Homeಮುಖಪುಟಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

- Advertisement -
- Advertisement -

ಉತ್ತರಖಂಡ ರಾಜ್ಯದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯನನ್ನು 19 ವರ್ಷದ ಯುವತಿಯ ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ. ಅಲ್ಲದೆ ಆತನ ಒಡೆತನದ ರೆಸಾರ್ಟ್ ಮೇಲೆ ಪೊಲೀಸರು ಬುಲ್ಡೋಜರ್ ದಾಳಿ ನಡೆಸಲು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ಆದೇಶಿಸಿದ್ದಾರೆ.

ಪುಲ್ಕಿತ್ ಆರ್ಯನ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಸೆಪ್ಟಂಬರ್ 18ರಂದು ಕಾಣೆಯಾಗಿದ್ದಳು. ಸ್ವತಃ ಪುಲ್ಕಿತ್ ಆರ್ಯನೇ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ. ಆದರೆ 5 ದಿನದ ನಂತರ ಪುಲ್ಕಿತ್ ಆರ್ಯ ಇಬ್ಬರು ಸಿಬ್ಬಂದಿಯೊಡನೆ ಸೇರಿ ಆಕೆಯನ್ನು ಕೊಂದಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಂತ್ರಸ್ತ ಯುವತಿಯ ಕುಟುಂಬವು ಮೊದಲಿನಿಂದಲೂ ಪುಲ್ಕಿತ್ ಆರ್ಯನ ಮೇಲೆ ಸಂಶಯ ವ್ಯಕ್ತಪಡಿಸಿತ್ತು. ಏಕೆಂದರೆ ಆತ ಆರಂಭದಲ್ಲಿ ದೂರು ನೀಡಲು ನಿರಾಕರಿಸಿದ್ದ ಎಂದು ಹೇಳಲಾಗಿದೆ. ಮೃತ ದೇಹವನ್ನು ಪಕ್ಕದ ಕಾಲುವೆಯಿಂದ ವಶಪಡಿಸಿಕೊಳ್ಳಲಾಗಿದ್ದು, ಆಕೆಯ ಸಂಬಂಧಿಕರನ್ನು ಗುರುತು ಪತ್ತೆ ಹಚ್ಚಲು ಕರೆಯಲಾಗಿದೆ.

ಈ ನಡವೆ ಆರೋಪಿಯು ಹಿರಿಯ ಬಿಜೆಪಿ, ಆರ್‌ಎಸ್‌ಎಸ್‌ ಮುಖಂಡನ ಮಗನಾದ್ದರಿಂದ ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ವೈರಲ್ ಆದ ನಂತರ ಪೊಲೀಸರು ಮುಖ್ಯ ಆರೋಪಿ ಪುಲ್ಕಿತ್ ಮತ್ತು ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ಆ ಯುವತಿಯ ಕೊಲೆಯ ಹಿಂದಿನ ಕಾರಣಗಳ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಆ ರೆಸಾರ್ಟ್‌ನಲ್ಲಿ ಹುಡುಗಿಯನ್ನು ವೇಶ್ಯಾವಾಟಿಕೆಗೆ ದೂಡಲಾಗುತ್ತಿದೆ. ಅದಕ್ಕೆ ಸಂತ್ರಸ್ತ ಯುವತಿಯನ್ನು ಬಲವಂತಪಡಿಸಲಾಗುತ್ತಿತ್ತು ಎಂಬ ಆರೋಪಗಳು ಕೇಳಿಬಂದಿದ್ದು, ಪೊಲೀಸರು ಈ ಕುರಿತು ಮಾಹಿತಿ ನೀಡಿಲ್ಲ.

“ಪೊಲೀಸರು ತನಿಖೆಯಲ್ಲಿ ಲೋಪವೆಸಗುತ್ತಿದ್ದಾರೆ. ಸೆಪ್ಟಂಬರ್ 18ರಂದು ಯುವತಿ ಕಾಣೆಯಾಗಿದ್ದರು ಸಹ ಸೆಪ್ಟಂಬರ್ 21 ರಂದು ಎಫ್‌ಐಆರ್ ದಾಖಲಿಸಿದ್ದು ಏಕೆ? ಎಲ್ಲಿಯವರೆಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡರು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ?” ಎಂದು ಕಾಂಗ್ರೆಸ್ ವಕ್ತಾರ ಗರಿಮ ಮೆಹ್ರ ದುಸಾನಿ ಪ್ರಶ್ನಿಸಿದ್ದಾರೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಮಾತನಾಡಿ, “ರೆಸಾರ್ಟ್ ಇರುವ ಜಾಗ ರಿಷಿಕೇಶ್ ಪಟ್ಟಣದಿಂದ 10 ಕಿ.ಮೀ ದೂರವಿದ್ದು ಅಲ್ಲಿ ಸಾಮಾನ್ಯ ಪೊಲೀಸರನ್ನು ನಿಯೋಜಿಸಿರಲಿಲ್ಲ. ನಮ್ಮಲ್ಲಿ ಕಂದಾಯ ಅಧಿಕಾರಿಗಳು ಎಫ್‌ಐಆರ್ ದಾಖಲಿಸುವ ಪದ್ದತಿ ಇದೆ. ಅದರಂತೆ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯನ ದೂರಿನ ಅನ್ವಯ ಕಾಣೆಯಾಗಿದ್ದಾರೆ ಎಂಬ ದೂರು ದಾಖಲಿಸಿಕೊಂಡಿದ್ದರು. ಆದರೆ ಜಿಲ್ಲಾ ನ್ಯಾಯಾಧೀಶರು ಪ್ರಕರಣವನ್ನು ನಮಗೆ ವರ್ಗಾಯಿಸಿದ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದೇವೆ. ದೂರುದಾರನೇ ಆರೋಪಿಯಾಗಿ ಬದಲಾಗಿದ್ದಾನೆ” ಎಂದು ತಿಳಿಸಿದ್ದಾರೆ.

ಬಂಧನದ ವೇಳೆ ಪುಲ್ಕಿತ್ ಆರ್ಯನ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದ್ದಾರೆ ಎಂದು ವರದಿಯಾಗಿದೆ.

ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾ ಎಂಬುವವರನ್ನು ಸಹ ಬಂಧಿಸಿದ್ದೇವೆ. ಆರಂಭದಲ್ಲಿ ಅವರು ಪೊಲೀಸರನ್ನು ದಿಕ್ಕು ತಪ್ಪಿಸಲು ಯತ್ನಿಸಿದರು. ಆದರೆ ಧೀರ್ಘ ವಿಚಾರಣೆಯ ಸಂದರ್ಭದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉತ್ತರಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು ತಿಳಿಸಿದ್ದಾರೆ. “ಇದು ಬಹಳ ಹೀನ ಕೃತ್ಯವಾಗಿದ್ದು, ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸಿಎಂರವರ ಆದೇಶದ ಮೇರೆಗೆ ಸ್ಥಳೀಯ ಆಡಳಿತಾಧಿಕಾರಿಗಳು ರೆಸಾರ್ಟ್ ಅನ್ನು ಬುಲ್ಡೋಜರ್‌ನಿಂದ ನೆಲಸಮಗೊಳಿಸಲು ಮುಂದಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಅಲ್ಲದೆ ರಾಜ್ಯದ ಎಲ್ಲಾ ರೆಸಾರ್ಟ್‌ಗಳ ಮೇಲೆ ತನಿಖೆ ನಡೆಸಬೇಕೆಂದು ಆದೇಶಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅದಾನಿ ಸಹೋದರ ವಿನೋದ್ ಶಾಂತಿಲಾಲ್ ಅದಾನಿ ಶ್ರೀಮಂತ ಅನಿವಾಸಿ ಭಾರತೀಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...