Homeಮುಖಪುಟಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು...

ಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು…

- Advertisement -
- Advertisement -

ಕರ್ನಾಟಕ ರಾಜ್ಯ ರಾಜಕಾರಣದಿಂದಲೇ ಮಾತು ಆರಂಭಿಸಬಹುದು. ಮಲೆನಾಡು ಹಾಗೂ ಕರಾವಳಿ ಕರ್ನಾಟಕ ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಕೊಲೆಗಳಿಗೆ ಪದೇಪದೇ ಸಾಕ್ಷಿಯಾಗುತ್ತಲೇ ಇದೆ. ಹಿಂದೂ- ಮುಸ್ಲಿಂ ಸಮುದಾಯದ ಯುವಕರು ಧರ್ಮದ ಕಾರಣಕ್ಕೆ ಹೊಡೆದಾಡಿಕೊಂಡು ಸಾಯುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಸರಣಿ ಕೊಲೆಗಳು ನಡೆದವು. ಮಸೂದ್ ಎಂಬ ಯುವಕ ಕ್ಷುಲ್ಲಕ ಕಾರಣಕ್ಕೆ ಕೊಲೆಯಾದನು. ನಂತರ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರನ್ನು ಕೊಲ್ಲಲಾಗುತ್ತದೆ. ಇದಕ್ಕೆ ಪ್ರತಿಕಾರವೆಂಬಂತೆ ಫಾಜಿಲ್ ಎಂಬ ಅಮಾಯಕನ ಹೆಣ ಬಿತ್ತು. ಹೀಗೆ ‘ಕೊಲೆಗೆ ಕೊಲೆ’, ‘ರಕ್ತಕ್ಕೆ ರಕ್ತ’ ಎಂಬ ಭೀಕರ ಚರಿತ್ರೆಯನ್ನು ಕರ್ನಾಟಕದ ರಾಜಕೀಯ ಪರಿಸರದಲ್ಲಿ ಕಟ್ಟುತ್ತಿರುವುದು ವಿಷಾದನೀಯ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಾಚೆಗೆ ಜಿಗಿದು, ದ್ವೇಷದ ಎಲ್ಲೆ ಮೀರಿದಾಗ ಕೊಲೆ ಮಾಡುವ ಮಟ್ಟಕ್ಕೆ ಹೋಗುತ್ತಾರೆ. ಭಿನ್ನಮತದ ಸಹಿಷ್ಣುತೆ ಇಲ್ಲವಾದಾಗ ಈ ಅತಿರೇಕಕ್ಕೆ ಕಡಿವಾಣ ಇಲ್ಲವಾಗುತ್ತದೆ. ಈ ಮೇಲಾಟಗಳಿಂದಾಗಿ ಯಾವ ಪರಿಣಾಮಗಳು ಬೀರುತ್ತವೆ? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕು.

2015ರಲ್ಲಿ ಶಿವಮೊಗ್ಗದಲ್ಲಿ ನಡೆದ ಘಟನೆ. ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ಹಿಂದುತ್ವ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬದ ಪರ ಹಿಂದುತ್ವ ಸಂಘಟನೆಗಳು ನಿಂತವು. ಆ ನಂತರ ಏನಾಯಿತು?

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುವಂತಾಯಿತು. ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾದ ಬಳಿಕ ಆತನ ಕುಟುಂಬಕ್ಕೆ ರಾಜಕಾರಣಿಗಳು ಭರಪೂರ ನೆರವು ನೀಡುವಾಗ, ಮೀನಾಕ್ಷಮ್ಮನ ಬದುಕು ‘ಚಿಂದಿ’ಯಾಗಿರುವುದು ಸುದ್ದಿಯಾಗಿತ್ತು.

ರಾಜಕೀಯ ಕೊಲೆಗಳಾದಾಗ ಶವ ಮೆರವಣಿಗೆ ಮಾಡುವುದು, ಕೊಲೆ ಮಾಡಿ ಜೈಲಿಗೆ ಹೋಗಿ ಬಂದವನಿಗೆ ಹಾರ ತುರಾಯಿ ಹಾಕಿ ಸನ್ಮಾನಿಸುವುದು- ಇವೆಲ್ಲ ಸಮಾಜಕ್ಕೆ ಯಾವ ಸಂದೇಶವನ್ನು ನೀಡುತ್ತವೆ?

ಹಿರಿಯ ನಿರ್ದೇಶಕ ‘ಸಿಬಿ ಮಲಯಿಲ್’ ನಿರ್ದೇಶನದ ‘ಕೊತ್ತು’ (ಇರಿತ/ಮಲಯಾಳಂ) ಸಿನಿಮಾ ನೋಡಿದರೆ ಕರ್ನಾಟಕ ಹಾಗೂ ಇಡೀ ದೇಶದ ರಾಜಕೀಯ ಕೊಲೆಗಳ ಪರಿಣಾಮಗಳು ಕಣ್ಣಮುಂದೆ ಬರುತ್ತವೆ. ರಕ್ತಕ್ಕೆ ರಕ್ತ, ಕೊಲೆಗೆ ಕೊಲೆ ಎಂದು ಹೊರಟರೆ ಮನುಷ್ಯನ ನೆಮ್ಮದಿ ಹಾಳಾಗುತ್ತದೆ. ಸಾವನ್ನು ಕೈಯಲ್ಲಿ ಹಿಡಿದುಕೊಂಡು ಬದುಕಬೇಕಾದ ಸ್ಥಿತಿ ಉಂಟಾಗುತ್ತದೆ. ಕೊಲೆಯಾದವರ ಕುಟುಂಬ ಬೀದಿಗೆ ಬಿದ್ದು, ನರಳಬೇಕಾಗುತ್ತದೆ.

‘ಅಯ್ಯಪ್ಪನುಂ ಕೋಶಿಯುಮ್‌’, ‘ನಾಯಟ್ಟು’ ಸಿನಿಮಾ ನಿರ್ಮಾಪಕರಾದ ರಂಜಿತ್‌, ಪಿ.ಎಂ.ಸಸಿಧರನ್‌ ನಿರ್ಮಾಣದ ‘ಕೊತ್ತು’- ಈ ಕಾಲದ ರಾಜಕೀಯ ಕಥನ. ‘ಕೇಸರಿ’ ಮತ್ತು ‘ಕೆಂಪು’- ರಾಜಕೀಯ ಗುಂಪುಗಳ ನಡುವಿನ ಜಿದ್ದಾಜಿದ್ದಿ, ವೈಷಮ್ಯದ ಕಥೆಯನ್ನು ಕೇರಳದ ಪರಿಸರದ ಮೂಲಕ ಹೇಳಲಾಗುತ್ತಿದೆಯಾದರೂ, ಭಾರತದ ಯಾವುದೇ ಪ್ರಾಂತ್ಯದಲ್ಲಿ ನಡೆಯಬಹುದಾದ ರಾಜಕೀಯ ಕಥೆಯನ್ನು ಇಲ್ಲಿ ತೋರಿಸಲಾಗಿದೆ. ಈ ಎರಡು ಗುಂಪುಗಳ ನಡುವೆ ಹರಿಯುತ್ತಿರುವ ಕೊನೆಯಿಲ್ಲದ ರಕ್ತವು, ಮನುಷ್ಯನ ನೆಮ್ಮದಿಯನ್ನು ಹಾಳುಗೆಡುವುತ್ತದೆ. ಊರು ಊರುಗಳ ನಡುವೆ, ಕೇರಿ ಕೇರಿಗಳ ನಡುವೆ ಗೋಡೆಗಳನ್ನು ನಿರ್ಮಿಸುತ್ತದೆ. ರಾಜಕೀಯ ಕೊಲೆಗಳಾಚೆಗೆ ಎದುರಾಗುವ ಬದುಕಿನ ಸಂದಿಗ್ಧತೆಗಳು ಇಕ್ಕಟ್ಟಿಗೆ ಸಿಲುಕಿಸುತ್ತವೆ.

‘ಕೊಲೆ’ ಎಂಬ ಕ್ರಿಯೆಗೆ ‘ಪ್ರತಿಕೊಲೆ’ಯಷ್ಟೇ ಪ್ರತಿಕ್ರಿಯೆಯಾಗಿರಲಾರದು. ಅದರಾಚೆಗೂ ಬೀರುವ ಸಾಮಾಜಿಕ ಪರಿಣಾಮಗಳತ್ತ ಗಮನ ಹರಿಸಬೇಕಾಗುತ್ತದೆ. ಜೀವಹಾನಿಯ ಜೊತೆಗೆ ಆರ್ಥಿಕ ನಷ್ಟ, ಕೌಂಟುಬಿಕ ಕಲಹ- ಎಲ್ಲವೂ ಸುತ್ತಿಕೊಳ್ಳುತ್ತವೆ. ‘ಕೆಂಪು’ ಪಡೆಯ ರಾಜಕೀಯ ನಾಯಕನನ್ನು ಕೇಸರಿ ಪಡೆ ಕೊಲೆ ಮಾಡುವುದರೊಂದಿಗೆ ಆರಂಭವಾಗುವ ಈ ಸಿನಿಮಾ, ಸರಣಿ ಅಪರಾಧಗಳಿಗೆ ಸಾಕ್ಷಿಯಾಗುತ್ತಾ ಹೋಗುತ್ತದೆ. ‘ಮನೆಯೊಳಗಿನ ಕಿಚ್ಚು- ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು’ ಎಂಬ ವಚನಕಾರರ ಸಂದೇಶ ನೆನಪಾಗುತ್ತದೆ.

ಇದನ್ನೂ ಓದಿರಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಗಾಂಧಿ ತೋರಿದ ಅಹಿಂಸಾ ಮಾರ್ಗದಲ್ಲಿ ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾದದ್ದು ಇಂದಿನ ತುರ್ತು. ನಮ್ಮ ಮುಂದಿನ ಪೀಳಿಗೆಗೆ ಯಾವ ಇತಿಹಾಸವನ್ನು ಬಿಟ್ಟು ಹೋಗುತ್ತಿದ್ದೇವೆ ಎಂಬ ಎಚ್ಚರಿಕೆಯೂ ನಮಗೆ ಮುಖ್ಯ. ಪ್ರತಿಕಾರಕ್ಕೆ ಇಳಿದಾಗ ಅನಾಥವಾಗುವ ಕುಟುಂಬ ನಮ್ಮ ಕಣ್ಣಮುಂದೆ ಬರಬೇಕು ಎಂಬ ಸಂದೇಶವನ್ನು ‘ಕೊತ್ತು’ ನೀಡಿದೆ.

‘ಜೇಕ್ಸ್‌ ಬಿಜಾಯ್‌’ ಅವರ ಹಿನ್ನೆಲೆ ಸಂಗೀತವು ದೃಶ್ಯಗಳ ತೀವ್ರತೆಯನ್ನು ಹೆಚ್ಚಿಸಿದೆ. ಹೇಮಂತ್‌ಕುಮಾರ್‌ ಅವರು ಇಂದಿನ ರಾಜಕೀಯ ಕೊಲೆಗಳನ್ನು ಸಶಕ್ತವಾಗಿ ತಮ್ಮ ಕಥೆಯೊಳಗೆ ತಂದಿದ್ದಾರೆ. ಎಂದಿನಂತೆ ಆಸಿಫ್‌ ಅಲಿ, ನಿಖಿಲಾ ವಿಮಲ್‌, ರೋಷನ್ ಮ್ಯಾಥ್ಯೂ, ರಂಜಿತ್‌, ಶ್ರೀಲಕ್ಷ್ಮೀ ಮೊದಲಾದವರು ಮನೋಜ್ಞವಾಗಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...