Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ‘ಅಮೂಲ್ಯ ಲಿಯೋನ್‌‌’ ಅವರನ್ನು ಭೇಟಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಯಾತ್ರೆಯಲ್ಲಿ ಯುವತಿಯೊಬ್ಬರೊಂದಿಗೆ ಇರುವ ವಿಡಿಯೊ ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಡಲಾಗಿದೆ.

ಈ ವಿಡಿಯೊ ಮತ್ತು ಚಿತ್ರಗಳನ್ನು ಬಿಜೆಪಿ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಈ ವಿಡಿಯೊವನ್ನು ಟ್ವಿಟರ್‌‌ನಲ್ಲಿ ಹಂಚಿಕೊಂಡಿದ್ದು, “ಗಮನವಿಟ್ಟು ನೋಡಿ, ಇದು ಭಾರತ ಜೋಡಿಸುವುದು ಅಲ್ಲ, ಭಾರತ ಒಡೆಯುವುದು” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರೀತಿ ಗಾಂಧಿ ಅವರು ಹಂಚಿಕೊಂಡಿರುವ ವಿಡಿಯೊದ ಅರ್ಧ ಭಾಗದಲ್ಲಿ ಬಾಬ್‌ಕಟ್‌‌ ಹೇರ್‌ಸ್ಟೈಲ್‌ ಮಾಡಿಕೊಂಡಿರುವ ಯುವತಿಯು ರಾಹುಲ್ ಗಾಂಧಿಯ ಜೊತೆಗೆ ನಡೆಯುತ್ತಿರುವ ದೃಶ್ಯವಿದ್ದರೆ, ಮತ್ತೊಂದು ಅರ್ಧದಲ್ಲಿ ಸಿಎಎ ವಿರೋಧಿ ಹೋರಾಟದ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯ ದೃಶ್ಯಗಳಿವೆ.

ಸಿಎಎ ವಿರೋಧಿ ಹೋರಾಟದ ಸಮಯ ಸಂಸದ ಅಸಾದುದ್ದೀನ್ ಒವೈಸಿ ಅವರು ಭಾಗವಹಿಸಿದ್ದ ವೇದಿಕೆಯೊಂದರಲ್ಲಿ ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಈ ಘೋಷಣೆ ಕೂಗುತ್ತಿದ್ದಂತೆ ಅವರ ಮೈಕ್ ಅನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆದಿತ್ತು. ಅದರ ನಂತರ ಅವರು ‘ಹಿಂದೂಸ್ತಾನ್ ಝಿಂದಾಬಾದ್’ ಹೇಳಿಕೆ ನೀಡಿ ‘ವ್ಯತ್ಯಾಸ ಗಮನಿಸಿ…’ ಎಂದು ಹೇಳುತ್ತಿದ್ದಂತೆ ಅವರಿಂದ ಮೈಕ್‌‌ ಕಿತ್ತು, ಅವರು ಮುಂದಕ್ಕೆ ಮಾತನಾಡದಂತೆ ತಡೆಯಲಾಗಿತ್ತು. ಇದರ ನಂತರ ಅವರ ಬಂಧನ ಕೂಡಾ ನಡೆದಿತ್ತು.

ಅಲ್ಲದೆ ಈ ವೇದಿಕೆ ಏರುವುದಕ್ಕಿಂತ ಮುಂಚೆ ಅವರು ತಮ್ಮ ಫೇಸ್‌ಬುಕ್‌‌ನಲ್ಲಿ ಎಲ್ಲಾ ದೇಶಗಳಿಗೂ ‘ಜಿಂದಾಬಾದ್’ ಎಂದು ಬರೆದಿರುವ ಪೋಸ್ಟ್‌ ಒಂದನ್ನು ಕೂಡಾ ಹಂಚಿಕೊಂಡಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೆ?

ಸಿಎಎ ವಿರೋಧಿ ಹೋರಾಟದಲ್ಲಿ ಭಾಗವಹಿಸಿ ಬಂಧನಕ್ಕೆ ಒಳಗಾಗಿದ್ದ ಅಮೂಲ್ಯ ಲಿಯೋನ್‌‌ ಅವರನ್ನೆ ರಾಹುಲ್ ಗಾಂಧಿ ಅವರು ಕೇರಳದಲ್ಲಿ ಇರುವ ‘ಭಾರತ್‌ ಜೋಡೋ’ ಯಾತ್ರೆಯ ವೇಳೆ ಭೇಟಿಯಾಗಿದ್ದರು ಎಂದು ಪ್ರತಿಪಾದಿಸುತ್ತಿದ್ದಾರೆ.

ಫ್ಯಾಕ್ಟ್‌ಚೆಕ್

ರಾಹುಲ್ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯು ಪ್ರಸ್ತುತ ಕೇರಳದ ತ್ರಿಶೂರ್‌ನಲ್ಲಿ ಇದೆ. ಅಮೂಲ್ಯ ಲಿಯೋನ್‌‌ ಅವರು ಕರ್ನಾಟಕದ ಚಿಕ್ಕಮಗಳೂರಿನವರಾಗಿದ್ದಾರೆ. ಸಿಎಎ ವಿರೋಧಿ ಹೋರಾಟದ ನಂತರ ಅವರು ಸಾರ್ವಜನಿಕ ಹೋರಾಟಗಳಲ್ಲಿ ಕಾಣಿಸಿಕೊಂಡಿಲ್ಲ. ಈ ವರೆಗಿನ ವರದಿಯಂತೆ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಕೂಡಾ ಅಲ್ಲ.

ವಾಸ್ತವದಲ್ಲಿ, ಬಿಜೆಪಿ ಬೆಂಬಲಿಗರು ವೈರಲ್ ಮಾಡುತ್ತಿರುವ ಚಿತ್ರದಲ್ಲಿ ಇರುವ ಯುವತಿಯು ಅಮೂಲ್ಯ ಲಿಯೋನ್‌‌ ಅಲ್ಲ. ರಾಹುಲ್ ಗಾಂಧಿ ಅವರ ಜೊತೆಗೆ ಇರುವ ಯುವತಿಯು ‘ಮಿವಾ ಆಂಡ್ರೆಲಿಯೊ’ ಎಂಬ ಹೆಸರಿನಲ್ಲಿ ಇನ್ಸ್‌ಟಾಗ್ರಾಂನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಕೇರಳದವರಾಗಿದ್ದು, ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ‘ಕೆಎಸ್‌ಯು’ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

ಮಿವಾ ಆಂಡ್ರೆಲಿಯೊ ಅವರು ತನ್ನ ಇನ್ಸ್‌ಟಾಗ್ರಾಮ್ ಅಕೌಂಟ್‌ನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಚಿತ್ರಗಳನ್ನು ಮೂರು ದಿನಗಳ ಹಿಂದೆಯೆ ಪೋಸ್ಟ್‌ ಮಾಡಿದ್ದು, ‘‘ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣ. ನನ್ನ ಸ್ವಂತ ರಾಹುಲ್ ಗಾಂಧಿ’’ ಎಂದು ಬರೆದುಕೊಂಡಿದ್ದಾರೆ.

ಇಷ್ಟೆ ಅಲ್ಲದೆ ಯೂತ್ ಕಾಂಗ್ರೆಸ್‌ ಕಾರ್ಯಕರ್ತ ಮೊಯಿದಿನ್ ಕುರೇಶಿ ಅವರು ಕೂಡಾ ರಾಹುಲ್ ಗಾಂಧಿ ಅವರು ‘ಮಿವಾ ಆಂಡ್ರೆಲಿಯೊ’ ಅವರೊಂದಿಗೆ ನಡೆಯುವ ವಿಡಿಯೊವನ್ನು ಅವರಿಗೆ ಟ್ಯಾಗ್ ಮಾಡಿ ಇನ್ಸ್‌ಟಾಗ್ರಾಮ್‌‌ನಲ್ಲ ಪೋಸ್ಟ್‌ ಮಾಡಿದ್ದಾರೆ.

 

View this post on Instagram

 

A post shared by Moideen Qurayshy (@moidheen.qurayshy)

ಅಲ್ಲದೆ ಅವರ ಚಿತ್ರವನ್ನು ‘ಭಾರತ್ ಜೋಡೋ’ ಅಧೀಕೃತ ಟ್ವಿಟರ್‌ ಹ್ಯಾಂಡಲ್‌ ಕೂಡಾ ಒಂದು ದಿನದ ಹಿಂದೆ ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ‘ಶಿವಲಿಂಗ ಪತ್ತೆ ಸುದ್ದಿ ಕೇಳಿ ಕಾಶಿಯ ಸಂಭ್ರಮ’ ಎಂಬ ಪ್ರತಿಪಾದನೆಯ ಈ ವಿಡಿಯೊ ಕನಿಷ್ಠ ಮೂರು ವರ್ಷ ಹಳೆಯದು

ಒಟ್ಟಿನಲ್ಲಿ ಹೇಳಬಹುದಾದರೆ, ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರನ್ನು ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ಬೆಂಬಲಿಗರು ಹರಡುತ್ತಿರುವುದು ಸುಳ್ಳು ಸುದ್ದಿಯಾಗಿದೆ. ವೈರಲ್ ಚಿತ್ರ ಮತ್ತು ವಿಡಿಯೊದಲ್ಲಿ ಇರುವ ಯುವತಿಯು ಇನ್ಸ್‌ಟಾಗ್ರಾಮ್‌ನಲ್ಲಿ ‘ಮಿವಾ ಆಂಡ್ರೆಲಿಯೊ’ ಎಂದು ಗುರುತಿಸಿಕೊಂಡಿದ್ದು, ಕೇರಳದ ವಿದ್ಯಾರ್ಥಿ ಸಂಘಟನೆಯಾದ ಕೆಎಸ್‌ಯು ನಾಯಕಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...