Homeಮುಖಪುಟಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು...

ಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು…

- Advertisement -
- Advertisement -

ಕರ್ನಾಟಕ ರಾಜ್ಯ ರಾಜಕಾರಣದಿಂದಲೇ ಮಾತು ಆರಂಭಿಸಬಹುದು. ಮಲೆನಾಡು ಹಾಗೂ ಕರಾವಳಿ ಕರ್ನಾಟಕ ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಕೊಲೆಗಳಿಗೆ ಪದೇಪದೇ ಸಾಕ್ಷಿಯಾಗುತ್ತಲೇ ಇದೆ. ಹಿಂದೂ- ಮುಸ್ಲಿಂ ಸಮುದಾಯದ ಯುವಕರು ಧರ್ಮದ ಕಾರಣಕ್ಕೆ ಹೊಡೆದಾಡಿಕೊಂಡು ಸಾಯುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಸರಣಿ ಕೊಲೆಗಳು ನಡೆದವು. ಮಸೂದ್ ಎಂಬ ಯುವಕ ಕ್ಷುಲ್ಲಕ ಕಾರಣಕ್ಕೆ ಕೊಲೆಯಾದನು. ನಂತರ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರನ್ನು ಕೊಲ್ಲಲಾಗುತ್ತದೆ. ಇದಕ್ಕೆ ಪ್ರತಿಕಾರವೆಂಬಂತೆ ಫಾಜಿಲ್ ಎಂಬ ಅಮಾಯಕನ ಹೆಣ ಬಿತ್ತು. ಹೀಗೆ ‘ಕೊಲೆಗೆ ಕೊಲೆ’, ‘ರಕ್ತಕ್ಕೆ ರಕ್ತ’ ಎಂಬ ಭೀಕರ ಚರಿತ್ರೆಯನ್ನು ಕರ್ನಾಟಕದ ರಾಜಕೀಯ ಪರಿಸರದಲ್ಲಿ ಕಟ್ಟುತ್ತಿರುವುದು ವಿಷಾದನೀಯ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಾಚೆಗೆ ಜಿಗಿದು, ದ್ವೇಷದ ಎಲ್ಲೆ ಮೀರಿದಾಗ ಕೊಲೆ ಮಾಡುವ ಮಟ್ಟಕ್ಕೆ ಹೋಗುತ್ತಾರೆ. ಭಿನ್ನಮತದ ಸಹಿಷ್ಣುತೆ ಇಲ್ಲವಾದಾಗ ಈ ಅತಿರೇಕಕ್ಕೆ ಕಡಿವಾಣ ಇಲ್ಲವಾಗುತ್ತದೆ. ಈ ಮೇಲಾಟಗಳಿಂದಾಗಿ ಯಾವ ಪರಿಣಾಮಗಳು ಬೀರುತ್ತವೆ? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕು.

2015ರಲ್ಲಿ ಶಿವಮೊಗ್ಗದಲ್ಲಿ ನಡೆದ ಘಟನೆ. ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ಹಿಂದುತ್ವ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬದ ಪರ ಹಿಂದುತ್ವ ಸಂಘಟನೆಗಳು ನಿಂತವು. ಆ ನಂತರ ಏನಾಯಿತು?

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುವಂತಾಯಿತು. ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾದ ಬಳಿಕ ಆತನ ಕುಟುಂಬಕ್ಕೆ ರಾಜಕಾರಣಿಗಳು ಭರಪೂರ ನೆರವು ನೀಡುವಾಗ, ಮೀನಾಕ್ಷಮ್ಮನ ಬದುಕು ‘ಚಿಂದಿ’ಯಾಗಿರುವುದು ಸುದ್ದಿಯಾಗಿತ್ತು.

ರಾಜಕೀಯ ಕೊಲೆಗಳಾದಾಗ ಶವ ಮೆರವಣಿಗೆ ಮಾಡುವುದು, ಕೊಲೆ ಮಾಡಿ ಜೈಲಿಗೆ ಹೋಗಿ ಬಂದವನಿಗೆ ಹಾರ ತುರಾಯಿ ಹಾಕಿ ಸನ್ಮಾನಿಸುವುದು- ಇವೆಲ್ಲ ಸಮಾಜಕ್ಕೆ ಯಾವ ಸಂದೇಶವನ್ನು ನೀಡುತ್ತವೆ?

ಹಿರಿಯ ನಿರ್ದೇಶಕ ‘ಸಿಬಿ ಮಲಯಿಲ್’ ನಿರ್ದೇಶನದ ‘ಕೊತ್ತು’ (ಇರಿತ/ಮಲಯಾಳಂ) ಸಿನಿಮಾ ನೋಡಿದರೆ ಕರ್ನಾಟಕ ಹಾಗೂ ಇಡೀ ದೇಶದ ರಾಜಕೀಯ ಕೊಲೆಗಳ ಪರಿಣಾಮಗಳು ಕಣ್ಣಮುಂದೆ ಬರುತ್ತವೆ. ರಕ್ತಕ್ಕೆ ರಕ್ತ, ಕೊಲೆಗೆ ಕೊಲೆ ಎಂದು ಹೊರಟರೆ ಮನುಷ್ಯನ ನೆಮ್ಮದಿ ಹಾಳಾಗುತ್ತದೆ. ಸಾವನ್ನು ಕೈಯಲ್ಲಿ ಹಿಡಿದುಕೊಂಡು ಬದುಕಬೇಕಾದ ಸ್ಥಿತಿ ಉಂಟಾಗುತ್ತದೆ. ಕೊಲೆಯಾದವರ ಕುಟುಂಬ ಬೀದಿಗೆ ಬಿದ್ದು, ನರಳಬೇಕಾಗುತ್ತದೆ.

‘ಅಯ್ಯಪ್ಪನುಂ ಕೋಶಿಯುಮ್‌’, ‘ನಾಯಟ್ಟು’ ಸಿನಿಮಾ ನಿರ್ಮಾಪಕರಾದ ರಂಜಿತ್‌, ಪಿ.ಎಂ.ಸಸಿಧರನ್‌ ನಿರ್ಮಾಣದ ‘ಕೊತ್ತು’- ಈ ಕಾಲದ ರಾಜಕೀಯ ಕಥನ. ‘ಕೇಸರಿ’ ಮತ್ತು ‘ಕೆಂಪು’- ರಾಜಕೀಯ ಗುಂಪುಗಳ ನಡುವಿನ ಜಿದ್ದಾಜಿದ್ದಿ, ವೈಷಮ್ಯದ ಕಥೆಯನ್ನು ಕೇರಳದ ಪರಿಸರದ ಮೂಲಕ ಹೇಳಲಾಗುತ್ತಿದೆಯಾದರೂ, ಭಾರತದ ಯಾವುದೇ ಪ್ರಾಂತ್ಯದಲ್ಲಿ ನಡೆಯಬಹುದಾದ ರಾಜಕೀಯ ಕಥೆಯನ್ನು ಇಲ್ಲಿ ತೋರಿಸಲಾಗಿದೆ. ಈ ಎರಡು ಗುಂಪುಗಳ ನಡುವೆ ಹರಿಯುತ್ತಿರುವ ಕೊನೆಯಿಲ್ಲದ ರಕ್ತವು, ಮನುಷ್ಯನ ನೆಮ್ಮದಿಯನ್ನು ಹಾಳುಗೆಡುವುತ್ತದೆ. ಊರು ಊರುಗಳ ನಡುವೆ, ಕೇರಿ ಕೇರಿಗಳ ನಡುವೆ ಗೋಡೆಗಳನ್ನು ನಿರ್ಮಿಸುತ್ತದೆ. ರಾಜಕೀಯ ಕೊಲೆಗಳಾಚೆಗೆ ಎದುರಾಗುವ ಬದುಕಿನ ಸಂದಿಗ್ಧತೆಗಳು ಇಕ್ಕಟ್ಟಿಗೆ ಸಿಲುಕಿಸುತ್ತವೆ.

‘ಕೊಲೆ’ ಎಂಬ ಕ್ರಿಯೆಗೆ ‘ಪ್ರತಿಕೊಲೆ’ಯಷ್ಟೇ ಪ್ರತಿಕ್ರಿಯೆಯಾಗಿರಲಾರದು. ಅದರಾಚೆಗೂ ಬೀರುವ ಸಾಮಾಜಿಕ ಪರಿಣಾಮಗಳತ್ತ ಗಮನ ಹರಿಸಬೇಕಾಗುತ್ತದೆ. ಜೀವಹಾನಿಯ ಜೊತೆಗೆ ಆರ್ಥಿಕ ನಷ್ಟ, ಕೌಂಟುಬಿಕ ಕಲಹ- ಎಲ್ಲವೂ ಸುತ್ತಿಕೊಳ್ಳುತ್ತವೆ. ‘ಕೆಂಪು’ ಪಡೆಯ ರಾಜಕೀಯ ನಾಯಕನನ್ನು ಕೇಸರಿ ಪಡೆ ಕೊಲೆ ಮಾಡುವುದರೊಂದಿಗೆ ಆರಂಭವಾಗುವ ಈ ಸಿನಿಮಾ, ಸರಣಿ ಅಪರಾಧಗಳಿಗೆ ಸಾಕ್ಷಿಯಾಗುತ್ತಾ ಹೋಗುತ್ತದೆ. ‘ಮನೆಯೊಳಗಿನ ಕಿಚ್ಚು- ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು’ ಎಂಬ ವಚನಕಾರರ ಸಂದೇಶ ನೆನಪಾಗುತ್ತದೆ.

ಇದನ್ನೂ ಓದಿರಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಗಾಂಧಿ ತೋರಿದ ಅಹಿಂಸಾ ಮಾರ್ಗದಲ್ಲಿ ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾದದ್ದು ಇಂದಿನ ತುರ್ತು. ನಮ್ಮ ಮುಂದಿನ ಪೀಳಿಗೆಗೆ ಯಾವ ಇತಿಹಾಸವನ್ನು ಬಿಟ್ಟು ಹೋಗುತ್ತಿದ್ದೇವೆ ಎಂಬ ಎಚ್ಚರಿಕೆಯೂ ನಮಗೆ ಮುಖ್ಯ. ಪ್ರತಿಕಾರಕ್ಕೆ ಇಳಿದಾಗ ಅನಾಥವಾಗುವ ಕುಟುಂಬ ನಮ್ಮ ಕಣ್ಣಮುಂದೆ ಬರಬೇಕು ಎಂಬ ಸಂದೇಶವನ್ನು ‘ಕೊತ್ತು’ ನೀಡಿದೆ.

‘ಜೇಕ್ಸ್‌ ಬಿಜಾಯ್‌’ ಅವರ ಹಿನ್ನೆಲೆ ಸಂಗೀತವು ದೃಶ್ಯಗಳ ತೀವ್ರತೆಯನ್ನು ಹೆಚ್ಚಿಸಿದೆ. ಹೇಮಂತ್‌ಕುಮಾರ್‌ ಅವರು ಇಂದಿನ ರಾಜಕೀಯ ಕೊಲೆಗಳನ್ನು ಸಶಕ್ತವಾಗಿ ತಮ್ಮ ಕಥೆಯೊಳಗೆ ತಂದಿದ್ದಾರೆ. ಎಂದಿನಂತೆ ಆಸಿಫ್‌ ಅಲಿ, ನಿಖಿಲಾ ವಿಮಲ್‌, ರೋಷನ್ ಮ್ಯಾಥ್ಯೂ, ರಂಜಿತ್‌, ಶ್ರೀಲಕ್ಷ್ಮೀ ಮೊದಲಾದವರು ಮನೋಜ್ಞವಾಗಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...