Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

ಫ್ಯಾಕ್ಟ್‌ಚೆಕ್‌: ಭಾರತ್‌ ಜೋಡೋ ಯಾತ್ರೆಯಲ್ಲಿ ‘ಅಮೂಲ್ಯ ಲಿಯೋನ್‌‌’ ರಾಹುಲ್ ಗಾಂಧಿಯನ್ನು ಭೇಟಿಯಾದರೆ?

- Advertisement -
- Advertisement -

ಭಾರತ್‌ ಜೋಡೋ ಯಾತ್ರೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ‘ಅಮೂಲ್ಯ ಲಿಯೋನ್‌‌’ ಅವರನ್ನು ಭೇಟಿಯಾಗಿದ್ದಾರೆ ಎಂದು ಪ್ರತಿಪಾದಿಸಿ ಯಾತ್ರೆಯಲ್ಲಿ ಯುವತಿಯೊಬ್ಬರೊಂದಿಗೆ ಇರುವ ವಿಡಿಯೊ ಮತ್ತು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿ ಬಿಡಲಾಗಿದೆ.

ಈ ವಿಡಿಯೊ ಮತ್ತು ಚಿತ್ರಗಳನ್ನು ಬಿಜೆಪಿ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಈ ವಿಡಿಯೊವನ್ನು ಟ್ವಿಟರ್‌‌ನಲ್ಲಿ ಹಂಚಿಕೊಂಡಿದ್ದು, “ಗಮನವಿಟ್ಟು ನೋಡಿ, ಇದು ಭಾರತ ಜೋಡಿಸುವುದು ಅಲ್ಲ, ಭಾರತ ಒಡೆಯುವುದು” ಎಂದು ಬರೆದುಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರೀತಿ ಗಾಂಧಿ ಅವರು ಹಂಚಿಕೊಂಡಿರುವ ವಿಡಿಯೊದ ಅರ್ಧ ಭಾಗದಲ್ಲಿ ಬಾಬ್‌ಕಟ್‌‌ ಹೇರ್‌ಸ್ಟೈಲ್‌ ಮಾಡಿಕೊಂಡಿರುವ ಯುವತಿಯು ರಾಹುಲ್ ಗಾಂಧಿಯ ಜೊತೆಗೆ ನಡೆಯುತ್ತಿರುವ ದೃಶ್ಯವಿದ್ದರೆ, ಮತ್ತೊಂದು ಅರ್ಧದಲ್ಲಿ ಸಿಎಎ ವಿರೋಧಿ ಹೋರಾಟದ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯ ದೃಶ್ಯಗಳಿವೆ.

ಸಿಎಎ ವಿರೋಧಿ ಹೋರಾಟದ ಸಮಯ ಸಂಸದ ಅಸಾದುದ್ದೀನ್ ಒವೈಸಿ ಅವರು ಭಾಗವಹಿಸಿದ್ದ ವೇದಿಕೆಯೊಂದರಲ್ಲಿ ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರು ‘ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದರು. ಈ ಘೋಷಣೆ ಕೂಗುತ್ತಿದ್ದಂತೆ ಅವರ ಮೈಕ್ ಅನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆದಿತ್ತು. ಅದರ ನಂತರ ಅವರು ‘ಹಿಂದೂಸ್ತಾನ್ ಝಿಂದಾಬಾದ್’ ಹೇಳಿಕೆ ನೀಡಿ ‘ವ್ಯತ್ಯಾಸ ಗಮನಿಸಿ…’ ಎಂದು ಹೇಳುತ್ತಿದ್ದಂತೆ ಅವರಿಂದ ಮೈಕ್‌‌ ಕಿತ್ತು, ಅವರು ಮುಂದಕ್ಕೆ ಮಾತನಾಡದಂತೆ ತಡೆಯಲಾಗಿತ್ತು. ಇದರ ನಂತರ ಅವರ ಬಂಧನ ಕೂಡಾ ನಡೆದಿತ್ತು.

ಅಲ್ಲದೆ ಈ ವೇದಿಕೆ ಏರುವುದಕ್ಕಿಂತ ಮುಂಚೆ ಅವರು ತಮ್ಮ ಫೇಸ್‌ಬುಕ್‌‌ನಲ್ಲಿ ಎಲ್ಲಾ ದೇಶಗಳಿಗೂ ‘ಜಿಂದಾಬಾದ್’ ಎಂದು ಬರೆದಿರುವ ಪೋಸ್ಟ್‌ ಒಂದನ್ನು ಕೂಡಾ ಹಂಚಿಕೊಂಡಿದ್ದರು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಕೇಂದ್ರ ಶಿಕ್ಷಣ ಸಚಿವಾಲಯ 5 ಲಕ್ಷ ಉಚಿತ ಲ್ಯಾಪ್‌ಟಾಪ್ ಹಂಚುತ್ತಿದೆ ಎಂಬ ವಾಟ್ಸಪ್‌ ಸಂದೇಶ ನಿಜವೆ?

ಸಿಎಎ ವಿರೋಧಿ ಹೋರಾಟದಲ್ಲಿ ಭಾಗವಹಿಸಿ ಬಂಧನಕ್ಕೆ ಒಳಗಾಗಿದ್ದ ಅಮೂಲ್ಯ ಲಿಯೋನ್‌‌ ಅವರನ್ನೆ ರಾಹುಲ್ ಗಾಂಧಿ ಅವರು ಕೇರಳದಲ್ಲಿ ಇರುವ ‘ಭಾರತ್‌ ಜೋಡೋ’ ಯಾತ್ರೆಯ ವೇಳೆ ಭೇಟಿಯಾಗಿದ್ದರು ಎಂದು ಪ್ರತಿಪಾದಿಸುತ್ತಿದ್ದಾರೆ.

ಫ್ಯಾಕ್ಟ್‌ಚೆಕ್

ರಾಹುಲ್ ಗಾಂಧಿ ಅವರ ‘ಭಾರತ್‌ ಜೋಡೋ’ ಯಾತ್ರೆಯು ಪ್ರಸ್ತುತ ಕೇರಳದ ತ್ರಿಶೂರ್‌ನಲ್ಲಿ ಇದೆ. ಅಮೂಲ್ಯ ಲಿಯೋನ್‌‌ ಅವರು ಕರ್ನಾಟಕದ ಚಿಕ್ಕಮಗಳೂರಿನವರಾಗಿದ್ದಾರೆ. ಸಿಎಎ ವಿರೋಧಿ ಹೋರಾಟದ ನಂತರ ಅವರು ಸಾರ್ವಜನಿಕ ಹೋರಾಟಗಳಲ್ಲಿ ಕಾಣಿಸಿಕೊಂಡಿಲ್ಲ. ಈ ವರೆಗಿನ ವರದಿಯಂತೆ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆ ಕೂಡಾ ಅಲ್ಲ.

ವಾಸ್ತವದಲ್ಲಿ, ಬಿಜೆಪಿ ಬೆಂಬಲಿಗರು ವೈರಲ್ ಮಾಡುತ್ತಿರುವ ಚಿತ್ರದಲ್ಲಿ ಇರುವ ಯುವತಿಯು ಅಮೂಲ್ಯ ಲಿಯೋನ್‌‌ ಅಲ್ಲ. ರಾಹುಲ್ ಗಾಂಧಿ ಅವರ ಜೊತೆಗೆ ಇರುವ ಯುವತಿಯು ‘ಮಿವಾ ಆಂಡ್ರೆಲಿಯೊ’ ಎಂಬ ಹೆಸರಿನಲ್ಲಿ ಇನ್ಸ್‌ಟಾಗ್ರಾಂನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಕೇರಳದವರಾಗಿದ್ದು, ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಯಾದ ‘ಕೆಎಸ್‌ಯು’ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

ಮಿವಾ ಆಂಡ್ರೆಲಿಯೊ ಅವರು ತನ್ನ ಇನ್ಸ್‌ಟಾಗ್ರಾಮ್ ಅಕೌಂಟ್‌ನಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ಚಿತ್ರಗಳನ್ನು ಮೂರು ದಿನಗಳ ಹಿಂದೆಯೆ ಪೋಸ್ಟ್‌ ಮಾಡಿದ್ದು, ‘‘ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣ. ನನ್ನ ಸ್ವಂತ ರಾಹುಲ್ ಗಾಂಧಿ’’ ಎಂದು ಬರೆದುಕೊಂಡಿದ್ದಾರೆ.

ಇಷ್ಟೆ ಅಲ್ಲದೆ ಯೂತ್ ಕಾಂಗ್ರೆಸ್‌ ಕಾರ್ಯಕರ್ತ ಮೊಯಿದಿನ್ ಕುರೇಶಿ ಅವರು ಕೂಡಾ ರಾಹುಲ್ ಗಾಂಧಿ ಅವರು ‘ಮಿವಾ ಆಂಡ್ರೆಲಿಯೊ’ ಅವರೊಂದಿಗೆ ನಡೆಯುವ ವಿಡಿಯೊವನ್ನು ಅವರಿಗೆ ಟ್ಯಾಗ್ ಮಾಡಿ ಇನ್ಸ್‌ಟಾಗ್ರಾಮ್‌‌ನಲ್ಲ ಪೋಸ್ಟ್‌ ಮಾಡಿದ್ದಾರೆ.

 

View this post on Instagram

 

A post shared by Moideen Qurayshy (@moidheen.qurayshy)

ಅಲ್ಲದೆ ಅವರ ಚಿತ್ರವನ್ನು ‘ಭಾರತ್ ಜೋಡೋ’ ಅಧೀಕೃತ ಟ್ವಿಟರ್‌ ಹ್ಯಾಂಡಲ್‌ ಕೂಡಾ ಒಂದು ದಿನದ ಹಿಂದೆ ಪೋಸ್ಟ್‌ ಮಾಡಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌‌: ‘ಶಿವಲಿಂಗ ಪತ್ತೆ ಸುದ್ದಿ ಕೇಳಿ ಕಾಶಿಯ ಸಂಭ್ರಮ’ ಎಂಬ ಪ್ರತಿಪಾದನೆಯ ಈ ವಿಡಿಯೊ ಕನಿಷ್ಠ ಮೂರು ವರ್ಷ ಹಳೆಯದು

ಒಟ್ಟಿನಲ್ಲಿ ಹೇಳಬಹುದಾದರೆ, ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ ಅವರು ಸಿಎಎ ವಿರೋಧಿ ಹೋರಾಟಗಾರ್ತಿ ಅಮೂಲ್ಯ ಲಿಯೋನ್‌‌ ಅವರನ್ನು ಭೇಟಿ ಮಾಡಿದ್ದಾರೆ ಎಂದು ಬಿಜೆಪಿ ಬೆಂಬಲಿಗರು ಹರಡುತ್ತಿರುವುದು ಸುಳ್ಳು ಸುದ್ದಿಯಾಗಿದೆ. ವೈರಲ್ ಚಿತ್ರ ಮತ್ತು ವಿಡಿಯೊದಲ್ಲಿ ಇರುವ ಯುವತಿಯು ಇನ್ಸ್‌ಟಾಗ್ರಾಮ್‌ನಲ್ಲಿ ‘ಮಿವಾ ಆಂಡ್ರೆಲಿಯೊ’ ಎಂದು ಗುರುತಿಸಿಕೊಂಡಿದ್ದು, ಕೇರಳದ ವಿದ್ಯಾರ್ಥಿ ಸಂಘಟನೆಯಾದ ಕೆಎಸ್‌ಯು ನಾಯಕಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...