Homeಮುಖಪುಟಮಕ್ಕಳಿಗೆ ವೇದಗಣಿತ ತರಬೇತಿ ಬದಲು ಸಂವಿಧಾನ ಜಾಗೃತಿ ಮೂಡಿಸಿ: ದಲಿತ ಮುಖಂಡರ ಪಟ್ಟು

ಮಕ್ಕಳಿಗೆ ವೇದಗಣಿತ ತರಬೇತಿ ಬದಲು ಸಂವಿಧಾನ ಜಾಗೃತಿ ಮೂಡಿಸಿ: ದಲಿತ ಮುಖಂಡರ ಪಟ್ಟು

ದಲಿತರ ಹಣ ದುರ್ಬಳಕೆಯಾಗುತ್ತಿರುವುದು ಮತ್ತು ದಲಿತ ಮಕ್ಕಳಿಗೆ ಅವೈಜ್ಞಾನಿಕ ವೇದ ಗಣಿತ ಕಲಿಸಿ ದಿಕ್ಕುತಪ್ಪಿಸುವುದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. - ಹ.ರಾ ಮಹೇಶ್

- Advertisement -
- Advertisement -

ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನದಲ್ಲಿ ಕರ್ನಾಟಕ ಸರ್ಕಾರವು ಹಲವಾರು ಶಾಲೆಗಳಲ್ಲಿನ 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವುದಕ್ಕೆ ದಲಿತ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ದಲಿತರಿಗಾಗಿ ಮೀಸಲಾದ ಹಣದ ದುರ್ಬಳಕೆ ಮಾಡುವ ಈ ಅವೈಜ್ಞಾನಿಕ ಕ್ರಮವನ್ನು ಕೂಡಲೇ ತಡೆಹಿಡಿಯಬೇಕು ಎಂದು ಒತ್ತಾಯಿಸಿ ಸರ್ಕಾರದ ಮುಖ್ಯಕಾರ್ಯದರ್ಶಿಯವರಿಗೆ ಸಮಾಜಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಿಗೆ ಹಾಗು ಪಂಚಾಯತ್ ರಾಜ್ ಇಲಾಖೆಯ ಅಪರ ಕಾರ್ಯದರ್ಶಿಗಳಿಗೆ ಹಕ್ಕೊತ್ತಾಯ ಸಲ್ಲಿಸಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರು ಮತ್ತು ವಕೀಲರಾದ ಹ.ರಾ ಮಹೇಶ್‌ರವರು, “ಈ ಯೋಜನೆ ನಮ್ಮ ಗಮನಕ್ಕೆ ಬಾರದೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಅದನ್ನು ನಂಬಲು ನಾವು ಸಿದ್ದರಿಲ್ಲ. ಆದರೂ ಸರ್ಕಾರ ಈ ಕೂಡಲೇ ಮತ್ತೊಂದು ಆದೇಶ ಹೊರಡಿಸಿ ಈ ಯೋಜನೆಯನ್ನು ಹಿಂಪಡೆಯಬೇಕು. ಈ ತಪ್ಪು ಎಸಗಿದ ಅಧಿಕಾರಿಗಳ ಮೇಲೆ ಯಾವ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಬೇಕು. ದಲಿತರಿಗಾಗಿ ಮೀಸಲಾದ ಹಣದಲ್ಲಿ ಎಲ್ಲಾ ವರ್ಗದ ಮಕ್ಕಳಿಗೆ ಸಂವಿಧಾನ ಜಾಗೃತಿ ಮೂಡಿಸಲು ಬಳಸಬೇಕು ಎಂದು ಒತ್ತಾಯಿಸಿದ್ದೇವೆ” ಎಂದರು.

SCSP TSP ಹಣವನ್ನು ದಲಿತೇತರ ಸಂಸ್ಥೆಗಳಿಗೆ ನೀಡುವುದು ಕಾಯ್ದೆ ಪ್ರಕಾರ ಅಪರಾಧವಾಗಿದೆ ಎಂಬುದನ್ನು ಅಧಿಕಾರಿಗಳಿಗೆ ತಿಳಿಸಿದ್ದೇವೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಕಾರ್ಯದರ್ಶಿಗಳಾದ ಎಲ್.ಕೆ ಅತೀಕ್‌ರವರು ಆಗಿರುವ ಪ್ರಮಾದವನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ ಮತ್ತೊಂದು ತಿದ್ದೋಲೆಯನ್ನು ಕಳಿಸುತ್ತೇವೆ. ತಪ್ಪಿತಸ್ಥರಿಗೆ ಕ್ರಮವನ್ನೂ ಕೈಗೊಳ್ಳುತ್ತೇವೆ ಎಂದು ತಿಳಿಸಿದರು ಎಂದರು.

ಹ.ರಾ ಮಹೇಶ್ ಮತ್ತು ಇತರ ವಕೀಲರು ಹಕ್ಕೊತ್ತಾಯ ಸಲ್ಲಿಸುತ್ತಿರುವುದು

ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳಾದ ಮಣಿವಣ್ಣನ್‌ರವರ ಜೊತೆ ದೂರವಾಣಿ ಮೂಲಕ ಮಾತನಾಡಿ ನಮ್ಮ ಆಕ್ಷೇಪಣೆಗಳನ್ನು ಸಲ್ಲಿಸಿದ್ದೇವೆ. ಅವರು ಸೋಮವಾರ ಸಂಜೆ ಈ ಕುರಿತು ಸಭೆ ಕರೆದಿದ್ದಾರೆ. ಒಟ್ಟಿನಲ್ಲಿ ದಲಿತರ ಹಣ ದುರ್ಬಳಕೆಯಾಗುತ್ತಿರುವುದು ಮತ್ತು ದಲಿತ ಮಕ್ಕಳಿಗೆ ಅವೈಜ್ಞಾನಿಕ ವೇದ ಗಣಿತ ಕಲಿಸಿ ದಿಕ್ಕುತಪ್ಪಿಸುವುದನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಈ ಕುರಿತು ಹೋರಾಟ ಮುಂದುವರೆಯುತ್ತದೆ ಎಂದು ಹ.ರಾ ಮಹೇಶ್‌ ಹೇಳಿದರು.

ಏನಿದು ವಿವಾದ?

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಜನವರಿ 06, 2022ರಂದು ಪತ್ರ ಬರೆದಿದ್ದರು. ಅದರಲ್ಲಿ “ಗ್ರಾಮ ಪಂಚಾಯ್ತಿಗಳಲ್ಲಿ ದಲಿತರಿಗಾಗಿ ಮೀಸಲಾದ ಶೇ.25ರ SCSP TSP ಅನುದಾನವನ್ನು 5 ರಿಂದ 8ನೇ ತರಗತಿವರೆಗಿನ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಗಾಗಿ ಬಳಸಿಕೊಳ್ಳಬಹುದು” ಎಂದು ಸೂಚಿಸಲಾಗಿತ್ತು. ಅದರಂತೆ ಈ ತರಬೇತಿ ನೀಡುವ ಟೆಂಡರ್‌ ಅನ್ನು ಹಿರಿಯೂರಿನ ಎವಿಎಂ ಎಂಬ ಸಂಸ್ಥೆಗೆ ನೀಡಲಾಗಿದೆ. ಅದಕ್ಕಾಗಿ ರಾಜ್ಯದ ಪ್ರತಿ ಗ್ರಾಮ ಪಂಚಾಯ್ತಿಗಳು ಒಂದು ಲಕ್ಷ ರೂಗಳನ್ನು ಈ ಸಂಸ್ಥೆಗೆ ಚೆಕ್ ಮೂಲಕ ನೀಡಬೇಕು ಸೂಚಿಸಲಾಗಿದೆ.

ಈ ಎವಿಎಂ ಸಂಸ್ಥೆಯು ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿ ಈ ತರಬೇತಿಯನ್ನು ಜಾರಿಗೊಳಿಸಲು ಮಧ್ಯವರ್ತಿಗಳಿಗೆ ಸಬ್‌ ಟೆಂಡರ್ ನೀಡುತ್ತಿದೆ. ಈ ಮಧ್ಯವರ್ತಿಗಳು ಪ್ರತಿ ತಾಲ್ಲೂಕುಗಳಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯ್ತಿಗಳ ಜೊತೆ ಸಮನ್ವಯ ಸಾಧಿಸಿ ಈ ತರಬೇತಿ ಯೋಜನೆ ಜಾರಿಯಾಗುವಂತೆ ಮಾಡುವ ಜವಾಬ್ದಾರಿ ಹೊಂದಿರುತ್ತಾರೆ. ಅಂದರೆ ಪ್ರತಿ ಗ್ರಾಮ ಪಂಚಾಯ್ತಿಗಳು ಎವಿಎಂ ಹೆಸರಿಗೆ ಒಂದು ಲಕ್ಷ ರೂಗಳ ಚೆಕ್ ಹಾಕುವಂತೆ ಆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿಗಳ ಪಿಡಿಓಗಳನ್ನು ಮನವೊಲಿಸುವುದು, ವಿದ್ಯಾರ್ಥಿಗಳಿಗೆ ಸಮವಸ್ತ್ರ ನೀಡುವುದು, ತರಬೇತಿಯ ವರದಿಗಳನ್ನು ಸಲ್ಲಿಸುವ ಕೆಲಸ ಅವರದಾಗಿದೆ. ಅದಕ್ಕೆ ಪ್ರತಿಯಾಗಿ ಮಧ್ಯವರ್ತಿಗಳು ಎವಿಎಂ ಅಕಾಡೆಮಿಯಿಂದ ಇಂತಿಷ್ಟು ಹಣ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ವೇದಗಣಿತ ಎಂಬುದೇ ಇಲ್ಲ: ಈ ಕುರಿತು ತಜ್ಞರು ಹೇಳುವುದೇನು?

ಮಕ್ಕಳಿಗೆ ವೇದ ಗಣಿತ ಹೇಳಿಕೊಡಲು ಸರ್ಕಾರಿ ಶಾಲೆಗಳ ಗಣಿತ ಶಿಕ್ಷಕರನ್ನೇ ಬಳಸಿಕೊಳ್ಳಲಾಗುತ್ತಿದೆ. ತಾಲ್ಲೂಕು ಮಟ್ಟದಲ್ಲಿ ಗಣಿತ ಶಿಕ್ಷಕರನ್ನು ಸೇರಿಸಿ ಅವರಿಗೆ ವೇದ ಗಣಿತದ ತರಬೇತಿ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ. ಆ ಶಿಕ್ಷಕರು ಪ್ರತಿ ಶನಿವಾರ ಮತ್ತು ಭಾನುವಾರ ಶಾಲೆ ಮುಗಿದ ನಂತರ ಎರಡು ಗಂಟೆಗಳ ಕಾಲ 16 ವಾರ ದಲಿತ ಮಕ್ಕಳಿಗೆ ವೇದಗಣಿತ ಪಾಠ ಮಾಡುತ್ತಾರೆ. ತರಬೇತಿಗೆ ಒಳಪಡುವ ಪ್ರತಿ ವಿದ್ಯಾರ್ಥಿಗೂ ಒಂದು ಟೀಶರ್ಟ್, ಕಲಿಕಾ ನೋಟ್ಸ್‌ಗಳನ್ನು ಒದಗಿಸಲಾಗುತ್ತದೆ. ಆ ಶಿಕ್ಷಕರಿಗೆ ಸರ್ಕಾರಿ ಸಂಬಳದ ಜೊತೆಗೆ ತಲಾ 5,000 ರೂಗಳ ಟಿಎ ಮತ್ತು ಡಿಎ ನೀಡಲಾಗುತ್ತಿದೆ.

ರಾಜ್ಯದಲ್ಲಿ ಒಟ್ಟು 6,068 ಗ್ರಾಮ ಪಂಚಾಯ್ತಿಗಳಿದ್ದು ಸುಮಾರು 60 ಕೋಟಿ ರೂಗಳಷ್ಟು ದಲಿತರಿಗಾಗಿ ಮೀಸಲಿಟ್ಟಿದ್ದ SCSP TSP ಅನುದಾನವನ್ನು ಈ ವೇದಗಣಿತ ಕಲಿಕೆಗೆ ಬಳಸಿಕೊಳ್ಳುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಅಲ್ಲದೆ ಗ್ರಾಮೀಣಾಭಿವೃದ್ದಿ ಇಲಾಖೆಯು ಶಿಕ್ಷಣ ಇಲಾಖೆಯಲ್ಲಿ ತಲೆ ಹಾಕುತ್ತಿರುವುದೇಕೆ ಎಂಬ ಪ್ರಶ್ನೆ ಎದ್ದಿದೆ. ಒಂದಷ್ಟು ಪುಸ್ತಕ, ಒಂದು ಟೀ ಶರ್ಟ್ ನೀಡುವುದಕ್ಕೆ 60 ಕೋಟಿ ರೂ ಹಣ ಖರ್ಚಾಗುವುದಿಲ್ಲ. ಹಣ ಲೂಟಿ ಹೊಡೆಯಲೆಂದೇ ಈ ಯೋಜನೆ ಸೃಷ್ಟಿಸಲಾಗಿದೆ ಎಂದು ಹೋರಾಟಗಾರರು ಆರೋಪಿಸಿದ್ದಾರೆ. ಇನ್ನೊಂದೆಡೆ ಈಗಾಗಲೇ ಶಾಲೆಗಳಲ್ಲಿ ಗಣಿತ ಕಲಿಸುತ್ತಿರುವಾಗ ವೈಜ್ಞಾನಿಕವಲ್ಲದ, ಗೊಂದಲ ಮೂಡಿಸುವ ಈ ವೇದ ಗಣಿತ ತರಬೇತಿ ಬೇಡ ಎಂದು ಶಿಕ್ಷಣ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಗಳ ಮಕ್ಕಳ ಮೇಲೆ ಪ್ರಯೋಗ ಸಲ್ಲದು -ಡಾ.ವಿ.ಪಿ ನಿರಂಜನಾರಾಧ್ಯ

ನಮ್ಮ ಮಕ್ಕಳು ಒಂದು ವಿಧಾನದಲ್ಲಿ ಗಣಿತ ಕಲಿಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ಮೇಲೆ ಮಾಟ, ಮಂತ್ರ, ಮ್ಯಾಜಿಕ್‌ನಂತಹ ಪಾಠಗಳನ್ನು ಹೇರುವುದು ಏಕೆ? ಇದರಿಂದ ಮಕ್ಕಳಿಗೆ ಬಹಳ ಗೊಂದಲವಾಗುತ್ತದೆ. ಆ ಗಣಿತ ಕಲಿಯಬೇಕಾ, ಈ ಗಣಿತ ಕಲಿಯಬೇಕಾ ಎಂದು ತಳಮಳಗೊಳ್ಳುತ್ತಾರೆ. ಈ ವೇದಗಣಿತ ಕಲಿಸುವ ಪ್ರಯೋಗಕ್ಕೆ ನಮ್ಮ ಸರ್ಕಾರಿ ಶಾಲಾ ಮಕ್ಕಳನ್ನೆ ಏಕೆ ಬಲಿಪಶು ಮಾಡಲಾಗುತ್ತಿದೆ? ಈ ವೇದಗಣಿತದಿಂದ ಯಾವುದೇ ಪ್ರಯೋಜನವಾಗುವುದಿಲ್ಲವೆಂದು ಈ ಹಿಂದೆಯೇ ಹಲವಾರು ಗಣಿತಜ್ಞರು ವಾದಿಸಿದ್ದಾರೆ. ಅದು ವೈಜ್ಞಾನಿಕವೂ ಅಲ್ಲ, ಆಧುನಿಕ ಶಿಕ್ಷಣಕ್ಕೆ ಹೊಂದಿಕೊಳ್ಳುವುದು ಇಲ್ಲ ಎಂದು ಶಿಕ್ಷಣ ತಜ್ಞ ಡಾ.ವಿ.ಪಿ ನಿರಂಜನಾರಾಧ್ಯರವರು ಅಭಿಪ್ರಾಯಪಟ್ಟಿದ್ದಾರೆ.

ವೇದಗಣಿತದಿಂದ ಮಕ್ಕಳು ನಿಜವಾದ ಗಣಿತ ಕಲಿಯದಿರುವ ಅಪಾಯವಿದೆ – ಎಸ್.ಬಾಲಚಂದ್ರ ರಾವ್

ಬೆಂಗಳೂರಿನ ಭಾರತೀಯ ವಿದ್ಯಾಭವನದ ಗಾಂಧಿ ಸೆಂಟರ್ ಅಫ್ ಸೈನ್ಸ್ ಅಂಡ್ ಹ್ಯೂಮನ್ ವ್ಯಾಲ್ಯೂಸ್ ವಿಭಾಗದ ಗೌರವ ನಿರ್ದೇಶಕರೂ ಹಾಗೂ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯಲ್ಲಿ ಗೌರವ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಎಸ್.ಬಾಲಚಂದ್ರ ರಾವ್ ರವರು ಈ ವೇದಗಣಿತ ಕಲಿಕೆಯಿಂದ ಮಕ್ಕಳಿ ನಿಜವಾದ ಗಣಿತ ಕಲಿಯದಿರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ. “ವೇದಗಣಿತ ಕಲಿಕೆಯಿಂದ ಏನೂ ಉಪಯೋಗವಿಲ್ಲ. ಅದರಲ್ಲಿ ಪ್ರಾಥಮಿಕ ಮತ್ತು ಮಾಧ್ಯಮಿಕ ಹಂತದ ವಿದ್ಯಾರ್ಥಿಗಳಿಗೆ ಶಾರ್ಟ್‌ಕಟ್ ವಿಧಾನದಲ್ಲಿ ಗುಣಾಕಾರ ಮತ್ತು ಭಾಗಕಾರವನ್ನು ಹೇಳಿಕೊಡಲಾಗುತ್ತದೆ. ಆದರೆ ಅದರಿಂದ ಗಣಿತಕ್ಕೆ ಬೇಕಾದ ತಾರ್ಕಿಕ ಚಿಂತನೆಗಳು ಅಭಿವೃದ್ಧಿಯಾಗುವುದಿಲ್ಲ. ಈ ವೇದಗಣಿತ ಕಲಿಕೆಯಿಂದ ಗಣಿತದ ಬಗ್ಗೆ ತಪ್ಪು ಅಭಿಪ್ರಾಯ ಬರುತ್ತದೆ. ಗಣಿತ ಎಂದರೆ ಕೇವಲ ಮ್ಯಾಜಿಕ್ ಎಂದು ವಿದ್ಯಾರ್ಥಿಗಳು ಭಾವಿಸುವ ಅಪಾಯವಿದೆ. ಅಲ್ಲದೆ ವೇದಗಣಿತದ ಬಗ್ಗೆ ಯಾವ ವೇದಗಳಲ್ಲಿಯೂ ಹೇಳಿಲ್ಲ. ಹಿಂದಿನ ಶತಮಾನದ ಕೆಲ ಸ್ವಾಮಿಗಳು ಮಾಡಿರುವ ಸೂತ್ರಗಳು ಇವು. ಅವು ವೇದಿಕ್ ಅಲ್ಲ ಮತ್ತು ಮ್ಯಾಥಮ್ಯಾಟಿಕ್ಸ್ ಕೂಡ ಅಲ್ಲ. ಅವುಗಳಿಗೆ ವೇದಿಕ್ ಎಂದು ಹೆಸರು ಕೊಟ್ಟು ಮಕ್ಕಳಿಗೆ ಅನ್ಯಾಯ ಮಾಡಲಾಗುತ್ತಿದೆ” ಎಂದು ಆತಂಕ ವ್ಯಕ್ತಪಡಿಸಿದರು.


ಇದನ್ನೂ ಓದಿ: ವೇದಗಣಿತ ತರಬೇತಿಗೆ ತಲಾ ಒಂದು ಲಕ್ಷ ನೀಡುತ್ತಿರುವ ಗ್ರಾಮ ಪಂಚಾಯ್ತಿಗಳು: ದಲಿತರಿಗಾಗಿ ಮೀಸಲಾದ SCSP TSP ಹಣ ದುರ್ಬಳಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...