Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ‘ಅಮೂಲ್ಯ ಲಿಯೋನ್‌‌’ ಅವರನ್ನು ಭೇಟಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಯಾತ್ರೆಯಲ್ಲಿ ಯುವತಿಯೊಬ್ಬರೊಂದಿಗೆ ಇರುವ ವಿಡಿಯೊ ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಡಲಾಗಿದೆ.

ಈ ವಿಡಿಯೊ ಮತ್ತು ಚಿತ್ರಗಳನ್ನು ಬಿಜೆಪಿ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಈ ವಿಡಿಯೊವನ್ನು ಟ್ವಿಟರ್‌‌ನಲ್ಲಿ ಹಂಚಿಕೊಂಡಿದ್ದು, “ಗಮನವಿಟ್ಟು ನೋಡಿ, ಇದು ಭಾರತ ಜೋಡಿಸುವುದು ಅಲ್ಲ, ಭಾರತ ಒಡೆಯುವುದು” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರೀತಿ ಗಾಂಧಿ ಅವರು ಹಂಚಿಕೊಂಡಿರುವ ವಿಡಿಯೊದ ಅರ್ಧ ಭಾಗದಲ್ಲಿ ಬಾಬ್‌ಕಟ್‌‌ ಹೇರ್‌ಸ್ಟೈಲ್‌ ಮಾಡಿಕೊಂಡಿರುವ ಯುವತಿಯು ರಾಹುಲ್ ಗಾಂಧಿಯ ಜೊತೆಗೆ ನಡೆಯುತ್ತಿರುವ ದೃಶ್ಯವಿದ್ದರೆ, ಮತ್ತೊಂದು ಅರ್ಧದಲ್ಲಿ ಸಿಎಎ ವಿರೋಧಿ ಹೋರಾಟದ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯ ದೃಶ್ಯಗಳಿವೆ.

ಸಿಎಎ ವಿರೋಧಿ ಹೋರಾಟದ ಸಮಯ ಸಂಸದ ಅಸಾದುದ್ದೀನ್ ಒವೈಸಿ ಅವರು ಭಾಗವಹಿಸಿದ್ದ ವೇದಿಕೆಯೊಂದರಲ್ಲಿ ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಈ ಘೋಷಣೆ ಕೂಗುತ್ತಿದ್ದಂತೆ ಅವರ ಮೈಕ್ ಅನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆದಿತ್ತು. ಅದರ ನಂತರ ಅವರು ‘ಹಿಂದೂಸ್ತಾನ್ ಝಿಂದಾಬಾದ್’ ಹೇಳಿಕೆ ನೀಡಿ ‘ವ್ಯತ್ಯಾಸ ಗಮನಿಸಿ…’ ಎಂದು ಹೇಳುತ್ತಿದ್ದಂತೆ ಅವರಿಂದ ಮೈಕ್‌‌ ಕಿತ್ತು, ಅವರು ಮುಂದಕ್ಕೆ ಮಾತನಾಡದಂತೆ ತಡೆಯಲಾಗಿತ್ತು. ಇದರ ನಂತರ ಅವರ ಬಂಧನ ಕೂಡಾ ನಡೆದಿತ್ತು.

ಅಲ್ಲದೆ ಈ ವೇದಿಕೆ ಏರುವುದಕ್ಕಿಂತ ಮುಂಚೆ ಅವರು ತಮ್ಮ ಫೇಸ್‌ಬುಕ್‌‌ನಲ್ಲಿ ಎಲ್ಲಾ ದೇಶಗಳಿಗೂ ‘ಜಿಂದಾಬಾದ್’ ಎಂದು ಬರೆದಿರುವ ಪೋಸ್ಟ್‌ ಒಂದನ್ನು ಕೂಡಾ ಹಂಚಿಕೊಂಡಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೆ?

ಸಿಎಎ ವಿರೋಧಿ ಹೋರಾಟದಲ್ಲಿ ಭಾಗವಹಿಸಿ ಬಂಧನಕ್ಕೆ ಒಳಗಾಗಿದ್ದ ಅಮೂಲ್ಯ ಲಿಯೋನ್‌‌ ಅವರನ್ನೆ ರಾಹುಲ್ ಗಾಂಧಿ ಅವರು ಕೇರಳದಲ್ಲಿ ಇರುವ ‘ಭಾರತ್‌ ಜೋಡೋ’ ಯಾತ್ರೆಯ ವೇಳೆ ಭೇಟಿಯಾಗಿದ್ದರು ಎಂದು ಪ್ರತಿಪಾದಿಸುತ್ತಿದ್ದಾರೆ.

ಫ್ಯಾಕ್ಟ್‌ಚೆಕ್

ರಾಹುಲ್ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯು ಪ್ರಸ್ತುತ ಕೇರಳದ ತ್ರಿಶೂರ್‌ನಲ್ಲಿ ಇದೆ. ಅಮೂಲ್ಯ ಲಿಯೋನ್‌‌ ಅವರು ಕರ್ನಾಟಕದ ಚಿಕ್ಕಮಗಳೂರಿನವರಾಗಿದ್ದಾರೆ. ಸಿಎಎ ವಿರೋಧಿ ಹೋರಾಟದ ನಂತರ ಅವರು ಸಾರ್ವಜನಿಕ ಹೋರಾಟಗಳಲ್ಲಿ ಕಾಣಿಸಿಕೊಂಡಿಲ್ಲ. ಈ ವರೆಗಿನ ವರದಿಯಂತೆ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಕೂಡಾ ಅಲ್ಲ.

ವಾಸ್ತವದಲ್ಲಿ, ಬಿಜೆಪಿ ಬೆಂಬಲಿಗರು ವೈರಲ್ ಮಾಡುತ್ತಿರುವ ಚಿತ್ರದಲ್ಲಿ ಇರುವ ಯುವತಿಯು ಅಮೂಲ್ಯ ಲಿಯೋನ್‌‌ ಅಲ್ಲ. ರಾಹುಲ್ ಗಾಂಧಿ ಅವರ ಜೊತೆಗೆ ಇರುವ ಯುವತಿಯು ‘ಮಿವಾ ಆಂಡ್ರೆಲಿಯೊ’ ಎಂಬ ಹೆಸರಿನಲ್ಲಿ ಇನ್ಸ್‌ಟಾಗ್ರಾಂನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಕೇರಳದವರಾಗಿದ್ದು, ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ‘ಕೆಎಸ್‌ಯು’ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

ಮಿವಾ ಆಂಡ್ರೆಲಿಯೊ ಅವರು ತನ್ನ ಇನ್ಸ್‌ಟಾಗ್ರಾಮ್ ಅಕೌಂಟ್‌ನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಚಿತ್ರಗಳನ್ನು ಮೂರು ದಿನಗಳ ಹಿಂದೆಯೆ ಪೋಸ್ಟ್‌ ಮಾಡಿದ್ದು, ‘‘ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣ. ನನ್ನ ಸ್ವಂತ ರಾಹುಲ್ ಗಾಂಧಿ’’ ಎಂದು ಬರೆದುಕೊಂಡಿದ್ದಾರೆ.

ಇಷ್ಟೆ ಅಲ್ಲದೆ ಯೂತ್ ಕಾಂಗ್ರೆಸ್‌ ಕಾರ್ಯಕರ್ತ ಮೊಯಿದಿನ್ ಕುರೇಶಿ ಅವರು ಕೂಡಾ ರಾಹುಲ್ ಗಾಂಧಿ ಅವರು ‘ಮಿವಾ ಆಂಡ್ರೆಲಿಯೊ’ ಅವರೊಂದಿಗೆ ನಡೆಯುವ ವಿಡಿಯೊವನ್ನು ಅವರಿಗೆ ಟ್ಯಾಗ್ ಮಾಡಿ ಇನ್ಸ್‌ಟಾಗ್ರಾಮ್‌‌ನಲ್ಲ ಪೋಸ್ಟ್‌ ಮಾಡಿದ್ದಾರೆ.

 

View this post on Instagram

 

A post shared by Moideen Qurayshy (@moidheen.qurayshy)

ಅಲ್ಲದೆ ಅವರ ಚಿತ್ರವನ್ನು ‘ಭಾರತ್ ಜೋಡೋ’ ಅಧೀಕೃತ ಟ್ವಿಟರ್‌ ಹ್ಯಾಂಡಲ್‌ ಕೂಡಾ ಒಂದು ದಿನದ ಹಿಂದೆ ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ‘ಶಿವಲಿಂಗ ಪತ್ತೆ ಸುದ್ದಿ ಕೇಳಿ ಕಾಶಿಯ ಸಂಭ್ರಮ’ ಎಂಬ ಪ್ರತಿಪಾದನೆಯ ಈ ವಿಡಿಯೊ ಕನಿಷ್ಠ ಮೂರು ವರ್ಷ ಹಳೆಯದು

ಒಟ್ಟಿನಲ್ಲಿ ಹೇಳಬಹುದಾದರೆ, ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರನ್ನು ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ಬೆಂಬಲಿಗರು ಹರಡುತ್ತಿರುವುದು ಸುಳ್ಳು ಸುದ್ದಿಯಾಗಿದೆ. ವೈರಲ್ ಚಿತ್ರ ಮತ್ತು ವಿಡಿಯೊದಲ್ಲಿ ಇರುವ ಯುವತಿಯು ಇನ್ಸ್‌ಟಾಗ್ರಾಮ್‌ನಲ್ಲಿ ‘ಮಿವಾ ಆಂಡ್ರೆಲಿಯೊ’ ಎಂದು ಗುರುತಿಸಿಕೊಂಡಿದ್ದು, ಕೇರಳದ ವಿದ್ಯಾರ್ಥಿ ಸಂಘಟನೆಯಾದ ಕೆಎಸ್‌ಯು ನಾಯಕಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....