Homeಮುಖಪುಟಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ

ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್‌ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಹಿರಿಯ ವಕೀಲರನ್ನಾಗಿ ನೇಮಿಸಿದ ಯುಪಿ ಸರ್ಕಾರ

ಸುಪ್ರೀಂಕೋರ್ಟ್‌ನಲ್ಲಿ EWS ವಿಚಾರಣೆ ನಡೆಯುತ್ತಿರುವ ಮಧ್ಯೆ ಸಿಜೆಐ ಮಗನನ್ನು ಸರ್ಕಾರಿ ವಕೀಲರನ್ನಾಗಿ ನೇಮಿಸಿರುವುದು ಏನನ್ನು ಸೂಚಿಸುತ್ತದೆ ಎಂದು ಪತ್ರಕರ್ತರು ಪ್ರಶ್ನಿಸಿದ್ದಾರೆ

- Advertisement -
- Advertisement -

ಮೇಲ್ಜಾತಿಗಳಿಗೆ 10% ಮೀಸಲಾತಿ (EWS) ನೀಡಿರುವ ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವ ಮಧ್ಯೆ, ಆದಿತ್ಯನಾಥ್‌‌ ಸರ್ಕಾರವು ಭಾರತದ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರ ಮಗನನ್ನು ಸುಪ್ರೀಂಕೋರ್ಟ್‌ನಲ್ಲಿ ಯುಪಿ ಸರ್ಕಾರದ ಹಿರಿಯ ವಕೀಲರ ಸಮಿತಿಗೆ ವಕೀಲರನ್ನಾಗಿ ನೇಮಿಸಿದೆ.

ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅವರು ಶ್ರೀಯಶ್ ಲಲಿತ್ ಅವರ ಸೇರ್ಪಡೆಗೆ ಅನುಮೋದನೆ ನೀಡಿದ್ದಾರೆ ಎಂದು ಉತ್ತರ ಪ್ರದೇಶದ ಕಾನೂನು ವಿಭಾಗದ ವಿಶೇಷ ಕಾರ್ಯದರ್ಶಿ ನಿಕುಂಜ್ ಮಿತ್ತಲ್ ಅವರು ಬುಧವಾರ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇನ್ನು ಮುಂದೆ ಶ್ರೀಯಶ್‌ ಅವರು ಹಿರಿಯ ನ್ಯಾಯವಾದಿಯಾಗಿ ಉತ್ತರ ಪ್ರದೇಶ ಸರ್ಕಾರ ಪ್ರಕರಣಗಳನ್ನು ಸುಪ್ರೀಂಕೋರ್ಟ್‌ನಲ್ಲಿ ವಾದಿಸಲಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗದ ಮೇಲೆ ಕೇಶವ ಕೃಪಾದ ನೆರಳು

ಉತ್ತರಪ್ರದೇಶದ ಕಾನೂನು ವಿಭಾಗದ ವಿಶೇಷ ಕಾರ್ಯದರ್ಶಿ ನಿಕುಂಜ್ ಮಿತ್ತಲ್ ಅವರು ಬುಧವಾರ ಹೊರಡಿಸಿದ ಪ್ರಕಟಣೆಯಲ್ಲಿ, ಸುಪ್ರೀಂ ಕೋರ್ಟ್‌ನಲ್ಲಿ ಯುಪಿ ಸರ್ಕಾರದ ಹಿರಿಯ ವಕೀಲರ ಸಮಿತಿಗೆ ಶ್ರೀಯಶ್ ಯು ಲಲಿತ್ ಅವರನ್ನು ಸೇರ್ಪಡೆಗೊಳಿಸಲು ರಾಜ್ಯಪಾಲ ಆನಂದಿ ಬೆನ್ ಪಟೇಲ್ ಅನುಮೋದಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ಕೂಡಾ ವ್ಯಕ್ತವಾಗಿದ್ದು, ‘ಜಾತಿಯತೆಯ ಕೊಲೀಜಿಯಂ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತ ಹಂಸರಾಜ್ ಮೀನಾ ಅವರು #casteist_collegium (ಜಾತಿಯತೆಯ ಕೊಲೀಜಿಯಂ) ಎಂಬ ಹ್ಯಾಶ್ ಟ್ಯಾಗ್‌ನೊಂದಿಗೆ, “ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ EWS ವಿಚಾರಣೆಯ ಮಧ್ಯೆ, ಯುಪಿ ಸರ್ಕಾರವು ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್ ಅವರ ಮಗನನ್ನು ಯುಪಿ ಸರ್ಕಾರದ ವಕೀಲರನ್ನಾಗಿ ನೇಮಿಸುವ ಮೂಲಕ ಏನನ್ನು ಸೂಚಿಸುತ್ತದೆ?” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ನ್ಯಾಯಾಂಗವಾದರೂ ಮಕ್ಕಳ ನೋವು ಕೇಳಲಿ, ನ್ಯಾಯ ನೀಡಲಿ: ಒಡನಾಡಿ ಸ್ಟ್ಯಾನ್ಲಿ ಒತ್ತಾಯ

ಪ್ರೋಫೆಸರ್‌ ದಿಲೀಪ್ ಮೊಂಡಲ್ ಅವರು,“ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಇಡಬ್ಲ್ಯೂಎಸ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಏತನ್ಮಧ್ಯೆ, ಯುಪಿ ಸರ್ಕಾರವು ಲಲಿತ್ ಅವರ ಮಗನನ್ನು ಹಿರಿಯ ಸರ್ಕಾರಿ ವಕೀಲರನ್ನಾಗಿ ಮಾಡಿದೆ. ಇದು ಲಂಚ ಮತ್ತು ಹಿತಾಸಕ್ತಿ ಸಂಘರ್ಷದ ಲಜ್ಜೆಗೆಟ್ಟ ವಿಷಯವಾಗಿದೆ. ಲಲಿತ್ ಇಡಬ್ಲ್ಯೂಎಸ್ ಪ್ರಕರಣದಿಂದ ಹಿಂದೆ ಸರಿಯಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನು ಕೆಲವರು ಇದು ಪರೋಕ್ಷ ಮೀಸಲಾತಿ ಎಂದು ಅಭಿಪ್ರಾಯಪಟ್ಟಿದ್ದು, ಅದನ್ನು ನಿಲ್ಲಿಸಿ ಎಂದು ಆಗ್ರಹಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...