Homeದಲಿತ್ ಫೈಲ್ಸ್ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

- Advertisement -
- Advertisement -

ದಲಿತ ಬಾಲಕಿಗೆ ಶಿಕ್ಷಣ ನೀಡಲು ಶಿಕ್ಷಕಿಯೇ ನಿರಾಕರಿಸಿರುವ ಘಟನೆ ಉತ್ತರ ಪ್ರದೇಶದ ಗೋಂಡಾ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ದಲಿತ (ಪರಿಶಿಷ್ಟ ಜಾತಿ) ಬಾಲಕಿ ಸೋನಿಯಾ ಈ ಆರೋಪ ಮಾಡಿದ್ದು, “ನನ್ನ ಶಿಕ್ಷಕಿ ಪೂಜಾ ಸಿಂಗ್ ನನಗೆ ಕಲಿಸಲು ನಿರಾಕರಿಸುತ್ತಾರೆ” ಎಂದು ತಿಳಿಸಿದ್ದಾರೆ.

ಶಾಲೆಗೆ ಹೋದಾಗಲೆಲ್ಲಾ ಶಿಕ್ಷಕಿ ಪೂಜಾ ಸಿಂಗ್ ನನ್ನನ್ನು ಶಾಲೆಯಿಂದ ಹೊರಹಾಕುತ್ತಿದ್ದಾರೆ. ಇದು ಜುಲೈನಿಂದಲೂ ನಡೆಯುತ್ತಿದೆ. ಯಾವುದೇ ಚಮ್ಮಾರ್‌ ಅಥವಾ ಇತರೆ ಕೆಳಜಾತಿಯವರಿಗೆ ಪಾಠ ಮಾಡುವುದಿಲ್ಲ ಎಂದು ಪೂಜಾ ಸಿಂಗ್ ಹೇಳುತ್ತಿರುವುದಾಗಿ ದೂರಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಕಿ ಸೋನಿಯಾ ಮಾತನಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದೇ ವೇಳೆ ಸೋನಿಯಾ ಅವರ ತಂದೆ ಭಗವಾನ್ ಪ್ರಸಾದ್ ಅವರ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

“ಎಷ್ಟೋ ಬಾರಿ ಶಾಲೆಗೆ ಹೋಗಿದ್ದರೂ ಶಿಕ್ಷಕಿ ಪೂಜಾ ಸಿಂಗ್ ನಮ್ಮ ಮಾತನ್ನು ಕೇಳುತ್ತಿಲ್ಲ. ಇದಕ್ಕೆ ವ್ಯತಿರಿಕ್ತವಾಗಿ, ನಿಮ್ಮ ಮಗಳನ್ನು ತರಗತಿಯಲ್ಲಿ ಕುಳಿತುಕೊಳ್ಳಲು ನಾನು ಬಿಡುವುದಿಲ್ಲ” ಎಂದು ಸಂತ್ರಸ್ತ ಬಾಲಕಿಯ ತಂದೆ ಹೇಳಿದ್ದಾರೆ ಎಂದು ‘ದಲಿತ್‌ ಟೈಮ್ಸ್‌’ ವರದಿ ಮಾಡಿದೆ.

ಈ ಸಂಬಂಧ ಮೂಲ ಶಿಕ್ಷಣಾಧಿಕಾರಿಗೆ ಪತ್ರವನ್ನೂ ಬರೆಯಲಾಗಿದೆ. ಸಂತ್ರಸ್ತ ಪೋಷಕರು ಈ ಕುರಿತು ಪ್ರತಿಕ್ರಿಯಿಸಿ, “ನಿಮ್ಮ ಮಗಳೊಂದಿಗೆ ಶಾಲೆಗೆ ಹೋಗಿ ಎಂದು ಅಧಿಕಾರಿ ಹೇಳಿದ್ದರು. ಪೂಜಾ ಸಿಂಗ್ ಅಧಿಕಾರಿಗಳ ಜೊತೆ ಮಾತನಾಡಲಿಲ್ಲ” ಎಂದಿದ್ದಾರೆ.

“ದಲಿತ ಪೋಷಕರಾದ ಭಗವಾನ್ ಪ್ರಸಾದ್ ಮತ್ತು ಗಿಯಾನಾ ದೇವಿ ಅವರಿಗೂ ಜಾತಿ ನಿಂದನೆ ಮಾಡಿ ಪೂಜಾ ಸಿಂಗ್‌ ಶಾಲೆಯಿಂದ ಹೊರಹಾಕಿದ್ದಾರೆ” ಎಂದು ‘ದಲಿತ್‌ ಟೈಮ್ಸ್’ ವರದಿ ಮಾಡಿದೆ.

ನಂತರದಲ್ಲಿ ಅಧಿಕಾರಿಯು ಶಿಕ್ಷಕಿಗೆ ನೋಟೀಸ್‌ ನೀಡಿದ್ದಾರೆ. ತನಿಖೆಗಾಗಿ ಅಧಿಕಾರಿಗಳ ತಂಡವನ್ನೂ ರಚಿಸಲಾಗಿದೆ.

ಆರೋಪಗಳನ್ನು ನಿರಾಕರಿಸಿರುವ ಶಿಕ್ಷಕಿ ಪೂಜಾ, “ತನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸುತ್ತಿದ್ದೇನೆ. ನನ್ನ ಮೇಲಿನ ಆರೋಪಗಳೆಲ್ಲವೂ ಸುಳ್ಳು” ಎಂದು ವಾದಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷವು ಟ್ವೀಟ್ ಮಾಡಿದೆ. ಮಾಧ್ಯಮವೊಂದು ಪ್ರಸಾರ ಮಾಡಿದ ಸುದ್ದಿಯ ಫೋಟೋವನ್ನು ಪೋಸ್ಟ್ ಮಾಡಲಾಗಿದ್ದು, “ಯೋಗಿಜೀ, ನಿಮಗೆ ಮದರಸಾಗಳ ಸಮೀಕ್ಷೆಯಲ್ಲಿ ಸಮಯ ಸಿಕ್ಕಿದ್ದರೆ, ಜಾತಿ ದಬ್ಬಾಳಿಕೆಯ ಈ ಅನಿಷ್ಟ ಪದ್ಧತಿಯ ಬಗ್ಗೆಯೂ ಗಮನ ಕೊಡಿ” ಎಂದು ಆಗ್ರಹಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಮನುವಾದಿ ಶಿಕ್ಷಕಿಯ ವಿರುದ್ಧ ಕಟಿಣ ಕಾನೂನು ಕ್ರಮ ಜರುಗಿಸಬೇಕು.

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...