದ DMK

ಪಕ್ಷದ ವತಿಯಿಂದ ನಡೆಯುತ್ತಿರುವ ಸೇವಾ ಪಖವಾಡದ ಅಡಿಯಲ್ಲಿ ಯುವ ಮೋರ್ಚಾ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಿಶ್ರಾ ಬಾಲಕಿಯರ ಶಾಲೆಗೆ ತೆರಳಿದ್ದರು. ಅಲ್ಲಿ ಗಿಡ ನೆಟ್ಟ ನಂತರ ಶಾಲೆಯಲ್ಲಿ ಶೌಚಾಲಯ ತುಂಬಾ ಕೊಳಕಾಗಿದ್ದು, ಅದನ್ನು ಬಳಸಲು ತುಂಬಾ ಕಷ್ಟವಾಗಿದೆ ಎಂದು ತಿಳಿದ ಅವರು ಬಕೆಟ್‌ನಲ್ಲಿದ್ದ ನೀರನ್ನು ತೆಗೆದು ಕೈಯಿಂದ ಉಜ್ಜಿ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಪ್ರಧಾನಿ ಮೋದಿಯವರ ‘ಸ್ವಚ್ಛ ಭಾರತ್ ಅಭಿಯಾನ’ದ ಕಟ್ಟಾ ಬೆಂಬಲಿಗರಾದ ಅವರು ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದು ಇದೇ ಮೊದಲ ಬಾರಿಯಲ್ಲ. ಫೆಬ್ರವರಿ 2018 ರಲ್ಲಿ, ಅವರು ತಮ್ಮ ಕ್ಷೇತ್ರದ ಪ್ರಾಥಮಿಕ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಅಲ್ಲದೆ 2021 ರಲ್ಲೂ ಅವರು ಕೊರೊನಾ ಸೆಂಟರ್‌‌ನ ಶೌಚಾಲಯವನ್ನು ಕೈಯಿಗಳಿಂದ ಸ್ವಚ್ಛಗೊಳಿಸಿದ್ದರು.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ – ಪೊಲೀಸ್ ವಾಹನಕ್ಕೆ ಬೆಂಕಿ

ಸಾಮಾಜಿಕ ಮಾಧ್ಯಮಗಳಲ್ಲಿ ಈ ಬಗ್ಗೆ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ಸಾಮಾಜಿಕ ಕಾರ್ಯಕರ್ತರೊಬ್ಬರು ಇದನ್ನು ‘ನಾಟಕ’ ಎಂದು ಕರೆದಿದ್ದಾರೆ. “ಇದು ತುಂಬಾ ಕೊಳಕು ನಡೆಯಾಗಿದೆ. ತಮ್ಮ ನಾಯಕರನ್ನು ಸೆಳೆಯಲು ಬೇಕಾಗಿ ಹೀಗೆ ಮಾಡುತ್ತಿದ್ದಾರೆ. ಶೌಚಾಲಯ ತೊಳೆಯಲು ಕನಿಷ್ಠ ಪಕ್ಷ ಸ್ವಚ್ಛತಾ ಉಪಕರಣಗಳನ್ನು ಬಳಸಿಕೊಳ್ಳಬಹುದಿತ್ತು” ಎಂದು ಅವರು ಹೇಳಿದ್ದಾರೆ.

“ಸಂಸದರ ಕೆಲಸವೇನು? ಶೌಚಾಲಯ ಸ್ವಚ್ಛ ಮಾಡುವುದೆ? ಅವರು ತಮ್ಮ ಕ್ಷೇತ್ರದಲ್ಲಿ ಇರುವ ಎಲ್ಲಾ ಶಾಲೆಗಳ ಶೌಚಾಲಯವನ್ನೂ ಹೀಗೆ ಸ್ವಚ್ಛ ಮಾಡುತ್ತಾರೆಯೆ? ಶಾಲೆಗಳಿಗೆ ಬೇಕಾದ ಮೂಲಭೂತ ಸೌಲಭ್ಯ ಕೊಟ್ಟು ಅದರ ನಿರ್ವಹಣೆಗೆ ವ್ಯವಸ್ಥೆ ಮಾಡಿದರೆ ಸಾಕಿತ್ತು. ಇಷ್ಟು ನಾಟಕ ಮಾಡುವ ಸಂದಂರ್ಭ ಇರುತ್ತಿರಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...