Homeಮುಖಪುಟಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

- Advertisement -
- Advertisement -

ಉತ್ತರಖಂಡ ರಾಜ್ಯದ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡ ವಿನೋದ್ ಆರ್ಯರವರ ಮಗ ಪುಲ್ಕಿತ್ ಆರ್ಯನನ್ನು 19 ವರ್ಷದ ಯುವತಿಯ ಕೊಲೆ ಆರೋಪದಲ್ಲಿ ಬಂಧಿಸಲಾಗಿದೆ. ಅಲ್ಲದೆ ಆತನ ಒಡೆತನದ ರೆಸಾರ್ಟ್ ಮೇಲೆ ಪೊಲೀಸರು ಬುಲ್ಡೋಜರ್ ದಾಳಿ ನಡೆಸಲು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ದಾಮಿ ಆದೇಶಿಸಿದ್ದಾರೆ.

ಪುಲ್ಕಿತ್ ಆರ್ಯನ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿ ಸೆಪ್ಟಂಬರ್ 18ರಂದು ಕಾಣೆಯಾಗಿದ್ದಳು. ಸ್ವತಃ ಪುಲ್ಕಿತ್ ಆರ್ಯನೇ ಪೊಲೀಸ್ ಠಾಣೆಯಲ್ಲಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ. ಆದರೆ 5 ದಿನದ ನಂತರ ಪುಲ್ಕಿತ್ ಆರ್ಯ ಇಬ್ಬರು ಸಿಬ್ಬಂದಿಯೊಡನೆ ಸೇರಿ ಆಕೆಯನ್ನು ಕೊಂದಿದ್ದಾನೆ ಎಂಬ ಅಂಶ ಬೆಳಕಿಗೆ ಬಂದಿದೆ.

ಸಂತ್ರಸ್ತ ಯುವತಿಯ ಕುಟುಂಬವು ಮೊದಲಿನಿಂದಲೂ ಪುಲ್ಕಿತ್ ಆರ್ಯನ ಮೇಲೆ ಸಂಶಯ ವ್ಯಕ್ತಪಡಿಸಿತ್ತು. ಏಕೆಂದರೆ ಆತ ಆರಂಭದಲ್ಲಿ ದೂರು ನೀಡಲು ನಿರಾಕರಿಸಿದ್ದ ಎಂದು ಹೇಳಲಾಗಿದೆ. ಮೃತ ದೇಹವನ್ನು ಪಕ್ಕದ ಕಾಲುವೆಯಿಂದ ವಶಪಡಿಸಿಕೊಳ್ಳಲಾಗಿದ್ದು, ಆಕೆಯ ಸಂಬಂಧಿಕರನ್ನು ಗುರುತು ಪತ್ತೆ ಹಚ್ಚಲು ಕರೆಯಲಾಗಿದೆ.

ಈ ನಡವೆ ಆರೋಪಿಯು ಹಿರಿಯ ಬಿಜೆಪಿ, ಆರ್‌ಎಸ್‌ಎಸ್‌ ಮುಖಂಡನ ಮಗನಾದ್ದರಿಂದ ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಷಯ ವೈರಲ್ ಆದ ನಂತರ ಪೊಲೀಸರು ಮುಖ್ಯ ಆರೋಪಿ ಪುಲ್ಕಿತ್ ಮತ್ತು ಇಬ್ಬರು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ಆ ಯುವತಿಯ ಕೊಲೆಯ ಹಿಂದಿನ ಕಾರಣಗಳ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಆ ರೆಸಾರ್ಟ್‌ನಲ್ಲಿ ಹುಡುಗಿಯನ್ನು ವೇಶ್ಯಾವಾಟಿಕೆಗೆ ದೂಡಲಾಗುತ್ತಿದೆ. ಅದಕ್ಕೆ ಸಂತ್ರಸ್ತ ಯುವತಿಯನ್ನು ಬಲವಂತಪಡಿಸಲಾಗುತ್ತಿತ್ತು ಎಂಬ ಆರೋಪಗಳು ಕೇಳಿಬಂದಿದ್ದು, ಪೊಲೀಸರು ಈ ಕುರಿತು ಮಾಹಿತಿ ನೀಡಿಲ್ಲ.

“ಪೊಲೀಸರು ತನಿಖೆಯಲ್ಲಿ ಲೋಪವೆಸಗುತ್ತಿದ್ದಾರೆ. ಸೆಪ್ಟಂಬರ್ 18ರಂದು ಯುವತಿ ಕಾಣೆಯಾಗಿದ್ದರು ಸಹ ಸೆಪ್ಟಂಬರ್ 21 ರಂದು ಎಫ್‌ಐಆರ್ ದಾಖಲಿಸಿದ್ದು ಏಕೆ? ಎಲ್ಲಿಯವರೆಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಮುಖಂಡರು ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುತ್ತಾರೆ?” ಎಂದು ಕಾಂಗ್ರೆಸ್ ವಕ್ತಾರ ಗರಿಮ ಮೆಹ್ರ ದುಸಾನಿ ಪ್ರಶ್ನಿಸಿದ್ದಾರೆ.

ರಾಜ್ಯ ಪೊಲೀಸ್ ಮುಖ್ಯಸ್ಥ ಅಶೋಕ್ ಕುಮಾರ್ ಮಾತನಾಡಿ, “ರೆಸಾರ್ಟ್ ಇರುವ ಜಾಗ ರಿಷಿಕೇಶ್ ಪಟ್ಟಣದಿಂದ 10 ಕಿ.ಮೀ ದೂರವಿದ್ದು ಅಲ್ಲಿ ಸಾಮಾನ್ಯ ಪೊಲೀಸರನ್ನು ನಿಯೋಜಿಸಿರಲಿಲ್ಲ. ನಮ್ಮಲ್ಲಿ ಕಂದಾಯ ಅಧಿಕಾರಿಗಳು ಎಫ್‌ಐಆರ್ ದಾಖಲಿಸುವ ಪದ್ದತಿ ಇದೆ. ಅದರಂತೆ ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯನ ದೂರಿನ ಅನ್ವಯ ಕಾಣೆಯಾಗಿದ್ದಾರೆ ಎಂಬ ದೂರು ದಾಖಲಿಸಿಕೊಂಡಿದ್ದರು. ಆದರೆ ಜಿಲ್ಲಾ ನ್ಯಾಯಾಧೀಶರು ಪ್ರಕರಣವನ್ನು ನಮಗೆ ವರ್ಗಾಯಿಸಿದ 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದೇವೆ. ದೂರುದಾರನೇ ಆರೋಪಿಯಾಗಿ ಬದಲಾಗಿದ್ದಾನೆ” ಎಂದು ತಿಳಿಸಿದ್ದಾರೆ.

ಬಂಧನದ ವೇಳೆ ಪುಲ್ಕಿತ್ ಆರ್ಯನ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಪೊಲೀಸ್ ವಾಹನದ ಮೇಲೆ ದಾಳಿ ನಡೆಸಿ ಜಖಂಗೊಳಿಸಿದ್ದಾರೆ ಎಂದು ವರದಿಯಾಗಿದೆ.

ರೆಸಾರ್ಟ್ ಮ್ಯಾನೇಜರ್ ಸೌರಭ್ ಭಾಸ್ಕರ್ ಮತ್ತು ಸಹಾಯಕ ಮ್ಯಾನೇಜರ್ ಅಂಕಿತ್ ಗುಪ್ತಾ ಎಂಬುವವರನ್ನು ಸಹ ಬಂಧಿಸಿದ್ದೇವೆ. ಆರಂಭದಲ್ಲಿ ಅವರು ಪೊಲೀಸರನ್ನು ದಿಕ್ಕು ತಪ್ಪಿಸಲು ಯತ್ನಿಸಿದರು. ಆದರೆ ಧೀರ್ಘ ವಿಚಾರಣೆಯ ಸಂದರ್ಭದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಉತ್ತರಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯವರು ತಿಳಿಸಿದ್ದಾರೆ. “ಇದು ಬಹಳ ಹೀನ ಕೃತ್ಯವಾಗಿದ್ದು, ಇದರಲ್ಲಿ ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಸಿಎಂರವರ ಆದೇಶದ ಮೇರೆಗೆ ಸ್ಥಳೀಯ ಆಡಳಿತಾಧಿಕಾರಿಗಳು ರೆಸಾರ್ಟ್ ಅನ್ನು ಬುಲ್ಡೋಜರ್‌ನಿಂದ ನೆಲಸಮಗೊಳಿಸಲು ಮುಂದಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಅಲ್ಲದೆ ರಾಜ್ಯದ ಎಲ್ಲಾ ರೆಸಾರ್ಟ್‌ಗಳ ಮೇಲೆ ತನಿಖೆ ನಡೆಸಬೇಕೆಂದು ಆದೇಶಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಅದಾನಿ ಸಹೋದರ ವಿನೋದ್ ಶಾಂತಿಲಾಲ್ ಅದಾನಿ ಶ್ರೀಮಂತ ಅನಿವಾಸಿ ಭಾರತೀಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...