Homeಕರ್ನಾಟಕ‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

‘ಅನ್ನಭಾಗ್ಯ ಕನ್ನಭಾಗ್ಯ’ ಇತ್ಯಾದಿ ಸಾಲುಸಾಲು ಜಾಹೀರಾತು ನೀಡಿದ್ದ ಬಿಜೆಪಿ ದಾಖಲೆಯನ್ನೇ ಒದಗಿಸಿಲ್ಲ: ವರದಿ

- Advertisement -
- Advertisement -

‘40 ಪರ್ಸೆಂಟ್‌ ಬಿಜೆಪಿ ಸರ್ಕಾರ’ ಎಂದು ಕಾಂಗ್ರೆಸ್‌ ಪ್ರಚಾರ ಮಾಡುತ್ತಿದ್ದು, ಇದರ ಬೆನ್ನಲ್ಲೇ ಬಿಜೆಪಿಯು ಪ್ರತಿದಾಳಿ ಮಾಡಲು ಯತ್ನಿಸುತ್ತಿದೆ. ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರಗಳನ್ನು ತನಿಖೆ ಮಾಡುತ್ತೇವೆ ಎಂದು ಹೇಳುತ್ತಿದೆ. ಇದಕ್ಕೆ ಸಿದ್ದರಾಮಯ್ಯನವರೂ ಸವಾಲು ಹಾಕಿದ್ದಾರೆ. ಕುತೂಹಲಕಾರಿ ಸಂಗತಿ ಏನೆಂದರೆ- ಈ ಹಿಂದೆಯೇ ಬಿಜೆಪಿ ಮಾಡಿದ್ದ ಸಾಲು ಸಾಲು ಆರೋಪಗಳಿಗೆ ಸಾಕ್ಷ್ಯಗಳನ್ನು ಒದಗಿಸಿಲ್ಲ ಎಂಬುದು ತಿಳಿದು ಬಂದಿದೆ.

“ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ್ದ ರಾಜಕೀಯ ಜಾಹೀರಾತುಗಳಿಗೆ ಸೂಕ್ತ ಸಾಕ್ಷ್ಯಾಧಾರ ಮತ್ತು ಪುರಾವೆ ಮತ್ತು ಸಮರ್ಪಕ ದಾಖಲೆಗಳನ್ನು ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ, ಪ್ರಮಾಣೀಕರಣ ಸಮಿತಿಗೆ ಬಿಜೆಪಿಗೆ ಒದಗಿಸಿರಲಿಲ್ಲ. ಕೇವಲ ಪತ್ರಿಕಾ ವರದಿಗಳನ್ನಷ್ಟೇ ಸಲ್ಲಿಸಿತ್ತು. ಇವುಗಳನ್ನು ಸಾಕ್ಷ್ಯಗಳಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಆಯೋಗ ಹೇಳಿತ್ತು” ಎಂದು ‘ದಿ ಫೈಲ್‌’ ತನಿಖಾ ಜಾಲತಾಣ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದಾಖಲೆಗಳನ್ನು ಸಲ್ಲಿಸದೇ ಕೇವಲ ಪತ್ರಿಕಾ ತುಣುಕುಗಳನ್ನಷ್ಟೇ ಸಲ್ಲಿಸಿ ಬಿಜೆಪಿ ಭಾರೀ ಮುಖಭಂಗ ಅನುಭವಿಸಿತ್ತು” ಎಂದು ವರದಿ ಉಲ್ಲೇಖಿಸಿದೆ.

“2018ರ ಚುನಾವಣೆ ಘೋಷಣೆಗೂ ಮುನ್ನ ಸಿದ್ದರಾಮಯ್ಯ ಅವರ ವಿರುದ್ಧ ವಿಫಲ ಸರ್ಕಾರ, ಜನ ವಿರೋಧಿ ಸರ್ಕಾರ, ಮೂರು ಭಾಗ್ಯ ಹೆಸರಿನಲ್ಲಿ ಬಿಜೆಪಿ ಬಿಡುಗಡೆಗೊಳಿಸಿದ್ದ ರಾಜಕೀಯ ಜಾಹೀರಾತುಗಳು ಟಿ ವಿ ಗಳಲ್ಲಿ ಪ್ರಸಾರವಾಗಿತ್ತು. ಆದರೆ, ಈ ಆರೋಪಗಳನ್ನು ಸಾಬೀತುಪಡಿಸುವಂತಹ ಯಾವುದೇ ಸಮರ್ಥನೆ, ದಾಖಲೆ, ಸಾಕ್ಷಾಧಾರ ಮತ್ತು ಪುರಾವೆಗಳನ್ನು ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ ಸಮಿತಿ ಮತ್ತು ಪ್ರಮಾಣೀಕೃತ ಸಮಿತಿಗೆ ಬಿಜೆಪಿ ಒದಗಿಸಿರಲಿಲ್ಲ. ಹೀಗಾಗಿ ರಾಜಕೀಯ ಆರೋಪಗಳನ್ನೊಳಗೊಂಡ ಜಾಹೀರಾತುಗಳ ಪ್ರಸಾರಕ್ಕೆ ಚುನಾವಣಾ ಆಯೋಗ ತಡೆ ಒಡ್ಡಿತ್ತು” ಎಂಬುದು ತಿಳಿದುಬಂದಿದೆ.

“ಒಂದು ವಾಚ್‌ನ ಕಥೆ, ಅನ್ನಭಾಗ್ಯ ಕನ್ನ ಭಾಗ್ಯ, ಕೆಪಿಸಿ ಕಲ್ಲಿದ್ದಲು ಟೆಂಡರ್‌ನಲ್ಲಿ ರೂಪಾಯಿ 400 ಕೋಟಿ ಗುಳುಂ, ಶೇ.10 ಕಮಿಷನ್ ವಾಚ್, ಇಂದಿರಾ ಕ್ಯಾಂಟೀನ್ ಕೋಟಿ ಕೋಟಿ ಲೂಟಿ, ಬಿಬಿಎಂಪಿ ಕಸ ವಿಲೇವಾರಿ ರೂಪಾಯಿ 400 ಕೋಟಿ ಗುಳುಂ, ಹ್ಯುಬ್ಲಾಟ್ ವಾಚ್: 40 ಲಕ್ಷ, ಸೋಲಾರ್‌ ಪವರ್‌ ಟೆಂಡರ್ ಕೆಪಿಸಿ ಕಲ್ಲಿದ್ದಲು ಟೆಂಡರ್, ಬಿಬಿಎಂಪಿ ಕಸ ವಿಲೇವಾರಿ ಟೆಂಡರ್ ರೂ 1,500 ಕೋಟಿ ಗುಳುಂ, ಗೂಂಡಾ ಸರ್ಕಾರ, ರೈತರನ್ನು ಬಲಿಕೊಟ್ಟ ಸರ್ಕಾರ, ನಗರಗಳನ್ನು ನರಕ ಮಾಡಿದ ಸರ್ಕಾರ, ದೇಶಭಕ್ತರ ಕೊಲೆಗಳನ್ನು ತಡೆಯದ ಸರ್ಕಾರ, ಸಮಾಜ ಒಡೆಯುವ ಸರ್ಕಾರ, ನಕಲಿ ಭಾಗ್ಯಗಳ ಭ್ರಷ್ಟ ಸರ್ಕಾರ, ಲೋಕಾಯುಕ್ತರಿಗೆ ರಕ್ಷಣೆ ಇಲ್ಲ” ಇತ್ಯಾದಿ ಆರೋಪಗಳನ್ನು ಒಳಗೊಂಡ ಜಾಹೀರಾತುಗಳನ್ನು ನೀಡಿದ್ದ ಬಿಜೆಪಿ, ಇದಕ್ಕೆ ಪುರಾವೆಗಳನ್ನೇ ಒದಗಿಸಿರಲಿಲ್ಲ.

ಬಿಜೆಪಿ ನೀಡಿದ್ದ ಈ ಜಾಹೀರಾತುಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಆಕ್ಷೇಪಣೆ ಎತ್ತಿತ್ತು. ಈ ಸಂಬಂಧ ಚುನಾವಣಾ ಆಯೋಗದ ಮಾಧ್ಯಮ ದೃಢೀಕರಣ ಸಮಿತಿ ಕಳಿಸಿದ್ದ ನೋಟೀಸ್‌ಗೆ ಉತ್ತರಿಸಿದ್ದ ಬಿಜೆಪಿ, ಆರೋಪಗಳನ್ನು ಸಾಬೀತುಪಡಿಸುವಲ್ಲಿ ಸಮರ್ಪಕವಾದ ದಾಖಲೆಗಳನ್ನು ಒದಗಿಸಿರಲಿಲ್ಲ ಎಂಬ ಅಂಶ 2018ರ ಮೇ 5ರಂದು ಚುನಾವಣಾ ಆಯೋಗ ನಡೆಸಿದ್ದ ಸಭೆಯ ನಡವಳಿಯಿಂದ ತಿಳಿದು ಬಂದಿದೆ ಎಂದು ‘ದಿ ಫೈಲ್‌’ ವರದಿ ಮಾಡಿದೆ.

ಕಾಂಗ್ರೆಸ್‌ನಿಂದ ಡರ್ಟಿ ಪಾಲಿಟಿಕ್ಸ್‌: ಬೊಮ್ಮಾಯಿ ಆರೋಪ

“ಪೇ ಸಿಎಂ ಅಭಿಯಾನ ಮಾಡುತ್ತಿರುವ ಕಾಂಗ್ರೆಸ್ಸಿನದ್ದು ಡರ್ಟಿ ಪಾಲಿಟಿಕ್ಸ್” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಶನಿವಾರ ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಯಾವುದಾದರೂ ವಿಚಾರವಿದ್ದರೆ, ನೇರವಾಗಿ ಮಾತಾಡಬೇಕು, ದಾಖಲೆ ನೀಡಬೇಕು ಹಾಗೂ ತನಿಖೆಯಾಗಬೇಕು. ಯಾವುದೇ ವಿಚಾರವಿಲ್ಲದೆ, ಪೂರ್ಣಪ್ರಮಾಣದ ತಯಾರಿ ಇಲ್ಲದೆ ಸದನಕ್ಕೆ ಬರುತ್ತಾರೆ. ಇದು ಅವರ ನೈತಿಕತೆಯ ಅಧ:ಪತನ ತೋರುತ್ತದೆ. ನೈತಿಕತೆ ಇಲ್ಲದೆ ಹೆಸರು ಕೆಡಿಸುವ ಕಾರ್ಯಕ್ರಮವಿದು” ಎಂದು ದೂರಿದ್ದಾರೆ.

ಇದನ್ನೂ ಓದಿರಿ: ಯುಪಿ: ದಲಿತ ಬಾಲಕಿಗೆ ಶಿಕ್ಷಣ ನೀಡಲು ನಿರಾಕರಿಸಿದ ಶಿಕ್ಷಕಿ

“ಜನಪರ ಕಾಳಜಿ ಇಲ್ಲದೆ ಡರ್ಟಿ ಪಾಲಿಟಿಕ್ಸ್ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ. ಇದೆಲ್ಲಾ ಕರ್ನಾಟಕದಲ್ಲಿ ಸಾಧ್ಯವಿಲ್ಲ. ಸರ್ಕಾರ ಕಾನೂನು ಕ್ರಮ ತೆಗೆದುಕೊಳ್ಳುತ್ತದೆ” ಎಂದಿದ್ದಾರೆ.

ಲಿಂಗಾಯತ ಸಮುದಾಯದ ಮುಖ್ಯಮಂತ್ರಿಗಳನ್ನು ಗುರಿಯಾಗಿಸಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿ, “ನಾನು ಅದರ ಭಾಗವಲ್ಲ. ಹಾಗಾಗಿ ಏನೋ ಹೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Paycm ಸರಿಯಿದೆ! ಬೊಮ್ಮಣ್ಣ ನಿಮ್ಮದೇ ಸರ್ಕಾರ ಅಧಿಕಾರದಲ್ಲಿ ಇದೆಯಲ್ಲ, ನೀವು ಕಂಡುಹಿಡಿದಿರುವ ಕಾಂಗ್ರೆಸ್ಸ್ ನವರ ಎಲ್ಲಾ ಭ್ರಷ್ಟಾಚಾರಗಳನ್ನು ತನಿಖೆಗೆ ಆದೇಶಿಸಿ ಎಲ್ಲಾ ಕಾಂಗ್ರೆಸ್ಸಿನ ಭ್ರಷ್ಟರನ್ನು ಜೈಲಿಗೆ ಹಾಕಿಸಿ. ಆಗ ಕರ್ನಾಟಕದಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಿದ ಕೀರ್ತಿ ತಮಗೆ ಬರುತ್ತದೆಯಲ್ಲ. ಹಾಗೆಯೇ ದೇಶದಲ್ಲಿ ಭ್ರಷ್ಟ ಕಾಂಗ್ರೆಸ್ ಮುಕ್ತವಾಗಿ. ಕೇವಲ 40% ಬಿಜೆಪಿ ಸರ್ಕಾರ ಮಾತ್ರ ಉಳಿಸಿಕೊಳ್ಳಬಹುದು! ಮುಂದಿನ ಚುನಾವಣೆಗಳಲ್ಲಿ ಜನರ ಬಳಿ ಹೋಗಿ ನೀವೇ ಹೇಳಿ ನಾವು ಕೇವಲ 40% ಮಾತ್ರ ಕಮಿಷನ್ ತೆಗೊಳ್ಳುತ್ತೀವಿ ಆದ್ರೆ ಕಾಂಗ್ರೇಸ್ ನವರು 100% ತೆಗೊಂಡು ಎಲ್ಲವನ್ನೂ ಗುಳುಂ ಮಾಡ್ತಿದ್ರು ಅದಕ್ಕೆ ಈಗ ಅವರನ್ನೆಲ್ಲ ಜೈಲಿಗೆ ಕಳುಹಿಸಿದ್ದೇವೆ. ನಮ್ದು ಕೇವಲ 40% ಸರ್ಕಾರ ಅಂತ ಎದೆ ತಟ್ಟಿ ಹೇಳಿ. ಮುಂದೆ ನೀವೆಲ್ಲಾ ನಮ್ಮ ಪಕ್ಷಕ್ಕೆ ಓಟ್ ಹಾಕಬೇಕು ಇಲ್ದಿದ್ರೆ ನಿಮ್ಗೂ ಜೈಲೇ ಗತಿ ಅಂತ ಗಟ್ಟಿಯಾಗಿ ಎದೆತಟ್ಟಿ ಧಮ್ ಇದ್ರೆ ಹೇಳಿ ಬೊಮ್ಮಣ್ಣ!

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...