Homeಮುಖಪುಟಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

- Advertisement -
- Advertisement -

ಉತ್ತರಖಂಡ ರಾಜ್ಯದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯನನ್ನು 19 ವರ್ಷದ ಯುವತಿಯ ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ. ಅಲ್ಲದೆ ಆತನ ಒಡೆತನದ ರೆಸಾರ್ಟ್ ಮೇಲೆ ಪೊಲೀಸರು ಬುಲ್ಡೋಜರ್ ದಾಳಿ ನಡೆಸಲು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ಆದೇಶಿಸಿದ್ದಾರೆ.

ಪುಲ್ಕಿತ್ ಆರ್ಯನ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಸೆಪ್ಟಂಬರ್ 18ರಂದು ಕಾಣೆಯಾಗಿದ್ದಳು. ಸ್ವತಃ ಪುಲ್ಕಿತ್ ಆರ್ಯನೇ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ. ಆದರೆ 5 ದಿನದ ನಂತರ ಪುಲ್ಕಿತ್ ಆರ್ಯ ಇಬ್ಬರು ಸಿಬ್ಬಂದಿಯೊಡನೆ ಸೇರಿ ಆಕೆಯನ್ನು ಕೊಂದಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಂತ್ರಸ್ತ ಯುವತಿಯ ಕುಟುಂಬವು ಮೊದಲಿನಿಂದಲೂ ಪುಲ್ಕಿತ್ ಆರ್ಯನ ಮೇಲೆ ಸಂಶಯ ವ್ಯಕ್ತಪಡಿಸಿತ್ತು. ಏಕೆಂದರೆ ಆತ ಆರಂಭದಲ್ಲಿ ದೂರು ನೀಡಲು ನಿರಾಕರಿಸಿದ್ದ ಎಂದು ಹೇಳಲಾಗಿದೆ. ಮೃತ ದೇಹವನ್ನು ಪಕ್ಕದ ಕಾಲುವೆಯಿಂದ ವಶಪಡಿಸಿಕೊಳ್ಳಲಾಗಿದ್ದು, ಆಕೆಯ ಸಂಬಂಧಿಕರನ್ನು ಗುರುತು ಪತ್ತೆ ಹಚ್ಚಲು ಕರೆಯಲಾಗಿದೆ.

ಈ ನಡವೆ ಆರೋಪಿಯು ಹಿರಿಯ ಬಿಜೆಪಿ, ಆರ್‌ಎಸ್‌ಎಸ್‌ ಮುಖಂಡನ ಮಗನಾದ್ದರಿಂದ ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ವೈರಲ್ ಆದ ನಂತರ ಪೊಲೀಸರು ಮುಖ್ಯ ಆರೋಪಿ ಪುಲ್ಕಿತ್ ಮತ್ತು ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ಆ ಯುವತಿಯ ಕೊಲೆಯ ಹಿಂದಿನ ಕಾರಣಗಳ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಆ ರೆಸಾರ್ಟ್‌ನಲ್ಲಿ ಹುಡುಗಿಯನ್ನು ವೇಶ್ಯಾವಾಟಿಕೆಗೆ ದೂಡಲಾಗುತ್ತಿದೆ. ಅದಕ್ಕೆ ಸಂತ್ರಸ್ತ ಯುವತಿಯನ್ನು ಬಲವಂತಪಡಿಸಲಾಗುತ್ತಿತ್ತು ಎಂಬ ಆರೋಪಗಳು ಕೇಳಿಬಂದಿದ್ದು, ಪೊಲೀಸರು ಈ ಕುರಿತು ಮಾಹಿತಿ ನೀಡಿಲ್ಲ.

“ಪೊಲೀಸರು ತನಿಖೆಯಲ್ಲಿ ಲೋಪವೆಸಗುತ್ತಿದ್ದಾರೆ. ಸೆಪ್ಟಂಬರ್ 18ರಂದು ಯುವತಿ ಕಾಣೆಯಾಗಿದ್ದರು ಸಹ ಸೆಪ್ಟಂಬರ್ 21 ರಂದು ಎಫ್‌ಐಆರ್ ದಾಖಲಿಸಿದ್ದು ಏಕೆ? ಎಲ್ಲಿಯವರೆಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡರು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ?” ಎಂದು ಕಾಂಗ್ರೆಸ್ ವಕ್ತಾರ ಗರಿಮ ಮೆಹ್ರ ದುಸಾನಿ ಪ್ರಶ್ನಿಸಿದ್ದಾರೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಮಾತನಾಡಿ, “ರೆಸಾರ್ಟ್ ಇರುವ ಜಾಗ ರಿಷಿಕೇಶ್ ಪಟ್ಟಣದಿಂದ 10 ಕಿ.ಮೀ ದೂರವಿದ್ದು ಅಲ್ಲಿ ಸಾಮಾನ್ಯ ಪೊಲೀಸರನ್ನು ನಿಯೋಜಿಸಿರಲಿಲ್ಲ. ನಮ್ಮಲ್ಲಿ ಕಂದಾಯ ಅಧಿಕಾರಿಗಳು ಎಫ್‌ಐಆರ್ ದಾಖಲಿಸುವ ಪದ್ದತಿ ಇದೆ. ಅದರಂತೆ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯನ ದೂರಿನ ಅನ್ವಯ ಕಾಣೆಯಾಗಿದ್ದಾರೆ ಎಂಬ ದೂರು ದಾಖಲಿಸಿಕೊಂಡಿದ್ದರು. ಆದರೆ ಜಿಲ್ಲಾ ನ್ಯಾಯಾಧೀಶರು ಪ್ರಕರಣವನ್ನು ನಮಗೆ ವರ್ಗಾಯಿಸಿದ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದೇವೆ. ದೂರುದಾರನೇ ಆರೋಪಿಯಾಗಿ ಬದಲಾಗಿದ್ದಾನೆ” ಎಂದು ತಿಳಿಸಿದ್ದಾರೆ.

ಬಂಧನದ ವೇಳೆ ಪುಲ್ಕಿತ್ ಆರ್ಯನ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದ್ದಾರೆ ಎಂದು ವರದಿಯಾಗಿದೆ.

ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾ ಎಂಬುವವರನ್ನು ಸಹ ಬಂಧಿಸಿದ್ದೇವೆ. ಆರಂಭದಲ್ಲಿ ಅವರು ಪೊಲೀಸರನ್ನು ದಿಕ್ಕು ತಪ್ಪಿಸಲು ಯತ್ನಿಸಿದರು. ಆದರೆ ಧೀರ್ಘ ವಿಚಾರಣೆಯ ಸಂದರ್ಭದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉತ್ತರಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು ತಿಳಿಸಿದ್ದಾರೆ. “ಇದು ಬಹಳ ಹೀನ ಕೃತ್ಯವಾಗಿದ್ದು, ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸಿಎಂರವರ ಆದೇಶದ ಮೇರೆಗೆ ಸ್ಥಳೀಯ ಆಡಳಿತಾಧಿಕಾರಿಗಳು ರೆಸಾರ್ಟ್ ಅನ್ನು ಬುಲ್ಡೋಜರ್‌ನಿಂದ ನೆಲಸಮಗೊಳಿಸಲು ಮುಂದಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಅಲ್ಲದೆ ರಾಜ್ಯದ ಎಲ್ಲಾ ರೆಸಾರ್ಟ್‌ಗಳ ಮೇಲೆ ತನಿಖೆ ನಡೆಸಬೇಕೆಂದು ಆದೇಶಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅದಾನಿ ಸಹೋದರ ವಿನೋದ್ ಶಾಂತಿಲಾಲ್ ಅದಾನಿ ಶ್ರೀಮಂತ ಅನಿವಾಸಿ ಭಾರತೀಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...