Homeಕರ್ನಾಟಕರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

ರಮೇಶ್‍ಕುಮಾರ್ ಮತ್ತು ಡಿ.ಕೆ.ಶಿವಕುಮಾರ್: ಇಲ್ಲಿಯವರೆಗೆ ವಿಶ್ವಾಸಮತ ಗೆದ್ದುಕೊಂಡ ಇಬ್ಬರು

- Advertisement -
- Advertisement -

ಸರ್ಕಾರಕ್ಕೆ ಬಹುಮತ ಇಲ್ಲ, ಕುಮಾರಸ್ವಾಮಿ ರಾಜೀನಾಮೆ ಕೊಡಲಿ ಎಂದು ಬಿಜೆಪಿ ಅಬ್ಬರಿಸುತ್ತಿದೆ. ವಿಶ್ವಾಸಮತ ಯಾಚನೆ ಮಾಡಲಿದ್ದೇನೆ, ಸಮಯ ನಿಗದಿ ಮಾಡಿ ಎಂದು ಸ್ವತಃ ಕುಮಾರಸ್ವಾಮಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಮುಂಬೈನ ಹೋಟೆಲ್ಲಿನಲ್ಲಿ ಸೇರಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರು ಬಿಜೆಪಿಯು ತಮ್ಮನ್ನು ತೃಪ್ತರಾಗಿಸೀತೇ ಎಂದು ಕಾದುಕೊಂಡು ಕೂತಿದ್ದಾರೆ. ಯಾರ್ಯಾರಿಗೆ ಏನೇನು, ಎಷ್ಟೆಷ್ಟು ಸಿಕ್ಕಿದೆ ಅಥವಾ ಸಿಗುತ್ತದೆ ಎಂಬುದು ಇನ್ನೂ ಗೊತ್ತಾಗಿಲ್ಲ. ಆದರೆ, ಇಬ್ಬರಂತೂ ತಾವೇನು ಪಡೆದುಕೊಳ್ಳಲು ಇಚ್ಛಿಸಿದ್ದರೋ ಅಥವಾ ವಾಸ್ತವದಲ್ಲಿ ಯಾವುದಕ್ಕೆ ಅರ್ಹರೋ ಅದನ್ನು ಪಡೆದುಕೊಂಡಾಗಿದೆ.

ಅವರೇ ರಾಜ್ಯ ರಾಜಕಾರಣದ ಇಬ್ಬರು ಮಹತ್ವಾಕಾಂಕ್ಷಿಗಳಾದ ಸ್ಪೀಕರ್ ರಮೇಶ್ ಕುಮಾರ್ ಮತ್ತು ಜಲಸಂಪನ್ಮೂಲ ಖಾತೆ ಸಚಿವ ಡಿ.ಕೆ.ಶಿವಕುಮಾರ್. ಶ್ರೀನಿವಾಸಪುರದ ಕೆ.ಆರ್.ರಮೇಶ್‍ಕುಮಾರ್ ಮುಖ್ಯಮಂತ್ರಿಯಾಗಬಹುದೆಂಬ ಆಸೆಯನ್ನೇನೂ ಇಟ್ಟುಕೊಂಡಿಲ್ಲ. ರಾಜಕೀಯ ಸಂದರ್ಭ ಮತ್ತು ಅವರದ್ದೇ ಮಿತಿಗಳ ಕಾರಣಕ್ಕೆ ಅವರನ್ನು ಸಚಿವರನ್ನಾಗಿಸಲೂ ಅವರ ಪಕ್ಷಗಳು ಸಿದ್ಧರಿಲ್ಲ. ಆದರೆ, ಸುದೀರ್ಘಕಾಲದ ರಾಜಕಾರಣದಲ್ಲಿ ತಾನು ಪಡೆದುಕೊಂಡಿರುವ ಜ್ಞಾನ ಹಾಗೂ ದೇಶದಲ್ಲಿ ಈ ಮಟ್ಟಿಗಿನ ತಿಳುವಳಿಕೆ ಇರುವ ಕೆಲವರಲ್ಲೇ ಒಬ್ಬನಾಗಿರುವ ತನಗೆ ಅದರ ‘ಸದ್ಬಳಕೆ’ಗೆ ಸೂಕ್ತ ಅವಕಾಶ ಸಿಕ್ಕಿಲ್ಲ ಎಂಬ ಕೊರಗಂತೂ ಇದೆ. ಈ ಸಾರಿಯ ಬಿಕ್ಕಟ್ಟು ಆ ಅವಕಾಶವನ್ನು ಅವರಿಗೆ ಒದಗಿಸಿದೆ ಮತ್ತು ಇನ್ನೂ ಕೆಲಕಾಲ ಒದಗಿಸಲಿದೆ.

ಸುಪ್ರೀಂಕೋರ್ಟು ಮತ್ತು ರಾಜ್ಯಪಾಲರಿಗೆ ‘ನನ್ನದು ಸ್ಪೀಕರ್ ಸ್ಥಾನ. ಶಾಸಕಾಂಗದ ಮಟ್ಟಿಗೆ ಇದೂ ಸಾಂವಿಧಾನಿಕ ಹುದ್ದೆಯೇ. ನನ್ನ ಕೆಲಸ ನಾನಷ್ಟೇ ಮಾಡುವುದು ಸಾಧ್ಯ. ನೀವು ನನಗೆ ಡಿಕ್ಟೇಟ್ ಮಾಡಲು ಸಾಧ್ಯವಿಲ್ಲ’ ಎಂದು ಅವರು ಸೂಚ್ಯವಾಗಿ ಹೇಳಿಯಾಗಿದೆ. ಇದು ತಲುಪಬೇಕಾದವರಿಗೆ ತಲುಪಲಿ ಎಂದು ಸಂದರ್ಭ ಇದ್ದಾಗಲೆಲ್ಲಾ ಇಂಗ್ಲಿಷಿನಲ್ಲೂ ಮಾತಾಡುತ್ತಾ, ರಾಜ್ಯಪಾಲರು ಮತ್ತು ಸುಪ್ರೀಂಕೋರ್ಟಿಗೂ ಅವರು ಸಂದೇಶ ರವಾನೆ ಮಾಡಿಯಾಗಿದೆ. ಸ್ಪೀಕರ್ ಸ್ಥಾನದಿಂದ ತಾನೇನು ಮಾಡಬಹುದೆಂಬ ಸಣ್ಣ ಸೂಚನೆಯನ್ನು ಉಮೇಶ್ ಜಾಧವ್ ರಾಜೀನಾಮೆ ಸಂದರ್ಭದಲ್ಲೇ ಅವರು ತೋರಿಸಿದ್ದರು.

ಸಂಜೆ 6 ಗಂಟೆ ಒಳಗೆ ರಾಜೀನಾಮೆ ಕೊಡಬಯಸುವ ಶಾಸಕರು ಸ್ಪೀಕರ್ ಅವರನ್ನು ಕಾಣಿ ಮತ್ತು ಇಂದೇ ರಾಜೀನಾಮೆಗಳನ್ನು ಸ್ಪೀಕರ್ ಇತ್ಯರ್ಥ ಮಾಡಲಿ ಎಂಬ ಸೂಚನೆಯನ್ನು ಸುಪ್ರೀಂಕೋರ್ಟು ನಿನ್ನೆ ಕೊಟ್ಟಿತ್ತು. ತಪ್ಪು ಲೆಕ್ಕಾಚಾರದಿಂದ ಎಚ್‍ಎಎಲ್ ಏರ್ ಪೋರ್ಟಿಗೆ ತಡವಾಗಿ ಬಂದ ತೃಪ್ತರಾಗದ ಶಾಸಕರು, ಸಿಗ್ನಲ್ ಫ್ರೀ ವ್ಯವಸ್ಥೆ ಇದ್ದರೂ 6 ಗಂಟೆ ಒಳಗೆ ವಿಧಾನಸೌಧ ತಲುಪಲಿಲ್ಲ. ಅದರ ರನ್ನಿಂಗ್ ಕಾಮೆಂಟ್ರಿ ನೀಡುತ್ತಿದ್ದ ಟಿವಿ ಆಂಕರ್ ಗಳಲ್ಲಿ ಯಾರಾದರೂ ಒಬ್ಬರು ಉಸಿರುಕಟ್ಟಿ ಸತ್ತು ಹೋಗಬಹುದು ಎನಿಸುವ ರೀತಿಯಲ್ಲಿ ವೀಕ್ಷಕ ವಿವರಣೆ ನೀಡುತ್ತಿದ್ದರು.

ಬೇರೆ ಸ್ಪೀಕರ್ ಆಗಿದ್ದರೆ, 6 ಗಂಟೆ 1 ನಿಮಿಷಕ್ಕೆ ತಮ್ಮ ಕಚೇರಿಯಿಂದ ಹೊರಟು, ಎ.ಜಿ.ಕಚೇರಿ ಗೇಟಿನಿಂದ ವಿಧಾನಸೌಧ ಆವರಣ ಬಿಡಲು ವ್ಯವಸ್ಥೆ ಮಾಡಿಕೊಂಡಿರುತ್ತಿದ್ದರು. ಆಗ ಸುಪ್ರೀಂಕೋರ್ಟಿನ ತೀರ್ಪನ್ನು ಪಾಲನೆ ಮಾಡಿದ ಹಾಗೂ ಆಗಿರುತ್ತಿತ್ತು; ತಮ್ಮ ಪಕ್ಷವನ್ನು ಬಚಾವು ಮಾಡಿದ ಹಾಗೂ ಆಗಿರುತ್ತಿತ್ತು. ಆದರೆ ಸ್ಪೀಕರ್ ನೈತಿಕವಾಗಿ ತಪ್ಪು ಮಾಡಿದ ಕಳಂಕ ಹೊರಬೇಕಾಗುತ್ತಿತ್ತು. ರಮೇಶ್‍ಕುಮಾರ್ ರಿಗೆ ಇರುವ ಆತ್ಮವಿಶ್ವಾಸ ಎಷ್ಟೆಂದರೆ, ತಾನು ಈ ಪ್ರಕರಣವನ್ನು ತಾಂತ್ರಿಕವಾಗಿ ಗೆಲ್ಲಬೇಕಿಲ್ಲ; ಕೊಡಬೇಕಾದ ಪೆಟ್ಟು ಕೊಟ್ಟೇ ಗೆಲ್ಲುತ್ತೇನೆ ಎಂದು. ಹಾಗಾಗಿ ರಾಜೀನಾಮೆ ಪತ್ರವನ್ನು ತೆಗೆದುಕೊಂಡು (ಖಾಲಿ ಹಾಳೆ ಹಿಡಿದು ಬಂದ ಶಾಸಕರಿಗೆ ಸರಿಯಾದ ರೀತಿಯಲ್ಲಿ ರಾಜೀನಾಮೆ ಪತ್ರ ಹೇಗಿರಬೇಕು ಎಂದು ಅವರೇ ಹೇಳಿರಲಿಕ್ಕೂ ಸಾಕು), ಹೊರಬಂದು ಪತ್ರಿಕಾಗೋಷ್ಠಿ ನಡೆಸಿದರು. ಸುಪ್ರೀಂಕೋರ್ಟು ತನಗೆ ಇಷ್ಟೇ ಸಮಯದಲ್ಲಿ ನಿರ್ಧಾರ ಹೇಳಿ ಎಂದು ತಾಕೀತು ಮಾಡುವಂತಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಹೇಳಿದರು.

ಮರುದಿನ ಸುಪ್ರೀಂಕೋರ್ಟು ತಾನೇ ಸಮಯ ಕೇಳಿಕೊಂಡು ಮಂಗಳವಾರಕ್ಕೆ ವಿಚಾರಣೆಯನ್ನು ಮುಂದೂಡಿತು! ಇಂತಹ ಸಂದರ್ಭ ಬರಬಹುದೆಂದೇ ಸಿದ್ದರಾಮಯ್ಯ ಮತ್ತು ದೇವೇಗೌಡರಿಬ್ಬರೂ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ರಮೇಶ್‍ಕುಮಾರ್‍ರನ್ನು ಸ್ಪೀಕರ್ ಮಾಡಿದ್ದರು. ಮೊನ್ನೆ ಕಾಂಗ್ರೆಸ್ ಸಂಸದೀಯ ಪಕ್ಷದಿಂದ ಸ್ಪೀಕರ್ ಕಚೇರಿಗೆ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಿಯೋಗವೊಂದು ಹೋಗಿತ್ತು. ಆಗ ಹಳೆಯ ಸ್ನೇಹಿತರಾದ ಸಿದ್ದರಾಮಯ್ಯ ಮತ್ತು ರಮೇಶ್‍ ಕುಮಾರ್ ನಡುವೆ ನಡೆದ ಮಾತುಕತೆ ಹೀಗಿತ್ತು.

ರಮೇಶ್ ಕುಮಾರ್: ‘ಒಟ್ಟಿನಲ್ಲಿ ನಿನಗೆ ಈಗ ಬಹಳ ಖುಷಿಯಲ್ಲವೇನಪ್ಪಾ? You are the happiest person now’,

ಸಿದ್ದರಾಮಯ್ಯ: ‘ನಾನೇಕೆ ಖುಷಿ ಪಡಬೇಕಪ್ಪಾ, ನಮ್ಮ ಕಷ್ಟ ನಮಗೆ ಆಗಿದೆ’.

ರ.ಕು: ‘ನನ್ನನ್ನ ಈ ಕಷ್ಟಕ್ಕೆ ಸಿಕ್ಕಿ ಹಾಕಿಸಿದ್ದಕ್ಕೆ’.

ಸಿ.ರಾ: ‘ಇಂಥದ್ದನ್ನೆಲ್ಲಾ ನಿಭಾಯಿಸಲು ನೀನೇ ಸರಿ. ಆ ಸಾಮಥ್ರ್ಯ, ತಿಳುವಳಿಕೆ ನಿನಗೇ ಇದೆ ಎಂಬ ಕಾರಣಕ್ಕೇ ನಿನ್ನನ್ನು ಸ್ಪೀಕರ್ ಆಗಿ ಮಾಡಿರುವುದು’.

ಇದು ವಾಸ್ತವವೇ. ಹಾಗೆಯೇ ಅದಕ್ಕಿಂತ ಜಾಸ್ತಿ ರಮೇಶ್‍ ಕುಮಾರ್ ರವರಿಗೆ ಅವಕಾಶ ಕೊಡಬಾರದು ಎಂಬುದು ಸಿದ್ದರಾಮಯ್ಯ ಮತ್ತು ದೇವೇಗೌಡರಿಬ್ಬರಿಗೂ ಗೊತ್ತು. ಸಂಸದೀಯ ನಿಯಮಾವಳಿಗಳ ಬಗ್ಗೆ ಅಪಾರ ಜ್ಞಾನವಿರುವ ರಮೇಶ್‍ಕುಮಾರ್, ಈ ಅವಧಿಯಲ್ಲಿ ಎರಡೆರಡು ಸಾರಿ ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮ ಕುಮಾರ್ ರಿಂದಲೂ ಸಲಹೆ ಪಡೆದುಕೊಂಡಿದ್ದಾರೆ. ಅವೆಲ್ಲದರ ಪರಿಣಾಮವಾಗಿ ಈ ಪ್ರಕರಣವನ್ನು ವಿಶೇಷ ರೀತಿಯಲ್ಲಿ ನಿಭಾಯಿಸಬೇಕೆಂಬ ನಿರ್ಧಾರಕ್ಕೆ ಅವರು ಬಂದಂತಿದೆ.

ಸಂವಿಧಾನದ 10ನೇ ಶೆಡ್ಯೂಲ್‍ನ ಪ್ರಕಾರ ಶಾಸಕರನ್ನು ಅನರ್ಹಗೊಳಿಸುವ ಪರಮಾಧಿಕಾರ ಸ್ಪೀಕರ್ ಗೆ ಇದೆ. ಅದನ್ನು ನಂತರ ಸುಪ್ರೀಂಕೋರ್ಟಿನಲ್ಲಿ ಪ್ರಶ್ನಿಸಬಹುದಾದರೂ, ಕೋರ್ಟಿಗೆ ಕೆಲವು ಮಿತಿಗಳಿವೆ. ಈಗಾಗಲೇ ಕಿಹೊಟೊ ಹೊಲ್ಲೊಹಾನ್ ವರ್ಸಸ್ ಜಾಚಿಲ್ಹು (Kihoto Hollohan v/s Zachillhu) ಮೊಕದ್ದಮೆಯಲ್ಲಿ ಸುಪ್ರೀಂಕೋರ್ಟೇ ಅದನ್ನು ಹೇಳಿದೆ. ಹಾಗಾಗಿ ಇದು ಶಾಸಕಾಂಗ ಮತ್ತು ನ್ಯಾಯಾಂಗದ ಅಧಿಕಾರವ್ಯಾಪ್ತಿಯ ಕುರಿತ ತಿಕ್ಕಾಟವಾಗುವ ಸಂಭವವಿದೆ. ಹಾಗಾದಾಗ, ಸಾಂವಿಧಾನಿಕ ಮೌಲ್ಯಗಳು ಏನಿರಬೇಕು ಎಂಬುದನ್ನು ಸಮರ್ಥವಾಗಿ ಅಭಿವ್ಯಕ್ತಿಸಬಲ್ಲ ಸ್ಪೀಕರ್ ಇಲ್ಲಿರುವುದರಿಂದ ಸುಪ್ರೀಂಕೋರ್ಟು ಸಹಾ ಇಕ್ಕಟ್ಟಿಗೆ ಸಿಲುಕುತ್ತದೆ.

ಇವೆಲ್ಲದರ ಕೇಂದ್ರದಲ್ಲಿರುವ ರಮೇಶ್‍ ಕುಮಾರ್ ರವರಿಗೆ ಇವೆಲ್ಲವೂ ಹೆಚ್ಚೆಚ್ಚು ಅವಕಾಶಗಳನ್ನು ಒದಗಿಸುತ್ತಾ ಹೋಗುತ್ತದೆ ಮತ್ತು ಅವರೂ ಅದನ್ನು ಬಯಸುತ್ತಾರೆ. ಇವೆಲ್ಲದರ ಪರಿಣಾಮವಾಗಿ ಪ್ರಜಾತಂತ್ರಕ್ಕೆ ಒಳಿತಾಗುವುದಾದರೆ ಮತ್ತು ಅನೈತಿಕ ಪಕ್ಷಾಂತರವನ್ನು ತಡೆಯುವಲ್ಲಿ ಮೈಲುಗಲ್ಲನ್ನು ನಿರ್ಮಿಸುವುದಾದರೆ ಅದಕ್ಕಿಂದ ಒಳ್ಳೆಯದು ಇನ್ನೊಂದಿಲ್ಲ.

ಇದನ್ನೂ ಓದಿ: ಮುಂಬೈಗೆ ಹೋಗಿ ತನ್ನ ಪರವಾದ ವಿಶ್ವಾಸಮತ ಗೆದ್ದುಕೊಂಡ ಡಿ.ಕೆ.ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...