Homeಮುಖಪುಟಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು...

ಕೊತ್ತು: ರಾಜಕೀಯ ಕೊಲೆಗಳ ಸುತ್ತ ಒಂದು ಸುತ್ತು…

- Advertisement -
- Advertisement -

ಕರ್ನಾಟಕ ರಾಜ್ಯ ರಾಜಕಾರಣದಿಂದಲೇ ಮಾತು ಆರಂಭಿಸಬಹುದು. ಮಲೆನಾಡು ಹಾಗೂ ಕರಾವಳಿ ಕರ್ನಾಟಕ ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಕೊಲೆಗಳಿಗೆ ಪದೇಪದೇ ಸಾಕ್ಷಿಯಾಗುತ್ತಲೇ ಇದೆ. ಹಿಂದೂ- ಮುಸ್ಲಿಂ ಸಮುದಾಯದ ಯುವಕರು ಧರ್ಮದ ಕಾರಣಕ್ಕೆ ಹೊಡೆದಾಡಿಕೊಂಡು ಸಾಯುತ್ತಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಸರಣಿ ಕೊಲೆಗಳು ನಡೆದವು. ಮಸೂದ್ ಎಂಬ ಯುವಕ ಕ್ಷುಲ್ಲಕ ಕಾರಣಕ್ಕೆ ಕೊಲೆಯಾದನು. ನಂತರ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಅವರನ್ನು ಕೊಲ್ಲಲಾಗುತ್ತದೆ. ಇದಕ್ಕೆ ಪ್ರತಿಕಾರವೆಂಬಂತೆ ಫಾಜಿಲ್ ಎಂಬ ಅಮಾಯಕನ ಹೆಣ ಬಿತ್ತು. ಹೀಗೆ ‘ಕೊಲೆಗೆ ಕೊಲೆ’, ‘ರಕ್ತಕ್ಕೆ ರಕ್ತ’ ಎಂಬ ಭೀಕರ ಚರಿತ್ರೆಯನ್ನು ಕರ್ನಾಟಕದ ರಾಜಕೀಯ ಪರಿಸರದಲ್ಲಿ ಕಟ್ಟುತ್ತಿರುವುದು ವಿಷಾದನೀಯ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಾಚೆಗೆ ಜಿಗಿದು, ದ್ವೇಷದ ಎಲ್ಲೆ ಮೀರಿದಾಗ ಕೊಲೆ ಮಾಡುವ ಮಟ್ಟಕ್ಕೆ ಹೋಗುತ್ತಾರೆ. ಭಿನ್ನಮತದ ಸಹಿಷ್ಣುತೆ ಇಲ್ಲವಾದಾಗ ಈ ಅತಿರೇಕಕ್ಕೆ ಕಡಿವಾಣ ಇಲ್ಲವಾಗುತ್ತದೆ. ಈ ಮೇಲಾಟಗಳಿಂದಾಗಿ ಯಾವ ಪರಿಣಾಮಗಳು ಬೀರುತ್ತವೆ? ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕು.

2015ರಲ್ಲಿ ಶಿವಮೊಗ್ಗದಲ್ಲಿ ನಡೆದ ಘಟನೆ. ಪಿಎಫ್‌ಐ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಕೆಲವರು ಗಾಜನೂರು ಬಳಿ ಆಲ್ಕೊಳದ ಹಿಂದುತ್ವ ವಿಶ್ವನಾಥ ಶೆಟ್ಟಿ ಅವರನ್ನು ಕೊಲೆ ಮಾಡಿದ್ದರು. ವಿಶ್ವನಾಥ್ ಶೆಟ್ಟಿ ಕೊಲೆಯಾದಾಗ ಹಿಂದುತ್ವ ಸಂಘಟನೆಗಳು ಶಿವಮೊಗ್ಗ ನಗರವನ್ನು ಬಂದ್ ಮಾಡಿದ್ದವು. ಭಾರೀ ಪ್ರತಿಭಟನೆ ನಡೆಸಿದ್ದವು. ವಿಶ್ವನಾಥ್‌ ಕುಟುಂಬದ ಪರ ಹಿಂದುತ್ವ ಸಂಘಟನೆಗಳು ನಿಂತವು. ಆ ನಂತರ ಏನಾಯಿತು?

ವಿಶ್ವನಾಥ್‌ ಅವರ ಹೆಂಡತಿ ಕಾಯಿಲೆ ಬಿದ್ದರು. ಸರ್ಕಾರ ನೀಡಿದ್ದ ಐದು ಲಕ್ಷ ರೂ. ಪರಿಹಾರ ಹಣ ವಿಶ್ವನಾಥ್‌ ಅವರ ಪತ್ನಿಯ ಆಸ್ಪತ್ರೆಯ ಖರ್ಚಿಗಾಯಿತು. ಜಾಂಡೀಸ್ ಆಗಿ ಅವರು ತೀರಿಕೊಂಡ ಬಳಿಕ ಪುಟಾಣಿ ಆದಿತ್ಯನ ಭಾರ ವಿಶ್ವನಾಥ್ ಅವರ ತಾಯಿ ಮೀನಾಕ್ಷಮ್ಮನ ಅವರ ಹೆಗಲ ಮೇಲೆ ಬಿತ್ತು. ಮಗಳು ಕೂಡ ತೀರಿಕೊಂಡ ಬಳಿಕ ಮೀನಾಕ್ಷಮ್ಮ ಅನಾಥೆಯಾದರು. ಮಗುವನ್ನು ಓದಿಸುವ ಭಾರಹೊತ್ತಿಕೊಂಡ ಅಜ್ಜಿ, ಚಿಂದಿ ಆಯುತ್ತ ಬದುಕು ಸವೆಸುವಂತಾಯಿತು. ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆಯಾದ ಬಳಿಕ ಆತನ ಕುಟುಂಬಕ್ಕೆ ರಾಜಕಾರಣಿಗಳು ಭರಪೂರ ನೆರವು ನೀಡುವಾಗ, ಮೀನಾಕ್ಷಮ್ಮನ ಬದುಕು ‘ಚಿಂದಿ’ಯಾಗಿರುವುದು ಸುದ್ದಿಯಾಗಿತ್ತು.

ರಾಜಕೀಯ ಕೊಲೆಗಳಾದಾಗ ಶವ ಮೆರವಣಿಗೆ ಮಾಡುವುದು, ಕೊಲೆ ಮಾಡಿ ಜೈಲಿಗೆ ಹೋಗಿ ಬಂದವನಿಗೆ ಹಾರ ತುರಾಯಿ ಹಾಕಿ ಸನ್ಮಾನಿಸುವುದು- ಇವೆಲ್ಲ ಸಮಾಜಕ್ಕೆ ಯಾವ ಸಂದೇಶವನ್ನು ನೀಡುತ್ತವೆ?

ಹಿರಿಯ ನಿರ್ದೇಶಕ ‘ಸಿಬಿ ಮಲಯಿಲ್’ ನಿರ್ದೇಶನದ ‘ಕೊತ್ತು’ (ಇರಿತ/ಮಲಯಾಳಂ) ಸಿನಿಮಾ ನೋಡಿದರೆ ಕರ್ನಾಟಕ ಹಾಗೂ ಇಡೀ ದೇಶದ ರಾಜಕೀಯ ಕೊಲೆಗಳ ಪರಿಣಾಮಗಳು ಕಣ್ಣಮುಂದೆ ಬರುತ್ತವೆ. ರಕ್ತಕ್ಕೆ ರಕ್ತ, ಕೊಲೆಗೆ ಕೊಲೆ ಎಂದು ಹೊರಟರೆ ಮನುಷ್ಯನ ನೆಮ್ಮದಿ ಹಾಳಾಗುತ್ತದೆ. ಸಾವನ್ನು ಕೈಯಲ್ಲಿ ಹಿಡಿದುಕೊಂಡು ಬದುಕಬೇಕಾದ ಸ್ಥಿತಿ ಉಂಟಾಗುತ್ತದೆ. ಕೊಲೆಯಾದವರ ಕುಟುಂಬ ಬೀದಿಗೆ ಬಿದ್ದು, ನರಳಬೇಕಾಗುತ್ತದೆ.

‘ಅಯ್ಯಪ್ಪನುಂ ಕೋಶಿಯುಮ್‌’, ‘ನಾಯಟ್ಟು’ ಸಿನಿಮಾ ನಿರ್ಮಾಪಕರಾದ ರಂಜಿತ್‌, ಪಿ.ಎಂ.ಸಸಿಧರನ್‌ ನಿರ್ಮಾಣದ ‘ಕೊತ್ತು’- ಈ ಕಾಲದ ರಾಜಕೀಯ ಕಥನ. ‘ಕೇಸರಿ’ ಮತ್ತು ‘ಕೆಂಪು’- ರಾಜಕೀಯ ಗುಂಪುಗಳ ನಡುವಿನ ಜಿದ್ದಾಜಿದ್ದಿ, ವೈಷಮ್ಯದ ಕಥೆಯನ್ನು ಕೇರಳದ ಪರಿಸರದ ಮೂಲಕ ಹೇಳಲಾಗುತ್ತಿದೆಯಾದರೂ, ಭಾರತದ ಯಾವುದೇ ಪ್ರಾಂತ್ಯದಲ್ಲಿ ನಡೆಯಬಹುದಾದ ರಾಜಕೀಯ ಕಥೆಯನ್ನು ಇಲ್ಲಿ ತೋರಿಸಲಾಗಿದೆ. ಈ ಎರಡು ಗುಂಪುಗಳ ನಡುವೆ ಹರಿಯುತ್ತಿರುವ ಕೊನೆಯಿಲ್ಲದ ರಕ್ತವು, ಮನುಷ್ಯನ ನೆಮ್ಮದಿಯನ್ನು ಹಾಳುಗೆಡುವುತ್ತದೆ. ಊರು ಊರುಗಳ ನಡುವೆ, ಕೇರಿ ಕೇರಿಗಳ ನಡುವೆ ಗೋಡೆಗಳನ್ನು ನಿರ್ಮಿಸುತ್ತದೆ. ರಾಜಕೀಯ ಕೊಲೆಗಳಾಚೆಗೆ ಎದುರಾಗುವ ಬದುಕಿನ ಸಂದಿಗ್ಧತೆಗಳು ಇಕ್ಕಟ್ಟಿಗೆ ಸಿಲುಕಿಸುತ್ತವೆ.

‘ಕೊಲೆ’ ಎಂಬ ಕ್ರಿಯೆಗೆ ‘ಪ್ರತಿಕೊಲೆ’ಯಷ್ಟೇ ಪ್ರತಿಕ್ರಿಯೆಯಾಗಿರಲಾರದು. ಅದರಾಚೆಗೂ ಬೀರುವ ಸಾಮಾಜಿಕ ಪರಿಣಾಮಗಳತ್ತ ಗಮನ ಹರಿಸಬೇಕಾಗುತ್ತದೆ. ಜೀವಹಾನಿಯ ಜೊತೆಗೆ ಆರ್ಥಿಕ ನಷ್ಟ, ಕೌಂಟುಬಿಕ ಕಲಹ- ಎಲ್ಲವೂ ಸುತ್ತಿಕೊಳ್ಳುತ್ತವೆ. ‘ಕೆಂಪು’ ಪಡೆಯ ರಾಜಕೀಯ ನಾಯಕನನ್ನು ಕೇಸರಿ ಪಡೆ ಕೊಲೆ ಮಾಡುವುದರೊಂದಿಗೆ ಆರಂಭವಾಗುವ ಈ ಸಿನಿಮಾ, ಸರಣಿ ಅಪರಾಧಗಳಿಗೆ ಸಾಕ್ಷಿಯಾಗುತ್ತಾ ಹೋಗುತ್ತದೆ. ‘ಮನೆಯೊಳಗಿನ ಕಿಚ್ಚು- ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು’ ಎಂಬ ವಚನಕಾರರ ಸಂದೇಶ ನೆನಪಾಗುತ್ತದೆ.

ಇದನ್ನೂ ಓದಿರಿ: ಫಾಸಿಲ್‌ ನಟನೆಯ ‘ಮಲಯನ್‌ಕುಂಜು’ ಸಿನಿಮಾ ‘ಜಾತಿವಾದಿ ಮನಸ್ಥಿತಿ’ಯ ಕುರಿತು ಅನುಕಂಪ ಸೃಷ್ಟಿಸಿದೆಯೇ?

ಗಾಂಧಿ ತೋರಿದ ಅಹಿಂಸಾ ಮಾರ್ಗದಲ್ಲಿ ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾದದ್ದು ಇಂದಿನ ತುರ್ತು. ನಮ್ಮ ಮುಂದಿನ ಪೀಳಿಗೆಗೆ ಯಾವ ಇತಿಹಾಸವನ್ನು ಬಿಟ್ಟು ಹೋಗುತ್ತಿದ್ದೇವೆ ಎಂಬ ಎಚ್ಚರಿಕೆಯೂ ನಮಗೆ ಮುಖ್ಯ. ಪ್ರತಿಕಾರಕ್ಕೆ ಇಳಿದಾಗ ಅನಾಥವಾಗುವ ಕುಟುಂಬ ನಮ್ಮ ಕಣ್ಣಮುಂದೆ ಬರಬೇಕು ಎಂಬ ಸಂದೇಶವನ್ನು ‘ಕೊತ್ತು’ ನೀಡಿದೆ.

‘ಜೇಕ್ಸ್‌ ಬಿಜಾಯ್‌’ ಅವರ ಹಿನ್ನೆಲೆ ಸಂಗೀತವು ದೃಶ್ಯಗಳ ತೀವ್ರತೆಯನ್ನು ಹೆಚ್ಚಿಸಿದೆ. ಹೇಮಂತ್‌ಕುಮಾರ್‌ ಅವರು ಇಂದಿನ ರಾಜಕೀಯ ಕೊಲೆಗಳನ್ನು ಸಶಕ್ತವಾಗಿ ತಮ್ಮ ಕಥೆಯೊಳಗೆ ತಂದಿದ್ದಾರೆ. ಎಂದಿನಂತೆ ಆಸಿಫ್‌ ಅಲಿ, ನಿಖಿಲಾ ವಿಮಲ್‌, ರೋಷನ್ ಮ್ಯಾಥ್ಯೂ, ರಂಜಿತ್‌, ಶ್ರೀಲಕ್ಷ್ಮೀ ಮೊದಲಾದವರು ಮನೋಜ್ಞವಾಗಿ ಅಭಿನಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...